ಜಗಳೂರಿನಲ್ಲಿ ಕೊರೊನಾ ಪ್ರಕರಣ ಪತ್ತೆ; ಆರೋಗ್ಯ ಇಲಾಖೆ ಸ್ಪಷ್ಟನೆ
Team Udayavani, Dec 29, 2022, 9:31 PM IST
ದಾವಣಗೆರೆ: ಕೊರೊನಾ ವೈರಸ್ನ ಒಮಿಕ್ರಾನ್ನ ರೂಪಾಂತರಿ ತಳಿ ಬಿಎಫ್.7 ಹರಡುವ ಭೀತಿಯ ಮಧ್ಯದಲ್ಲೇ ಜಗಳೂರಿನಲ್ಲಿ ಕೊರೊನಾ ಪ್ರಕರಣ ಪತ್ತೆಯಾಗಿದೆ. ಒಮಿಕ್ರಾನ್ನ ರೂಪಾಂತರಿ ತಳಿ ಬಿಎಫ್.7 ಅಲ್ಲ ಎಂದು ಆರೋಗ್ಯ ಇಲಾಖೆ ದೃಢಪಡಿಸಿದೆ.
ಜಗಳೂರು ಪಟ್ಟಣದ 74ವರ್ಷದ ವಯೋವೃದ್ಧರಿಗೆ ಶೀತ, ಜ್ವರ, ಉಸಿರಾಟದ ತೊಂದರೆ ಕಾಣಿಸಿಕೊಂಡಿತ್ತು. ಗಂಟಲು ದ್ರವ ಮಾದರಿ ಪರೀಕ್ಷೆಗೊಳಪಡಿಸಿದಾಗ ಕೊರೊನಾ ದೃಢಪಟ್ಟಿದೆ. ಜಗಳೂರು ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ವೃದ್ಧನ ಪತ್ನಿ ಡಿ. 12 ರಿಂದ 16 ರ ವರೆಗೆ ತುಮಕೂರು ಜಿಲ್ಲೆಗೆ ಹೋಗಿ ಬಂದ ನಂತರದಲ್ಲಿ ವೃದ್ಧನಿಗೆ ಶೀತ, ಜ್ವರ, ಉಸಿರಾಟದ ಕಾಣಿಸಿಕೊಂಡಿದೆ. ಪತ್ನಿಯ ಟ್ರಾವೆಲ್ ಹಿಸ್ಟರಿ ಬಗ್ಗೆ ಹೆಚ್ಚಿನ ವಿವರ ಸಂಗ್ರಹಿಸಲಾಗುತ್ತಿದೆ ಸೋಂಕಿತನ ಪ್ರಾಥಮಿಕ ಸಂಪರ್ಕದಲ್ಲಿದ್ದ7 ಹಾಗೂ ದ್ವಿತೀಯ ಸಂಪರ್ಕದಲ್ಲಿದ್ದ ಮೂವರ ಗಂಟಲು ದ್ರವ ಮಾದರಿ ಸಂಗ್ರಹಿಸಿ, ಪರೀಕ್ಷೆಗೆ ಕಳಿಸಲಾಗಿದೆ.
ಮಾರ್ಗಸೂಚಿ ಪ್ರಕಾರ ಸೋಂಕಿತರ ವರದಿಯಲ್ಲಿ ಸಿಟಿ ದರ 25 ಕ್ಕಿಂತಲೂ ಹೆಚ್ಚು(27) ಇರುವುದರಿಂದ ಜಿನಾಮಿಕ್ ಪರೀಕ್ಷೆಗೆ ಕಳಿಸುವ ಅಗತ್ಯ ಇಲ್ಲದೆ ಇರುವುದರಿಂದ ಬಿಎಫ್..7 ಅಲ್ಲದೆ ಸ್ಥಳೀಯವಾಗಿ ಸಾಮಾನ್ಯ ಕೋವಿಡ್ಗೆ ನೀಡುವ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಜಿಲ್ಲಾ ಆರೋಗ್ಯ ಇಲಾಖೆ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ
Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ
ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ
Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ
Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು
MUST WATCH
ಹೊಸ ಸೇರ್ಪಡೆ
Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ
Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ
Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ