‘ಕಡ್ಡಾಯ ಹಾಜರಾತಿ’ ಗೆ ಖಾತ್ರಿ ಕಾರ್ಮಿಕರ ಕೆಂಗಣ್ಣು


Team Udayavani, Apr 13, 2022, 2:29 PM IST

labours

ದಾವಣಗೆರೆ: ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯಡಿ ಕೆಲಸ ಮಾಡುವ ಕೂಲಿ ಕಾರ್ಮಿಕರು ಎನ್‌ಎಂಎಂಎಸ್‌ ಆ್ಯಪ್‌ (ನ್ಯಾಶನಲ್‌ ಮೊಬೈಲ್‌ ಮಾನಿಟರಿಂಗ್‌ ಸಿಸ್ಟಮ್‌) ಮೂಲಕ ದಿನಕ್ಕೆ ಎರಡು ಬಾರಿ ಕಡ್ಡಾಯ ಹಾಜರಾತಿ ಹಾಕಬೇಕೆಂಬ ಕೇಂದ್ರ ಸರ್ಕಾರದ ನಿಯಮ ಕಾರ್ಮಿಕರ ಕಣ್ಣು ಕೆಂಪಾಗಿಸಿದೆ.

ಬೇಸಿಗೆಯ ಸಮಯದಲ್ಲಿ ಬೆಳಗ್ಗೆ 11 ಗಂಟೆಯಿಂದ ಸಂಜೆ 4 ಗಂಟೆವರೆಗೆ ಸರಾಸರಿ 35-40 ಡಿ.ಸೆ.ವರೆಗೂ ಬಿಸಿಲಿನ ಪ್ರಖರತೆ ಇರುತ್ತದೆ. ಸರ್ಕಾರದ ಈ ಕಡ್ಡಾಯ ನಿಯಮಾವಳಿಯಿಂದ ಹಾಜರಾತಿಗಾಗಿ ಬಿರುಬಿಸಿಲಿನಲ್ಲಿ ಮಧ್ಯಾಹ್ನ 2 ಗಂಟೆವರೆಗೂ ಕಾದು ಕುಳಿತು ಕೊಳ್ಳುವ ಸ್ಥಿತಿ ನಿರ್ಮಾಣವಾಗಿದೆ. ಬೇಸಿಗೆ ಬಿಸಿಲಿನ ಕಾರಣದಿಂದ ಕೇಂದ್ರ ಸರ್ಕಾರ ರಾಜ್ಯದ ಬೆಳಗಾವಿ ಹಾಗೂ ಕಲಬುರಗಿ ವಿಭಾಗದ 14 ಜಿಲ್ಲೆಗಳಲ್ಲಿ ಕೆಲಸದ ಪ್ರಮಾಣ ದಲ್ಲಿ ರಿಯಾಯಿತಿ ನೀಡಿದೆ. ಆದರೆ ಎರಡು ಬಾರಿಯ ಹಾಜರಾತಿ ಕಡ್ಡಾಯದಿಂದ ಕಾರ್ಮಿಕರು ಇಡೀ ದಿನ ಬಿಸಿಲಲ್ಲಿ ಬೇಯುವಂತಾಗಿದೆ.

ಆ್ಯಪ್‌ ಮೂಲಕ ಹಾಜರಾತಿ ಹಾಕುವ ನಿಯಮವನ್ನು ಕೇಂದ್ರ ಸರ್ಕಾರ ರಾಜ್ಯದಲ್ಲಿ ಜನವರಿಯಿಂದಲೇ ಆರಂಭಿಸಿದೆ. ಆದರೆ, ಕಳೆದ 3 ತಿಂಗಳಲ್ಲಿ ಇದು ಎಲ್ಲೆಡೆ ಸಮರ್ಪಕವಾಗಿ ಅನುಷ್ಠಾನಕ್ಕೆ ಬಂದಿಲ್ಲ. ಕೆಲವರು ಬೆಳಗ್ಗೆ ಮಾತ್ರ ಹಾಜರಾತಿ ಹಾಕಿದರೆ, ಮತ್ತೆ ಕೆಲವರು ಸಂಜೆ ಮಾತ್ರ ಹಾಜರಾತಿ ಹಾಕಿದ್ದಾರೆ. ಇದನ್ನು ಗಂಭೀರವಾಗಿ ಪರಿಗಣಿಸಿದ ಕೇಂದ್ರ ಗ್ರಾಮೀಣಾಭಿವೃದ್ಧಿ ಮಂತ್ರಾ ಲಯ ದಿನಕ್ಕೆ ಎರಡು ಬಾರಿ ಹಾಜರಾತಿಯನ್ನು ಹೊಸ ಆರ್ಥಿಕ ವರ್ಷ ಏಪ್ರಿಲ್‌ನಿಂದ ಕಡ್ಡಾಯ ಗೊಳಿಸಿದ್ದು ಇದು ಕಾರ್ಮಿಕರ ನಿದ್ದೆಗೆಡಿಸಿದೆ.

ಎರಡು ಬಾರಿ ಹಾಜರಾತಿ ಕಡ್ಡಾಯ

ಸರ್ಕಾರದ ಈ ನಿಯಮದಿಂದಾಗಿ ಕೂಲಿ ಕಾರ್ಮಿಕರು ಬೆಳಗ್ಗೆ 11 ಗಂಟೆಯೊಳಗೆ ಹಾಗೂ ಮಧ್ಯಾಹ್ನ 2ರಿಂದ 5 ಗಂಟೆಯೊಳಗೆ ಎರಡು ಬಾರಿ ಕೂಲಿಕಾರರ ಹಾಜರಾತಿ ಹಾಗೂ ಛಾಯಾಚಿತ್ರವನ್ನು ಎನ್‌ಎಂಎಂಎಸ್‌ ಆ್ಯಪ್‌ ಮೂಲಕ ಕಡ್ಡಾಯವಾಗಿ ಅಪ್‌ಲೋಡ್‌ ಮಾಡಬೇಕಾಗಿದೆ.

ಸಾಮಾನ್ಯವಾಗಿ ಕೂಲಿ ಕಾರ್ಮಿಕರು ಬೇಸಿಗೆ ದಿನಗಳಲ್ಲಿ ಬೆಳಗ್ಗೆ ಆರು ಗಂಟೆಯಿಂದಲೇ ಕೆಲಸಕ್ಕೆ ಬಂದು 11ರಿಂದ 12 ಗಂಟೆವರೆಗೆ ಕೆಲಸ ಮಾಡಿ ಹೋಗುತ್ತಿದ್ದರು. ಈ ಆ್ಯಪ್‌ ಹಾಜರಾತಿ ವ್ಯವಸ್ಥೆ ಜಾರಿಗೆ ತಂದಿದ್ದರಿಂದ ಇದರ ಪಾಲನೆ ನರೇಗಾ ಕೂಲಿ ಕಾರ್ಮಿಕರಿಗೆ ಕಷ್ಟವಾಗಿದೆ. ದಿನವೊಂದಕ್ಕೆ ನಿಗದಿಗೊಳಿಸಿದ ಕೆಲಸವನ್ನು ಬೆಳಗ್ಗೆ 6-7 ಗಂಟೆಗೆ ಬಂದು 12 ಗಂಟೆಯೊಳಗೆ ಮುಗಿಸಿದರೂ ಎರಡನೇ ಹಾಜರಾತಿಗಾಗಿ ಮಧ್ಯಾಹ್ನ 2 ಗಂಟೆವರೆಗೂ ಕಾಯಬೇಕಾದ ಈ ವ್ಯವಸ್ಥೆ ಕಾರ್ಮಿಕರ ಬೇಸಿಗೆ ಬೇಗೆಯನ್ನು ಇನ್ನಷ್ಟು ಹೆಚ್ಚಿಸಿದಂತಾಗಿದೆ.

ಬೇಸಿಗೆ ಸಮಯ ಎಷ್ಟು ಸರಿ?

ಕಚೇರಿಯಲ್ಲಿ ಕೆಲಸ ಮಾಡುವವರಿಗೆ ಬೇಸಿಗೆ ದಿನಗಳಲ್ಲಿ ಕಚೇರಿ ಅವಧಿ ಬದಲಾಯಿಸಿ ಅನುಕೂಲ ಮಾಡಿಕೊಡುವ ಸರ್ಕಾರ, ಬಯಲಲ್ಲಿ ನಿಂತು ಕೆಲಸ ಮಾಡುವವರಿಗೆ ಈ ರೀತಿಯ ನಿಯಮಾವಳಿ ಹೇರುವುದು ಸರಿಯೇ ಎಂಬ ಪ್ರಶ್ನೆ ಉದ್ಭವಿಸಿದೆ. ಈ ನಿಯಮಗಳನ್ನು 20ಕ್ಕಿಂತ ಹೆಚ್ಚು ಕಾರ್ಮಿಕರು ಕೆಲಸ ನಿರ್ವಹಿಸುವ ಕಾಮಗಾರಿಗಳಿಗೆ ಮಾತ್ರ ಕಡ್ಡಾಯಗೊಳಿಸಿದ್ದು ಇದರಿಂದ ದೊಡ್ಡ ಕಾಮಗಾರಿಗಳಲ್ಲಿ ಭಾಗವಹಿಸಲು ಕಾರ್ಮಿಕರು ಹಿಂದೇಟು ಹಾಕುವ ಪರಿಸ್ಥಿತಿಯೂ ನಿರ್ಮಾಣವಾಗಬಹುದು ಎಂಬುದು ಕಾರ್ಮಿಕ ಸಂಘಟನೆಗಳ ಆತಂಕ.

ಒಟ್ಟಾರೆ ಹೊಣೆಗಾರಿಕೆ ಮತ್ತು ಪಾರದರ್ಶಕತೆ ಕಾಯ್ದುಕೊಳ್ಳುವ ಉದ್ದೇಶದಿಂದ ಸರ್ಕಾರ ಆ್ಯಪ್‌ ಮೂಲಕ ದಿನಕ್ಕೆ ಎರಡು ಬಾರಿ ಹಾಜರಾತಿ ಕಡ್ಡಾಯಗೊಳಿಸಿದೆ. ಆದರೆ ಈ ನಿಯಮಾವಳಿಯಿಂದ ಬೇಸಿಗೆಯ 3 ತಿಂಗಳಾದರೂ ವಿನಾಯಿತಿ ನೀಡಬೇಕು ಎಂಬುದು ಕಾರ್ಮಿಕರ ಅಪೇಕ್ಷೆ.

ಬೆಳಗ್ಗೆ 6ರಿಂದ ಮಧ್ಯಾಹ್ನ 12 ಗಂಟೆಯೊಳಗೆ ಎರಡೂ ಹಾಜರಾತಿ ಪಡೆಯುವಂತಾಗಬೇಕು. ಎರಡನೇ ಹಾಜರಾತಿಗಾಗಿ ಮಧ್ಯಾಹ್ನದವರೆಗೆ ಬಿರುಬಿಸಿಲಲ್ಲಿ ಕಾಯಲು ಆಗದು. ಸರ್ಕಾರ ಹಾಜರಾತಿ ಸಮಯ ಬದಲಾವಣೆ ಮಾಡದಿದ್ದರೆ ನರೇಗಾ ಕೂಲಿಗೆ ಬರುವ ಕಾರ್ಮಿಕರ ಸಂಖ್ಯೆಯೂ ಕ್ಷೀಣಿಸುವ ಸಾಧ್ಯತೆ ಇದೆ. -ಕೋಗಳಿ ಮಲ್ಲೇಶ್‌, ಖಜಾಂಚಿ, ರಾಜ್ಯ ಗ್ರಾಮೀಣ ಕೂಲಿ ಕಾರ್ಮಿಕರ ಸಂಘಟನೆ

ಎನ್‌ಎಂಎಂಎಸ್‌ ಆ್ಯಪ್‌ ಮೂಲಕ ದಿನಕ್ಕೆ ಎರಡು ಬಾರಿ ಕಾರ್ಮಿಕರ ಹಾಜರಾತಿಯನ್ನು ಏಪ್ರಿಲ್‌ನಿಂದ ಕಡ್ಡಾಯಗೊಳಿಸಲಾಗಿದೆ. ಬೆಳಗ್ಗೆ 11 ಗಂಟೆಯೊಳಗೆ ಮೊದಲ ಹಾಗೂ ಮಧ್ಯಾಹ್ನ 2ರಿಂದ ಸಂಜೆ 5 ಗಂಟೆಯೊಳಗೆ ಎರಡನೇ ಹಾಜರಾತಿ ಹಾಕಬೇಕಾಗಿದೆ. -ಡಾ| ಎ.ಚನ್ನಪ್ಪ, ದಾವಣಗೆರೆ ಜಿಪಂ ಸಿಇಒ

-ಎಚ್. ಕೆ. ನಟರಾಜ್

ಟಾಪ್ ನ್ಯೂಸ್

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್ ವಾಹನ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

ಕುಂಬಳೆ: ಚಿನ್ನದ ಸರ ಸೆಳೆದು ಪರಾರಿ; ದೂರು ದಾಖಲು

ಕುಂಬಳೆ: ಚಿನ್ನದ ಸರ ಸೆಳೆದು ಪರಾರಿ; ದೂರು ದಾಖಲು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Uppunda ಡಿವೈಡರ್‌ಗೆ ಬೊಲೇರೊ ವಾಹನ ಢಿಕ್ಕಿ: ಓರ್ವ ಸಾವು; ಐವರಿಗೆ ಗಾಯ

Uppunda ಡಿವೈಡರ್‌ಗೆ ಬೊಲೇರೊ ವಾಹನ ಢಿಕ್ಕಿ: ಓರ್ವ ಸಾವು; ಐವರಿಗೆ ಗಾಯ

1-qeweqweqwe

IPL; ಹೈದರಾಬಾದ್ ಎದುರು ಚೆನ್ನೈ ಗೆ 78 ರನ್‌ಗಳ ಅಮೋಘ ಜಯ

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

randeep surjewala

Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್ ವಾಹನ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

ಕುಂಬಳೆ: ಚಿನ್ನದ ಸರ ಸೆಳೆದು ಪರಾರಿ; ದೂರು ದಾಖಲು

ಕುಂಬಳೆ: ಚಿನ್ನದ ಸರ ಸೆಳೆದು ಪರಾರಿ; ದೂರು ದಾಖಲು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Brahmavar

Padubidri: ಅಪಘಾತದ ಗಾಯಾಳು ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.