ಉಸ್ತುವಾರಿ ಸಚಿವರ ಸಿಟಿ ರೌಂಡ್ಸ್
Team Udayavani, Jan 12, 2021, 3:07 PM IST
ದಾವಣಗೆರೆ: ಜಿಲ್ಲಾ ಉಸ್ತುವಾರಿ ಸಚಿವ ಬಿ.ಎ.ಬಸವರಾಜ್ ಸೋಮವಾರ ನಗರದಲ್ಲಿ ವಿವಿಧ ಇಲಾಖೆಗಳ ವತಿಯಿಂದ ಕೈಗೊಳ್ಳಲಾಗಿರುವ ಕಾಮಗಾರಿಗಳನ್ನು ವೀಕ್ಷಿಸಿದರು.
ಬನಶಂಕರಿ ಬಡಾವಣೆ, ವಿದ್ಯಾನಗರ, ಬಾಪೂಜಿ ಪಾಲಿಟೆಕ್ನಿಕ್ ರಸ್ತೆ, ಶಾರದಾಂಬ ಸರ್ಕಲ್, ಎಸ್ಎಸ್ ಲೇಔಟ್, ಡಬಲ್ ರೋಡ್, ಹೊಂಡದ ಸರ್ಕಲ್ ಬಳಿಯ ಕಲ್ಯಾಣಿ ಸೇರಿದಂತೆ ವಿವಿಧ ಸ್ಥಳಗಳಲ್ಲಿ ನಡೆಯುತ್ತಿರುವ ಕಾಮಗಾರಿಗಳನ್ನು ವೀಕ್ಷಿಸಿದರು.
ತ್ವರಿತ ಗತಿಯಲ್ಲಿ ಹಾಗೂ ಗುಣಮಟ್ಟದೊಂದಿಗೆ ಕಾಮಗಾರಿಗಳನ್ನು ಪೂರ್ಣಗೊಳಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು. ಮಹಾನಗರಪಾಲಿಕೆ, ಸ್ಮಾರ್ಟ್ಸಿಟಿ ಹಾಗೂ ದೂಡಾ ವತಿಯಿಂದ ಹಲವಾರು ಕಾಮಗಾರಿಗಳನ್ನು ಕೈಗೊಳ್ಳಲಾಗಿದೆ. ದಾವಣಗೆರೆ ನಗರ ಸ್ಮಾರ್ಟ್ಸಿಟಿ ಹೆಸರಿಗೆ ತಕ್ಕಂತೆ ಸುಂದರ ಹಾಗೂ ಸುಸಜ್ಜಿತವಾಗಿ ರೂಪುಗೊಳ್ಳಲು ಎಲ್ಲರ ಸಹಕಾರದ ಅಗತ್ಯವಿದೆ. ಅದಕ್ಕಾಗಿ ಉತ್ತಮ ಕಾಮಗಾರಿಗಳು ನಡೆಯಲು ಪ್ರಾಮಾಣಿಕ ಪ್ರಯತ್ನ ಮಾಡುತ್ತಿದ್ದೇನೆ ಎಂದರು.
ಇದನ್ನೂ ಓದಿ:ಕುರುಬರ ಎಸ್ ಟಿ ಮೀಸಲಾತಿ ಹೋರಾಟದಲ್ಲಿ ಆರ್ ಎಸ್ಎಸ್ ಕೈವಾಡ: ಸಿದ್ದರಾಮಯ್ಯ
ವೀಕ್ಷಣೆ ವೇಳೆ ಕೆಲವೆಡೆ ಸಾರ್ವಜನಿಕರು ಕಾಮಗಾರಿಗಳ ಬಗೆಗೆ ದೂರಿದಾಗ, ಆದಷ್ಟು ಕೆಲಸಗಳನ್ನು ಕಡಿಮೆ ಮಾಡಿದರೂ ಪರವಾಗಿಲ್ಲ. ಆದರೆ ಗುಣಮಟ್ಟ ಹಾಗೂ ಯೋಜನಾಬದ್ಧವಾಗಿ ಮಾಡಬೇಕು ಎಂದು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ
Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ
PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
MUST WATCH
ಹೊಸ ಸೇರ್ಪಡೆ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ