ವಾಣಿಜ್ಯ ವಾಹನ ಮಾಲೀಕ-ಚಾಲಕರ ಪ್ರತಿಭಟನೆ
Team Udayavani, Jul 24, 2018, 3:39 PM IST
ದಾವಣಗೆರೆ: ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಕಳೆದ ಶುಕ್ರವಾರದಿಂದ (ಜು. 20) ಅನಿರ್ದಿಷ್ಟಾವಧಿ ಮುಷ್ಕರ ಕೈಗೊಂಡಿರುವ ವಾಣಿಜ್ಯ ವಾಹನಗಳ ಮಾಲೀಕರು, ಚಾಲಕರು ಸೋಮವಾರ ಪ್ರತಿಭಟನಾ ಮೆರವಣಿಗೆ ನಡೆಸಿದರು.
ಜಿಎಸ್ಟಿ ವ್ಯಾಪ್ತಿಗೆ ಡೀಸೆಲ್, ಪೆಟ್ರೋಲ್ ಸೇರ್ಪಡೆ, ದರ ಇಳಿಕೆ, ಏಕರೂಪ ದರ ನಿಗದಿ, ಥರ್ಡ್ ಪಾರ್ಟಿ ವಿಮಾ ಪಾಲಿಸಿ ಮೊತ್ತ ಕಡಿತ ಒಳಗೊಂಡಂತೆ ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಜಿಲ್ಲಾ ಲಾರಿ ಮಾಲೀಕರ ಮತ್ತು ಟ್ರಾನ್ಸ್ಪೊàರ್ಟ್ ಏಜೆಂಟರ ಸಂಘದ ನೇತೃತ್ವದಲ್ಲಿ ಬಸ್, ಮಿನಿಗೂಡ್ಸ್, 3 ಮತ್ತು 4 ಚಕ್ರಗಳ ವಾಹನ, ಟ್ಯಾಕ್ಸಿ ಮಾಲೀಕರು, ಚಾಲಕರು ಜಯದೇವ ವೃತ್ತದಿಂದ ಉಪ ವಿಭಾಗಾಧಿಕಾರಿ ಕಚೇರಿವರೆಗೆ ಮೆರವಣಿಗೆ ನಡೆಸಿ, ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಮನವಿ ಸಲ್ಲಿಸಿದರು.
ಪ್ರತಿ ದಿನ ಡೀಸೆಲ್ ಬೆಲೆಯಲ್ಲಿ ಏರಿಳಿತದ ಪರಿಣಾಮ ಬಾಡಿಗೆಯಲ್ಲಿ ಸ್ಥಿರತೆ ಕಾಯ್ದುಕೊಳ್ಳಲು ಸಾಧ್ಯವಾಗುತ್ತಿಲ್ಲ. ಹಾಗಾಗಿ ಜಿಎಸ್ಟಿಯಡಿ ಡೀಸೆಲ್, ಪೆಟ್ರೋಲ್ ಸೇರಿಸಿ, ಪ್ರತಿ 3 ತಿಂಗಳಿಗೊಮ್ಮೆ ದರ ಪರಿಶೀಲನಾ ಪದ್ಧತಿ ಜಾರಿಗೊಳಿಸಬೇಕು. ಬಾಡಿಗೆ ಇಲ್ಲದೆ ತೀವ್ರ ಸಮಸ್ಯೆ ಅನುಭವಿಸುತ್ತಿರುವರಿಗೆ ಅನುಕೂಲ ಮಾಡಿಕೊಡಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.
ದೇಶದ 427 ಟೋಲ್ಗಳಲ್ಲಿ 67 ಖಾಸಗಿ ಕಂಪನಿಗಳ, 360 ಸರ್ಕಾರದ ಅಧೀನದಲ್ಲಿವೆ. ವರ್ಷಕ್ಕೆ 427 ಟೋಲ್ಗಳಿಂದ 17 ಸಾವಿರ ಕೋಟಿ ಶುಲ್ಕ ವಸೂಲಾಗುತ್ತದೆ. ಲಾರಿ ಲಿಕರ ಮತ್ತು ಟ್ರಾನ್ಸ್ಪೊರ್ಟ್ ಏಜೆಂಟರ ಸಂಘದ ಮೂಲಕವೇ
ವರ್ಷಕ್ಕೆ 20 ಸಾವಿರ ಕೋಟಿ ಟೋಲ್ ಶುಲ್ಕ ಪಾವತಿ ಮಾಡಲಾಗುತ್ತಿದೆ. ಬಸ್, ಲಾರಿ, ಕಾರು ಎಲ್ಲಾ ವಾಹನಗಳಿಂದ ಟೋಲ್ ಸಂಗ್ರಹ ನಿಲ್ಲಿಸುವ ಮೂಲಕ ಟೋಲ್ವುುಕ್ತ ಭಾರತ ಮಾಡಬೇಕು ಎಂದು ಒತ್ತಾಯಿಸಿದರು.
ಥರ್ಡ್ ಪಾರ್ಟಿ ವಿಮಾ ಪಾಲಿಸಿ ಅತಿ ಹೆಚ್ಚಾಗಿದೆ. ವಿಮಾ ಮೊತ್ತದ ಹೆಚ್ಚಳಕ್ಕೆ ಕಾರಣ ಕೇಳಿದರೆ ನಷ್ಟದ ಬಗ್ಗೆ ಹೇಳುತ್ತಾರೆ. ವಿಮಾ ಕ್ಷೇತ್ರವೇ ನಷ್ಟದಲ್ಲಿರುವಾಗ ಹೊಸ ಕಂಪನಿಗಳು ಬರುವುದು ನೋಡಿದರೆ ವಿಮಾ ಕಂಪನಿಗಳ ಲಾಬಿ ಗೊತ್ತಾಗುತ್ತದೆ. ಥರ್ಡ್ ಪಾರ್ಟಿ ವಿಮಾ ಪಾಲಿಸಿ ಕಡಿಮೆ ಮಾಡಬೇಕು. ಲಾರಿಗಳ ಮಾದರಿಯಲ್ಲೇ ಪ್ರವಾಸಿ ಬಸ್ಗಳಿಗೂ ರಾಷ್ಟ್ರೀಯ ಪರವಾನಿಗೆ ನೀಡಬೇಕು. ಟಿಡಿಎಸ್ ರದ್ದುಗೊಳಿಸಬೇಕು ಎಂದು ಒತ್ತಾಯಿಸಿದರು.
ಪೂರ್ವಭಾವಿ ಆದಾಯ (ಆದಾಯ ತೆರಿಗೆ ನಿಯಮ-44) ಕಾಯ್ದೆ ಪರಿವರ್ತನೆ, ಈ-ವೇ ಬಿಲ್ ಸಮಸ್ಯೆ ನಿವಾರಣೆ, ಮುಂಬೈನ ಜವಾಹರ್ ಲಾಲ್ ನೆಹರು ಪೋರ್ಟ್ ಟ್ರಸ್ಟ್ ನೂತನವಾಗಿ ಪ್ರಕಟಿಸಿರುವ ನೇರ ಪೋರ್ಟ್ ಡೆಲಿವಿರಿ ಪದ್ಧತಿ ರದ್ದು ಮತ್ತು ಬಂದರುಗಳಲ್ಲಿ ಆಗುತ್ತಿರುವ ವಾಹನ ದಟ್ಟಣೆ ಕಡಿಮೆ ಮಾಡುವುದು ಒಳಗೊಂಡಂತೆ ವಿವಿಧ ಬೇಡಿಕೆ ಈಡೇರಿಸಬೇಕು. ಅಲ್ಲಿಯವರೆಗೆ ಅನಿರ್ದಿಷ್ಟಾವಧಿ ಮುಷ್ಕರ ನಡೆಸಲಾಗುವುದು ಎಂದು ಎಚ್ಚರಿಸಿದರು.
ಜಿಲ್ಲಾ ಲಾರಿ ಮಾಲೀಕರ ಮತ್ತು ಟ್ರಾನ್ಸ್ಪೊರ್ಟ್ ಏಜೆಂಟರ ಸಂಘದ ಗೌರವ ಅಧ್ಯಕ್ಷ ಜಿ. ನಾಗೋಜಿರಾವ್, ಉಪಾಧ್ಯಕ್ಷ ಮಹಾಂತೇಶ್ ಒಣರೊಟ್ಟಿ, ಖಜಾಂಚಿ ಮಲ್ಲಿಕಾರ್ಜುನ್, ಖಜಾಂಚಿ ಭೀಮಪ್ಪ, ಸೋಗಿ ಮಹಾಂತೇಶ್, ಇಮಾಂ, ಸ್ವಾಮಿ, ಸಿದ್ದೇಶ್, ಮಹಾಂತೇಶ್, ಜಯಣ್ಣ, 3 ಮತ್ತು 4 ಚಕ್ರಗಳ ವಾಹನಗಳ ಮಾಲೀಕರು ಮತ್ತು ಚಾಲಕರ ಸಂಘದ ಜಿಲ್ಲಾ ಅಧ್ಯಕ್ಷ ಪಿ. ಪಳನಿಸ್ವಾಮಿ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LS Polls: ಪಂಚಮಸಾಲಿ ಜಗದ್ಗುರು ಶ್ರೀ ವಚನಾನಂದ ಸ್ವಾಮೀಜಿಗಳಿಂದ ಮತಗಟ್ಟೆಯಲ್ಲಿ ಮೊದಲ ಮತದಾನ
Lok Sabha Election: ಮತಗಟ್ಟೆಗಳಿಗೆ ತೆರಳಿದ ಅಧಿಕಾರಿಗಳು, ಸಿಬ್ಬಂದಿಗಳು
LS Polls: “ಕಾಂಗ್ರೆಸ್ಸಿಗರಿಗೆ ಬಡವರೆಂದರೆ ನಾಟಕೀಯ ಪ್ರೀತಿ’: ಗಾಯತ್ರಿ ಸಿದ್ದೇಶ್ವರ್
CT Ravi ಡಿಕೆಶಿಗೆ ಆಲೂ ಬಿತ್ತಿ ಬಂಗಾರ ಬೆಳೆಯುವ ವಿದ್ಯೆ ಕರಗತ
Davanagere; ಟೈರ್ ಸಿಡಿದು ಸೇತುವೆ ಮೇಲಿಂದ ಉರುಳಿದ ಕಾರು:ಇಬ್ಬರು ಮೃತ್ಯು
MUST WATCH
ಹೊಸ ಸೇರ್ಪಡೆ
ಶಿವಮೊಗ್ಗ: ಹಾಡಹಗಲೇ ನಡುರಸ್ತೆಯಲ್ಲಿ ಇಬ್ಬರು ರೌಡಿಶೀಟರ್ ಗಳ ಭೀಕರ ಹತ್ಯೆ, ಬಿಗುವಿನ ವಾತಾವರಣ
Sangeeth Sivan: ಮಾಲಿವುಡ್, ಬಾಲಿವುಡ್ನ ಖ್ಯಾತ ನಿರ್ದೇಶಕ ಸಂಗೀತ್ ಶಿವನ್ ನಿಧನ
Thirthahalli ಕುಪ್ಪಳ್ಳಿ; ಮನೆಗೆ ಆಕಸ್ಮಿಕ ಬೆಂಕಿ: ಅಪಾರ ಹಾನಿ!
ಎಲ್ಲಾ ಶೆಡ್ಯೂಲ್ ಮುಗಿದ ಬಳಿಕವಷ್ಟೇ ʼKGF -3ʼ.. ಬಿಗ್ ಅಪ್ಡೇಟ್ ಕೊಟ್ಟ ನಿರ್ದೇಶಕ ನೀಲ್
Goa ಲೋಕಸಭಾ ಚುನಾವಣೆಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮತದಾನ ಆಗಿದೆ: ಸಿಎಂ ಪ್ರಮೋದ್ ಸಾವಂತ್