
ಪ್ರಕೃತಿ ವಿಕೋಪದಿಂದ ನೊಂದವರ ನೆರವಿಗೆ ಧಾವಿಸಿ
Team Udayavani, Jul 30, 2021, 10:12 AM IST

ಚಿತ್ರದುರ್ಗ: ನಾಡಿನ ಜನತೆ ಕೋವಿಡ್ ಹಾಗೂ ನೆರೆ ಹಾವಳಿಯಿಂದ ತತ್ತರಿಸಿದ್ದಾರೆ. ಮಠಾ ಧೀಶರು ಹಾಗೂ ರಾಜಕಾರಣಿಗಳು ಜನರ ನೆರವಿಗೆ ಧಾವಿಸಬೇಕು ಎಂದು ಡಾ| ಶಿವಮೂರ್ತಿ ಮುರುಘಾ ಶರಣರು ಕರೆ ನೀಡಿದರು. ಗೋಕಾಕ ತಾಲೂಕಿನ ಅಡಿಬಟ್ಟಿ ಗ್ರಾಮದಲ್ಲಿ 500ಕ್ಕೂ ಹೆಚ್ಚು ಪ್ರವಾಹ ಸಂತ್ರಸ್ಥರಿಗೆ ಗುರುವಾರ ಆಹಾರ ಕಿಟ್ ವಿತರಿಸಿ ಮಾತನಾಡಿದರು. ಒಂದು ಕಡೆ ಕೊರೊನಾ ಸೃಷ್ಟಿಸಿದ ಅಸಹಾಯಕತೆಯಿಂದ ಲಕ್ಷಾಂತರ ಜನರು ಪ್ರಾಣ ಕಳೆದುಕೊಂಡರು. ಕರ್ನಾಟಕದಲ್ಲಿ ಇನ್ನೂ ಸೋಂಕು ಕಡಿಮೆಯಾಗಿಲ್ಲ.
ಅದು ಭೀಕರತೆ ಸೃಷ್ಟಿ ಮಾಡಿತ್ತು. ಅಲ್ಲದೆ ಅತಿಯಾಗಿ ಮಳೆ ಸುರಿದು ನದಿ, ಕೆರೆಗಳು ಹರಿದು, ಊರು-ಕೇರಿಗೆ ತೊಂದರೆ ಮಾಡಿರುವುದು ಅಪಾಯ ಉಂಟು ಮಾಡಿದ್ದು ವಿಷಾದನೀಯ ಎಂದರು. ಕೊರೊನಾ ಸೋಂಕು, ಪ್ರವಾಹದಿಂದ ಮಾನವ ಜೀವನ ತತ್ತರಿಸಿ ತೊಂದರೆಗೊಳಗಾಗಿದೆ. ಇಂಥ ಸಂದರ್ಭದಲ್ಲಿ ಜನರಿಗೆ ಯಾವ ರೀತಿ ಸಾಂತ್ವನ ಹೇಳಬೇಕು. ಅಲ್ಲದೆ ಸಮಾಜದಿಂದ ಕೆಲವು ಪ್ರಶ್ನೆಗಳು ಬರುತ್ತವೆ. ಸಂತರ, ಸ್ವಾಮೀಜಿಗಳ ಕಾರ್ಯವೇನು ಎಂದ ಮುರುಘಾ ಶರಣರು, ನಾಡಿಗೆ ದುಃಖ, ಸಮಸ್ಯೆ ಬಂದಾಗ ಧೈರ್ಯ, ಆತ್ಮಸ್ಥೈರ್ಯ ತುಂಬುವುದು ಅಗತ್ಯ ಎಂದರು.
ಶೂನ್ಯ ಸಂಪಾದನಾ ಮಠದ ಶ್ರೀ ಮುರುಘರಾಜೇಂದ್ರ ಸ್ವಾಮೀಜಿ ಮಾತನಾಡಿ, ಕರ್ನಾಟಕದಲ್ಲಿ ಚಿತ್ರದುರ್ಗದ ಮುರುಘಾ ಮಠ ಅಗ್ರಗಣ್ಯ ಮಠವಾಗಿದೆ. ಪೀಠಾ ಧಿಪತಿಗಳಾದ ಡಾ| ಶಿವಮೂರ್ತಿ ಶರಣರು ಗೋಕಾಕ ತಾಲೂಕಿನ ಅಡಿಬಟ್ಟಿ ಗ್ರಾಮದಲ್ಲಿ ನೆರೆ ಹಾವಳಿಯಿಂದ ತತ್ತರಿಸಿದ ಸಂತ್ರಸ್ತರಿಗೆ ಸಾಂತ್ವನ ಹೇಳಲು ಆಗಮಿಸಿರುವುದು ಸಂತಸದ ತಂದಿದೆ ಎಂದು ತಿಳಿಸಿದರು.
ಪ್ರಕೃತಿಯ ವಿಕೋಪಕ್ಕೆ ಅಡಿಬಟ್ಟಿ ಗ್ರಾಮಸ್ಥರು ದುಃಖದಲ್ಲಿ¨ªಾರೆ. ಮುರುಘಾ ಶರಣರ ಆಶೀರ್ವಾದ ನಮ್ಮ ನಿಮ್ಮೆಲ್ಲರ ಮೇಲೆ ಸದಾ ಇರಲಿ ಎಂದು ಹೇಳಿದರು. ಈ ಸಂದರ್ಭದಲ್ಲಿ ಅಥಣಿ ಗಚ್ಚಿನಮಠದ ಶ್ರೀ ಶಿವಬಸವ ಸ್ವಾಮೀಜಿ, ಘಟಪ್ರಭಾದ ಶ್ರೀ ಮಲ್ಲಿಕಾರ್ಜುನ ಸ್ವಾಮೀಜಿ, ಬಿಜೆಪಿ ಮುಖಂಡರಾದ ಬಸವರಾಜ ಕಡಾಡಿ ಮತ್ತಿತರರು ಉಪಸ್ಥಿತರಿದ್ದರು.
ಇದನ್ನೂ ಓದಿ : ಬಂಟ್ವಾಳ: ರೈಲ್ವೆ ಹಳಿಯ ಮೇಲೆ ಯುವಕನ ಮೃತದೇಹ ಪತ್ತೆ
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಾಣದ ಕೈಗಳು ನನಗೆ ಟಿಕೆಟ್ ತಪ್ಪಿಸಿದ್ದವು: ಮಾಜಿ ಶಾಸಕ ಎಸ್.ರಾಮಪ್ಪ

2018 ರಲ್ಲಿ ಪತ್ನಿ ಮತ್ತು ಮಗುವನ್ನು ಕೊಲೆಗೈದ ಪ್ರಕರಣ…: ಆರೋಪಿ ಪತಿಗೆ ಜೀವಾವಧಿ ಶಿಕ್ಷೆ

Davanagere; ಸೇತುವೆ ಮೇಲಿಂದ ಬಿದ್ದು ಆರ್ಟಿಐ ಕಾರ್ಯಕರ್ತ ಹರೀಶ್ ಹಳ್ಳಿ ಸಾವು

ಚನ್ನಗಿರಿ: ಸಿಡಿಲಿನ ಹೊಡೆತಕ್ಕೆ ಸುಟ್ಟು ಕರಕಲಾದ ತೆಂಗಿನ ಮರ

ಅನ್ನದಾತರಿಂದ ಕೃಷಿ ಚಟುವಟಿಕೆ ಶುರು : ಈ ಬಾರಿ ಮುಂಗಾರುಪೂರ್ವ ಮಳೆ ಅಭಾವ
MUST WATCH
ಹೊಸ ಸೇರ್ಪಡೆ

ಕರ್ನಾಟಕದಲ್ಲಿ ನೀರಿನ ಅಭಾವ…: ಮಹಾರಾಷ್ಟ್ರದಿಂದ ನೀರು ಬಿಡುಗಡೆಗೆ ಸಿಎಂ ಸಿದ್ದರಾಮಯ್ಯ ಮನವಿ

Malayalam actor: ಮಲಯಾಳಂನ ಖ್ಯಾತ ಪೋಷಕ ನಟ ಹರೀಶ್ ಪೆಂಗನ್ ನಿಧನ

ಯಲ್ಲಾಪುರ:ಉನ್ನತ ಶಿಕ್ಷಣ ಪಡೆದು ವಿದೇಶದಲ್ಲಿ ನೆಲೆಸಬೇಡಿ- ಡಾ| ವಿಜಯ ಸಂಕೇಶ್ವರ

26/11 ದಾಳಿಕೋರರಿಗೆ ತರಬೇತಿ ನೀಡಿದ್ದ ಅಬ್ದುಲ್ ಸಾಲಾಮ್ ಭುಟ್ಟಾವಿ ಮೃತ್ಯು

WFI chief ವಿರುದ್ಧ ಸಾಕ್ಷ್ಯಾಧಾರಗಳ ಕೊರತೆಯ ವರದಿಗಳು ಸುಳ್ಳು