ನಿಯಮ ಉಲ್ಲಂಘನೆಗೆ ದಂಡದ ಬಿಸಿ


Team Udayavani, Apr 20, 2021, 3:09 PM IST

20-7

ದಾವಣಗೆರೆ: ಕೋವಿಡ್‌ ಎರಡನೇ ಅಲೆ ತಡೆಗಟ್ಟುವ ನಿಟ್ಟಿನಲ್ಲಿ ಸೋಮವಾರ ಸಂಜೆ ಜಿಲ್ಲಾಧಿ ಕಾರಿ ಮಹಾಂತೇಶ ಬೀಳಗಿ ನೇತೃತ್ವದ ಅಧಿಕಾರಿಗಳ ತಂಡ ನಗರದ ಗಡಿಯಾರಕಂಬ, ಕಾಳಿಕಾದೇವಿ ರಸ್ತೆ ಸೇರಿದಂತೆ ವಿವಿಧ ರಸ್ತೆಗಳಲ್ಲಿ ಸಂಚರಿಸಿತು. ಮಾಸ್ಕ್ ಧರಿಸದವರಿಗೆ ಹಾಗೂ ಸಾಮಾಜಿಕ ಅಂತರ ಕಾಯ್ದುಕೊಳ್ಳದ ಅಂಗಡಿಗಳ ಮೇಲೆ ದಂಡ ಹಾಕುವ ಮೂಲಕ ಚುರುಕು ಮುಟ್ಟಿಸುವುದರ ಜೊತೆಗೆ ಕೊರೊನಾ ಸೋಂಕಿನ ಕುರಿತು ಜಾಗೃತಿ ಮೂಡಿಸಲಾಯಿತು. ನಿಯಮ ಉಲ್ಲಂಘಿಸಿದವರಿಗೆ ದಂಡ ವಿಧಿಸಿ ವ್ಯಾಪಾರ ಪರವಾನಗಿಯನ್ನು ರದ್ದು ಮಾಡುವ ಎಚ್ಚರಿಕೆ ನೀಡಲಾಯಿತು. ಗಡಿಯಾರದ ಕಂಬ ಬಳಿ ಹಾಗೂ ಕಾಳಿಕಾದೇವಿ ರಸ್ತೆ, ವಿಜಯಲಕ್ಷ್ಮೀ ರಸ್ತೆ ಸೇರಿದಂತೆ ಪ್ರಮುಖ ರಸ್ತೆಗಳಲ್ಲಿ ಜನ ಸಂದಣಿ ಕಂಡುಬಂದಿತು.

ಬಟ್ಟೆ ಅಂಗಡಿಗಳು, ಚಿನ್ನಾಭರಣ, ಫ್ಯಾನ್ಸಿ ಅಂಗಡಿಗಳು ಸೇರಿದಂತೆ ವಿವಿಧ ಅಂಗಡಿಗಳು ಗ್ರಾಹಕರಿಂದ ತುಂಬಿ ತುಳುಕುತ್ತಿದ್ದವು. ಯಾವುದೇ ಅಂಗಡಿಗಳಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳದಿರುವುದು ಹಾಗೂ ಕೋವಿಡ್‌ ತಡೆಗಟ್ಟುವ ನಿಟ್ಟಿನಲ್ಲಿ ಅಂಗಡಿಕಾರರು ಯಾವುದೇ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳದಿರುವುದು ಕಂಡು ಬಂದಿತು. ಯಾವುದೇ ಸಾಮಾಜಿಕ ಅಂತರ ಕಾಯ್ದುಕೊಳ್ಳದೆ ವ್ಯಾಪಾರ ವಹಿವಾಟ ನಡೆಸುವುದನ್ನು ಕಂಡು ಅಧಿಕಾರಿಗಳು ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಅಂಗಡಿಯವರು ಹಾಗೂ ಸಾರ್ವಜನಿಕರ ವರ್ತನೆಗಳಿಂದಲೇ ಕೊರೊನಾ ವ್ಯಾಪಕವಾಗಿ ಹಬ್ಬುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಕಾಳಿಕಾದೇವಿ ರಸ್ತೆಯಲ್ಲಿನ ಜವಳಿ ಅಂಗಡಿಗೆ ತೆರಳಿ ಪರಿಶೀಲನೆ ನಡೆಸಿದ ಜಿಲ್ಲಾಧಿ ಕಾರಿಗಳು ಗ್ರಾಹಕರು ಸಾಮಾಜಿಕ ಅಂತರ ಕಾಯ್ದುಕೊಳ್ಳದೆ ಇರುವುದನ್ನು ಕಂಡು ಬೇಸರ ವ್ಯಕ್ತಪಡಿಸಿದರು.

ಎರಡೂ ಅಂಗಡಿಗಳಿಗೆ ತಲಾ 50 ಸಾವಿರ ರೂಪಾಯಿ ದಂಡ ವಿಧಿ ಸಿದರು. ಪರಿಸ್ಥಿತಿಯನ್ನು ನಿಭಾಯಿಸದಿದ್ದರೆ ಅಂಗಡಿಗಳ ಪರವಾನಗಿ ರದ್ದುಪಡಿಸಿ ಮುಚ್ಚಿಸುವುದಾಗಿ ಎಚ್ಚರಿಕೆ ನೀಡಿದರು. ಇನ್ನೊಂದು ಜವಳಿ ಅಂಗಡಿಯಲ್ಲಿಯೂ ಇದೇ ಸ್ಥಿತಿ ಇರುವುದನ್ನು ಕಂಡು, 10 ಸಾವಿರ ರೂಪಾಯಿ ದಂಡ ವಿಧಿ ಸಿದರು. ದಂಡ ಪಾವತಿಸಲು ನಿರಾಕರಿಸಿದ್ದಕ್ಕಾಗಿ ಕರ್ನಾಟಕ ವಿಪತ್ತು ನಿರ್ವಹಣೆ ಕಾಯ್ದೆಯನ್ವಯ ಎಫ್‌ ಐಆರ್‌ ದಾಖಲಿಸುವಂತೆ ಅ ಧಿಕಾರಿಗಳಿಗೆ ಜಿಲ್ಲಾಧಿಕಾರಿ ನಿರ್ದೇಶನ ನೀಡಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಜಿಲ್ಲಾಧಿ  ಕಾರಿ ಮಹಾಂತೇಶ ಬೀಳಗಿ, ಭಾನುವಾರ ತರಕಾರಿ ಮಾರುಕಟ್ಟೆಗೆ ತೆರಳಿ ಮಾಸ್ಕ್ ಕುರಿತು ಜಾಗೃತಿ ಮೂಡಿಸಲಾಯಿತು. ಗಡಿಯಾರಕಂಬ, ಕಾಳಿಕಾದೇವಿ ರಸ್ತೆ ಮುಂತಾದ ಜನನಿಬಿಡ ಸ್ಥಳಗಳಲ್ಲಿ ಸಾರ್ವಜನಿಕರು ಮಾಸ್ಕ್ ಧರಿಸುತ್ತಿಲ್ಲ, ಸಾಮಾಜಿಕ ಅಂತರ ಪಾಲಿಸುತ್ತಿಲ್ಲ ಎಂಬ ದೂರುಗಳು ಕೇಳಿಬಂದ ಕಾರಣ, ಆಕಸ್ಮಿಕ ಭೇಟಿ ನೀಡಿ ಪರಿಶೀಲನೆ ನಡೆಸಿದ್ದೇವೆ. ಸರ್ಕಾರ ಹಾಗೂ ಜಿಲ್ಲಾಡಳಿತ ಕೋವಿಡ್‌ ನಿಯಂತ್ರಣಕ್ಕಾಗಿ ಜಾರಿಗೊಳಿಸಿರುವ ಮಾರ್ಗಸೂಚಿಗಳನ್ನು ಅಣಕಿಸುವ ರೀತಿಯಲ್ಲಿ ಅಂಗಡಿಯವರು ಹಾಗೂ ಸಾರ್ವಜನಿಕರು ವರ್ತಿಸುತ್ತಿರುವುದು ನಿಜಕ್ಕೂ ಬೇಸರದ ಸಂಗತಿಯಾಗಿದೆ. ಈಗಾಗಲೆ ಯಾವುದೇ ಸಭೆ, ಸಮಾರಂಭ, ಧಾರ್ಮಿಕ ಸಮಾರಂಭಗಳ ಆಯೋಜನೆಯನ್ನು ರದ್ದುಪಡಿಸಲಾಗಿದೆ ಎಂದು ತಿಳಿಸಿದರು.

ಜನರು ಮತ್ತು ವ್ಯಾಪಾರಸ್ಥರು ಕಡ್ಡಾಯವಾಗಿ ನಿಯಮ ಪಾಲನೆ ಮಾಡಬೇಕು. ಉಲ್ಲಂಘಿಸಿದವರಿಗೆ ಪ್ರಥಮ ಹಂತವಾಗಿ ದಂಡ ವಿ ಧಿಸಲಾಗಿದೆ ಹಾಗೂ ದಂಡ ಕಟ್ಟದವರ ಅಂಗಡಿಯನ್ನು ಮುಚ್ಚಿಸಿ ಮಾಲೀಕರ ವಿರುದ್ಧ ದೂರು ದಾಖಲು ಮಾಡಲಾಗುವುದು ಎಂದರು. ಸಾಮಾಜಿಕ ಅಂತರ ಕಾಪಾಡದ ಹಾಗೂ ನಿಗ  ಪಡಿಸಿದ ಜನಕ್ಕಿಂತ ಹೆಚ್ಚು ಜನ ಭಾಗವಹಿದ್ದ ಕಾರಣ 2 ಕಲ್ಯಾಣ ಮಂಟಪಗಳಿಗೆ ತಲಾ 10 ಸಾವಿರ ರೂಪಾಯಿ ದಂಡ ವಿಧಿಸಿ ಎಚ್ಚರಿಕೆ ನಿಡಲಾಗಿದೆ. ಮುಂದಿನ ದಿನಗಳಲ್ಲಿ ಮುಂದುವರೆದರೆ ಪರವಾನಗಿಯನ್ನು ರದ್ದು ಪಡಿಸಿ, ಕೇಸ್‌ ದಾಖಲು ಮಾಡಲಾಗುತ್ತದೆ ಎಂದರು.

ಜಿಲ್ಲಾ ರಕ್ಷಣಾಧಿಕಾರಿ ಹನುಮಂತರಾಯ ಮಾತನಾಡಿ, ಕೋವಿಡ್‌ ತಡೆಗೆ ಸಾರ್ವಜನಿಕರು ಸಹಕಾರ ನೀಡಬೇಕು ಮತ್ತು ಸರ್ಕಾರದ ನಿಯಮಗಳನ್ನು ಕಡ್ಡಾಯವಾಗಿ ಪಾಲನೆ ಮಾಡಬೇಕು. ಸಾರ್ವನಿಕರು ಮತ್ತು ವ್ಯಾಪಾರಿಗಳು ನಿಯಮಾವಳಿಗಳನ್ನು ಪಾಲನೆ ಮಾಡಬೇಕು. ಉಲ್ಲಂಘಿಸಿದಲ್ಲಿ ದಂಡ ವಿಧಿಸಲಾಗುವುದು. ಮುಂದಿನ ದಿನಗಳಲ್ಲಿ ಇನ್ನು ಕಠಿಣ ನಿಯಮಗಳನ್ನು ಜಾರಿಗೆ ತರಲಾಗುವುದು ಎಂದರು. ಮಹಾನಗರ ಪಾಲಿಕೆ ಆಯುಕ್ತ ವಿಶ್ವನಾಥ್‌ ಮುದಜ್ಜಿ, ತಹಶೀಲ್ದಾರ್‌ ಬಿ.ಎನ್‌. ಗಿರೀಶ್‌ ಇತರೆ ಅಧಿಕಾರಿಗಳು ಇದ್ದರು.

ಟಾಪ್ ನ್ಯೂಸ್

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.