ಅಂತೂ ಬಂತು ಕಳೆದ ವರ್ಷದ ಬೆಳೆ ವಿಮೆ
9774 ರೈತರ ಖಾತೆಗೆ 18.96 ಕೋಟಿ ರೂ. ಜಮಾ
Team Udayavani, Nov 28, 2020, 4:07 PM IST
ಸಾಂದರ್ಭಿಕ ಚಿತ್ರ
ದಾವಣಗೆರೆ: ಕೋವಿಡ್ ನಿಯಂತ್ರಣಕ್ಕಾಗಿ ವಿಧಿಸಿದ ಲಾಕ್ಡೌನ್ನಿಂದ ಬೆಳೆದ ಬೆಳೆಯನ್ನು ಯೋಗ್ಯ ದರಕ್ಕೆ ಮಾರಾಟ ಮಾಡಲಾಗದೆ ರೈತರು ನಷ್ಟ ಅನುಭವಿಸಿದ್ದರು. ಪ್ರಸಕ್ತ ಮುಂಗಾರಿನಲ್ಲಿ ಸುರಿದ ಅತಿವೃಷ್ಟಿಯಿಂದ ಬೆಳೆ ಹಾನಿಯಾಗಿ ಕಂಗೆಟ್ಟಿದ್ದ ರೈತರಿಗೆ ಈಗ ಬೆಳೆವಿಮೆ ಪರಿಹಾರ ದೊರಕಿದ್ದು ರೈತರು ನಿಟ್ಟುಸಿರು ಬಿಡುವಂತಾಗಿದೆ.
ಕಳೆದ ವರ್ಷದ ಅಂದರೆ 2019-20ನೇ ಸಾಲಿನ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯಡಿ ಬರಬೇಕಿದ್ದ ಬೆಳೆ ವಿಮೆಈವರೆಗೂ ಬಂದಿರಲಿಲ್ಲ. ಬೆಳೆ ವಿಮೆ ಪರಿಹಾರಕ್ಕಾಗಿ ಆಗ್ರಹಿಸಿ ರೈತರು ನಿರಂತರ ಮನವಿ, ಹೋರಾಟ ನಡೆಸುತ್ತಲೇ ಬಂದಿದ್ದರು. ವಿಮಾ ಕಂಪನಿ ಈಗ ಕಳೆದ ವರ್ಷದ ಮುಂಗಾರು ಹಂಗಾಮಿನ ಬೆಳೆ ಹಾನಿಗೆ ಸಂಬಂಧಿಸಿ ಪರಿಹಾರ ಹಣವನ್ನು ರೈತರ ಖಾತೆಗೆಜಮಾ ಮಾಡುತ್ತಿದೆ. ಆರ್ಥಿಕ ಸಂಕಷ್ಟ ಕಾಲದಲ್ಲಿ ಬಂದಿರುವ ವಿಮಾ ಪರಿಹಾರ ರೈತರ ಪಾಲಿಗೆ ಆಸರೆಯಾಗಿದೆ.
2019-20ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಒಟ್ಟು 37951 ರೈತರು ವಿಮೆ ಮಾಡಿಸಿದ್ದು 385.98ಲಕ್ಷ ರೂ. ವಿಮಾ ಕಂತು ಕಟ್ಟಿದ್ದರು. ನ. 24ವರೆಗೆ ಜಿಲ್ಲೆಯ 9774ರೈತರ ಖಾತೆಗೆ 18.96ಕೋಟಿ ರೂ.ಗಳ ವಿಮಾ ಪರಿಹಾರ ಜಮೆ ಆಗಿದೆ. ಜಿಲ್ಲೆಯ ಜಗಳೂರು ತಾಲೂಕಿನ ಅತಿ ಹೆಚ್ಚು ರೈತರಿಗೆ ಪರಿಹಾರ ದೊರಕಿದ್ದರೆ ದಾವಣಗೆರೆ ತಾಲೂಕಿನ ಕಡಿಮೆ ಅಂದರೆ ಕೇವಲ 157 ರೈತರ ಖಾತೆಗೆ ಪರಿಹಾರ ಜಮಾ ಅಗಿದೆ. ಪರಿಹಾರದ ವಿವರ: ಜಗಳೂರು ತಾಲೂಕಿನ 5609 ರೈತರ ಖಾತೆಗೆ 14.70ಕೋಟಿ ರೂ. ಜಮೆ ಆಗಿದೆ. ಹರಿಹರ ತಾಲೂಕಿನ 2384 ರೈತರಿಗೆ 2.65 ಕೋಟಿ ರೂ. ಪರಿಹಾರ ಜಮಾ ಆಗಿದೆ. ಹೊನ್ನಾಳಿ ತಾಲೂಕಿನ 1145 ರೈತರಿಗೆ 55.17 ಲಕ್ಷ ರೂ. ಪರಿಹಾರ ನೀಡಲಾಗಿದೆ. ಚನ್ನಗಿರಿ ತಾಲೂಕಿನ 479 ರೈತರಿಗೆ 53.70 ಕೋಟಿ ರೂ. ಪರಿಹಾರ ಸಿಕ್ಕಿದೆ. ದಾವಣಗೆರೆ ತಾಲೂಕಿನ 157 ರೈತರ ಖಾತೆಗೆ 51.85 ಕೋಟಿ ರೂ. ಜಮಾ ಆಗಿದೆ.
ಇದೇ ರೀತಿ ತೋಟಗಾರಿಕೆ ಬೆಳೆಗಳಲ್ಲಿ 6563 ರೈತರು ಬೆಳೆ ವಿಮೆ ಮಾಡಿಸಿದ್ದು ಒಟ್ಟು 346.93 ಲಕ್ಷ ರೂ. ಪ್ರೀಮಿಯಂ ಮೊತ್ತ ಪಾವತಿಸಿದ್ದರು. 1257.42 ಲಕ್ಷ ರೂ. ಬೆಳೆ ವಿಮೆ ರೈತರ ಖಾತೆಗೆ ಜಮಾ ಆಗಿದೆ.ಒಟ್ಟಾರೆ ಬೆಳೆ ವಿಮೆ ಪರಿಹಾರ ಹಣವಿಳಂಬವಾಗಿಯಾದರೂ ಬಂದಿದೆ. ಸಂಕಷ್ಟ ಕಾಲದಲ್ಲಿ ರೈತರ ಸಹಾಯಕ್ಕೆ ಬಂದಿರುವುದು ಸಮಾಧಾನಕರ ಸಂಗತಿ.
2019-20ನೇ ಸಾಲಿನ ಕರ್ನಾಟಕ ರೈತಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯಡಿ ಈವರೆಗೆ ಜಿಲ್ಲೆಯ 9774 ರೈತರಿಗೆ 18.96 ಕೋಟಿ ರೂ. ವಿಮಾ ಪರಿಹಾರಹಣ ರೈತರ ಖಾತೆಗೆ ಜಮಾ ಆಗಿದೆ. ಬಹುತೇಕರೈತರಿಗೆ ಪರಿಹಾರ ಹಣ ದೊರೆತಂತಾಗಿದೆ. –ಶ್ರೀನಿವಾಸ್ ಚಿಂತಾಲ್, ಜಂಟಿ ನಿರ್ದೇಶಕರು, ಕೃಷಿ ಇಲಾಖೆ
ಅಧಿಕಾರಿಗಳು ಬೆಳೆವಿಮೆ ಮಾಡಿಸಲು ತೋರಿಸುವ ಆಸಕ್ತಿಯನ್ನು ಸಕಾಲಕ್ಕೆ ರೈತರಿಗೆ ಕೊಡಿಸಲು ತೋರುವುದಿಲ್ಲ. ಹೀಗಾಗಿ ಬೆಳೆ ವಿಮೆ ಪರಿಹಾರ ಸಿಗುವುದು ವಿಳಂಬವಾಗುತ್ತಿದೆ. ಕಳೆದ ವರ್ಷದ ಮುಂಗಾರು ಹಂಗಾಮಿನ ವಿಮೆ ಪರಿಹಾರ ತಡವಾಗಿಯಾದರೂ ರೈತರಿಗೆ ಸಿಕ್ಕಿದೆ ಎಂಬುದೇ ಸಮಾಧಾನಕರ ಸಂಗತಿ.
–ಹುಲ್ಮನಿ ಠಾಕೂರ, ರೈತ ಮುಖಂಡ
–ಎಚ್.ಕೆ. ನಟರಾಜ
Ad
ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ, ಜಯನಗರ ಬೆಂಗಳೂರು, ಮೋ- 8884889444
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿ ಕೃಷ್ಣ ಮಠಕ್ಕೆ ಬಾಳೆ ಎಲೆಯನ್ನು ನೀಡುವ ಯುವಕ
ತೊಗರಿ ರಾಶಿಗೆ ಬೆಂಕಿ ಹಚ್ಚಿ, ಪಂಪ್ ಸೆಟ್ ವಿದ್ಯುತ್ ಸಂಪರ್ಕ ಕಡಿತ ಮಾಡಿದ ದುಷ್ಕರ್ಮಿಗಳು!
ಸಮುದ್ರದಲ್ಲಿ ಪದ್ಮಾಸನ ಭಂಗಿ: ಕಾಲಿಗೆ ಸರಪಳಿ ಬಿಗಿದು ಈಜಿ ದಾಖಲೆ ಬರೆದ ಗಂಗಾಧರ್ ಜಿ.
ರಾಷ್ಟ್ರೀಯ ಹೆದ್ದಾರಿಯಲ್ಲಿ ಲಾರಿ ಚಾಲಕನ ಅವಾಂತರ: ನೂರಾರು ಮಂದಿಯ ಪ್ರಾಣ ಉಳಿಸಿದ ಕಾಪು ಎಸ್ಐ
ಅಹಿತಕರ ಬೆಳವಣಿಗೆಗಳು ಕಂಡುಬಂದರೆ ವಾಟ್ಸಾಪ್ ಮೂಲಕ ಮಾಹಿತಿ ಹಂಚಿಕೊಳ್ಳಿ; Compol ಶಶಿಕುಮಾರ್
ಹೊಸ ಸೇರ್ಪಡೆ
ಪದ್ಮ ಪ್ರಶಸ್ತಿ ಪ್ರಕಟ : ಬಿ.ಎಂ.ಹೆಗ್ಡೆ, ಎಸ್.ಪಿಬಿಗೆ ಪದ್ಮವಿಭೂಷಣ, ಕಂಬಾರರಿಗೆ ಪದ್ಮಭೂಷಣ
ಯಾವ ಖಾತೆ ಕೊಟ್ಟರೂ ಸಮರ್ಥವಾಗಿ ನಿಭಾಯಿಸಿ, ಯಶಸ್ಸು ಸಾಧಿಸಬೇಕು: ಡಿಸಿಎಂ ಅಶ್ವಥ್ನಾರಾಯಣ
ಹುಣಸೋಡು ಸ್ಫೋಟ ಪ್ರಕರಣ :ಕ್ರಷರ್ ಮಾಲೀಕ ಸೇರಿ ನಾಲ್ವರನ್ನು ಬಂಧಿಸಿದ ಪೊಲೀಸರು
ಮೇಲುಕೋಟೆ ವಜ್ರಾಂಗಿ ಆಭರಣ ಅವ್ಯವಹಾರ ಪ್ರಕರಣ: ಅರ್ಚಕ ನರಸರಾಜಭಟ್ ನೇಮಕಕ್ಕೆ ಹೈಕೋರ್ಟ್ ತಡೆ
145 ದಿನಗಳ ಬಳಿಕ ಪರಪ್ಪನ ಅಗ್ರಹಾರ ಜೈಲಿನಿಂದ ನಟಿ ರಾಗಿಣಿ ಬಿಡುಗಡೆ