ಅನ್ನದಾತನ ಕೈ ಹಿಡಿದ ಕಡಲೆ ಬೆಳೆ


Team Udayavani, Dec 17, 2019, 12:22 PM IST

dg-tdy-3

ಜಗಳೂರು: ತಾಲೂಕಿನ ಜಮೀನುಗಳಲ್ಲಿ ಈ ವರ್ಷ ಕಡಲೆ ಬೆಳೆ ನಳನಳಿಸುತ್ತಿದೆ. ಮುಂಗಾರು ಕೈಕೊಟ್ಟಿದ್ದರಿಂದ ರೈತರು ಆತಂಕಕ್ಕೆ ಒಳಗಾಗಿದ್ದರು. ಸದ್ಯ ಕಡಲೆ ಬೆಳೆ ಆಸರೆ ಆಗುವ ಲಕ್ಷಣ ಗೋಚರಿಸಿದ್ದು, ಅನ್ನದಾತರ ಮುಖದಲ್ಲಿ ಮಂದಹಾಸ ಮೂಡಿಸಿದೆ.

ಹಿಂಗಾರು ಮಳೆ ಉತ್ತಮವಾಗಿ ಸುರಿದ್ದರಿಂದ ಭೂಮಿ ತೇವಾಂಶ ಅಧಿಕಗೊಂಡು ಕಡಲೆ ಬೆಳೆ ಸಮೃದ್ಧಿಯಾಗಿ ಬೆಳೆದು ನಿಂತಿದೆ. ತಾಲೂಕಿನದ್ಯಾಂತ ಕಡಲೆ ಯಾವುದೇ ರೋಗದ ಕಾಟವಿಲ್ಲದೇ ಬೆಳೆದು ನಿಂತಿದ್ದು, ಉತ್ತಮ ಫಸಲು ದೊರೆಯುವ ನಿರೀಕ್ಷೆಯಲ್ಲಿ ರೈತರಿದ್ದಾರೆ. ಮುಂಗಾರು ಮಳೆ ಸಕಾಲಕ್ಕೆ ಬೀಳದೇ ರೈತರನ್ನು ಚಿಂತೆಗೇಡು ಮಾಡಿತ್ತು. ಅಲ್ಲದೇ ಮೆಕ್ಕೆಜೋಳ, ಶೇಂಗಾ, ರಾಗಿ, ಸಜ್ಜೆ ಬೆಳೆಗಳು ಕಾಳು ಕಟ್ಟುವ ಸಂದರ್ಭದಲ್ಲಿ ಮಳೆ ಕೊರತೆ ಆಗಿದ್ದರಿಂದ ರೈತರು ನಿರೀಕ್ಷಿಸಿದಷ್ಟು ಇಳುವರಿ ಬಾರದೇ ನಷ್ಟ ಅನುಭವಿಸುವಂತೆ ಮಾಡಿತ್ತು. ಸದ್ಯ ಹಿಂಗಾರು ಮಳೆ ಕೈ ಹಿಡಿದಿರುವುದರಿಂದ ಕಡಲೆ ಬೆಳೆ ತಾಲೂಕಿನಲ್ಲಿ ನಳನಳಿಸುತ್ತಿದೆ. ಕಳೆದ ಮೂರು ವರ್ಷಗಳಿಂದ ಸತತ ಬರ ಅನುಭವಿಸಿದ್ದ ಕಾರಣ ಕಡಲೆ ಇಳುವರಿ ತಾಲೂಕಿನಲ್ಲಿ ಕುಂಠಿತಗೊಂಡಿತ್ತು. ಆದರೆ ಆಕ್ಟೋಬರ್‌ ಮಾಹೆಯಲ್ಲಿ ಸುರಿದ ಮಳೆಯಿಂದ ತೇವಾಂಶ ಹೆಚ್ಚಳ ಆಗಿದ್ದರಿಂದ ಕಡಲೆ ಬೆಳೆಗೆ ಪೂರಕವಾಗಿ ಪರಿಣಮಿಸಿದೆ.

ಈಗಾಗಿ ರೈತರುಡಿ ಹಿಂಗಾರು ಬೆಳೆ ಕಡಲೆ ಬೆಳೆಗೆ ಒತ್ತು ನೀಡಿ ಬಿತ್ತನೆ ಮಾಡಿದ್ದರು. ತಾಲೂಕಿನಲ್ಲಿ 5850 ಹೆಕ್ಟೇರ್‌ ಬಿತ್ತನೆ ಪ್ರದೇಶವಿದ್ದು, ಬಹುತೇಕ ಬಿತ್ತನೆಯಾಗಿದೆ. ಕಸಬಾ ಹೋಬಳಿ ವ್ಯಾಪ್ತಿಯ ದೋಣೆಹಳ್ಳಿ, ಮುಸ್ಟೂರು, ಹಿರೆಮಲ್ಲನಹೊಳೆ, ಮೂಡಲ ಮಾಚಿಕೆರೆ, ಸಿದ್ದಿಹಳ್ಳಿ, ಚಿಕ್ಕಮಲ್ಲನಹೊಳೆ ಸೇರಿದಂತೆ ಇತರ ಗ್ರಾಮಗಳಲ್ಲಿ ಕಡಲೆ ಬಿತ್ತನೆ ಮಾಡಲಾಗಿದೆ. ಗ್ರಾಮಗಳು ಕಪ್ಪು ಮಣ್ಣು ಪ್ರದೇಶ ಆಗಿರುವುದರಿಂದ ತೇವಾಂಶ ಹಿಡಿದಿಟ್ಟುಕೊಂಡಿದ್ದು, ಇಲ್ಲಿ ಶೇ.70ರಷ್ಟು ಬಿತ್ತನೆ ಆಗಿದೆ.

ಸೊಕ್ಕೆ ಹೋಬಳಿ ಹೊಸಕೆರೆ, ಕೆಚ್ಚೆನಹಳ್ಳಿ ಕಪ್ಪು ಮಣ್ಣು ಪ್ರದೇಶ ಹೊಂದಿದೆ. ಸೊಕ್ಕೆ, ಗಡಿಮಾಕುಂಟೆ, ಲಕ್ಕಂಪುರ ಗ್ರಾಮಗಳಲ್ಲಿ ಕೆಂಪು ಮಣ್ಣು ಇರುವುದರಿಂದ ಶೇ.20ರಷ್ಟು ಬಿತ್ತನೆ ಆಗಿದೆ. ಬಿಳಿಚೋಡು ಹೋಬಳಿಯಲ್ಲಿ ಶೇ.5ರಷ್ಟು ಕಡಲೆ ಬಿತ್ತನೆಯಾಗಿದೆ ಎಂಬುದು ಕೃಷಿ ಇಲಾಖೆ ಮಾಹಿತಿ. ಕೃಷಿ ಇಲಾಖೆಯಿಂದ 5250 ಕ್ವಿಂಟಲ್‌ ಕಡಲೆ ಬೀಜ ವಿತರಿಸಲಾಗಿದೆ. ಬಿತ್ತನೆಯಾದ ಎಲ್ಲ ಗ್ರಾಮಗಳಲ್ಲಿ ಸಮೃದ್ಧವಾಗಿ ಬೆಳೆ ಬಂದಿದ್ದು, ಇಲ್ಲಿಯವರೆಗೂ ಯಾವುದೇ ರೋಗ ಬಾಧೆ ಲಕ್ಷಣಗಳು ಕಂಡುಬಂದಿಲ್ಲ. ಕಳೆದ ಮೂರು ವರ್ಷದಿಂದ ವರುಣ ಅವಕೃಪೆ ಒಳಗಾಗಿದ್ದ ತಾಲೂಕಿನ ರೈತರಿಗೆ ಈ ಬಾರಿ ಕಡಲೆ ಬೆಳೆ ಕೈ ಹಿಡಿಯುವ ಎಲ್ಲ ಲಕ್ಷಣಗಳು ಕಂಡುಬಂದಿವೆ.

 

-ರವಿಕುಮಾರ ತಾಳಿಕೆರೆ

ಟಾಪ್ ನ್ಯೂಸ್

15

ಶರ್ಟ್‌ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: ಕಾಂಗ್ರೆಸ್‌ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ

Lok Sabha Election: ಕಾಂಗ್ರೆಸ್‌ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ

1-wqeqwe

Davanagere: ಮತದಾನ ಜಾಗೃತಿ ಲಾಂಛನದಲ್ಲಿ ಅಪರೂಪದ ಪ್ರಾಣಿ ಚಿತ್ರ ಬಳಕೆ

Neha Hiremath Case; Protest by BJP-JDS-ABVP across the state

Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ

Gayatri Siddeshwar: ಅಡಕೆ ಮೌಲ್ಯವರ್ಧನೆಗೆ ಯೋಜನೆ: ಗಾಯಿತ್ರಿ

Gayatri Siddeshwar: ಅಡಕೆ ಮೌಲ್ಯವರ್ಧನೆಗೆ ಯೋಜನೆ: ಗಾಯಿತ್ರಿ

ಇಂದು ಕಾಂಗ್ರೆಸ್‌ ವಿರುದ್ಧ ಬಿಜೆಪಿ ಚಿಪ್ಪು ಹಿಡಿದು ಪ್ರತಿಭಟನೆ: ರವಿಕುಮಾರ್‌

ಇಂದು ಕಾಂಗ್ರೆಸ್‌ ವಿರುದ್ಧ ಬಿಜೆಪಿ ಚಿಪ್ಪು ಹಿಡಿದು ಪ್ರತಿಭಟನೆ: ರವಿಕುಮಾರ್‌

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

1-gadaga

Gadaga: ಸೈಕ್ಲಿಸ್ಟ್ ಪವಿತ್ರಾ ಕುರ್ತಕೋಟಿ ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಆಯ್ಕೆ

15

ಶರ್ಟ್‌ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.