ಮಕ್ಕಳ ಸುರಕ್ಷತೆ ಎಲ್ಲರ ಜವಾಬ್ದಾರಿ
ಸಂಕಷ್ಟಕ್ಕೆ ಸಿಲುಕದಂತೆ ನೋಡಿಕೊಳ್ಳುವಲ್ಲಿ ಸಾರ್ವಜನಿಕರ ಸಹಕಾರ ಅತ್ಯಗತ್ಯ: ಕೊಂಡಾರೆಡ್ಡಿ
Team Udayavani, May 26, 2022, 5:26 PM IST
ದಾವಣಗೆರೆ: ಮಕ್ಕಳ ರಕ್ಷಣೆಯಲ್ಲಿ ಸಾರ್ವಜನಿಕರ ಸಹಕಾರ ಅವಶ್ಯಕ. ಅಂತೆಯೇ ಮಕ್ಕಳ ಕಲ್ಯಾಣ ಸಮಿತಿ ಹಾಗೂ ಮಕ್ಕಳ ಸಹಾಯವಾಣಿಗೆ ಸಾರ್ವಜನಿಕರು ಸಹಕರಿಸಬೇಕು ಎಂದು ರೈಲ್ವೆ ರಕ್ಷಣಾದಳದ ಉಪನಿರೀಕ್ಷಕ ಎ. ಕೊಂಡಾರೆಡ್ಡಿ ಹೇಳಿದರು.
ನಗರದ ರೈಲ್ವೆ ನಿಲ್ದಾಣದಲ್ಲಿ ಮಕ್ಕಳ ಕಲ್ಯಾಣ ಸಮಿತಿ, ರೈಲ್ವೆ ರಕ್ಷಣಾದಳ, ರೈಲ್ವೆ ಪೊಲೀಸ್ ಮತ್ತು ಮಕ್ಕಳ ಸಹಾಯವಾಣಿ ಕೊಲ್ಯಾಬ್ ಡಾನ್ಬಾಸ್ಕೋ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಮಕ್ಕಳ ಸಹಾಯವಾಣಿ 1098 ಮಾಸಾಚರಣೆ ಹಾಗೂ ರೈಲು ಪ್ರಯಾಣಿಕರ ಸುರಕ್ಷತೆ ಕುರಿತ ಜಾಗೃತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಮಕ್ಕಳು ಸಂಕಷ್ಟಗಳಿಗೆ ಸಿಲುಕುವ ಮುನ್ನ ಅವರು ಸುರಕ್ಷಿತರಾಗಿರುವಂತೆ ನೋಡಿಕೊಳ್ಳುವುದು ಎಲ್ಲರ ಜವಾಬ್ದಾರಿ ಎಂದರು.
ಮಕ್ಕಳ ಕಲ್ಯಾಣ ಸಮಿತಿ ಸದಸ್ಯ ಮಂಜುನಾಥ ಮಾತನಾಡಿ, ಮಕ್ಕಳ ಸುರಕ್ಷತೆ-ಮಕ್ಕಳ ಹಕ್ಕುಗಳ ಬಗ್ಗೆ ಜಾಗೃತಿ ಅಭಿಯಾನ ಮಾಡುವ ಮೂಲಕ ಸಾಗಾಣಿಕೆಗೆ ಸಿಲುಕಿದ ಮಕ್ಕಳನ್ನು ಗುರುತಿಸಿ ರಕ್ಷಣೆ ಕಲ್ಪಿಸಬೇಕು ಎಂದರು. ರೈಲ್ವೆ ರಕ್ಷಣಾದಳದ ಸಹಾಯಕ ನಿರೀಕ್ಷಕಿ ಲಕ್ಷ್ಮೀ ಪಾಟೀಲ್ ಮಾತನಾಡಿ, ರೈಲ್ವೆ ಪ್ರಯಾಣದಲ್ಲಿ ಅನುಸರಿಸಬೇಕಾದ ಸುರಕ್ಷತಾ ಕ್ರಮಗಳ ಬಗ್ಗೆ ತಿಳಿಸಿದರು. ರೈಲ್ವೆ ರಕ್ಷಣಾದಳದ ಸಹಾಯವಾಣಿ ಸಂಖ್ಯೆ 139ಕ್ಕೆ ಕರೆ ಮಾಡಿ ರೈಲ್ವೆ ಪ್ರಯಾಣಿಕರು ಸಹಾಯ ಪಡೆಯಬೇಕು ಎಂದರು.
ಮುಖ್ಯ ಟಿಕೆಟ್ ತಪಾಸಣಾಧಿಕಾರಿ ಜಿ.ಆರ್. ಶ್ರೀನಿವಾಸ್ ಮಾತನಾಡಿ, ರೈಲ್ವೆ ಇಲಾಖೆ ಅಧಿಕಾರಿಗಳು ಗುರುತಿಸಿದ ಸಂಕಷ್ಟದಲ್ಲಿರುವ ಮಕ್ಕಳಿಗೆ ಪುನರ್ವಸತಿ ಕಲ್ಪಿಸುವಲ್ಲಿ ಮಕ್ಕಳ ಸಹಾಯವಾಣಿ ತುಂಬ ಸಹಾಯ ಮಾಡುತ್ತಿದೆ ಎಂದು ಶ್ಲಾಘಿಸಿದರು.
ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷ ವೈ. ರಾಮ ನಾಯ್ಕ, ಸ್ಟೇಷನ್ ಮಾಸ್ಟರ್ ಅಭಯ್ಕುಮಾರ್, ಶಂಕರ್ ವೈ., ಮಕ್ಕಳ ಸಹಾಯವಾಣಿ ಕೊಲ್ಯಾಬ್ ತಂಡದ ಕಾರ್ಯಕರ್ತರಾದ ರವಿ ಬಿ. ಮಂಜುನಾಥ, ಡಿ. ಮಂಜುಳ, ವಿ. ನಾಗರಾಜ್ ಟಿ., ತೆರೆದ ತಂಗುದಾಣ ಯೋಜನೆ ಸಂಯೋಜಕ ಎಚ್. ಸುನೀಲ್, ಕಾರ್ಯಕರ್ತರಾದ ಹೊನ್ನಪ್ಪ ಎಂ. ನಟರಾಜ್, ರೈಲ್ವೆ ಪೊಲೀಸ್ ಸಿಬ್ಬಂದಿ ಉಪಸ್ಥಿತರಿದ್ದರು.
ಸಂಯೋಜಕ ಮಂಜಪ್ಪ ಬಿ., ದಿನೇಶ್ ಕೆ.ಎನ್. ಸ್ವಾಗತಿಸಿದರು. ಅರ್ಷದ್ ಅಲಿ ಟಿ.ಎ. ನಿರೂಪಿಸಿದರು. ಸ್ವಾಮಿ ಬಿ. ವಂದಿಸಿದರು.
ಸಂಕಷ್ಟದಲ್ಲಿರುವ ಮಕ್ಕಳ ನೆರವಿಗಾಗಿ ರಾಷ್ಟ್ರೀಯ ಉಚಿತ ಮಕ್ಕಳ ಸಹಾಯವಾಣಿ 1098ಸಂಖ್ಯೆಗೆ ಕರೆ ಮಾಡಿದರೆ ಮಕ್ಕಳ ನೆರವಿಗೆ ಧಾವಿಸಿ ಅವರಿಗೆ ಪೋಷಣೆ ಮತ್ತು ರಕ್ಷಣೆ ಕಲ್ಪಿಸಲಾಗುವುದು. -ಕೊಟ್ರೇಶ್ ಟಿ.ಎಂ., ಮಕ್ಕಳ ಸಹಾಯವಾಣಿ ಕೊಲ್ಯಾಬ್ ಸಂಯೋಜಕ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere; ಗಾಯಿತ್ರಿ ಸಿದ್ದೇಶ್ವರ್ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ
Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!
BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ
Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ
Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ
MUST WATCH
ಹೊಸ ಸೇರ್ಪಡೆ
Snake: 50 ಅಡಿ ಉದ್ದದ ದೈತ್ಯ ಹಾವು “ವಾಸುಕಿ’!
Mollywood: ಸೂಪರ್ ಹಿಟ್ ʼಪ್ರೇಮಲುʼ ಸೀಕ್ವೆಲ್ ಅನೌನ್ಸ್; ಹೆಚ್ಚಾಯಿತು ನಿರೀಕ್ಷೆ
Haveri; ಲೋಕಸಭೆ ಚುನಾವಣೆಗೆ ನಾಮಪತ್ರ ಸಲ್ಲಿಸಲು ಸೂಚಕರ ಖೊಟ್ಟಿ ಸಹಿ, ದೂರು ದಾಖಲು
Hubli; ಸ್ಪರ್ಧೆ ಮಾಡಲು ದಿಂಗಾಲೇಶ್ವರ ಸ್ವಾಮೀಜಿಗೆ ಪೇಮೆಂಟ್ ಬಂದಿದೆ: ಯತ್ನಾಳ್ ಆರೋಪ
Box office: ಈ ವಾರ ಬಾಲಿವುಡ್ನಲ್ಲಿ ಎರಡು ಸಿನಿಮಾಗಳು ರಿಲೀಸ್: 1st Day ಗಳಿಸಿದ್ದೆಷ್ಟು?