ಚುನಾವಣೆಗೆ ಆಯೋಗದ ಭರದ ಸಿದ್ಧತೆ

ಭರದಿಂದ ಸಾಗಿದೆ ಅಗತ್ಯ ಮೂಲ ಸೌಕರ್ಯ ಹೆಚ್ಚಿಸುವ ಕಾರ್ಯ

Team Udayavani, Mar 20, 2023, 6:42 AM IST

ಚುನಾವಣೆಗೆ ಆಯೋಗದ ಭರದ ಸಿದ್ಧತೆ

ದಾವಣಗೆರೆ: ವಿಧಾನಸಭೆ ಚುನಾವಣೆ ದಿನಾಂಕ ಘೋಷಣೆಗೆ ದಿನಗಣನೆ ಶುರುವಾಗಿರುವ ಬೆನ್ನಲ್ಲೇ ಚುನಾವಣಾ ಆಯೋಗದಿಂದ ಮತಗಟ್ಟೆಗಳ ಸಿದ್ಧತೆ ಕಾರ್ಯ ನಡೆದಿದೆ. ರಾಜ್ಯಾದ್ಯಂತ ಮತಗಟ್ಟೆಗಳಿಗಾಗಿ ಸರ್ಕಾರಿ ಶಾಲೆಗಳೇ ಆಯ್ಕೆಯಾಗಿರುವುದರಿಂದ ಅಲ್ಲಿ ಅಗತ್ಯ ಮೂಲ ಸೌಕರ್ಯ ಹೆಚ್ಚಿಸುವ ಕಾರ್ಯ ಭರದಿಂದ ಸಾಗಿದೆ.

ರಾಜ್ಯದ 34 ಶೈಕ್ಷಣಿಕ ಜಿಲ್ಲೆಗಳ ವ್ಯಾಪ್ತಿಯ ಒಟ್ಟು 58,282 ಸರ್ಕಾರಿ ಶಾಲೆಗಳನ್ನು ಮತಗಟ್ಟೆ ಕೇಂದ್ರಗಳೆಂದು ಗುರುತಿಸಲಾಗಿದೆ. ಮತಗಟ್ಟೆಗಳಲ್ಲಿ ಇರಬೇಕಾದ ಮೂಲ ಸೌಕರ್ಯಗಳ ಪರಿಶೀಲನೆ ಕಾರ್ಯ ಪೂರ್ಣಗೊಂಡಿದ್ದು ಯಾವ ಮತಗಟ್ಟೆಯಲ್ಲಿ ಮೂಲ ಸೌಕರ್ಯ ಕೊರತೆ ಇದೆಯೋ ಅಲ್ಲಿ ಅಭಿವೃದ್ಧಿಪಡಿಸುವ ಕಾರ್ಯ ಮುಂದುವರಿದಿದೆ. ಮತಗಟ್ಟೆಗೆ ಆಯ್ಕೆಯಾದ ಶಾಲೆಗಳಲ್ಲಿ ರ್‍ಯಾಂಪ್‌, ಕುಡಿಯುವ ನೀರಿನ ಸೌಲಭ್ಯ, ವಿದ್ಯುತ್‌, ಪೀಠೊಪಕರಣ, ನಿರೀಕ್ಷಣಾ ಕೊಠಡಿ, ಮಹಿಳೆ ಹಾಗೂ ಪುರುಷರಿಗೆ ಪ್ರತ್ಯೇಕ ಶೌಚಾಲಯ ವ್ಯವಸ್ಥೆ, ಸೂಚನಾ ಫಲಕ ವ್ಯವಸ್ಥೆ ಸೇರಿ ಇನ್ನಿತರ ವ್ಯವಸ್ಥೆಗಳು ಇರುವ ಬಗ್ಗೆ ಶಿಕ್ಷಣ ಇಲಾಖೆ ಅಧಿಕಾರಿಗಳು ಪರಿಶೀಲಿಸಿದ್ದಾರೆ.

ರಾಜ್ಯದ ಸರ್ಕಾರಿ ಶಾಲೆಗಳ ಒಟ್ಟು 55,498 ಮತಗಟ್ಟೆ ಕೇಂದ್ರಗಳಲ್ಲಿ ರ್‍ಯಾಂಪ್‌ ಸೌಲಭ್ಯ, 55,781 ಮತಗಟ್ಟೆಗಳಲ್ಲಿ ಕುಡಿಯುವ ನೀರಿನ ವ್ಯವಸ್ಥೆ, 55,997 ಮತಗಟ್ಟೆಗಳಲ್ಲಿ ವಿದ್ಯುತ್‌, 56,288 ಮತಗಟ್ಟೆಗಳಲ್ಲಿ ಪೀಠೊಪಕರಣ, 56,436 ಮತಗಟ್ಟೆಗಳಲ್ಲಿ ನಿರೀಕ್ಷಣಾ ಕೊಠಡಿ, 55,845 ಮತಗಟ್ಟೆಗಳಲ್ಲಿ ಪುರುಷರ ಶೌಚಾಲಯ, 55,479 ಮತಗಟ್ಟೆಗಳಲ್ಲಿ ಮಹಿಳಾ ಶೌಚಾಲಯ ವ್ಯವಸ್ಥೆ ಹಾಗೂ 56,849 ಮತಗಟ್ಟೆಗಳಲ್ಲಿ ಸೂಚನಾ ಫಲಕ ವ್ಯವಸ್ಥೆ ಇರುವುದನ್ನು ಅಧಿಕಾರಿಗಳು ಸ್ಥಳ ಪರಿಶೀಲಿಸಿ ಖಚಿತ ಪಡಿಸಿಕೊಂಡಿದ್ದಾರೆ.

ಸೌಲಭ್ಯ ಕಲ್ಪಿಸುವ ಕಾರ್ಯ:
ಮೂಲ ಸೌಲಭ್ಯ ಕೊರತೆ ಇರುವ ಮತಗಟ್ಟೆಗಳನ್ನೂ ಗುರುತಿಸಲಾಗಿದ್ದು ವಾರದೊಳಗೆ ಎಲ್ಲ ಸೌಕರ್ಯ ಕಲ್ಪಿಸಿಕೊಳ್ಳುವ ಕಾರ್ಯ ನಡೆದಿದೆ. ಅಧಿಕಾರಿಗಳ ಸಮೀಕ್ಷೆ ಆಧರಿಸಿ ಒಟ್ಟು 2784 ಮತಗಟ್ಟೆಗಳಲ್ಲಿ ರ್‍ಯಾಂಪ್‌ ಸೌಲಭ್ಯ, 2501 ಮತಗಟ್ಟೆಗಳಲ್ಲಿ ಕುಡಿಯುವ ನೀರಿನ ಸೌಲಭ್ಯ, 2585 ಮತಗಟ್ಟೆಗಳಲ್ಲಿ ಕುಡಿಯುವ ನೀರಿನ ಸೌಲಭ್ಯ, 1994 ಮತಗಟ್ಟೆಗಳಲ್ಲಿ ಪೀಠೊಪಕರಣ ವ್ಯವಸ್ಥೆ, 1845 ಮತಗಟ್ಟೆಗಳಲ್ಲಿ ನಿರೀಕ್ಷಣಾ ಕೊಠಡಿ ವ್ಯವಸ್ಥೆ, 2437 ಮತಗಟ್ಟೆಗಳಲ್ಲಿ ಪುರುಷ ಶೌಚಗೃಹ ವ್ಯವಸ್ಥೆ, 2803 ಮತಗಟ್ಟೆಗಳಲ್ಲಿ ಮಹಿಳಾ ಶೌಚಗೃಹ ವ್ಯವಸ್ಥೆ ಹಾಗೂ 1433 ಮತಗಟ್ಟೆಗಳಲ್ಲಿ ಸೂಚನಾ ಫಲಕ ವ್ಯವಸ್ಥೆ ಕಲ್ಪಿಸಲು ಕ್ರಮ ವಹಿಸಲಾಗುತ್ತಿದೆ.

ಶೌಚಗೃಹ ಇಲ್ಲದ ಮತಗಟ್ಟೆಗಳಲ್ಲಿ ನರೇಗಾ ಒಗ್ಗೂಡುವಿಕೆಯೊಂದಿಗೆ ನಿರ್ಮಾಣ ಮಾಡಿಕೊಳ್ಳಬೇಕು. ಕೊಠಡಿ ಹಾಗೂ ಇತರ ದುರಸ್ತಿಗಾಗಿ ತುರ್ತು ದುರಸ್ತಿ ಕಾಮಗಾರಿಗೆ ಮಂಜೂರಾದ ಅನುದಾನ ಬಳಕೆ ಮಾಡಿಕೊಳ್ಳಬೇಕು. ಮತಗಟ್ಟೆಗೆ ಆಯ್ಕೆಯಾದ ಶಾಲೆಗಳಲ್ಲಿ ಅಗತ್ಯ ಮೂಲ ಸೌಲಭ್ಯಗಳನ್ನು ಮಾರ್ಚ್‌ ಅಂತ್ಯದೊಳಗೆ ಅಭಿವೃದ್ಧಿಪಡಿಸಿ ವರದಿ ಸಲ್ಲಿಸಬೇಕೆಂದು ಶಿಕ್ಷಣ ಇಲಾಖೆ ಆಯುಕ್ತರು ಎಲ್ಲ ಉಪನಿರ್ದೇಶಕರಿಗೆ ಸೂಚಿಸಿದ್ದಾರೆ.

ದಾವಣಗೆರೆ ಜಿಲ್ಲೆಯ ಬಹುತೇಕ ಎಲ್ಲ ಸರ್ಕಾರಿ ಶಾಲೆಗಳು ಮತಗಟ್ಟೆಗಳಿಗಾಗಿ ಬಳಕೆಯಾಗಲಿವೆ. ಮತಗಟ್ಟೆಗಳಲ್ಲಿನ ಸೌಲಭ್ಯ ಪರಿಶೀಲನೆಗೆ ಸಮಿತಿಯೊಂದನ್ನು ರಚಿಸಲಾಗಿದ್ದು ಸಮಿತಿ ವರದಿ ಆಧರಿಸಿ ಕ್ರಿಯಾಯೋಜನೆ ಮಾಡಿ ಮತಗಟ್ಟೆಗಳಲ್ಲಿ ಮೂಲ ಸೌಕರ್ಯ ಕಲ್ಪಿಸಲಾಗುವುದು.
– ಜಿ.ಆರ್‌. ತಿಪ್ಪೇಶಪ್ಪ, ಉಪನಿರ್ದೇಶಕರು, ಸಾರ್ವಜನಿಕ ಶಿಕ್ಷಣ ಇಲಾಖೆ, ದಾವಣಗೆರೆ

-ಎಚ್‌.ಕೆ. ನಟರಾಜ

ಟಾಪ್ ನ್ಯೂಸ್

Aranthodu ಕಾಂಗ್ರೆಸ್‌ ಕಾರ್ಯಕರ್ತನ ಮೇಲೆ ಹಲ್ಲೆ

Aranthodu ಕಾಂಗ್ರೆಸ್‌ ಕಾರ್ಯಕರ್ತನ ಮೇಲೆ ಹಲ್ಲೆ

Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ

Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ

Congress ವಿರುದ್ಧ ಬಿಜೆಪಿ ಕ್ಯೂಆರ್‌ ಕೋಡ್‌ ಸಮರ

Congress ವಿರುದ್ಧ ಬಿಜೆಪಿ ಕ್ಯೂಆರ್‌ ಕೋಡ್‌ ಸಮರ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

OBC ವರ್ಗಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯ: ಸುನಿಲ್‌ ಕುಮಾರ್‌

OBC ವರ್ಗಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯ: ಸುನಿಲ್‌ ಕುಮಾರ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ

Congress ವಿರುದ್ಧ ಬಿಜೆಪಿ ಕ್ಯೂಆರ್‌ ಕೋಡ್‌ ಸಮರ

Congress ವಿರುದ್ಧ ಬಿಜೆಪಿ ಕ್ಯೂಆರ್‌ ಕೋಡ್‌ ಸಮರ

OBC ವರ್ಗಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯ: ಸುನಿಲ್‌ ಕುಮಾರ್‌

OBC ವರ್ಗಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯ: ಸುನಿಲ್‌ ಕುಮಾರ್‌

ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್‌ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ

Bangalore Rural; ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್‌ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Aranthodu ಕಾಂಗ್ರೆಸ್‌ ಕಾರ್ಯಕರ್ತನ ಮೇಲೆ ಹಲ್ಲೆ

Aranthodu ಕಾಂಗ್ರೆಸ್‌ ಕಾರ್ಯಕರ್ತನ ಮೇಲೆ ಹಲ್ಲೆ

Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ

Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ

ಕೊಲೆಗಾಗಿಯೇ ಚಾಕು ಖರೀದಿಸಿದ್ದ ಫ‌ಯಾಜ್‌: ಮೂರೂವರೆ ತಾಸು ಸ್ಥಳ ಮಹಜರು ಮಾಡಿದ ಸಿಐಡಿ ತಂಡ

ಕೊಲೆಗಾಗಿಯೇ ಚಾಕು ಖರೀದಿಸಿದ್ದ ಫ‌ಯಾಜ್‌: ಮೂರೂವರೆ ತಾಸು ಸ್ಥಳ ಮಹಜರು ಮಾಡಿದ ಸಿಐಡಿ ತಂಡ

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ

Congress ವಿರುದ್ಧ ಬಿಜೆಪಿ ಕ್ಯೂಆರ್‌ ಕೋಡ್‌ ಸಮರ

Congress ವಿರುದ್ಧ ಬಿಜೆಪಿ ಕ್ಯೂಆರ್‌ ಕೋಡ್‌ ಸಮರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.