ಲಾಕ್‌ ಡೌನ್‌ ವಿಸ್ತರಣೆಗೆ ಹೆಚ್ಚಿದ ಒಲವು


Team Udayavani, Jun 2, 2021, 9:05 PM IST

2-10

ದಾವಣಗೆರೆ: ಕೊರೊನಾ ತಡೆಗಟ್ಟಲು ಜಾರಿಯಲ್ಲಿರುವ ಲಾಕ್‌ಡೌನ್‌ ಮುಂದುವರೆಸುವ ಬಗ್ಗೆ ಮಂಗಳವಾರ ಜಿಲ್ಲಾಡಳಿತ ಭವನದ ತುಂಗಭದ್ರಾ ಸಭಾಂಗಣದಲ್ಲಿ ನಡೆದ ಜಿಲ್ಲೆಯಲ್ಲಿನ ಕೋವಿಡ್‌ ಸ್ಥಿತಿ-ಗತಿ ಹಾಗೂ ಕೈಗೊಳ್ಳಬೇಕಾದ ಕ್ರಮಗಳ ಪರಿಶೀಲನಾ ಸಭೆಯಲ್ಲಿ ಒಲವು ವ್ಯಕ್ತವಾಯಿತು.

ಸಭೆಯ ಅಧ್ಯಕ್ಷತೆ ವಹಿಸಿದ್ದ ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಬಸವರಾಜ್‌ ಮಾತನಾಡಿ, ರಾಜ್ಯದಲ್ಲಿ ಇನ್ನೂ ಎಂಟು ದಿನ ಲಾಕ್‌ಡೌನ್‌ ಮುಂದುವರೆಸುವಂತೆ ಮುಖ್ಯಮಂತ್ರಿಗಳಿಗೆ ಮನವಿ ಮಾಡಲಾಗುವುದು. ಜಿಲ್ಲೆಯ ಗ್ರಾಮೀಣ ಭಾಗದಲ್ಲಿ ಜನರು ಮಾಸ್ಕ್ ಧರಿಸದೆ ಓಡಾಡುವುದು, ಗುಂಪುಗೂಡುವುದನ್ನು ಗಮನಿಸಿದ್ದೇನೆ. ಹೀಗಾದರೆ ಕೊರೊನಾ ನಿಯಂತ್ರಣ ಮಾಡುವುದಾರೂ ಹೇಗೆ ಎಂದು ಪ್ರಶ್ನಿಸಿದರು.

ಪಿಡಿಒಗಳಿಗೆ ಸರಿಯಾಗಿ ಸೂಚನೆ ನೀಡಬೇಕು. ಮಾಸ್ಕ್ ಧರಿಸದೇ ಇದ್ದವರಿಗೆ ದಂಡ ವಿಧಿಸಬೇಕು. ಜಿಲ್ಲೆಯಲ್ಲಿ ಅತ್ಯಂತ ಪರಿಣಾಮಕಾರಿಯಾಗಿ ಲಾಕ್‌ಡೌನ್‌ ಜಾರಿಗೆ ಎಸ್ಪಿ, ಜಿಪಂ ಸಿಇಒ ಹೆಚ್ಚು ಗಮನ ಹರಿಸಬೇಕು ಎಂದು ಸೂಚಿಸಿದರು. ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎಂ.ಪಿ. ರೇಣುಕಾಚಾರ್ಯ ಮಾತನಾಡಿ, ಜಿಲ್ಲೆಯಲ್ಲಿ ಕಠಿಣ ಲಾಕ್‌ ಡೌನ್‌ ಮಾಡಬೇಕು. ಜನರೇ ಪೊಲೀಸ್‌, ಕೊರೊನಾ ವಾರಿಯರ್ಸ್‌ ಆಗಬೇಕು ಎಂದು ತಿಳಿ ಹೇಳಿದರೂ ಜನರು ಏನೂ ಆಗುವುದಿಲ್ಲ ಎನ್ನುವಂತೆ ವರ್ತಿಸುತ್ತಾರೆ. ಜಿಲ್ಲಾಡಳಿತ ಕಠಿಣ ಕ್ರಮ ತೆಗೆದುಕೊಳ್ಳಬೇಕು ಎಂದರು.

ಚನ್ನಗಿರಿ ಶಾಸಕ ಮಾಡಾಳ್‌ ವಿರೂಪಾಕ್ಷಪ್ಪ ಮಾತನಾಡಿ, ರಾಜ್ಯ ಮಟ್ಟದಲ್ಲಿ ಲಾಕ್‌ ಡೌನ್‌ ಮುಂದುವರೆಸಲಿ ಅಥವಾ ಬಿಡಲಿ, ದಾವಣಗೆರೆ ಜಿಲ್ಲೆಯಲ್ಲಿ ಜೂ. 15 ರವರೆಗೆ ಕಠಿಣ ಲಾಕ್‌ಡೌನ್‌ ಮುಂದುವರೆಸಬೇಕು. ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ ಕಡಿಮೆ ಆಗಲು ಎಲ್ಲರೂ ಸಹಕರಿಸಬೇಕು. ಜಿಲ್ಲೆಗೆ ಅಗತ್ಯ ಇರುವ ಲಸಿಕೆ ತರಿಸಬೇಕು ಎಂದು ಒತ್ತಾಯಿಸಿದರು. ಮಾಯಕೊಂಡ ಶಾಸಕ ಪ್ರೊ| ಎನ್‌. ಲಿಂಗಣ್ಣ ಮಾತನಾಡಿ, ಮಾಯಕೊಂಡ ಕ್ಷೇತ್ರದಲ್ಲಿ ಆಕ್ಸಿಜನ್‌ ಬೆಡ್‌ ವ್ಯವಸ್ಥೆ ಹೆಚ್ಚಳ ಮಾಡಬೇಕು ಎಂದು ಒತ್ತಾಯಿಸಿದರು. ಮುಂದಿನ ವಾರದಲ್ಲೇ ಆಕ್ಸಿಜನ್‌ ಬೆಡ್‌ ವ್ಯವಸ್ಥೆ ಕೊಠಡಿ ಉದ್ಘಾಟನೆ ಮಾಡಲಾಗುವುದು ಎಂದು ಸಚಿವ ಬೈರತಿ ಬಸವರಾಜ್‌ ತಿಳಿಸಿದರು.

ಕೇರ್‌ ಸೆಂಟರ್‌ಗೆ ದಾಖಲಿಸಿ: ಹೋಂ ಐಸೋಲೇಷನ್‌ನಲ್ಲಿರುವುದರಿಂದ ಸೋಂಕು ಹೆಚ್ಚಾಗುತ್ತಿದೆ ಎಂಬ ಮಾತುಗಳು ಕೇಳಿ ಬರುತ್ತಿವೆ. ಮನೆಯಲ್ಲೇ ಚಿಕಿತ್ಸೆ ಪಡೆಯುತ್ತಿರುವರನ್ನು ಯಾವುದೇ ಕಾರಣಕ್ಕೂ ಮನೆಯಲ್ಲಿ ಬಿಡಬಾರದು. ಕೋವಿಡ್‌ ಕೇರ್‌ ಸೆಂಟರ್‌ಗಳಿಗೆ ದಾಖಲಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವರು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು. ಕಳೆದ ಸಭೆಯಲ್ಲೇ ಸೂಚನೆ ನೀಡಲಾಗಿತ್ತು.

ಆದರೂ ಯಾವ ಕಾರಣಕ್ಕೆ ಹೋಂ ಐಸೋಲೇಷನ್‌ಗೆ ಅವಕಾಶ ಮಾಡಿಕೊಡಲಾಗಿದೆ ಎಂದು ಪ್ರಶ್ನಿಸಿದ ಅವರು, ಕೇರ್‌ ಸೆಂಟರ್‌ಗಳಲ್ಲಿ ಅತ್ಯುತ್ತಮ ಗುಣಮಟ್ಟದ ತಿಂಡಿ, ಊಟದ ವ್ಯವಸ್ಥೆ ಮಾಡಬೇಕು. ಮನೆಗಳಲ್ಲಿ ದೊರೆಯುವ ಊಟಕ್ಕಿಂತಲೂ ಗುಣಮಟ್ಟದ್ದಾಗಿರಬೇಕು. ಸ್ವತ್ಛತೆ, ಶುಚಿತ್ವ ಕಾಪಾಡಬೇಕು. ಗ್ರಾಮಗಳಲ್ಲಿನ ಕಾರ್ಯಪಡೆಗಳು ಚೆನ್ನಾಗಿ ಕೆಲಸ ಮಾಡಬೇಕು. ದಾವಣಗೆರೆ ತರಕಾರಿಗೆ ಹೆಸರುವಾಸಿ, ಪ್ರತಿ ದಿನ ತಾಜಾ ತರಕಾರಿ ತಂದು ತಿಂಡಿ, ಊಟದ ವ್ಯವಸ್ಥೆ ಮಾಡಬೇಕು. ಕೇರ್‌ ಸೆಂಟರ್‌ಗಳಿಗೆ ದಾಖಲಾದವರನ್ನು ನಮ್ಮ ಸಹೋದರರು, ಬಂಧುಗಳಂತೆ ಚೆನ್ನಾಗಿ ನೋಡಿಕೊಳ್ಳಬೇಕು. ಅಧಿಕಾರಿಗಳು ತಿಂಡಿ-ಊಟ ಮಾಡಿ, ರುಚಿ ಪರೀಕ್ಷೆ ಮಾಡಬೇಕು.

ಮುಂದಿನ ಸಭೆ ಸಮಯದಲ್ಲಿ ಕೇರ್‌ ಸೆಂಟರ್‌ಗಳಿಗೆ ಭೇಟಿ ನೀಡಿ ಊಟ ಮಾಡುತ್ತೇನೆ. ಗುಣಮಟ್ಟದಲ್ಲಿ ವ್ಯತ್ಯಾಸ ಇದ್ದರೆ ಸಂಬಂಧಿತ ಅಧಿಕಾರಿಗಳನ್ನೇ ಹೊಣೆಗಾರರನ್ನಾಗಿಸಲಾಗುವುದು. ಇನ್ನು ಮುಂದೆ ಗ್ರಾಮೀಣ ಪ್ರದೇಶ ಒಳಗೊಂಡಂತೆ ಎಲ್ಲ ಕಡೆಯ ಸೋಂಕಿತರನ್ನ ಕೇರ್‌ ಸೆಂಟರ್‌ ಗಳಿಗೆ ಕರೆ ತರದ ಅಧಿಕಾರಿಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಎಚ್ಚರಿಸಿದರು. ದಾವಣಗೆರೆಯ ಕೆಲ ಪ್ರತಿಷ್ಠಿತ ಬಡಾವಣೆಯಲ್ಲಿರುವರು ಕೇರ್‌ ಸೆಂಟರ್‌ ಗಳಿಗೆ ಬರಲು ಹಿಂದೇಟು ಹಾಕುತ್ತಾರೆ.

ಕೇರ್‌ ಸೆಂಟರ್‌ಗಳಿಗೆ ಕರೆದೊಯ್ಯಲು ಪೊಲೀಸ್‌ ಜೊತೆ ತೆರಳಿದ ಸಂದರ್ಭದಲ್ಲಿ ವ್ಯತಿರಿಕ್ತ ಘಟನೆಗಳು ಸಹ ನಡೆದಿವೆ. ಹಾಗಾಗಿ ಬೆಂಗಳೂರು ಮಾದರಿಯಲ್ಲಿ ಖಾಸಗಿ ಆಸ್ಪತ್ರೆ ಮತ್ತು ಹೋಟೆಲ್‌, ಲಾಡ್ಜ್ ಗಳೊಂದಿಗೆ ಒಡಂಬಡಿಕೆ ಮಾಡಿಕೊಂಡು ಆಸ್ಪತ್ರೆಯಲ್ಲಿ ದಾಖಲು ತೋರಿಸಿ, ಲಾಡ್ಜ್, ಹೋಟೆಲ್‌ಗ‌ಳಲ್ಲಿ ಚಿಕಿತ್ಸೆ ನೀಡುವ ವ್ಯವಸ್ಥೆ ಮಾಡಲು ಮತ್ತು ಸಂಬಂಧಿತರೇ ಹಣ ಪಾವತಿಗೆ ಅವಕಾಶ ಮಾಡಿಕೊಡಬೇಕು ಎಂದು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಮನವಿ ಮಾಡಿದರು. ಇದಕ್ಕೆ ಸಭೆ ಹಸಿರು ನಿಶಾನೆ ತೋರಿತು.

ಟಾಪ್ ನ್ಯೂಸ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾಣೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

randeep surjewala

Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-eewq-ewq

Yadgir; ಮೇ.1 ರಂದು ಕಾಂಗ್ರೆಸ್ ನಾಯಕರ ಸಮಾಗಮ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.