ಚುನಾವಣೆಗೆ ಆಯೋಗದ ಭರದ ಸಿದ್ಧತೆ

ಭರದಿಂದ ಸಾಗಿದೆ ಅಗತ್ಯ ಮೂಲ ಸೌಕರ್ಯ ಹೆಚ್ಚಿಸುವ ಕಾರ್ಯ

Team Udayavani, Mar 20, 2023, 6:42 AM IST

ಚುನಾವಣೆಗೆ ಆಯೋಗದ ಭರದ ಸಿದ್ಧತೆ

ದಾವಣಗೆರೆ: ವಿಧಾನಸಭೆ ಚುನಾವಣೆ ದಿನಾಂಕ ಘೋಷಣೆಗೆ ದಿನಗಣನೆ ಶುರುವಾಗಿರುವ ಬೆನ್ನಲ್ಲೇ ಚುನಾವಣಾ ಆಯೋಗದಿಂದ ಮತಗಟ್ಟೆಗಳ ಸಿದ್ಧತೆ ಕಾರ್ಯ ನಡೆದಿದೆ. ರಾಜ್ಯಾದ್ಯಂತ ಮತಗಟ್ಟೆಗಳಿಗಾಗಿ ಸರ್ಕಾರಿ ಶಾಲೆಗಳೇ ಆಯ್ಕೆಯಾಗಿರುವುದರಿಂದ ಅಲ್ಲಿ ಅಗತ್ಯ ಮೂಲ ಸೌಕರ್ಯ ಹೆಚ್ಚಿಸುವ ಕಾರ್ಯ ಭರದಿಂದ ಸಾಗಿದೆ.

ರಾಜ್ಯದ 34 ಶೈಕ್ಷಣಿಕ ಜಿಲ್ಲೆಗಳ ವ್ಯಾಪ್ತಿಯ ಒಟ್ಟು 58,282 ಸರ್ಕಾರಿ ಶಾಲೆಗಳನ್ನು ಮತಗಟ್ಟೆ ಕೇಂದ್ರಗಳೆಂದು ಗುರುತಿಸಲಾಗಿದೆ. ಮತಗಟ್ಟೆಗಳಲ್ಲಿ ಇರಬೇಕಾದ ಮೂಲ ಸೌಕರ್ಯಗಳ ಪರಿಶೀಲನೆ ಕಾರ್ಯ ಪೂರ್ಣಗೊಂಡಿದ್ದು ಯಾವ ಮತಗಟ್ಟೆಯಲ್ಲಿ ಮೂಲ ಸೌಕರ್ಯ ಕೊರತೆ ಇದೆಯೋ ಅಲ್ಲಿ ಅಭಿವೃದ್ಧಿಪಡಿಸುವ ಕಾರ್ಯ ಮುಂದುವರಿದಿದೆ. ಮತಗಟ್ಟೆಗೆ ಆಯ್ಕೆಯಾದ ಶಾಲೆಗಳಲ್ಲಿ ರ್‍ಯಾಂಪ್‌, ಕುಡಿಯುವ ನೀರಿನ ಸೌಲಭ್ಯ, ವಿದ್ಯುತ್‌, ಪೀಠೊಪಕರಣ, ನಿರೀಕ್ಷಣಾ ಕೊಠಡಿ, ಮಹಿಳೆ ಹಾಗೂ ಪುರುಷರಿಗೆ ಪ್ರತ್ಯೇಕ ಶೌಚಾಲಯ ವ್ಯವಸ್ಥೆ, ಸೂಚನಾ ಫಲಕ ವ್ಯವಸ್ಥೆ ಸೇರಿ ಇನ್ನಿತರ ವ್ಯವಸ್ಥೆಗಳು ಇರುವ ಬಗ್ಗೆ ಶಿಕ್ಷಣ ಇಲಾಖೆ ಅಧಿಕಾರಿಗಳು ಪರಿಶೀಲಿಸಿದ್ದಾರೆ.

ರಾಜ್ಯದ ಸರ್ಕಾರಿ ಶಾಲೆಗಳ ಒಟ್ಟು 55,498 ಮತಗಟ್ಟೆ ಕೇಂದ್ರಗಳಲ್ಲಿ ರ್‍ಯಾಂಪ್‌ ಸೌಲಭ್ಯ, 55,781 ಮತಗಟ್ಟೆಗಳಲ್ಲಿ ಕುಡಿಯುವ ನೀರಿನ ವ್ಯವಸ್ಥೆ, 55,997 ಮತಗಟ್ಟೆಗಳಲ್ಲಿ ವಿದ್ಯುತ್‌, 56,288 ಮತಗಟ್ಟೆಗಳಲ್ಲಿ ಪೀಠೊಪಕರಣ, 56,436 ಮತಗಟ್ಟೆಗಳಲ್ಲಿ ನಿರೀಕ್ಷಣಾ ಕೊಠಡಿ, 55,845 ಮತಗಟ್ಟೆಗಳಲ್ಲಿ ಪುರುಷರ ಶೌಚಾಲಯ, 55,479 ಮತಗಟ್ಟೆಗಳಲ್ಲಿ ಮಹಿಳಾ ಶೌಚಾಲಯ ವ್ಯವಸ್ಥೆ ಹಾಗೂ 56,849 ಮತಗಟ್ಟೆಗಳಲ್ಲಿ ಸೂಚನಾ ಫಲಕ ವ್ಯವಸ್ಥೆ ಇರುವುದನ್ನು ಅಧಿಕಾರಿಗಳು ಸ್ಥಳ ಪರಿಶೀಲಿಸಿ ಖಚಿತ ಪಡಿಸಿಕೊಂಡಿದ್ದಾರೆ.

ಸೌಲಭ್ಯ ಕಲ್ಪಿಸುವ ಕಾರ್ಯ:
ಮೂಲ ಸೌಲಭ್ಯ ಕೊರತೆ ಇರುವ ಮತಗಟ್ಟೆಗಳನ್ನೂ ಗುರುತಿಸಲಾಗಿದ್ದು ವಾರದೊಳಗೆ ಎಲ್ಲ ಸೌಕರ್ಯ ಕಲ್ಪಿಸಿಕೊಳ್ಳುವ ಕಾರ್ಯ ನಡೆದಿದೆ. ಅಧಿಕಾರಿಗಳ ಸಮೀಕ್ಷೆ ಆಧರಿಸಿ ಒಟ್ಟು 2784 ಮತಗಟ್ಟೆಗಳಲ್ಲಿ ರ್‍ಯಾಂಪ್‌ ಸೌಲಭ್ಯ, 2501 ಮತಗಟ್ಟೆಗಳಲ್ಲಿ ಕುಡಿಯುವ ನೀರಿನ ಸೌಲಭ್ಯ, 2585 ಮತಗಟ್ಟೆಗಳಲ್ಲಿ ಕುಡಿಯುವ ನೀರಿನ ಸೌಲಭ್ಯ, 1994 ಮತಗಟ್ಟೆಗಳಲ್ಲಿ ಪೀಠೊಪಕರಣ ವ್ಯವಸ್ಥೆ, 1845 ಮತಗಟ್ಟೆಗಳಲ್ಲಿ ನಿರೀಕ್ಷಣಾ ಕೊಠಡಿ ವ್ಯವಸ್ಥೆ, 2437 ಮತಗಟ್ಟೆಗಳಲ್ಲಿ ಪುರುಷ ಶೌಚಗೃಹ ವ್ಯವಸ್ಥೆ, 2803 ಮತಗಟ್ಟೆಗಳಲ್ಲಿ ಮಹಿಳಾ ಶೌಚಗೃಹ ವ್ಯವಸ್ಥೆ ಹಾಗೂ 1433 ಮತಗಟ್ಟೆಗಳಲ್ಲಿ ಸೂಚನಾ ಫಲಕ ವ್ಯವಸ್ಥೆ ಕಲ್ಪಿಸಲು ಕ್ರಮ ವಹಿಸಲಾಗುತ್ತಿದೆ.

ಶೌಚಗೃಹ ಇಲ್ಲದ ಮತಗಟ್ಟೆಗಳಲ್ಲಿ ನರೇಗಾ ಒಗ್ಗೂಡುವಿಕೆಯೊಂದಿಗೆ ನಿರ್ಮಾಣ ಮಾಡಿಕೊಳ್ಳಬೇಕು. ಕೊಠಡಿ ಹಾಗೂ ಇತರ ದುರಸ್ತಿಗಾಗಿ ತುರ್ತು ದುರಸ್ತಿ ಕಾಮಗಾರಿಗೆ ಮಂಜೂರಾದ ಅನುದಾನ ಬಳಕೆ ಮಾಡಿಕೊಳ್ಳಬೇಕು. ಮತಗಟ್ಟೆಗೆ ಆಯ್ಕೆಯಾದ ಶಾಲೆಗಳಲ್ಲಿ ಅಗತ್ಯ ಮೂಲ ಸೌಲಭ್ಯಗಳನ್ನು ಮಾರ್ಚ್‌ ಅಂತ್ಯದೊಳಗೆ ಅಭಿವೃದ್ಧಿಪಡಿಸಿ ವರದಿ ಸಲ್ಲಿಸಬೇಕೆಂದು ಶಿಕ್ಷಣ ಇಲಾಖೆ ಆಯುಕ್ತರು ಎಲ್ಲ ಉಪನಿರ್ದೇಶಕರಿಗೆ ಸೂಚಿಸಿದ್ದಾರೆ.

ದಾವಣಗೆರೆ ಜಿಲ್ಲೆಯ ಬಹುತೇಕ ಎಲ್ಲ ಸರ್ಕಾರಿ ಶಾಲೆಗಳು ಮತಗಟ್ಟೆಗಳಿಗಾಗಿ ಬಳಕೆಯಾಗಲಿವೆ. ಮತಗಟ್ಟೆಗಳಲ್ಲಿನ ಸೌಲಭ್ಯ ಪರಿಶೀಲನೆಗೆ ಸಮಿತಿಯೊಂದನ್ನು ರಚಿಸಲಾಗಿದ್ದು ಸಮಿತಿ ವರದಿ ಆಧರಿಸಿ ಕ್ರಿಯಾಯೋಜನೆ ಮಾಡಿ ಮತಗಟ್ಟೆಗಳಲ್ಲಿ ಮೂಲ ಸೌಕರ್ಯ ಕಲ್ಪಿಸಲಾಗುವುದು.
– ಜಿ.ಆರ್‌. ತಿಪ್ಪೇಶಪ್ಪ, ಉಪನಿರ್ದೇಶಕರು, ಸಾರ್ವಜನಿಕ ಶಿಕ್ಷಣ ಇಲಾಖೆ, ದಾವಣಗೆರೆ

-ಎಚ್‌.ಕೆ. ನಟರಾಜ

ಟಾಪ್ ನ್ಯೂಸ್

“ಗ್ಯಾರಂಟಿ’ ಜಾರಿಗೆ ಷರತ್ತು ಹಾಕಬಾರದು: ಬಿ.ವೈ.ವಿಜಯೇಂದ್ರ

“ಗ್ಯಾರಂಟಿ’ ಜಾರಿಗೆ ಷರತ್ತು ಹಾಕಬಾರದು: ಬಿ.ವೈ.ವಿಜಯೇಂದ್ರ

inಕುಸ್ತಿ ಪಟುಗಳಿಗೆ ಈಗಲಾದರೂ ನ್ಯಾಯ ಸಿಗಲಿ

ಕುಸ್ತಿ ಪಟುಗಳಿಗೆ ಈಗಲಾದರೂ ನ್ಯಾಯ ಸಿಗಲಿ

ದೂರದೃಷ್ಟಿಯ ನಾಯಕತ್ವಕ್ಕೆ ಮಾದರಿ ಎಸ್‌.ಆರ್‌. ಬೊಮ್ಮಾಯಿ

ದೂರದೃಷ್ಟಿಯ ನಾಯಕತ್ವಕ್ಕೆ ಮಾದರಿ ಎಸ್‌.ಆರ್‌. ಬೊಮ್ಮಾಯಿ

beBelthangady: ರಸ್ತೆ ವಿಚಾರದಲ್ಲಿ ಕುಟುಂಬದ ನಡುವೆ ಹೊಡೆದಾಟ

Belthangady: ರಸ್ತೆ ವಿಚಾರದಲ್ಲಿ ಕುಟುಂಬದ ನಡುವೆ ಹೊಡೆದಾಟ

ವಕೀಲರ ರಕ್ಷಣೆಗೆ ಕಾನೂನು

ವಕೀಲರ ರಕ್ಷಣೆಗೆ ಕಾನೂನು

BJP ವಿರುದ್ಧ ಸಭೆಯ ದಿನಾಂಕ ಮುಂದೂಡಿಕೆ

BJP ವಿರುದ್ಧ ಸಭೆಯ ದಿನಾಂಕ ಮುಂದೂಡಿಕೆ

indWomen Junior Asia Cup Hockey: ಮಲೇಷ್ಯಾವನ್ನು ಮಣಿಸಿದ ಭಾರತ

Women Junior Asia Cup Hockey: ಮಲೇಷ್ಯಾವನ್ನು ಮಣಿಸಿದ ಭಾರತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

enWorld Environment Day- 2023: ಜಾಗೃತಿ ಇಲ್ಲದಿದ್ದರೆ ಕಾನೂನು ವ್ಯರ್ಥ: ಸಿದ್ದರಾಮಯ್ಯ

World Environment Day- 2023: ಜಾಗೃತಿ ಇಲ್ಲದಿದ್ದರೆ ಕಾನೂನು ವ್ಯರ್ಥ: ಸಿದ್ದರಾಮಯ್ಯ

1-asdadsa

ಪ್ರತಿಗ್ರಾಮದಲ್ಲೂ ಕಲ್ಯಾಣಿ ನಿರ್ಮಿಸಲು ಸಾಲುಮರದ ತಿಮ್ಮಕ್ಕ ಮನವಿ

vijayendra

PSI ಹಗರಣ; ನನ್ನ ಹೆಸರು ತೇಲಿ ಬಿಟ್ಟಿದ್ದಾರೆ‌, ತನಿಖೆ ಮಾಡಲಿ:ಬಿ‌.ವೈ.ವಿಜಯೇಂದ್ರ

1-sdasdasd

ಗೋಹತ್ಯೆ ನಿಷೇಧ ಕಾಯ್ದೆ ಚರ್ಚೆಗೆ ಬಂದಿಲ್ಲ: ಸಚಿವ ತಂಗಡಗಿ

ಉಚಿತ ವಿದ್ಯುತ್ ಗೆ ಹಲವು ಷರತ್ತು; ಸೌಲಭ್ಯ ಪಡೆಯಲು ಅರ್ಜಿ ಸಲ್ಲಿಕೆ ಕಡ್ಡಾಯ

Gruha Jyoti ಉಚಿತ ವಿದ್ಯುತ್ ಗೆ ಹಲವು ಷರತ್ತು; ಸೌಲಭ್ಯ ಪಡೆಯಲು ಅರ್ಜಿ ಸಲ್ಲಿಕೆ ಕಡ್ಡಾಯ

MUST WATCH

udayavani youtube

Balasore Train Tragedy; ಎರಡೂ ರೈಲುಗಳನ್ನು ದುರಸ್ತಿ ಮಾಡಲಾಗಿದೆ: ಅಶ್ವಿನಿ ವೈಷ್ಣವ್

udayavani youtube

ಶುಚಿ ರುಚಿಗೆ ಹೆಸರುವಾಸಿ ಅರ್ಚನಾ ಹೋಟೆಲ್ ಇನ್ನಂಜೆ

udayavani youtube

ಗ್ಯಾರಂಟಿ ಖಚಿತ, ಪ್ರಯಾಣ ಉಚಿತ, ಷರತ್ತು ನಿಯಮಿತ… | ಗ್ಯಾರಂಟಿ ಯೋಜನೆಗಳ ನಿಯಮಗಳು ಇಲ್ಲಿದೆ

udayavani youtube

Yellur: ಗೋಶಾಲೆ ನಿರ್ಮಾಣಕ್ಕೆ ಮೀಸಲಿಟ್ಟ ಜಾಗದಲ್ಲಿ ಅದಮಾರು ಶ್ರೀಗಳಿಂದ ಗೋಪೂಜೆ

udayavani youtube

ಕಪ್ಪು ಬಣ್ಣದ ತುಟಿ…ಕೆಂಪು ಬಣ್ಣವಾಗಿ ಕಾಣಲು ಇಲ್ಲಿದೆ ಸರಳ ಮನೆಮದ್ದು

ಹೊಸ ಸೇರ್ಪಡೆ

“ಗ್ಯಾರಂಟಿ’ ಜಾರಿಗೆ ಷರತ್ತು ಹಾಕಬಾರದು: ಬಿ.ವೈ.ವಿಜಯೇಂದ್ರ

“ಗ್ಯಾರಂಟಿ’ ಜಾರಿಗೆ ಷರತ್ತು ಹಾಕಬಾರದು: ಬಿ.ವೈ.ವಿಜಯೇಂದ್ರ

inಕುಸ್ತಿ ಪಟುಗಳಿಗೆ ಈಗಲಾದರೂ ನ್ಯಾಯ ಸಿಗಲಿ

ಕುಸ್ತಿ ಪಟುಗಳಿಗೆ ಈಗಲಾದರೂ ನ್ಯಾಯ ಸಿಗಲಿ

ದೂರದೃಷ್ಟಿಯ ನಾಯಕತ್ವಕ್ಕೆ ಮಾದರಿ ಎಸ್‌.ಆರ್‌. ಬೊಮ್ಮಾಯಿ

ದೂರದೃಷ್ಟಿಯ ನಾಯಕತ್ವಕ್ಕೆ ಮಾದರಿ ಎಸ್‌.ಆರ್‌. ಬೊಮ್ಮಾಯಿ

beBelthangady: ರಸ್ತೆ ವಿಚಾರದಲ್ಲಿ ಕುಟುಂಬದ ನಡುವೆ ಹೊಡೆದಾಟ

Belthangady: ರಸ್ತೆ ವಿಚಾರದಲ್ಲಿ ಕುಟುಂಬದ ನಡುವೆ ಹೊಡೆದಾಟ

ವಕೀಲರ ರಕ್ಷಣೆಗೆ ಕಾನೂನು

ವಕೀಲರ ರಕ್ಷಣೆಗೆ ಕಾನೂನು