ನಿರಂತರವಾಗಿದೆ ಮಹಿಳೆ ಶೋಷಣೆ


Team Udayavani, Jan 19, 2019, 6:07 AM IST

dvg-3.jpg

ದಾವಣಗೆರೆ: ಇತಿಹಾಸದುದ್ದಕ್ಕೂ ಆರ್ಥಿಕ ಮತ್ತು ರಾಜಕೀಯವಾಗಿ ಮಹಿಳೆಯರನ್ನು ದುರ್ಬಲಗೊಳಿಸುತ್ತಾ ಬರಲಾಗಿದೆ ಎಂದು ರಾಜ್ಯ ಉಚ್ಚ ನ್ಯಾಯಾಲಯದ ವಿಶ್ರಾಂತ ನ್ಯಾಯಾಧೀಶರಾದ ಎಚ್.ಎನ್‌. ನಾಗಮೋಹನ್‌ದಾಸ್‌ ವಿಷಾದ ವ್ಯಕ್ತಪಡಿಸಿದರು.

ನಗರದ ಜಿಲ್ಲಾ ವಕೀಲರ ಸಭಾಂಗಣದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಮಹಿಳಾ ಆಸ್ತಿ ಹಕ್ಕು ಕುರಿತ ಉಪನ್ಯಾಸ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಅರ್ಧದಷ್ಟು ಮಹಿಳೆಯರೇ ಇದ್ದರೂ ಅವರನ್ನು ಎರಡನೇ ದರ್ಜೆಯವರಾಗಿ ಕಾಣಲಾಗುತ್ತಿದೆ. ಜಗತ್ತಿನಾದ್ಯಂತ ಮಹಿಳೆಯರನ್ನು ಒಂದಲ್ಲ ಒಂದು ರೀತಿ ಗುಲಾಮರಂತೆ ಕಾಣುತ್ತಾ ಬರಲಾಗಿದೆ. ರಾಜಕೀಯ ಮತ್ತು ಆರ್ಥಿಕ ಅಸಮಾನತೆಗೆ ಧಾರ್ಮಿಕತೆಯ ಲೇಪನ ಮಾಡಲಾಗಿದೆ ಎಂದರು.

ಕಿತ್ತೂರು ರಾಣಿ ಚೆನ್ನಮ್ಮ, ಝಾನ್ಸಿರಾಣಿ ಲಕ್ಷ್ಮೀಬಾಯಿ ಮೊದಲಾದವರು ಯುದ್ಧದಲ್ಲಿ ತ್ಯಾಗ, ಬಲಿದಾನ ಮಾಡಿದರೂ ಕೂಡ ಅವರನ್ನು ಎಲ್ಲಿಯೂ ಕೂಡ ಆಡಳಿತಗಾರರನ್ನಾಗಿ ಕಂಡಿಲ್ಲ. ಬದಲಾಗಿ ಚರಿತ್ರೆಯಲ್ಲಿ ಮಾತ್ರ ಸ್ಥಾನ ಉಳಿಸಲಾಗಿದೆ. ಈ ಹಿನ್ನೆಲೆಯಲ್ಲಿ ಇತಿಹಾಸದುದ್ದಕ್ಕೂ ಒಂದಲ್ಲ ಒಂದು ರೀತಿ ಮಹಿಳೆಯರ ಶೋಷಣೆ ಮಾಡುತ್ತಲೇ ಬರಲಾಗಿದೆ ಎಂದು ಹೇಳಿದರು.

ಗ್ರಾಮ ಪಂಚಾಯಿತಿ, ತಾಲೂಕು ಪಂಚಾಯಿತಿ, ಜಿಲ್ಲಾ ಪಂಚಾಯಿತಿ, ಪಟ್ಟಣ ಪಂಚಾಯಿತಿ, ಪುರಸಭೆ, ಮಹಾನಗರಪಾಲಿಕೆಯಲ್ಲಿ ಇಂದು ಮಹಿಳೆಗೆ ಅವಕಾಶ ನೀಡಲಾಗಿದೆಯೇ ವಿನಃ, ಕಳೆದ 22 ವರ್ಷಗಳಿಂದ ಹೋರಾಟ ಮಾಡುತ್ತಾ ಬಂದಿದ್ದರೂ ವಿಧಾನಸಭೆ, ಪಾರ್ಲಿಮೆಂಟ್‌ನಲ್ಲಿ ಅವಕಾಶ ನೀಡಿಲ್ಲ. ಇದು ನಿಜಕ್ಕೂ ಭಾರತದ ರಾಜಕೀಯ ವ್ಯವಸ್ಥೆಯ ದುರಂತ ಎಂದು ಕಳವಳ ವ್ಯಕ್ತಪಡಿಸಿದರು.

ಜಗತ್ತಿನ ಉತ್ಪಾದನೆಯ ಶ್ರಮಶಕ್ತಿಯಲ್ಲಿ ಮೂರನೆಯ ಎರಡಂಶ ಮಹಿಳೆಯರದ್ದಾಗಿದೆ. ಒಂದು ಭಾಗ ಮಾತ್ರ ಪುರುಷರ ಶ್ರಮವಾಗಿದೆ. ಆದರೆ, ಮಹಿಳೆಯರ ಶ್ರಮದ ಪ್ರತಿಫಲದ ಸಂಪತ್ತಿನ ಶೇ.100ರಲ್ಲಿ 98ರಷ್ಟು ಭಾಗ ಪುರುಷರ ಕೈಲಿದೆ. ಹಣ, ಆಸ್ತಿ, ಸೈಟ್, ಜಮೀನು, ಸಂಪತ್ತು ಎಲ್ಲಾ ಪುರುಷರ ಕೈಲಿದೆ. ಕಡಿಮೆ ಆಹಾರ ಸೇವಿಸುವ ಮಹಿಳೆಯರು ಹೆಚ್ಚು ಶ್ರಮಪಡುತ್ತಿದ್ದಾರೆ. ಆದರೆ, ಹೆಚ್ಚು ಆಹಾರ ಸೇವಿಸುವ ಪುರುಷರೇ ಕಡಿಮೆ ಶ್ರಮ ಪಡುತ್ತಿದ್ದಾರೆ ಎಂದರು.

12ನೇ ಶತಮಾನದಲ್ಲಿ ಬಸವಾದಿ ಶರಣರು ಜಾತಿ-ಭೇದ, ವರ್ಗ ಭೇದವಿಲ್ಲದ ಸಮಾಜ ನಿರ್ಮಾಣ ಮಾಡಲು ಹೋರಾಡಿದ್ದಾರೆ. ಬುದ್ಧ, ಬಸವಣ್ಣ, ಅಂಬೇಡ್ಕರ್‌, ಮಹಾತ್ಮ ಗಾಂಧೀಜಿ ಮೊದಲಾದವರು ಮಹಿಳಾ ಅಸಮಾನತೆ ನಿವಾರಣೆಗೆ ಸಾಕಷ್ಟು ಹೋರಾಡಿದ್ದಾರೆ. ಆದರೂ ಮಹಿಳೆಗೆ ಸಂಪೂರ್ಣ ಸ್ವಾತಂತ್ರ್ಯ ದೊರೆತಿಲ್ಲ. ಒಂದಲ್ಲ ಒಂದು ರೀತಿ ಅಸಮಾನತೆಗೆ ತುತ್ತಾಗುತ್ತಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದರು.

ಸರ್ಕಾರ ಮಹಿಳೆಯರ ಸಬಲೀಕರಣಕ್ಕಾಗಿ ಸಾಕಷ್ಟು ಕಾರ್ಯಕ್ರಮಗಳನ್ನು ರೂಪಿಸುತ್ತಿದೆ. ಇಂದು ಐಎಎಸ್‌, ಕೆಎಎಸ್‌, ಜಡ್ಜ್, ಸಾಹಿತ್ಯ, ಕ್ರೀಡೆ, ವಿಜ್ಞಾನ, ಕಲೆ ಹೀಗೆ ಎಲ್ಲಾ ಕ್ಷೇತ್ರದಲ್ಲಿ ಮಹಿಳೆಯರಿದ್ದಾರೆ. ಇಷ್ಟಾದರೂ ಸಮಾಜದಲ್ಲಿ ಬಾಲ್ಯವಿವಾಹ, ಅತ್ಯಾಚಾರ, ವರದಕ್ಷಿಣೆ ಕಿರುಕುಳ, ಅನಿಷ್ಟ ಪದ್ಧತಿಗಳ ನಿವಾರಣೆ ಆಗಿಲ್ಲ. ಬದಲಾಗಿ ಭ್ರೂಣ ಹತ್ಯೆ, ವಿವಾಹ ವಿಚ್ಛೇದನ, ಬಾಡಿಗೆ ತಾಯಿ ಹೀಗೆ ಹೊಸ ಹೊಸ ಸಮಸ್ಯೆಗಳು ಎದುರಾಗುತ್ತಿದ್ದು, ಇಂತಹ ಸಮಸ್ಯೆಗಳ ನಿವಾರಣೆಗೆ ಪ್ರತಿಯೊಬ್ಬರೂ ಕೈಜೋಡಿಸಬೇಕಿದೆ ಎಂದರು.

ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಅಂಬಾದಾಸ್‌ ಕುಲಕರ್ಣಿ ಜಿ., ವಕೀಲರ ಸಂಘದ ಜಿಲ್ಲಾಧ್ಯಕ್ಷ ಎನ್‌.ಟಿ. ಮಂಜುನಾಥ್‌ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.