ಒಳಮೀಸಲಿಗಾಗಿ ಪಾದಯಾತ್ರೆ

ಶೋಷಿತರಿಗೆ ನ್ಯಾಯ ಕಲ್ಪಿಸಲು ಈ ನಿರ್ಧಾರ: ಷಡಕ್ಷರಮುನಿ ದೇಶಿಕೇಂದ್ರ ಸ್ವಾಮೀಜಿ

Team Udayavani, Feb 19, 2021, 4:07 PM IST

19-15

ಹರಿಹರ: ನ್ಯಾಯಮೂರ್ತಿ ಸದಾಶಿವ ಆಯೋಗದ ವರದಿಯಂತೆ ಪರಿಶಿಷ್ಟ ಜಾತಿಗಳಲ್ಲಿ ಮಾದಿಗ ಮತ್ತಿತರೆ ಸಮುದಾಯಗಳಿಗೆ ಒಳಮೀಸಲಾತಿ ನೀಡುವಂತೆ ಆಗ್ರಹಿಸಿ ಮಾ. 25 ರಂದು ಹರಿಹರದಿಂದ ರಾಜಧಾನಿಗೆ ಪಾದಯಾತ್ರೆ ಕೈಗೊಳ್ಳಲು ನಿರ್ಧರಿಸಿದ್ದು, ಏ. 21 ರಂದು ಬೆಂಗಳೂರಿನ
ಅರಮನೆ ಮೈದಾನದಲ್ಲಿ ಸಮಾರೋಪ ನಡೆಯಲಿದೆ ಎಂದು ಹಿರಿಯೂರು ಕೋಡಿಹಳ್ಳಿ ಆದಿಜಾಂಬವ ಮಠದ ಶ್ರೀ ಷಡಕ್ಷರಮುನಿ ದೇಶೀಕೇಂದ್ರ ಸ್ವಾಮೀಜಿ ಘೋಷಿಸಿದ್ದಾರೆ.

ನಗರ ಹೊರವಲಯದ ಪ್ರೊ| ಬಿ. ಕೃಷ್ಣಪ್ಪ ಸಾಂಸ್ಕೃತಿಕ ಭವನದಲ್ಲಿ ಅಶ್ಪೃಶ್ಯ ಸಮುದಾಯಗಳ ಮಠಾಧಿಧೀಶರ ಒಕ್ಕೂಟದಿಂದ ಆಯೋಜಿಸಿದ್ದ ಪೂರ್ವಭಾವಿ ಸಭೆಯಲ್ಲಿ ಶ್ರೀಗಳು ಮಾತನಾಡಿದರು. ಒಳಮೀಸಲಾತಿ ಅಗತ್ಯವಿರುವ ಎಲ್ಲಾ ಅಸ್ಪಶ್ಯ ಸಮುದಾಯಗಳ ಮಠಾಧಿಧೀಶರು ಪಾದಯಾತ್ರೆಯಲ್ಲಿ ಭಾಗವಹಿಸಲಿದ್ದಾರೆ ಎಂದರು.

ಶೋಷಿತರಿಗೆ ನ್ಯಾಯ ಕಲ್ಪಿಸಲು ತಳ ಸಮುದಾಯದ ಎಲ್ಲಾ ಮಠಾಧಿಧೀಶರು ಹಾಗೂ ಮುಖಂಡರು, ಹಿರಿಯರು ನಿಶ್ಚಯ ಮಾಡಿದ್ದೇವೆ. ಪಾದಯಾತ್ರೆ ನಂತರವೂ ಸರ್ಕಾರ ನ್ಯಾಯ ಒದಗಿಸದಿದ್ದರೆ ಮುಂದೆ ಉಗ್ರ ಸ್ವರೂಪದ ಹೋರಾಟ ಹಮ್ಮಿಕೊಳ್ಳಲಾಗುವುದು. ಏನೇ ವ್ಯತ್ಯಾಸವಾದರೂ ಸರಕಾರವೇ ಹೊಣೆ ಹೊರಬೇಕಾಗುತ್ತದೆ ಎಂದು ಎಚ್ಚರಿಸಿದರು.

ಐಮಂಗಲದ ಶ್ರೀ ಮಹಾ ಶಿವಶರಣ ಹರಳಯ್ಯ ಗುರುಪೀಠದ ಶ್ರೀ ಬಸವ ಹರಳಯ್ಯ ಸ್ವಾಮೀಜಿ ಮಾತನಾಡಿ, ಎರಡು ದಶಕಗಳಿಂದ
ಒಳಮೀಸಲಾತಿಗಾಗಿ ಹೋರಾಟ ಮಾಡುತ್ತಾ ಬರಲಾಗಿದೆ. ಆದರೆ ಆಡಳಿತದಲ್ಲಿರುವವರು ಮೂಗಿಗೆ ತುಪ್ಪ ಹಚ್ಚುತ್ತಾ ಬಂದಿದ್ದಾರೆ ಎಂದು
ದೂರಿದರು.

ಕಲಘಟಗಿ ಬೀರವಳ್ಳಿ ಗುರುದೇವ ತಪೋವನದ ಗುರುಮಾತೆ ನಂದಾತಾಯಿ ಮಾತನಾಡಿ, ಈ ಪಾದಯಾತ್ರೆ ಅಂತಿಮ ಹೋರಾಟವಾಗಬೇಕು.
ಶಾಂತಿಯಿಂದ ನ್ಯಾಯ ಸಿಗದಿದ್ದರೆ ಕ್ರಾಂತಿಯ ಮಾರ್ಗವನ್ನೂ ಅನುಸರಿಸಬೇಕಾಗುತ್ತದೆ ಎಂದರು.

ಮುಖಂಡ ಟಿ.ಡಿ. ರಾಜಗಿರಿ ಮಾತನಾಡಿ, ತಳ ಸಮುದಾಯದ ಕೆಲ ನಾಯಕರು ಆಡಳಿತಗಾರರ ಭಟ್ಟಂಗಿಗಳಾಗಿರುವುದರಿಂದ ಕೈಗೆ ಬಂದ ತುತ್ತು ಬಾಯಿಗೆ ಬಾರದಂತಾಗಿದೆ. ತಳ ಸಮುದಾಯದ ಜನರು ಜಾಗೃತರಾಗಿದ್ದರೆ ಇಂತಹ ದುಸ್ಥಿತಿ ಬರುತ್ತಿರಲಿಲ್ಲ. ಶ್ರೀಗಳ ನೇತೃತ್ವದಲ್ಲಿ ಆರಂಭವಾಗುವ ಪಾದಯಾತ್ರೆ ಯಶಸ್ವಿಗೊಳಿಸುವ ಜವಾಬ್ದಾರಿ ಎಲ್ಲರ ಮೇಲಿದೆ ಎಂದು ಹೇಳಿದರು.

ವಿವಿಧ ತಳ ಸಮುದಾಯಗಳ ಮುಖಂಡರಾದ ಮುತ್ತಣ್ಣ ಬೆಣ್ಣೂರ್‌, ಸಂತೋಷ್‌ ಸವಣೂರು, ಚನ್ನಗಿರಿಯ ಎಂ.ಕೆ. ನಾಗಪ್ಪ, ತಾಪಂ ಅಧ್ಯಕ್ಷೆ
ಶ್ರೀದೇವಿ ಮಂಜಪ್ಪ, ದಸಂಸ ಮುಖಂಡರಾದ ಎಚ್‌. ಮಲ್ಲೇಶ್‌, ಪಿ.ಜೆ. ಮಹಾಂತೇಶ್‌, ನಗರಸಭೆ ಮಾಜಿ ಅಧ್ಯಕ್ಷ ಕೆ. ಮರಿದೇವ, ಎಲ್‌.ಬಿ. ಹನುಮಂತಪ್ಪ, ಸುಭಾಷ್‌ಚಂದ್ರ ಬೋಸ್‌, ಎಚ್‌. ನಿಜಗುಣ, ಎಲ್‌. ನಿರಂಜನಮೂರ್ತಿ, ಎ.ಕೆ. ಶಿವರಾಮ್‌, ಡಿ. ಹನುಮಂತಪ್ಪ, ಆರ್‌. ಮಂಜಪ್ಪ, ಕೆ. ಜೈಮುನಿ, ವಿಶ್ವನಾಥ್‌ ಮೈಲಾಳ್‌ ಇತರರು ಇದ್ದರು.

ಓದಿ : ಸರ್ಕಾರಿ  ಶಾಲೆಗಳಲ್ಲಿ ಮೂಲಸೌಕರ್ಯ: ಸಮಗ್ರ ವರದಿ ಕೇಳಿದ ಹೈಕೋರ್ಟ್‌

ಟಾಪ್ ನ್ಯೂಸ್

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.