ವಸ್ತು ನಿಷ್ಠವಾಗಿ ಬೆಳೆ ಹಾನಿ ಸಮೀಕ್ಷೆ: ಬೀಳಗಿ
ಅತಿವೃಷ್ಟಿಯಿಂದ ಹಾನಿಗೀಡಾದ ಕಮಲಾಪುರಕ್ಕೆ ಭೇಟಿ ನೀಡಲು ತಹಶೀಲ್ದಾರ್ಗೆ ಜಿಲ್ಲಾಧಿಕಾರಿ ಸೂಚನೆ
Team Udayavani, May 27, 2022, 2:50 PM IST
ಹರಿಹರ: ಮಳೆಯಿಂದ ಹಾನಿಗೀಡಾದ ಬೆಳೆ ನಷ್ಟ ಕುರಿತು ರೈತರು, ಗ್ರಾಮಸ್ಥರ ಸಮ್ಮುಖದಲ್ಲೇ ವಸ್ತುನಿಷ್ಠವಾಗಿ ಕೃಷಿ ಮತ್ತು ಕಂದಾಯ ಇಲಾಖೆಯಿಂದ ಜಂಟಿ ಸಮೀಕ್ಷೆ ನಡೆಸಲಾಗುತ್ತಿದೆ ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಹೇಳಿದರು.
ಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರ ಸೂಚನೆ ಮೇರೆಗೆ ತಾಲೂಕು ಕಚೇರಿಯಲ್ಲಿ ಅಧಿಕಾರಿಗಳ ಹಾಗೂ ಸಾರ್ವಜನಿಕರ ಸಭೆ ನಡೆಸಿದ ಅವರು, ಪಕ್ಕಾ ಮನೆ ಪೂರ್ಣ ಹಾನಿಗೀಡಾಗಿದ್ದರೆ 5 ಲಕ್ಷ ರೂ., ಕಚ್ಚಾಮನೆ ಪೂರ್ಣ ಹಾನಿಯಾಗಿದ್ದರೆ 3 ಲಕ್ಷ ರೂ., ಭಾಗಶಃ ಹಾನಿಯಾಗಿದ್ದರೆ 50 ಸಾವಿರ ರೂ. ಪರಿಹಾರ ನೀಡಲಾಗುವುದು ಎಂದರು.
ಅತಿವೃಷ್ಟಿಯಿಂದ ಹಾನಿಗೀಡಾದ ಕಮಲಾಪುರಕ್ಕೆ ಇದುವರೆಗೆ ತಹಶೀಲ್ದಾರರು ಭೇಟಿ ನೀಡಿಲ್ಲ ಎಂದು ಗ್ರಾಮಸ್ಥರು ದೂರಿದರು. ಕೂಡಲೇ ಗ್ರಾಮಕ್ಕೆ ಭೇಟಿ ನೀಡಿ ಪರಿಶೀಲಿಸುವಂತೆ ಜಿಲ್ಲಾಧಿಕಾರಿಯವರು ತಹಶೀಲ್ದಾರರಿಗೆ ಸೂಚಿಸಿದರು. ರಾಘವೇಂದ್ರ ಮಠ ಸಮೀಪದ ನಾಡಬಂದ್ ಶಾವಲಿ ದರ್ಗಾದ ಮುಂದಿನ ರಸ್ತೆಯ ಸಮಸ್ಯೆಯನ್ನು ಸ್ಥಳೀಯರೇ ಸೌಹಾರ್ದತೆಯಿಂದ ಬಗೆಹರಿಸಿಕೊಳ್ಳಬೇಕೆಂದರು.
ಸಭೆಯಲ್ಲಿ ಪೊಲೀಸ್ ಪೇದೆಯೊಬ್ಬರ ಪತ್ನಿ ಕೋರ್ಟ್ ಆದೇಶವಿದ್ದರೂ ಪತಿ ನಾಲ್ಕು ವರ್ಷಗಳಿಂದ ಜೀವನಾಂಶ ನೀಡಿಲ್ಲ ಎಂದಾಗ, ಎಸ್ಪಿ ಜೊತೆ ಮಾತನಾಡಿ ಇತ್ಯರ್ಥಪಡಿಸುವುದಾಗಿ ಜಿಲ್ಲಾಧಿಕಾರಿ ತಿಳಿಸಿದರು. ರೈತರೊಬ್ಬರು ದನದ ಕೊಟ್ಟಿಗೆಗೆ ವಿದ್ಯುತ್ ಸಂಪರ್ಕ ಕಲ್ಪಿಸಲು ಬೆಸ್ಕಾಂ ಸಿಬ್ಬಂದಿ ಗ್ರಾಪಂ ನಿರಾಕ್ಷೇಪಣ ಪತ್ರ ಕೇಳುತ್ತಿದ್ದಾರೆ ಎಂದು ಹೇಳಿದಾಗ, ಬೆಸ್ಕಾಂ ಅಧಿಕಾರಿಗೆ ಸೂಕ್ತ ನಿರ್ದೇಶನ ನೀಡುವುದಾಗಿ ತಿಳಿಸಿದರು.
ನಗರಸಭಾ ಸದಸ್ಯ ದಾದಾ ಖಲಂದರ್, ಕಾಳಿದಾಸ ನಗರ, ಬೆಂಕಿನಗರಕ್ಕೆ ಡಿ.ಬಿ. ಕೆರೆ ಕಾಲುವೆ ನೀರು ನುಗ್ಗದಂತೆ ತಡೆಗೋಡೆ ನಿರ್ಮಿಸಲು ವಿಶೇಷ ಅನುದಾನ ನೀಡಬೇಕೆಂದು ಒತ್ತಾಯಿಸಿದರು. ಸಭೆಯಲ್ಲಿ ಒಟ್ಟು 14 ಅರ್ಜಿಗಳು ಸಲ್ಲಿಕೆಯಾಗಿದ್ದು, ಐದು ಅರ್ಜಿಗಳನ್ನು ಇತ್ಯರ್ಥಪಡಿಸಲಾಗಿದೆ. ಉಳಿದವುಗಳನ್ನು ಸ್ಥಳ ಭೇಟಿ ನಂತರ ಇತ್ಯರ್ಥಪಡಿಸಲಾಗುವುದೆಂದು ಜಿಲ್ಲಾಧಿಕಾರಿ ತಿಳಿಸಿದರು.
ಸಭೆಗೂ ಮುನ್ನ ಆರ್ಆರ್ಟಿ ಸೆಕ್ಷನ್ಗೆ ಭೇಟಿ ನೀಡಿದ್ದ ಜಿಲ್ಲಾಧಿಕಾರಿ ಬೀಳಗಿ, ರೈತರನ್ನು ಅನವಶ್ಯಕವಾಗಿ ಅಲೆದಾಡಿಸಬಾರದು. ನಿಗದಿತ ಸಮಯದೊಳಗೆ ಅರ್ಜಿ ವಿಲೇ ಮಾಡಬೇಕೆಂದು ಸಿಬ್ಬಂದಿಗೆ ಸೂಚಿಸಿದರು. ಮೋಜಿಣಿ ವಿಭಾಗದಲ್ಲಿ ವಿಳಂಬವಾಗಿದ್ದ ಅರ್ಜಿಯೊಂದನ್ನು ಜೂನ್ ತಿಂಗಳೊಳಗೆ ವಿಲೇ ಮಾಡಬೇಕೆಂದು ತಾಕೀತು ಮಾಡಿದರು. ರೈತ ಸಂಘದ ಕಾರ್ಯದರ್ಶಿ, ವಕೀಲ ಎಸ್. ಮಂಜುನಾಥ್, ಉಪಾಧ್ಯಕ್ಷ ಹಳ್ಳಿಹಾಳು ಹನುಮಂತಪ್ಪ, ಬಿಎಸ್ಪಿ ಜಿಲ್ಲಾಧ್ಯಕ್ಷ ಡಿ. ಹನುಮಂತಪ್ಪ, ಸಿಪಿಐ (ಎಂಎಲ್)ನ ಎಸ್. ಬೀರಪ್ಪ, ಉಪವಿಭಾಗಾಧಿಕಾರಿ ಎನ್. ದುರ್ಗಾಶ್ರೀ, ತಹಶೀಲ್ದಾರ್ ಡಾ| ಎಂ.ಬಿ. ಅಶ್ವತ್ಥ, ಸಹಾಯಕ ಕೃಷಿ ನಿರ್ದೇಶಕ ನಾರನಗೌಡ, ಬಿಇಒ ಬಿ.ಸಿ. ಸಿದ್ದಪ್ಪ, ನಗರಸಭೆ ಪೌರಾಯುಕ್ತ ಬಸವರಾಜಪ್ಪ, ಎಇಇ ಎಸ್. ಎಸ್. ಬಿರಾದಾರ್ ಇದ್ದರು.
ಕೆರೆ ಒತ್ತುವರಿ ತೆರವಿಗೆ ಮನವಿ
ಬಗರ್ಹುಕುಂ ಜಮೀನಿನ ಅರ್ಜಿಗಳನ್ನು ಕೂಡಲೇ ಪರಿಶೀಲಿಸಬೇಕು. ಜಲಾವೃತವಾಗುವ ಡಿ.ಬಿ. ಕೆರೆ ರೈತರ ಜಮೀನುಗಳನ್ನು ಸ್ವಾಧೀನಪಡಿಸಿಕೊಂಡು ಪರಿಹಾರ ಅಥವಾ ಬೇರೆಡೆ ಜಮೀನು ಮಂಜೂರು ಮಾಡಬೇಕು. ಜಿಲ್ಲೆಯಲ್ಲಿನ 600 ಸಣ್ಣ, ದೊಡ್ಡ ಕೆರೆಗಳ ಜಾಗ ಒತ್ತುವರಿಯಾಗಿದ್ದು ತೆರವುಗೊಳಿಸಬೇಕೆಂದು ಒತ್ತಾಯಿಸಿ ರೈತ ಮುಖಂಡ ಬಲ್ಲೂರು ರವಿಕುಮಾರ್ ಅವರು ಜಿಲ್ಲಾಧಿಕಾರಿಯವರಿಗೆ ಮನವಿ ಸಲ್ಲಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ
Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ
PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ
MUST WATCH
ಹೊಸ ಸೇರ್ಪಡೆ
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ