ಕಾಲೇಜಿಗೆ ಬರಲು ವಿದ್ಯಾರ್ಥಿಗಳ ನಿರುತ್ಸಾಹ


Team Udayavani, Nov 18, 2020, 6:41 PM IST

ಕಾಲೇಜಿಗೆ ಬರಲು ವಿದ್ಯಾರ್ಥಿಗಳ ನಿರುತ್ಸಾಹ

ದಾವಣಗೆರೆ: ಕಾಲೇಜಿಗೆ ಬಂದಂತಹ ವಿದ್ಯಾರ್ಥಿನಿ ನಾಪತ್ತೆ, ಕಾಲೇಜುನತ್ತ ಮುಖ ಮಾಡದ ಒಬ್ಬರೇ ಒಬ್ಬ ವಿದ್ಯಾರ್ಥಿ, ಕಾಲೇಜಿಗೆ ಬಂದವಿದ್ಯಾರ್ಥಿನಿಯರಿಗೆ ಸ್ವತಃ ಸ್ವಾಗತ ಕೋರಿದ ಪ್ರಾಚಾರ್ಯರು ಮತ್ತು ಬೋಧಕ ಸಿಬ್ಬಂದಿ…

ಇವು ಕೋವಿಡ್ ಅಟ್ಟಹಾಸದ ಕಾರಣಕ್ಕೆ ಎಂಟು ತಿಂಗಳ ನಂತರ ಮಂಗಳವಾರ ಪ್ರಾರಂಭವಾದ ಕಾಲೇಜುಗಳಲ್ಲಿ ಕಂಡ ಬಂದ ನೋಟಗಳು. ಕೋವಿಡ್ ಹಿನ್ನೆಲೆಯಲ್ಲಿ ಸರ್ಕಾರ ಕಾಲೇಜುಗಳ ಸ್ಥಗಿತಗೊಳಿಸುವ ನಿರ್ಧಾರ ಕೈಗೊಂಡಿದ್ದು, ನ.17 ರಿಂದ ಅಂತಿಮ ಪದವಿ, ಸ್ನಾತಕೋತ್ತರ ಪದವಿ ತರಗತಿಗೆ ಅನುಮತಿ ನೀಡಿದ್ದರೂ ವಿದ್ಯಾರ್ಥಿಗಳು ಬರುವುದಿಲ್ಲ… ಎಂಬ  ನಿರೀಕ್ಷೆಯಂತೆ ಕೆಲ ಕಾಲೇಜುಗಳಲ್ಲಿ ಬೆರಳೆಣಿಕೆ ಸಂಖ್ಯೆಯಲ್ಲಿ ಕಂಡು ಬಂದರೆ. ಇನ್ನು ಕೆಲ ಕಾಲೇಜುಗಳಲ್ಲಿ ಪ್ರಾಚಾರ್ಯರು, ಉಪನ್ಯಾಸಕರು, ಬೋಧಕೇತರ ಸಿಬ್ಬಂದಿ ಹಾಜರಿದ್ದರು. ಆದರೆ, ವಿದ್ಯಾರ್ಥಿಗಳ ಸುಳಿವೇ ಇರಲಿಲ್ಲ.

ದಾವಣಗೆರೆಯ ಮಹಿಳಾ ಕಾಲೇಜೊಂದಕ್ಕೆ ಇಬ್ಬರು ವಿದ್ಯಾರ್ಥಿನಿಯರು ಮಾತ್ರ ಆಗಮಿಸಿದ್ದರು. ಇಬ್ಬರು ಕೋವಿಡ್‌ ಪರೀಕ್ಷಾ ಪ್ರಮಾಣಪತ್ರದೊಂದಿಗೆ ಬಂದ ಹಿನ್ನೆಲೆಯಲ್ಲಿ ಪ್ರವೇಶವಕಾಶ ನೀಡಲಾಯಿತು. ಓರ್ವ ವಿದ್ಯಾರ್ಥಿನಿಗಾಗಿ ಬೋಧನೆ ಸಹ ನಡೆಯಿತು. ಇನ್ನೋರ್ವ ವಿದ್ಯಾರ್ಥಿನಿ ಕೆಲ ಹೊತ್ತಿನಲ್ಲೇ ವಾಪಾಸ್ಸಾದರು. 700ಕ್ಕೂ ಹೆಚ್ಚು ಅಂತಿಮ ಪದವಿ ವಿದ್ಯಾರ್ಥಿಗಳಲ್ಲಿ ಇಬ್ಬರು ಮಾತ್ರ ಹಾಜರಾಗಿದ್ದರು ಎನ್ನುವುದು ವಿಶೇಷ. ಇನ್ನೊಂದು ಕಾಲೇಜಿನಲ್ಲಿ ಅಂತಿಮ ಪದವಿಯ 380ಕ್ಕೂ ವಿದ್ಯಾರ್ಥಿಗಳಿದ್ದು ಪ್ರಾಚಾರ್ಯರಾದಿಯಾಗಿ ಎಲ್ಲಾ ಬೋಧಕ- ಬೋಧಕೇತರ ಸಿಬ್ಬಂದಿ ಹಾಜರಾಗಿದ್ದರು. ಆದರೆ, ಒಬ್ಬ ಒಬ್ಬೇ ವಿದ್ಯಾರ್ಥಿ ಕಾಲೇಜಿನತ್ತ ಸುಳಿಯಲೇ ಇಲ್ಲ.

ಮತ್ತೂಂದು ಕಾಲೇಜಿನಲ್ಲಿ ಅಂತಿಮ ಪದವಿಯ 600ಕ್ಕೂ ಹೆಚ್ಚುವಿದ್ಯಾರ್ಥಿಗಳಿದ್ದು, ಅವರಲ್ಲಿ 30 ವಿದ್ಯಾರ್ಥಿಗಳು ಮಾತ್ರ ಬಂದಿದ್ದರು. ಕಾಲೇಜಿನಲ್ಲೇ ಕೋವಿಡ್‌ ಪರೀಕ್ಷೆ ಮಾಡುತ್ತಾರೆ ಎಂಬ ನಿರೀಕ್ಷೆಯೊಂದಿಗೆ ವಿದ್ಯಾರ್ಥಿಗಳು ಕೋವಿಡ್‌ ಟೆಸ್ಟ್‌ ರಿಸಲ್ಟ್ ಇಲ್ಲದೆ ಬಂದಿದ್ದರು. ಅಂತಿಮವಾಗಿ ಕಾಲೇಜು ಆವರಣದಲ್ಲೇ ಎಲ್ಲಾ ವಿದ್ಯಾರ್ಥಿಗಳಿಗೆ ಮತ್ತು ಸಿಬ್ಬಂದಿಗೆ ಕೋವಿಡ್‌ ಪರೀಕ್ಷಾ ವ್ಯವಸ್ಥೆ ಮಾಡಲಾಯಿತು. ಬಹುತೇಕ ಕಾಲೇಜಿನಲ್ಲಿ ವಿದ್ಯಾರ್ಥಿಗಳ ಸಂಖ್ಯೆ ತೀರಾ ವಿರಳವಾಗಿತ್ತು. ಕೆಲ ಕಾಲೇಜುಗಳಲ್ಲಿ ವಿದ್ಯಾರ್ಥಿಗಳು ಬರಲೇ ಇಲ್ಲ. ಕಾಲೇಜುಗಳ ಪ್ರಾರಂಭದ ಮೊದಲ ದಿನವೇ ನೀರಸ ವಾತಾವರಣ ಕಂಡು ಬಂದಿತು.

ಆಫ್‌ಲೈನ್‌ ಕ್ಲಾಸ್‌ ಒಳ್ಳೇದು : ಕೋವಿಡ್‌ ಹಿನ್ನೆಲೆಯಲ್ಲಿ ಎಂಟು ತಿಂಗಳನಿಂದ ಕಾಲೇಜ್‌ ಇರಲೇ ಇಲ್ಲ. ಆನ್‌ಲೈನ್‌ ಮೂಲಕ ಪಾಠದ ವ್ಯವಸ್ಥೆ ಮಾಡಲಾಗಿತ್ತು. ಆನ್‌ಲೈನ್‌ಗಿಂತಲೂಆಫ್‌ಲೈನ್‌ ಬಹಳ ಅನುಕೂಲ ಆಗುತ್ತದೆ. ಹಾಗಾಗಿ ಕಾಲೇಜಿಗೆ ಬಂದಿದ್ದೇನೆ.ನನ್ನ ಫ್ರೆಂಡ್ಸ್‌ ಸಹ ಬರುವ ನಿರೀಕ್ಷೆ ಇತ್ತು. ಆದರೆ, ಕೆಲವರ ಪೋಷಕರು ಬೇಡ ಅಂದಿರುವ ಕಾರಣಕ್ಕೆ ಬರದೇ ಇರಬಹುದು. ಯಾರು ಬರಲಿ, ಬಿಡಲಿ ನಾನಂತೂ ಕಾಲೇಜಿಗೆ ಬರುತ್ತೇನೆ ಎಂದು ಹೆಸರು ಹೇಳಲಿಚ್ಚಿಸಿದ ವಿದ್ಯಾರ್ಥಿನಿಯೊಬ್ಬರು ಪ್ರತಿಕ್ರಿಯಿಸಿದರು.

ಏನೂಂತ ಹೇಳುವುದು :  ಕಾಲೇಜುಗಳ ಪ್ರಾರಂಭಿಸುವ ಸರ್ಕಾರದ ನಿರ್ಧಾರದ ಬಗ್ಗೆ ಏನೂ ಅಂತ ಹೇಳುವುದು. ಅಂತಿಮ ವರ್ಷದ 380 ವಿದ್ಯಾರ್ಥಿನಿಯರು ಇದ್ದಾರೆ. ಒಬ್ಬರೇ ಒಬ್ಬರು ಬಂದಿಲ್ಲ. ನಮ್ಮ ಕಾಲೇಜಿಗೆ ಬಹಳಷ್ಟು ಹೆಚ್ಚಿನ ಸಂಖ್ಯೆಯಲ್ಲಿ ಗ್ರಾಮೀಣ ಭಾಗದ ವಿದ್ಯಾರ್ಥಿನಿಯರು ಆಗಮಿಸುತ್ತಾರೆ. ಕೋವಿಡ್ ಪರೀಕ್ಷೆಗೆ ಒಳಗಾದರೂ ರಿಸಲ್ಟ್ ಬರುವುದಕ್ಕೆ ಒಂದು ವಾರವಾದರೂ ಬೇಕಾಗುತ್ತದೆ. ಅದರಿಂದಲೂ ವಿದ್ಯಾರ್ಥಿನಿಯರು ಬರುತ್ತಿಲ್ಲ ಎಂದು ಹೆಸರು ಹೇಳಲಿಚ್ಛಿಸದ ಉಪನ್ಯಾಸಕಿಯೊಬ್ಬರು ಹೇಳಿದರು.

ನಿರ್ಧಾರ ಸರಿ ಇದೆ : ಕಾಲೇಜುಗಳ ಪ್ರಾರಂಭಿಸುವ ಸರ್ಕಾರದ ನಿರ್ಧಾರ ತಪ್ಪೇನು ಇಲ್ಲ. ವಿದ್ಯಾರ್ಥಿಗಳೇ ಕೋವಿಡ್ ಟೆಸ್ಟ್‌ ಮಾಡಿಸಿ ಕೊಂಡು ಬರಬೇಕು ಎನ್ನುವ ಕಾರಣಕ್ಕೆ ಕೆಲವರು ಹಿಂದೇಟು ಹಾಕುತ್ತಿದ್ದಾರೆ. ಕಾಲೇಜಿನಲ್ಲೇ ಕೋವಿಡ್ ಪರೀಕ್ಷೆ ನಡೆಸುವ ವ್ಯವಸ್ಥೆಗೆ ಕೋರಿ ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ| ಜಿ.ಡಿ. ರಾಘವನ್‌ ಅವರಿಗೆ ಪತ್ರಬರೆದಿದ್ದು, ಸೂಕ್ತ ವ್ಯವಸ್ಥೆ ಮಾಡುವ ಭರವಸೆ ನೀಡಿದ್ದಾರೆ. ವಿದ್ಯಾರ್ಥಿನಿಯರ ಪೋಷಕರಿಗೆ ಮಾದರಿ ಪತ್ರ ನೀಡಲಾಗಿದೆ.  –ಡಾ|ಬಿ.ಪಿ. ಕುಮಾರ್‌, ಪ್ರಾಚಾರ್ಯರು, ಎ.ವಿ. ಕಮಲಮ್ಮ ಮಹಿಳಾ ಕಾಲೇಜು.

ಟಾಪ್ ನ್ಯೂಸ್

Rain; ರಾಜ್ಯದ ವಿವಿಧೆಡೆ ಸಿಡಿಲಬ್ಬರದ ಮಳೆ; ಕುಷ್ಟಗಿಯಲ್ಲಿ ರೈತ ಬಲಿ, ಅಪಾರ ನಷ್ಟ

1-weewqewqe

LS Election; ದಿಂಗಾಲೇಶ್ವರ ಶ್ರೀ ಕೋಟ್ಯಧಿಪತಿ: 3 ಅಪರಾಧ ಪ್ರಕರಣಗಳು ಇವೆ

crime (2)

Bengaluru: ಪಾರ್ಕ್ ನಲ್ಲಿ ಹಾಡಹಗಲೇ ಜೋಡಿಯ ಬರ್ಬರ ಹತ್ಯೆ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Billionaire Priyanka; Here is the property details of Satish Jarakiholi’s daughter

Belagavi; ಕೋಟ್ಯಾಧೀಶೆ ಪ್ರಿಯಾಂಕಾ; ಸತೀಶ್ ಜಾರಕಿಹೊಳಿ ಮಗಳ ಆಸ್ತಿ ವಿವರ ಇಲ್ಲಿದೆ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Election Campaign: ಕಾಂಗ್ರೆಸ್‌ನಲ್ಲಿಲ್ಲ ಮೋದಿಗೆ ಸಮಾನ ನಾಯಕತ್ವ: ಗಾಯಿತ್ರಿ ಸಿದ್ದೇಶ್ವರ

Election Campaign: ಕಾಂಗ್ರೆಸ್‌ನಲ್ಲಿಲ್ಲ ಮೋದಿಗೆ ಸಮಾನ ನಾಯಕತ್ವ: ಗಾಯಿತ್ರಿ ಸಿದ್ದೇಶ್ವರ

Gayathri Siddeshwar: ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗಾಯಿತ್ರಿ ಜನ್ಮದಿನ ಆಚರಣೆ

Gayathri Siddeshwar: ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗಾಯಿತ್ರಿ ಜನ್ಮದಿನ ಆಚರಣೆ

Eshwarappa ವಿರುದ್ಧ ಕ್ರಮದ ಬಗ್ಗೆ ಪಕ್ಷದಿಂದಲೇ ನಿರ್ಧಾರ: ಯಡಿಯೂರಪ್ಪ

Eshwarappa ವಿರುದ್ಧ ಕ್ರಮದ ಬಗ್ಗೆ ಪಕ್ಷದಿಂದಲೇ ನಿರ್ಧಾರ: ಯಡಿಯೂರಪ್ಪ

Davanagare: ಚುನಾವಣಾ ತರಬೇತಿಗೆ ಚಕ್ಕರ್; ಅನುಚಿತ ವರ್ತನೆಗೆ ಶಿಕ್ಷಕ ಅಮಾನತು

Davanagare: ಚುನಾವಣಾ ತರಬೇತಿಗೆ ಚಕ್ಕರ್; ಅನುಚಿತ ವರ್ತನೆಗೆ ಶಿಕ್ಷಕ ಅಮಾನತು

ನಾಮಪತ್ರ ಸಲ್ಲಿಸಿದ ದಾವಣಗೆರೆ ಲೋಕಸಭಾ ಬಿಜೆಪಿ ಅಭ್ಯರ್ಥಿ ಗಾಯಿತ್ರಿ ಸಿದ್ದೇಶ್ವರ

ನಾಮಪತ್ರ ಸಲ್ಲಿಸಿದ ದಾವಣಗೆರೆ ಲೋಕಸಭಾ ಬಿಜೆಪಿ ಅಭ್ಯರ್ಥಿ ಗಾಯಿತ್ರಿ ಸಿದ್ದೇಶ್ವರ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Rain; ರಾಜ್ಯದ ವಿವಿಧೆಡೆ ಸಿಡಿಲಬ್ಬರದ ಮಳೆ; ಕುಷ್ಟಗಿಯಲ್ಲಿ ರೈತ ಬಲಿ, ಅಪಾರ ನಷ್ಟ

7

Kundapur: ಬೈಕ್‌ ಢಿಕ್ಕಿ; ಸ್ಕೂಟರ್‌ ಸವಾರೆಗೆ ಗಾಯ

Arrested: ತಂಬಾಕು ಉತ್ಪನ್ನ ಸಹಿತ ಬಂಧನ

Arrested: ತಂಬಾಕು ಉತ್ಪನ್ನ ಸಹಿತ ಬಂಧನ

Theft: ಮನೆಯಿಂದ ಕಳವು; ಸಿಸಿ ಟಿವಿ ದೃಶ್ಯ ಕೇಂದ್ರೀಕರಿಸಿ ತನಿಖೆ

Theft: ಮನೆಯಿಂದ ಕಳವು; ಸಿಸಿ ಟಿವಿ ದೃಶ್ಯ ಕೇಂದ್ರೀಕರಿಸಿ ತನಿಖೆ

1-wqeqwew

BJP ನುಡಿದಂತೆ ನಡೆಯದ ಕೇಂದ್ರ ಸರಕಾರ, 15 ಲ.ರೂ. ಬಂದಿದೆಯೇ?: ಜೆ.ಪಿ. ಹೆಗ್ಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.