ದೌರ್ಜನ್ಯ ತಡೆಗೆ ಸಹಕಾರ ಅಗತ್ಯ


Team Udayavani, Jul 13, 2018, 4:01 PM IST

dvg-2.gif

ದಾವಣಗೆರೆ: ಮಹಿಳೆಯರು ಮತ್ತು ಮಕ್ಕಳ ಮೇಲೆ ನಡೆಯುತ್ತಿರುವ ದೌರ್ಜನ್ಯ ತಡೆಗೆ ಸಾರ್ವಜನಿಕರು ಇಲಾಖೆಯೊಂದಿಗೆ ಸಹಕರಿಸಬೇಕು ಎಂದು ಪೂರ್ವ ವಲಯ ಪೊಲೀಸ್‌ ಮಹಾ ನಿರೀಕ್ಷಕ ಕೆ.ವಿ. ಶರತ್‌ ಚಂದ್ರ ಮನವಿ ಮಾಡಿದ್ದಾರೆ.

ಗುರುವಾರ, ಸಂಜೆ ವನಿತಾ ಸಮಾಜದಲ್ಲಿ ಮಕ್ಕಳ ಆಟದ ಮನೆ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಅವರು, ಪ್ರಸ್ತುತ ದಿನಮಾನಗಳಲ್ಲಿ ಮಹಿಳೆಯರು ಮತ್ತು ಮಕ್ಕಳ ಮೇಲೆ ಕಿರುಕುಳ, ದೌರ್ಜನ್ಯ, ಶೋಷಣೆ, ಅತ್ಯಾಚಾರ ನಡೆಯುತ್ತಿವೆ. ಪೊಲೀಸ್‌ ಇಲಾಖೆ ಅಂತಹ ಪ್ರಕರಣಗಳ ನಿಯಂತ್ರಣಕ್ಕೆ ಶ್ರಮಿಸುತ್ತಿದೆ. ಇನ್ನೂ ಹೆಚ್ಚು ಪರಿಣಾಮಕಾರಿಯಾಗಿ ಪ್ರಕರಣ ತಡೆಗಟ್ಟುವ ನಿಟ್ಟಿನಲ್ಲಿ ಸಾರ್ವಜನಿಕರು ಸಹಕಾರ ಅಗತ್ಯ ಎಂದರು.

ಸಾರ್ವಜನಿಕ ಸ್ಥಳ, ಬಸ್‌ ಇತರೆಡೆ ಮಹಿಳೆಯರು ಮತ್ತು ಮಕ್ಳಳ ಮೇಲೆ ನಡೆಯುವ ದೌರ್ಜನ್ಯ ಘಟನೆಗಳ ಬಗ್ಗೆ ಸಕಾಲದಲ್ಲಿ ಮಾಹಿತಿ ನೀಡುವಂತಾಗಬೇಕು. ವನಿತಾ ಸಮಾಜದ ಪದಾಧಿಕಾರಿಗಳು ಮಹಿಳೆಯರು ಮತ್ತು ಮಕ್ಕಳ ಮೇಲೆ ಕಿರುಕುಳ, ದೌರ್ಜನ್ಯ, ಶೋಷಣೆ, ಅತ್ಯಾಚಾರದ ಬಗ್ಗೆ ಜಾಗೃತಿ ಮೂಡಿಸಬೇಕು ಎಂದು ತಿಳಿಸಿದರು.

ಮಕ್ಕಳ ಆಟದ ಮನೆಯಲ್ಲಿ ಸಾಕಷ್ಟು ಸಂಖ್ಯೆಯಲ್ಲಿ ಆಟಿಕೆ ಇವೆ. ಆಟಿಕೆಗಳು ಮಕ್ಕಳ ದೈಹಿಕ ಮತ್ತು ಮಾನಸಿಕ ವಿಕಾಸಕ್ಕೆ ಅನುಕೂಲ ಮಾಡಿಕೊಡುವಂತಿವೆ. ಬಡವರ್ಗದವರಿಗೆ ಮಕ್ಕಳ ಆಟದ ಮನೆ ಬಹು ಉಪಯುಕ್ತವಾಗಿದೆ. ಸಮಾಜದಲ್ಲಿ ಅಸಹಾಯಕರು ಸಹ ಉನ್ನತ ಸ್ಥಾನಕ್ಕೆ ಬರುವಂತಾಗಲು ಉಳ್ಳವರು ಅಗತ್ಯ ನೆರವು ನೀಡಬೇಕು ಎಂದರು.

ಅಧ್ಯಕ್ಷತೆ ವಹಿಸಿದ್ದ ಮಾಜಿ ಸಚಿವೆ ಡಾ| ನಾಗಮ್ಮ ಕೇಶವಮೂರ್ತಿ ಮಾತನಾಡಿ, ಅಮೇರಿಕಾದಲ್ಲಿರುವ ಟಾಯ್‌ ಲೈಬ್ರರಿ (ಆಟಿಕೆಗಳ ಗ್ರಂಥಾಲಯ) ವನಿತಾ ಸಮಾಜದಲ್ಲಿ ಮಕ್ಕಳ ಆಟದ ಮನೆ ಪ್ರಾರಂಭಿಸಲು ಮೂಲ ಪ್ರೇರಣೆ. ತಮ್ಮ ಪ್ರಕಾರ ರಾಜ್ಯದಲ್ಲಿ ಈ ರೀತಿಯ ಮಕ್ಕಳ ಆಟದ ಮನೆ ಇಲ್ಲವೆಂದು ಅನಿಸುತ್ತದೆ. ಸರ್ಕಾರಿ ಶಾಲೆಯಲ್ಲಿ ಓದುವ ಮಕ್ಕಳು, ಇತರರಿಗೆ ಮಕ್ಕಳ ಆಟದ ಮನೆ ಅವಕಾಶ ಮಾಡಿಕೊಡಲಾಗುವದು ಎಂದು ತಿಳಿಸಿದರು.

ಮಾಜಿ ಸಚಿವ ಎಸ್‌.ಎಸ್‌. ಮಲ್ಲಿಕಾರ್ಜುನ್‌ ಪುತ್ರ ಎಸ್‌.ಎಂ. ಶಿವು ಮಕ್ಕಳ ಆಟದ ಮನೆ ಉದ್ಘಾಟಿಸಿದರು. ಜಿಲ್ಲಾ ಶಿಶು ಕಲ್ಯಾಣ ಮಂಡಳಿ ಅಧ್ಯಕ್ಷೆ ಮಂಜುಳಾ ಬಸವಲಿಂಗಪ್ಪ, ಕಾರ್ಯದರ್ಶಿ ಮಮತಾ ವೆಂಕಟೇಶ್‌, ಮಕ್ಕಳ ಆಟದ ಮನೆ ಅಧ್ಯಕ್ಷೆ ಶಾರದಾ ಎಂ. ಮಾಗಾನಹಳ್ಳಿ, ಕಾರ್ಯದರ್ಶಿ ರಾಜೇಶ್ವರಿ ಆಲೂರು ಇತರರು ಇದ್ದರು. ಉಷಾ ರಂಗನಾಥ್‌ ನಿರೂಪಿಸಿದರು.

ಟಾಪ್ ನ್ಯೂಸ್

ಐಸಿಯುನಲ್ಲಿದ್ದ ತಂದೆಯ ಮುಂದೆಯೇ ನೆರವೇರಿತು ಮಗಳ ಮದುವೆ: ಭಾವುಕ ಕ್ಷಣದ ವಿಡಿಯೋ ವೈರಲ್

ಐಸಿಯುನಲ್ಲಿದ್ದ ತಂದೆಯ ಮುಂದೆಯೇ ನೆರವೇರಿತು ಮಗಳ ಮದುವೆ: ಭಾವುಕ ಕ್ಷಣದ ವಿಡಿಯೋ ವೈರಲ್

11

Siruguppa: ಸಾರ್ವಜನಿಕ ಗ್ರಂಥಾಲಯದಲ್ಲಿ ಶೌಚಕ್ಕಾಗಿ ಸಾಲುಗಟ್ಟಿ ನಿಂತಿರುವ ವಿದ್ಯಾರ್ಥಿನಿಯರು

Veerashaiva-Lingayat separate religion recognition protest back to fore: Eshwar Khandre

ವೀರಶೈವ- ಲಿಂಗಾಯತ ಪ್ರತ್ಯೇಕ ಧರ್ಮದ ಮಾನ್ಯತೆ ಹೋರಾಟ ಮತ್ತೆ ಮುನ್ನೆಲೆಗೆ: ಖಂಡ್ರೆ

13

Tollywood: ಚಿರಂಜೀವಿ ನಾಲ್ಕು ಹೊಸ ಸಿನಿಮಾಗಳನ್ನು ಒಪ್ಪಿಕೊಂಡಿದ್ದಾರೆ – ರಾಮ್‌ ಚರಣ್

Rahul Gandhi (3)

EVM ವಿಚಾರ; ಮಸ್ಕ್ ಹೇಳಿಕೆಗೆ ರಾಹುಲ್ ಗಾಂಧಿ ಪ್ರತಿಕ್ರಿಯೆ : ಬಿಜೆಪಿ ಆಕ್ರೋಶ

9

ನಿಮಿರು ದೌರ್ಬಲ್ಯ ಚಿಕಿತ್ಸೆಯಲ್ಲಿ ಜೀವನ ವಿಧಾನ ಮತ್ತು ಆಹಾರ ಶೈಲಿ ಬದಲಾವಣೆಗಳು

12

ಕಾಯಲು ಇರುವವಳು: ಮೂಕ ಭಾಷೆ… ಮೌನ ಸಂದೇಶ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10-

Kandagal: ಗಬ್ಬೆದು ನಾರುತ್ತಿರುವ ಮಲೀನ ನೀರು; ನರಕಯಾತನೆ ಅನುಭವಿಸುತ್ತಿರುವ ನಿವಾಸಿಗಳು

KARADI (2)

Jagalur ; ರೈತನ ಮೇಲೆ ಏಕಕಾಲಕ್ಕೆ ದಾಳಿ ಮಾಡಿದ ಮೂರು ಕರಡಿಗಳು

Shamanuru Shivashankarappa

Road ಅಲ್ಲಿ ಹೋಗುವವರು ಕಂಪ್ಲೆಂಟ್ ಕೊಟ್ಟರೆ ಅರೆಸ್ಟಾ?: ಬಿಎಸ್ ವೈ ಪರ ಶಾಮನೂರು

mp renukacharya

ಬಿಎಸ್ ವೈ ವಿರುದ್ದದ ಷಡ್ಯಂತ್ರದ ಹಿಂದೆ ಪ್ರಭಾವಿ ಸಚಿವರಿದ್ದಾರೆ: ರೇಣುಕಾಚಾರ್ಯ

17

Priyanka Jarakiholi: ಸಮಸ್ಯೆ ಇರುವ ಮಾತ್ರಕ್ಕೆ ಪ್ರತ್ಯೇಕ ರಾಜ್ಯ ಪ್ರಸ್ತಾವ ಸಲ್ಲ

MUST WATCH

udayavani youtube

ಕಾಪು ಸರ್ವೀಸ್ ರಸ್ತೆಯಲ್ಲಿ ರಿಕ್ಷಾ ಚಾಲಕ ಮತ್ತು ಬೈಕ್ ಸವಾರನ ನಡುವೆ ಹೊಡೆದಾಟ

udayavani youtube

ದರ್ಶನ್ ಗ್ಯಾಂಗ್ ಕ್ರೌರ್ಯ ಹೇಗಿತ್ತು ಗೊತ್ತಾ..? ವೈರಲ್ ಆಡಿಯೋ ಇಲ್ಲಿದೆ

udayavani youtube

Udupi: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ

udayavani youtube

ಕಾಂಗ್ರೆಸ್ ಹಿರಿಯ ಶಾಸಕ ಸಿ.ಎಸ್.ನಾಡಗೌಡರಿಂದ ರಾಜಕೀಯ ತ್ಯಾಗದ ಮಾತು

udayavani youtube

ಇಳಿಕೆಯಾದ ಘಟಪ್ರಭಾ ನದಿ

ಹೊಸ ಸೇರ್ಪಡೆ

ಐಸಿಯುನಲ್ಲಿದ್ದ ತಂದೆಯ ಮುಂದೆಯೇ ನೆರವೇರಿತು ಮಗಳ ಮದುವೆ: ಭಾವುಕ ಕ್ಷಣದ ವಿಡಿಯೋ ವೈರಲ್

ಐಸಿಯುನಲ್ಲಿದ್ದ ತಂದೆಯ ಮುಂದೆಯೇ ನೆರವೇರಿತು ಮಗಳ ಮದುವೆ: ಭಾವುಕ ಕ್ಷಣದ ವಿಡಿಯೋ ವೈರಲ್

Raakha Directed by Malavalli Saikrishna

ಸಂಬಂಧದ ಸುತ್ತ ರಾಖಾ; ಮಳವಳ್ಳಿ ಸಾಯಿಕೃಷ್ಣ ನಿರ್ದೇಶನ

11

Siruguppa: ಸಾರ್ವಜನಿಕ ಗ್ರಂಥಾಲಯದಲ್ಲಿ ಶೌಚಕ್ಕಾಗಿ ಸಾಲುಗಟ್ಟಿ ನಿಂತಿರುವ ವಿದ್ಯಾರ್ಥಿನಿಯರು

Veerashaiva-Lingayat separate religion recognition protest back to fore: Eshwar Khandre

ವೀರಶೈವ- ಲಿಂಗಾಯತ ಪ್ರತ್ಯೇಕ ಧರ್ಮದ ಮಾನ್ಯತೆ ಹೋರಾಟ ಮತ್ತೆ ಮುನ್ನೆಲೆಗೆ: ಖಂಡ್ರೆ

10-

Kandagal: ಗಬ್ಬೆದು ನಾರುತ್ತಿರುವ ಮಲೀನ ನೀರು; ನರಕಯಾತನೆ ಅನುಭವಿಸುತ್ತಿರುವ ನಿವಾಸಿಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.