ರಾಜ್ಯ ಸರ್ಕಾರದಿಂದ ಸಾರಿಗೆ ಕಾರ್ಮಿಕರಿಗೆ ಅನ್ಯಾಯ


Team Udayavani, Apr 14, 2021, 5:27 PM IST

14-11

ಹರಿಹರ: ವಿವಿಧ ಬೇಡಿಕೆಗಳ ಈಡೇರಿಕೆಗೆ ಸಾರಿಗೆ ನೌಕರರು ನಡೆಸುತ್ತಿರುವ ಮುಷ್ಕರ ಸೋಮವಾರ ಆರು ದಿನ ಪೂರೈಸಿದ್ದು, ಸೋಮವಾರ ನಗರದ ಕೆಎಸ್‌ಆರ್‌ಟಿಸಿ ಡಿಪೋ ಹಾಗೂ ಮಿನಿ ವಿಧಾನಸೌಧದ ಎದುರು ನೌಕರರ ಕುಟುಂಬಸ್ಥರು ತಟ್ಟೆ-ಲೋಟ ಬಡಿಯುವ ಮೂಲಕ ವಿನೂತನವಾಗಿ ಪ್ರತಿಭಟಿಸಿದರು.

ಮಿನಿ ವಿಧಾನಸೌಧದ ಬಳಿ ಬೆಳಿಗ್ಗೆ 11 ಗಂಟೆಗೆ ಜಮಾಯಿಸಿದ ಚಾಲಕ-ನಿರ್ವಾಹಕರ ಕುಟುಂಬದ ಸದಸ್ಯರು ತಾಲೂಕು ಕಚೇರಿ ಮುಂದೆ ಕೆಲ ಹೊತ್ತು ತಟ್ಟೆ-ಲೋಟ ಬಡಿದು ಪ್ರತಿಭಟಿಸಿದರು. ನಂತರ ತಹಶೀಲ್ದಾರ್‌ ರಾಮಚಂದ್ರಪ್ಪ ಅವರಿಗೆ ಮನವಿ ಸಲ್ಲಿಸಿದರು. ಈ ವೇಳೆ ಮಾತನಾಡಿದ ಶೀಲಾ ಎಂ., ಕಳೆದ ಡಿಸೆಂಬರ್ ‌ನಲ್ಲಿ ಸಾರಿಗೆ ನೌಕರರನ್ನು ಸರ್ಕಾರಿ ನೌಕರರೆಂದು ಘೋಷಿಸುವ ಬೇಡಿಕೆ ಹೊರತುಪಡಿಸಿ ಆರನೇ ವೇತನ ಆಯೋಗದ ಶಿಫಾರಸಿನಂತೆ ವೇತನ ನಿಗದಿ  ಸೇರಿದಂತೆ ಇತರೆ ಎಂಟು ಪ್ರಮುಖ ಬೇಡಿಕೆಗಳನ್ನು ಮೂರು ತಿಂಗಳಲ್ಲಿ ಈಡೇರಿಸುವುದಾಗಿ ಸರ್ಕಾರ ಭರವಸೆ ನೀಡಿತ್ತು. ಈಗ ವೇತನ ಹೆಚ್ಚಳ ಸಾಧ್ಯವಿಲ್ಲ ಎನ್ನುವ ಮೂಲಕ ಬಡ ಕಾರ್ಮಿಕರಿಗೆ ಮೋಸ ಮಾಡಿದೆ ಎಂದು ಆರೋಪಿಸಿದರು.

ಕಾವ್ಯ ಮಾತನಾಡಿ, ಅಧಿಕಾರಿಗಳು ನಮ್ಮ ಮನೆಗೆ ಬಂದು ಹೆದರಿಸಿ ಬೆದರಿಸಿ ಕೆಲಸಕ್ಕೆ ಬರುವಂತೆ ಒತ್ತಾಯಿಸುತ್ತಿದ್ದಾರೆ. ನ್ಯಾಯಯುತ ಬೇಡಿಕೆಗೆ ಮುಷ್ಕರ ನಡೆಸುತ್ತಿರುವವರನ್ನು ಹತ್ತಿಕ್ಕಲು ವರ್ಗಾವಣೆ ಮಾಡುವುದು, ಕೆಲಸದಿಂದ ವಜಾಗೊಳಿಸುವಂತಹ ಕ್ರಮ ಕೈಗೊಂಡು ಸರ್ಕಾರ ಸೇಡು ತೀರಿಸಿಕೊಳ್ಳುವ ಕೆಲಸ ಮಾಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಇಂದಿರಾ ಮಾತನಾಡಿ, ಆರು ದಿನಗಳ ಮುಷ್ಕರ ಯಶಸ್ವಿಯಾಗಿದೆ. ಅಲ್ಲೊಂದು, ಇಲ್ಲೊಂದು ಬಸ್‌ ಸಂಚರಿಸುತ್ತಿದೆ ಎಂದು ಎದೆಗುಂದುವುದು ಬೇಡ. ನಮ್ಮ ನೌಕರರು ಯಾರೂ ಬಸ್‌ ಓಡಿಸುತ್ತಿಲ್ಲ. ಖಾಸಗಿ ಚಾಲಕರನ್ನು ಕರೆದುಕೊಂಡು ಬಂದಿದ್ದಾರೆ.

ಕೆಲಸ ಮಾಡಲು ಆಗದಂತಹ ಅಸಹಾಯಕರನ್ನು ಹೆದರಿಸಿ ಬೆದರಿಸಿ ಕೆಲಸ ಮಾಡಿಸುತ್ತಿದ್ದಾರೆ. ಮುಷ್ಕರ ಮುರಿಯಲು ಸರ್ಕಾರ ಹಲವು ಪ್ರಯತ್ನ ಮಾಡುತ್ತಿದೆ. ನೌಕರರು ಗೊಂದಲಕ್ಕೆ ಒಳಗಾಗಬಾರದು ಎಂದರು. ಪ್ರತಿಭಾ ಮಾತನಾಡಿ, ಸರ್ಕಾರ ಕೂಡಲೇ ಮಾರ್ಚ್‌ ತಿಂಗಳ ವೇತನ ಬಿಡುಗಡೆ ಮಾಡಬೇಕು. ವಜಾ ಹಾಗೂ ವರ್ಗಾವಣೆ ಆದೇಶಗಳನ್ನು ರದ್ದುಪಡಿಸಬೇಕು. ಇಲ್ಲದಿದ್ದರೆ ನಾವು ಹೋರಾಟ ತೀವ್ರಗೊಳಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ಆಶಾ, ಮಧು, ಬಿಂದು, ಗೀತಾ, ನಾಗರತ್ನ, ಉಮಾರಾಣಿ, ಲಕ್ಷ್ಮೀ, ಅಕ್ಷತಾ ಸೇರಿದಂತೆ ಸಾರಿಗೆ ನೌಕರರ ನೂರಾರು ಕುಟುಂಬಸ್ಥರು ಭಾಗವಹಿಸಿದ್ದರು.

ಟಾಪ್ ನ್ಯೂಸ್

Passenger hiding snakes in pants intercepted at Miami airport

Miami; ವಿಮಾನ ಪ್ರಯಾಣಿಕನ ಪ್ಯಾಂಟ್ ನಲ್ಲಿ ಹಾವುಗಳು! ಮಿಯಾಮಿ ಏರ್ಪೋರ್ಟ್ ನಲ್ಲಿ ಆಗಿದ್ದೇನು?

dandeli

Dandeli: ನಾಲೆಗೆಸೆದ ಮಗುವಿನ ಮೃತದೇಹ ಪತ್ತೆ

IPL 2024; ನಮ್ಮ ಜ್ಞಾನಕ್ಕೆ ಮಾಡಿದ ಅಪಮಾನ..: ವಿರಾಟ್ ವಿರುದ್ಧ ಸಿಟ್ಟಾದ ಸುನೀಲ್ ಗಾವಸ್ಕರ್

IPL 2024; ನಮ್ಮ ಜ್ಞಾನಕ್ಕೆ ಮಾಡಿದ ಅಪಮಾನ..: ವಿರಾಟ್ ವಿರುದ್ಧ ಸಿಟ್ಟಾದ ಸುನೀಲ್ ಗಾವಸ್ಕರ್

3-dandeli

Dandeli: 6 ವರ್ಷದ ಮಗುವನ್ನು ನಾಲಾಕ್ಕೆಸೆದ ತಾಯಿ: ಮುಂದುವರಿದ ಮಗುವಿನ ಶೋಧ ಕಾರ್ಯಾಚರಣೆ

T20 Cricket; ಈ ದಿನಗಳಲ್ಲಿ ಮೈದಾನ ಗಾತ್ರ ಅಪ್ರಸ್ತುತ: ಅಶ್ವಿ‌ನ್‌

T20 Cricket; ಈ ದಿನಗಳಲ್ಲಿ ಮೈದಾನ ಗಾತ್ರ ಅಪ್ರಸ್ತುತ: ಅಶ್ವಿ‌ನ್‌

Terror Attack On IAF Convoy In poonch

Poonch; ವಾಯುಸೇನೆ ವಾಹನದ ಮೇಲೆ ಉಗ್ರ ದಾಳಿ; ಓರ್ವ ಹುತಾತ್ಮ, ನಾಲ್ವರಿಗೆ ಗಾಯ

2-vitla

Vitla: ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಕಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dingaleshwara (2)

Prahlad Joshi ವಿರುದ್ದ ರಣಕಹಳೆ : ದಿಂಗಾಲೇಶ್ವರ ಶ್ರೀ ವಿರುದ್ದ ಎಫ್ ಐಆರ್ ದಾಖಲು

Why Modi doesn’t talk about ladies now: Priyanka Gandhi

Davanagere; ಮೋದಿ ಯಾಕೆ ಬಲಾತ್ಕಾರಕ್ಕೊಳಗಾದ ಮಹಿಳೆಯರ ಬಗ್ಗೆ ಮಾತನಾಡಲ್ಲ: ಪ್ರಿಯಾಂಕಾ ಗಾಂಧಿ

1-wwqewqe

BJP ಕುರುಬ ಸಮುದಾಯಕ್ಕೆ ಒಂದೂ ಟಿಕೆಟ್ ಕೊಟ್ಟಿಲ್ಲ: ಸಿಎಂ ಸಿದ್ದರಾಮಯ್ಯ ಕಿಡಿ

Lok Sabha Election: ಗೆಲುವು ಸಾಧಿಸಿ ಮೋದಿ ಕೈ ಬಲಪಡಿಸುವೆ: ಗಾಯತ್ರಿ ಸಿದ್ದೇಶ್ವರ

Lok Sabha Election: ಗೆಲುವು ಸಾಧಿಸಿ ಮೋದಿ ಕೈ ಬಲಪಡಿಸುವೆ: ಗಾಯತ್ರಿ ಸಿದ್ದೇಶ್ವರ

ಗಾಯಿತ್ರಿ ಸಿದ್ದೇಶ್ವರ ಪರ ಯದುವೀರ್ ಒಡೆಯರ್ ರೋಡ್ ಶೋ

Davanagere; ಗಾಯಿತ್ರಿ ಸಿದ್ದೇಶ್ವರ ಪರ ಯದುವೀರ್ ಒಡೆಯರ್ ರೋಡ್ ಶೋ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Passenger hiding snakes in pants intercepted at Miami airport

Miami; ವಿಮಾನ ಪ್ರಯಾಣಿಕನ ಪ್ಯಾಂಟ್ ನಲ್ಲಿ ಹಾವುಗಳು! ಮಿಯಾಮಿ ಏರ್ಪೋರ್ಟ್ ನಲ್ಲಿ ಆಗಿದ್ದೇನು?

dandeli

Dandeli: ನಾಲೆಗೆಸೆದ ಮಗುವಿನ ಮೃತದೇಹ ಪತ್ತೆ

IPL 2024; ನಮ್ಮ ಜ್ಞಾನಕ್ಕೆ ಮಾಡಿದ ಅಪಮಾನ..: ವಿರಾಟ್ ವಿರುದ್ಧ ಸಿಟ್ಟಾದ ಸುನೀಲ್ ಗಾವಸ್ಕರ್

IPL 2024; ನಮ್ಮ ಜ್ಞಾನಕ್ಕೆ ಮಾಡಿದ ಅಪಮಾನ..: ವಿರಾಟ್ ವಿರುದ್ಧ ಸಿಟ್ಟಾದ ಸುನೀಲ್ ಗಾವಸ್ಕರ್

3-dandeli

Dandeli: 6 ವರ್ಷದ ಮಗುವನ್ನು ನಾಲಾಕ್ಕೆಸೆದ ತಾಯಿ: ಮುಂದುವರಿದ ಮಗುವಿನ ಶೋಧ ಕಾರ್ಯಾಚರಣೆ

T20 Cricket; ಈ ದಿನಗಳಲ್ಲಿ ಮೈದಾನ ಗಾತ್ರ ಅಪ್ರಸ್ತುತ: ಅಶ್ವಿ‌ನ್‌

T20 Cricket; ಈ ದಿನಗಳಲ್ಲಿ ಮೈದಾನ ಗಾತ್ರ ಅಪ್ರಸ್ತುತ: ಅಶ್ವಿ‌ನ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.