ಸೋಂಕು ಉಲ್ಬಣ.. ಜನರಲ್ಲಿ ತಲ್ಲಣ..

ಊಹೆಗೂ ನಿಲುಕದಂತೆ ಹೆಚ್ಚಾಗುತ್ತಿದೆ ಕೋವಿಡ್

Team Udayavani, Aug 17, 2020, 4:51 PM IST

ಸೋಂಕು ಉಲ್ಬಣ.. ಜನರಲ್ಲಿ ತಲ್ಲಣ..

ಸಾಂದರ್ಭಿಕ ಚಿತ್ರ

ದಾವಣಗೆರೆ: ನಡು ಕರ್ನಾಟಕದ ಕೇಂದ್ರ ಬಿಂದು ದಾವಣಗೆರೆ ಜಿಲ್ಲೆಯಲ್ಲಿ ಊಹೆಗೂ ಮೀರಿ ಕೋವಿಡ್ ಸೋಂಕು ವ್ಯಾಪಿಸುತ್ತಿದೆ. 19 ದಿನಗಳ ಅಂತರದಲ್ಲಿ 4 ಸಾವಿರಕ್ಕೂ ಹೆಚ್ಚು ಜನರಲ್ಲಿ ಸೋಂಕು ಪತ್ತೆ ಆಗಿರುವುದು ಸೋಂಕಿನ ವ್ಯಾಪಿಸುವಿಕೆಯ ತೀವ್ರತೆಯನ್ನ ಪುಷ್ಟೀಕರಿಸುತ್ತಿದೆ.

ಮಹಾಮಾರಿ ಕೋವಿಡ್ ಕಾಲಿಟ್ಟಂತಹ ಪ್ರಾರಂಭಿಕ ಹಂತದಲ್ಲಿ ಮಾ.27 ರಂದು ದಾವಣಗೆರೆಯಲ್ಲಿ ಪ್ರಥಮ ಪ್ರಕರಣ ಪತ್ತೆಯಾಗಿತ್ತು. ಆ ನಂತರ ಇಬ್ಬರಲ್ಲಿ ಕಾಣಿಸಿಕೊಂಡಿತ್ತು. ಮೂವರು ಗುಣಮುಖರಾದ 32 ದಿನಗಳಲ್ಲಿ ಒಂದೇ ಒಂದು ಪ್ರಕರಣ ಪತ್ತೆಯಾಗದೆ ಜಿಲ್ಲೆ ಹಸಿರು ವಲಯದತ್ತ ಸಾಗಿತ್ತು.

ಏ.29ರಂದು ಮೊದಲ ಪ್ರಕರಣ ಪತ್ತೆಯಾದಾಗ ದಾವಣಗೆರೆ ಜನರು ಆತಂಕಕ್ಕೆ ಒಳಗಾಗಿದ್ದರು. ಮೇ 3 ರಂದು ಒಂದೇ ದಿನ 21 ಜನರಲ್ಲಿ ಸೋಂಕು ದೃಢಪಟ್ಟಾಗ ಅಕ್ಷರಶಃ ನಲುಗಿ ಹೋಗಿದ್ದರು. ಹಲವಾರು ರಸ್ತೆ, ಓಣಿ, ಬೀದಿ, ನಗರದಲ್ಲಿ ಜನರೇ ಸ್ವಯಂ ದಿಗ್ಬಂಧನಕ್ಕೆ ಒಳಗಾಗಿದ್ದರು. ಜಾಲಿನಗರ, ಇಮಾಂ ನಗರ, ಆಜಾದ್‌ನಗರ, ಶಿವನಗರ ಕಂಟೇನ್ಮೆಂಟ್‌ ಝೋನ್‌ಗಳಾಗಿದ್ದವು. ಒಂದು ಹಂತದಲ್ಲಿ ಸೋಂಕಿನ ಅಬ್ಬರತೆಯೂ ಕಡಿಮೆ ಆಗಿತ್ತು. ಇಡೀ ಜಿಲ್ಲೆಯಲ್ಲಿ ಬರೀ 12 ಸಕ್ರಿಯ ಪ್ರಕರಣಗಳಿದ್ದವು. ಸಾರ್ವಜನಿಕರ ವಲಯದಲ್ಲಿ ನೆಮ್ಮದಿಯ ವಾತಾವರಣವೂ ನಿರ್ಮಾಣವಾಗಿತ್ತು.

ಆದರೆ, ಜೂ.29 ರಿಂದ ಸೋಂಕಿತರ ಸಂಖ್ಯೆ ಹೆಚ್ಚಾಗತೊಡಗಲಾರಂಭಿಸಿತು. 33 ಇದ್ದಂತಹ ಸಕ್ರಿಯ ಪ್ರಕರಣಗಳ ಸಂಖ್ಯೆ ನೋಡ ನೋಡುತ್ತಿದ್ದಂತೆಯೇ ನೂರರ ಗಡಿ ದಾಟಿತ್ತು. ಜು.13 ರಂದು ಸಕ್ರಿಯ ಪ್ರಕರಣಗಳ ಸಂಖ್ಯೆ 129 ಆಗಿತ್ತು. ಜು. 22ರ ವೇಳೆಗೆ ಒಟ್ಟಾರೆ ಸೋಂಕಿತರ ಸಂಖ್ಯೆ 1071,ಸಕ್ರಿಯ ಪ್ರಕರಣಗಳ ಸಂಖ್ಯೆ 400 ಇತ್ತು.

ಜು.22 ರಿಂದ ಆಗಸ್ಟ್‌ 15ಕ್ಕೆ ಒಟ್ಟಾರೆ ಸೋಂಕಿತರ ಸಂಖ್ಯೆ ಐದು ಸಾವಿರದ ಗಡಿ ದಾಟಿದೆ.(5070). ಜೂ.29 ರಿಂದ ಜು. 22ಕ್ಕೆ ಒಂದು ಸಾವಿರದ ಗಡಿ ದಾಟಿದ ಸೋಂಕಿತರ ಸಂಖ್ಯೆ. ಅಲ್ಲಿಂದ ಅತೀ ಕಡಿಮೆ ಅವಧಿಯಲ್ಲಿ ಐದು ಸಾವಿರದ ಗಡಿ ದಾಟಿರುವುದು ಹರಡುವಿಕೆಯ ತೀವ್ರತೆಯ ಪ್ರತೀಕವಾಗಿದೆ. ಮೊದಲು ನಗರ ಪ್ರದೇಶದಕ್ಕೆ ಮಾತ್ರವೇ ಸೀಮಿತವಾಗಿದ್ದ ಸೋಂಕು ಇದೀಗ ಗ್ರಾಮೀಣ ಪ್ರದೇಶದಲ್ಲೂ ತಾಂಡವವಾಡುತ್ತಿದೆ. ಸೋಂಕಿನ ಹೆಚ್ಚಳದ ಜತೆಗೆ ಸಾವಿನ ಪ್ರಮಾಣವೂ ಹೆಚ್ಚಾಗುತ್ತಿರುವುದು ಜನರು ಆತಂಕ ಪಡುವಂತಾಗಿದೆ.

ಲಾಕ್‌ಡೌನ್‌-1 ಮತ್ತು 2ರ ಸಂದರ್ಭದಲ್ಲಿ ನಿಯಂತ್ರಣದಲ್ಲಿದ್ದ ಕೋವಿಡ್ ಲಾಕ್‌ಡೌನ್‌ ತೆರವಿನ ನಂತರ ಹರಡುತ್ತಿದೆ. ಅಲ್ಲೆಲ್ಲೋ ಇದ್ದಂತಹ ಕಂಟೇನ್ಮೆಂಟ್‌ಗಳು ಮನೆಯ ಬಾಗಿಲಿಗೆ ಬರುತ್ತಿರುವುದರಿಂದ ಜನರಲ್ಲಿ ಆತಂಕ ಉಂಟು ಮಾಡುತ್ತಿದೆ. ಮುಕ್ತ ವಾತಾವರಣಕ್ಕೆ ಕಡಿವಾಣ ಬೀಳತೊಡಗಿದೆ. ಜಿಲ್ಲಾ ಚಿಗಟೇರಿ ಆಸ್ಪತ್ರೆಯನ್ನ 300 ಹಾಸಿಗೆಗಳ ಕೋವಿಡ್‌ ಆಸ್ಪತ್ರೆಯನ್ನಾಗಿ ಗುರುತಿಸಲಾಗಿದೆ. 250 ಐಸೋಲೇಷನ್‌ ಬೆಡ್‌ ಸಿದ್ಧಪಡಿಸಲಾಗಿದೆ. 19 ಖಾಸಗಿ ಆಸ್ಪತ್ರೆಗಳನ್ನೂ ಚಿಕಿತ್ಸೆಗೆ ಗುರುತಿಸಲಾಗಿದೆ. ಎರಡು ಖಾಸಗಿ, ಒಂದು ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಯೋಗಾಲಯ ಪ್ರಾರಂಭಿಸಲಾಗಿದೆ.

ದಿನಕ್ಕೆ 3 ಸಾವಿರ ಕೊರೊನಾ ಪರೀಕ್ಷೆಯ ಗುರಿ ನೀಡಲಾಗಿದೆ. ಜಿಲ್ಲೆಯ ಎಲ್ಲ ತಾಲೂಕು ಕೇಂದ್ರದ ಆಸ್ಪತ್ರೆಯಲ್ಲಿ ತಲಾ 10 ಐಸೋಲೇಷನ್‌ ಬೆಡ್‌ ಸಿದ್ಧಪಡಿಸಲಾಗಿದೆ. ಹೆಚ್ಚುವರಿಯಾಗಿ 40 ಐಸೋಲೇಷನ್‌ ಬೆಡ್‌ ಮಾಡಲು ಕ್ರಮ ವಹಿಸಲಾಗಿದೆ. ಪ್ರತಿ ತಾಲೂಕಿನಲ್ಲಿ ಕೋವಿಡ್ ಗುಣಲಕ್ಷಣಗಳು ಇಲ್ಲದ ಪಾಸಿಟಿವ್‌ ಪ್ರಕರಣಗಳ ಚಿಕಿತ್ಸೆಗೆ 100 ಬೆಡ್‌ಗಳ ಕೋವಿಡ್‌ ಕೇರ್‌ ಸೆಂಟರ್‌ ಗುರುತಿಸಲಾಗಿದೆ. ದಾವಣಗೆರೆ ನಗರದಲ್ಲಿ ಒಟ್ಟು 300 ಬೆಡ್‌ಗಳ ಕೋವಿಡ್‌ ಕೇರ್‌ ಸೆಂಟರ್‌ ಕಾರ್ಯ ನಿರ್ವಹಿಸುತ್ತಿವೆ. ಶೇ.50 ರಷ್ಟು ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಜ್ವರದ ಕ್ಲಿನಿಕ್‌ ಪ್ರಾರಂಭಿಸಲು ಕ್ರಮ ಕೈಗೊಳ್ಳಲಾಗುತ್ತಿದೆ.

ಕೋವಿಡ್ ಸೋಂಕು, ಸಾವಿನ ಪ್ರಮಾಣ ನಿಯಂತ್ರಣಕ್ಕೆ ಎಲ್ಲಾ ರೀತಿಯ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ. ಆದರೆ, ಸೋಂಕಿನ ಅಬ್ಬರತೆ ಹೆಚ್ಚಾಗುತ್ತಲೇ ಹೋಗುತ್ತಿರುವುದೇ ಆತಂಕಪಡುವಂತಾಗಿದೆ.

 

-ರಾ. ರವಿಬಾಬು

ಟಾಪ್ ನ್ಯೂಸ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ

Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯಿತಿ ಸಿದ್ದೇಶ್ವರ

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.