ದಾವಣಗೆರೆ: ಕೋವಿಡ್ ಗೆ 5 ಸಾವು; ಬಲಿಯಾದವರ ಸಂಖ್ಯೆ 126ಕ್ಕೆ ಏರಿಕೆ
Team Udayavani, Aug 15, 2020, 9:05 PM IST
ಸಾಂದರ್ಭಿಕ ಚಿತ್ರ
ದಾವಣಗೆರೆ: ಜಿಲ್ಲೆಯಲ್ಲಿ ಶನಿವಾರ ಕೋವಿಡ್ ನಿಂದ ಐವರು ಸಾವನ್ನಪ್ಪಿದ್ದಾರೆ. ತೀವ್ರ ಮಧುಮೇಹ, ರಕ್ತದೊತ್ತಡ ದಿಂದ ಬಳಲುತ್ತಿದ್ದ ದಾವಣಗೆರೆಯ ನಿಟುವಳ್ಳಿಯ 65 ವರ್ಷದ ವೃದ್ಧ (ರೋಗಿ ನಂಬರ್ 192736), ಕೆಟಿಜೆ ನಗರದ 63 ವರ್ಷದ ವೃದ್ಧ (ರೋಗಿ ನಂಬರ್ 226285), ಹಾವೇರಿ ಜಿಲ್ಲೆಯ ರಟ್ಟಿಹಳ್ಳಿಯ 70 ವರ್ಷದ ವೃದ್ಧ (ರೋಗಿ ನಂಬರ್ 204798), ಹರಿಹರದ ಹರ್ಲಾಪುರದ 65 ವರ್ಷದ ವೃದ್ಧ(ರೋಗಿ ನಂಬರ್ 220222), ದಾವಣಗೆರೆ ವಿನೋಬ ನಗರದ 78 ವರ್ಷದ ವೃದ್ಧ (ರೋಗಿ ನಂಬರ್ 187854) ಮೃತಪಟ್ಟವರು.
ಐವರ ನಿಧನದಿಂದ ಜಿಲ್ಲೆಯಲ್ಲಿ ಕೋವಿಡ್ ಗೆ ಬಲಿಯಾದವರ ಸಂಖ್ಯೆ 126 ಆಗಿದೆ. ಜಿಲ್ಲೆಯಲ್ಲಿ ಶನಿವಾರ ಒಂದೇ ದಿನ 327 ಜನರಲ್ಲಿ ಸೋಂಕು ದೃಢಪಟ್ಟಿದೆ. ದಾವಣಗೆರೆ ನಗರ ಮತ್ತು ತಾಲೂಕಿನ 162, ಹರಿಹರದ 73, ಜಗಳೂರಿನ 7, ಹೊನ್ನಾಳಿ, ಚನ್ನಗಿರಿಯ ತಲಾ 26, ಹೊರ ಜಿಲ್ಲೆಯ 13 ಜನರು ಒಳಗೊಂಡಂತೆ 327 ಜನರಲ್ಲಿ ಸೋಂಕು ಕಾಣಿಸಿಕೊಂಡಿದೆ.
ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ ಐದು ಸಾವಿರ ದಾಟಿದೆ. ಜಿಲ್ಲೆಯಲ್ಲಿ ಒಟ್ಟು 5070 ಪ್ರಕರಣಗಳಿವೆ. ಕೊರೊನಾದಿಂದ ಗುಣಮುಖರಾದ 267 ಸೋಂಕಿತರು ಬಿಡುಗಡೆಯಾಗಿದ್ದಾರೆ. ಜಿಲ್ಲೆಯಲ್ಲಿ ಈವರೆಗೆ 3421 ಜನರು ಬಿಡುಗಡೆ ಆಗಿದ್ದಾರೆ. ಒಟ್ಟಾರೆ 5070 ಪ್ರಕರಣಗಳಲ್ಲಿ 3421 ಬಿಡುಗಡೆಯಾಗಿದ್ದಾರೆ. 126 ಜನರು ಸಾವನ್ನಪ್ಪಿದ್ದಾರೆ. 1523 ಸಕ್ರಿಯ ಪ್ರಕರಣಗಳಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ
Ls Polls: ಕಾಂಗ್ರೆಸ್ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್
MUST WATCH
ಹೊಸ ಸೇರ್ಪಡೆ
Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ
Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ
O2: ತೆರೆಗೆ ಬಂತು ಓ2; ಚಿತ್ರದ ಮೇಲೆ ಆಶಿಕಾ ನಿರೀಕ್ಷೆ
Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ