ಮಕ್ಕಳ ಆರೋಗ್ಯ ಕಾಳಜಿ ಅತ್ಯಗತ್ಯ
Team Udayavani, Feb 10, 2019, 8:08 AM IST
ದಾವಣಗೆರೆ: ಪ್ರತಿಯೊಬ್ಬರೂ ಸಹ ಉತ್ತಮ ಆಹಾರ ಸೇವಿಸುವ ಮೂಲಕ ತಮ್ಮ ಆರೋಗ್ಯದ ಬಗ್ಗೆ ಹೆಚ್ಚು ಕಾಳಜಿ ವಹಿಸಬೇಕು ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಸಿ.ಆರ್. ಪರಮೇಶ್ವರಪ್ಪ ಹೇಳಿದರು.
ನಗರದ ರಾಜನಹಳ್ಳಿ ಸೀತಮ್ಮ ಬಾಲಕಿಯರ ಸರ್ಕಾರಿ ಪಪೂ ಕಾಲೇಜಿನಲ್ಲಿ ಜಿಲ್ಲಾ ಆರೋಗ್ಯ ಮತ್ತು ಕಲ್ಯಾಣ ಇಲಾಖೆಯಿಂದ ಏರ್ಪಡಿಸಲಾಗಿದ್ದ ರಾಷ್ಟ್ರೀಯ ಜಂತು ಹುಳು ನಿವಾರಣಾ ದಿನ ಕಾರ್ಯಕ್ರಮವನ್ನು ವಿದ್ಯಾರ್ಥಿಗಳಿಗೆ ಮಾತ್ರೆ ನುಂಗಿಸುವ ಮೂಲಕ ಉದ್ಘಾಟಿಸಿ ಮಾತನಾಡಿದ ಅವರು, ವಿಜ್ಞಾನ ಇಂದು ಎಷ್ಟೇ ಮುಂದುವರೆದರೂ ಕೂಡ ಅದಕ್ಕೆ ಸವಾಲಾಗಿ ಹೊಸ ಹೊಸ ಕಾಯಿಲೆಗಳು ಸೃಷ್ಟಿಯಾಗುತ್ತಿವೆ. ಆರೋಗ್ಯವೇ ಭಾಗ್ಯ. ಹಾಗಾಗಿ ಪ್ರತಿಯೊಬ್ಬರೂ ತಮ್ಮ ಆರೋಗ್ಯದ ಬಗ್ಗೆ ಬಾಲ್ಯದಿಂದಲೇ ಕಾಳಜಿವಹಿಸಬೇಕು ಎಂದು ಸಲಹೆ ನೀಡಿದರು.
ಜಿಲ್ಲಾ ಕ್ಷಯ ನಿಯಂತ್ರಣಾಧಿಕಾರಿ ಡಾ| ಜಿ.ಡಿ. ರಾಘವನ್ ಮಾತನಾಡಿ, ಮಕ್ಕಳು ಭೌತಿಕ, ಸಾಮಾಜಿಕ, ಮಾನಸಿಕವಾಗಿ ಆರೋಗ್ಯವಂತರಾದಾಗ ಮಾತ್ರ ಸಂಪೂರ್ಣ ಆರೋಗ್ಯ ವೃದ್ಧಿಯಾಗುತ್ತದೆ. ಭಾರತದಲ್ಲಿ ಒಂದನೇ ವಯಸ್ಸಿನಿಂದ 16ನೇ ವಯಸ್ಸಿನ ಮಕ್ಕಳಲ್ಲಿ 21.01 ಕೋಟಿ ಮಕ್ಕಳ ಕರುಳಿನಲ್ಲಿ ಪರಾವಲಂಬಿ ಹುಳುಗಳಿವೆ. ಇವುಗಳ ಪ್ರಭಾವದಿಂದ ಮಕ್ಕಳ ಓದಿನಲ್ಲಿ ಏಕಾಗ್ರತೆ, ರಕ್ತಹಿನತೆ, ನೆನಪಿನ ಶಕ್ತಿ, ಶಾಲೆಯಲ್ಲಿ ಕಲಿಕಾ ಸಾಮರ್ಥ್ಯ ಹಾಗೂ ದೈಹಿಕ ಬೆಳವಣಿಗೆಯಲ್ಲಿ ತೀವ್ರ ಕುಂಠಿತವಾಗುತ್ತದೆ ಎಂದರು.
ಜಂತುಹುಳು ನಿವಾರಣಾ (ಆಲ್ಬೆಂಡಜೋಲ್) ಮಾತ್ರೆಯನ್ನು ಮಕ್ಕಳು ಸೇವಿಸುವುರಿಂದ ವಿದ್ಯಾಭ್ಯಾಸ, ಆರ್ಥಿಕತೆಯ ಫಲಿತಾಂಶದಲ್ಲಿ ಏರುಮುಖದ ಬೆಳವಣಿಗೆಯನ್ನು ಕಾಣಬಹುದು. ಆದ್ದರಿಂದ 5 ವರ್ಷದೊಳಗಿನ ಎಲ್ಲಾ ಮಕ್ಕಳು ವರ್ಷದಲ್ಲಿ ಎರಡು ಬಾರಿ ಜಂತುಹುಳು ನಿವಾರಣಾ ಮಾತ್ರೆಯನ್ನು ಸೇವಿಸುವುದು ಅವಶ್ಯಕವಾಗಿದೆ. ಇದು ವಿದ್ಯಾರ್ಥಿಗಳ ದೈಹಿಕ ಹಾಗೂ ಮಾನಸಿಕ ಆರೋಗ್ಯಕ್ಕೆ ಸಹಕಾರಿಯಾಗಲಿದೆ ಎಂದರು.
ರಾಮಕೃಷ್ಣ ಆಶ್ರಮದ ಶ್ರೀ ನಿತ್ಯಾನಂದ ಸ್ವಾಮೀಜಿ, ತಾಲೂಕು ವೈದ್ಯಾಧಿಕಾರಿ ಡಾ| ಮಂಜುನಾಥ ಪಾಟೀಲ್, ಡಾ| ರೇಣುಕಾರಾಧ್ಯ, ಆರೋಗ್ಯ ಮೇಲ್ವಿಚಾರಕ ಆರ್.ವಿ. ಕುಪಸ್ತ, ಬಿಹೆಚ್ಇಒ ಉಮಾಪತಿ, ಉತ್ತರ ವಲಯದ ಬಿ.ಇ.ಒ ಕೊಟ್ರೇಶ್, ಜಿಲ್ಲಾ ಸಮನ್ವಯಾಧಿಕಾರಿ ಪುಷ್ಪಾ, ಕಾಲೇಜಿನ ಪ್ರಾಂಶುಪಾಲ ರಾಜು, ಸಿಡಿಪಿಓ ವೀಣಾ ಸೇರಿದಂತೆ ಕಾಲೇಜಿನ ವಿದ್ಯಾರ್ಥಿನಿಯರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ
Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ
PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ
MUST WATCH
ಹೊಸ ಸೇರ್ಪಡೆ
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್
ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು
Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ
Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ
Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ