ನೇತಾಜಿ ಜೀವನ ಸಂದೇಶ ಅನುಕರಣೀಯ

ಮಕ್ಕಳಿಗೆ ಸ್ವಾತಂತ್ರ್ಯ ಹೋರಾಟಗಾರರ ಆದರ್ಶ ತಿಳಿಸಿ

Team Udayavani, Jan 25, 2021, 4:33 PM IST

25-14

ದಾವಣಗೆರೆ: ಇಂದಿನ ದೇಶದ ಪರಿಸ್ಥಿತಿಯಲ್ಲಿ ನೇತಾಜಿ ಅವರಂತಹ ಬಿಸಿರಕ್ತದ ಯುವಕರು, ಸ್ವಾಮಿ ವಿವೇಕಾನಂದರಂತಹ ಸ್ಫೂರ್ತಿ ಕೊಡುವಂತಹ ಮಾರ್ಗದರ್ಶಕರು ಬೇಕಾಗಿದೆ ಎಂದು ಆರ್‌ಎಸ್‌ಎಸ್‌ನ ಹಿರಿಯ ಸ್ವಯಂ ಸೇವಕ ಕೆ.ಬಿ. ಶಂಕರನಾರಾಯಣ ಆಶಿಸಿದರು.
ಜಯದೇವ ವೃತ್ತದಲ್ಲಿ ಯುವ ಬ್ರಿಗೇಡ್‌ ವಿವಿಧ ಸಂಘ ಸಂಸ್ಥೆಗಳ ಸಹಯೋಗದಲ್ಲಿ ಆಯೋಜಿಸಿದ ನೇತಾಜಿ ಸುಭಾಶ್ಚಂದ್ರ ಬೋಸ್‌ ಅವರ 125ನೇ ವರ್ಷದ ಜನ್ಮದಿನಾಚರಣೆ ಕಾರ್ಯಕ್ರಮದ ಅಂಗವಾಗಿ ಆಯೋಜಿಸಿದ ಮ್ಯಾರಥಾನ್‌ನಲ್ಲಿ
ಭಾಗವಹಿಸಿ ಅವರು ಮಾತನಾಡಿದರು.

ಭಾರತ ಎಂದರೆ ಭವಿಷ್ಯ ಇಲ್ಲದ ದೇಶ ಎಂದು ಇಡೀ ಜಗತ್ತಿನ ಜನ ತಿಳಿದುಕೊಂಡಿದ್ದರು. ಇತ್ತೀಚಿನ ದಿನಗಳಲ್ಲಿ ನೋಡಿದಾಗ ಇಡೀ ಜಗತ್ತಿನಲ್ಲಿಯೇ ಭಾರತ ಅಗ್ರಗಣ್ಯ ರಾಷ್ಟ್ರ ಆಗುತ್ತಾ ಇದೆ. ಇಡೀ ಜಗತ್ತಿಗೇ ಗುರುವಿನ ಸ್ಥಾನ ಬರುತ್ತಾ ಇದೆ. ಇದು ನಮ್ಮೆಲ್ಲರ ಸೌಭಾಗ್ಯ ಎಂದರು.

ಸ್ವಾರ್ಥ ರಾಜಕಾರಣಿಗಳು ಸರ್ದಾರ್‌ ವಲ್ಲಭಬಾಯಿ ಪಾಟೀಲ್‌ರಂತಹ ಉಕ್ಕಿನ ಮನುಷ್ಯ ಅವರನ್ನೂ ಹಿಂದೆ ಹಾಕಿದರು. ನಮ್ಮ ದೇಶ ಮುಂದೆ ಬರಬೇಕೆಂದರೆಯುವ ಜನತೆ, ಬಿಸಿ ರಕ್ತದ ಯುವಕರು ಮುಂದೆ ಬರಬೇಕಾಗಿದೆ. ಸ್ವಾಮಿ ವಿವೇಕಾನಂದರು ತಿಳಿಸಿದಂತೆ ಸಮಾಜಕ್ಕೆ ತ್ಯಾಗ
ಮಾಡುವಂತಹ ಎಲ್ಲದಕ್ಕೂ ಸಿದ್ಧವಾಗಿರುವಂತಹ ನೂರು ಜನ ಯುವಕರು ಸಿಕ್ಕರೆ ಸಾಕು ಇಡೀ ದೇಶದ ಚಿತ್ರಣ ಬದಲಾಯಿಸುವೆ ಎಂದಿದ್ದರು. ಅದರಂತೆ ಯುವಜನಾಂಗ ಮುಂದಿನ ದಿನಗಳಲ್ಲಿ ದೇಶಕ್ಕಾಗಿ ಬಲಿದಾನ ಕೊಡುವಂತಹ ತ್ಯಾಗ ಮಾಡುವಂತಹ ಧೀರರಾಗಬೇಕು. ನಿಮ್ಮಿಂದ ಇಡೀ ಜಗತ್ತಿಗೇ ಭಾರತದ ಪತಾಕೆ ಹಾರಿಸುವಂತಾಗಬೇಕು ಎಂದು ತಿಳಿಸಿದರು.
ರಾಮಕೃಷ್ಣ ಮಿಷನ್‌ನ ತ್ಯಾಗೀಶ್ವರಾನಂದ ಮಹಾರಾಜ್‌ ಮಾತನಾಡಿ, ಸುಭಾಶ್ಚಂದ್ರಬೋಸ್‌ ವಿದೇಶದಲ್ಲಿ ಪದವಿ ಪಡೆದಿದ್ದು, ಭಾರತಕ್ಕೆ ಬಂದು
ಬ್ರಿಟೀಷರ ಕೈಕೆಳಗೆ ಕೆಲಸ ಮಾಡದೆ ದೇಶಕ್ಕೆ ಸ್ವಾತಂತ್ರ್ಯ ತರಲು 1942ರ ಚಳವಳಿಯಲ್ಲಿ ಮುಂಚೂಣಿಯಲ್ಲಿದ್ದು ಯುವಕರನ್ನು ಪ್ರೇರೇಪಿಸಿದರು ಎಂದರು.

ಮೇಯರ್‌ ಬಿ.ಜಿ. ಅಜಯಕುಮಾರ, ಸದಸ್ಯರಾದ ಸೋಗಿ ಶಾಂತಕುಮಾರ, ಎಚ್‌.ಸಿ.ಜಯಮ್ಮ, ಶಿವನಗೌಡ ಪಾಟೀಲ್‌, ಮಾಜಿ ಸೈನಿಕರಾದ ಮಹೇಂದ್ರಕರ್‌, ಸತ್ಯಪ್ರಕಾಶ, ಅನಿಲ್‌, ಸತ್ಯನಾರಾಯಣ, ಯುವ ಬ್ರಿಗೇಡ್‌ನ‌ ಪವನ್‌ ಪ್ರೇರಣ, ಗಜೇಂದ್ರ, ಸತೀಶ, ವಿನಾಯಕ, ಮಂಜುನಾಥ, ಕಾರ್ತಿಕ್‌ ಮೋದಿ, ಚಂದ್ರು, ಪ್ರಶಾಂತ್‌, ಲೈಫ್‌ಲೈನ್‌ ಸಂಸ್ಥೆಯ ಕಾರ್ಯದರ್ಶಿ ಅನಿಲ್‌ ಬಾರಂಗಳ್‌, ಎಂ.ಜಿ. ಶ್ರೀಕಾಂತ್‌, ಪೃಥ್ವಿರಾಜ ಬಾದಾಮಿ, ಮಾಧವ ಪದಕಿ, ಗೋಪಾಲ ಕೃಷ್ಣ, ನಟರಾಜ, ರಂಜಿತ್‌, ಮಾಧವಿ, ಉಪನ್ಯಾಸಕ ಕೊಟ್ರೇಶ, ಡಾ| ಚಂದ್ರಶೇಖರ ಸುಂಕದ ಇತರರು ಇದ್ದರು.

ಗುಂಡಿ ಮಹದೇವಪ್ಪ ವೃತ್ತದಿಂದ ಪ್ರಾರಂಭವಾದ ಮ್ಯಾರಥಾನ್‌ ವಿದ್ಯಾರ್ಥಿಭವನ, ಅಂಬೇಡ್ಕರ್‌ ಸರ್ಕಲ್‌, ಹಳೇ ಕೋರ್ಟ್‌ ರಸ್ತೆ, ಮಹಾನಗರ ಪಾಲಿಕೆ ಮುಂಭಾಗ, ಗಾಂಧಿ  ಸರ್ಕಲ್‌ ಮೂಲಕ ಜಯದೇವ ವೃತ್ತದಲ್ಲಿ ಕೊನೆಗೊಂಡಿತು.

ಓದಿ: ಬಣ್ಣಾರಿ ಕಾರ್ಖಾನೆ-ಲಾರಿ ಮಾಲಿಕರ ಸಂಘರ್ಷ ಅಂತ್ಯ

ಟಾಪ್ ನ್ಯೂಸ್

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ,

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ

bp harish

Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ

Lok Sabha Election: ಕಾಂಗ್ರೆಸ್‌ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ

Lok Sabha Election: ಕಾಂಗ್ರೆಸ್‌ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ

1-wqeqwe

Davanagere: ಮತದಾನ ಜಾಗೃತಿ ಲಾಂಛನದಲ್ಲಿ ಅಪರೂಪದ ಪ್ರಾಣಿ ಚಿತ್ರ ಬಳಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.