ಹಿಂದುತ್ವ ಆಧಾರಿತ ಸಂವಿಧಾನ ಜಾರಿಗೆ ಹುನ್ನಾರ


Team Udayavani, Apr 20, 2021, 3:13 PM IST

20-8

ದಾವಣಗೆರೆ: ಸಂವಿಧಾನದ ಬದಲಾವಣೆ, ಹಿಂದುತ್ವ ಆಧಾರಿತ ಸಂವಿಧಾನ ಜಾರಿ ಬಗ್ಗೆ ಮಾತನಾಡುವವರು ನಾಟಕೀಯವಾಗಿ ಅಂಬೇಡ್ಕರ್‌ ಜಯಂತಿ ಆಚರಿಸುತ್ತಿದ್ದಾರೆ ಎಂದು ಸಿಪಿಐ ಜಿಲ್ಲಾ ಕಾರ್ಯದರ್ಶಿ ಎಚ್‌.ಕೆ. ರಾಮಚಂದ್ರಪ್ಪ ಆರೋಪಿದರು. ಸೋಮವಾರ ಜಿಲ್ಲಾ ಸಿಪಿಐ ಕಚೇರಿಯಲ್ಲಿ ನಡೆದ ಅಂಬೇಡ್ಕರ್‌ರವರ 130ನೇ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಜಗತ್ತಿನಲ್ಲೇ ಅತಿ ಶ್ರೇಷ್ಠ ಸಂವಿಧಾನ ಎಂದೇ ಗುರುತಿಸಲ್ಪಡುವ ನಮ್ಮ ಸಂವಿಧಾನ ಸುಡಲು ಯತ್ನಿಸಿದವರು, ಬದಲಾವಣೆ ಮಾಡಿಯೇ ತೀರುತ್ತೇವೆ ಎನ್ನುವಂತಹವರು ಅಂಬೇಡ್ಕರ್‌ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ, ಜಯಂತಿ ಆಚರಿಸುತ್ತಿರುವುದು ಬಹು ದೊಡ್ಡ ದುರಂತ ಎಂದರು.

ಭಾರತ ರತ್ನ, ಸಂವಿಧಾನ ಶಿಲ್ಪಿ ಅಂಬೇಡ್ಕರ್‌ ಬಾಲ್ಯದಲ್ಲೇ ಅನೇಕ ಸಂಕಷ್ಟ, ಅಸ್ಪೃಶ್ಯತೆಯ ನೋವು ಅನುಭವಿಸಿದ ವರು. ಅನೇಕ ಸವಾಲುಗಳ ನಡುವೆಯೂ ಛಲದಿಂದ ಶಿಕ್ಷಣವಂತರಾದವರು. ತಮ್ಮ ಬದುಕನ್ನು ದೇಶ, ಸಾರ್ವಜನಿಕರು ಸಂವಿಧಾನಕ್ಕಾಗಿ ಮೀಸಲಿಡುವ ಮೂಲಕ ಮಹಾನ್‌ ನಾಯಕರಾದವರು ಎಂದು ತಿಳಿಸಿದರು.

ಸ್ವಾತಂತ್ರಕ್ಕಾಗಿ ಹೋರಾಟ ನಡೆಸಿದ 46 ಜನರನ್ನು ನೇಣಿಗೇರಿಸಲು ಮುಂದಾದಾಗ ಅದರ ವಿರುದ್ಧ ನ್ಯಾಯಾಲಯದಲ್ಲಿ ವಕಾಲತ್ತು ವಹಿಸಿ ತಮ್ಮ ಪತ್ನಿಯ ಸಾವಿನ ಸಂದರ್ಭದಲ್ಲೂ ಪ್ರಕರಣ ಖುಲಾಸೆಗೊಳಿಸಿದ ಕೀರ್ತಿ ಅಂಬೇಡ್ಕರರಿಗೆ ಸಲ್ಲುತ್ತದೆ. ಹಾಗಾಗಿಯೇ ಅವರು ಏಷ್ಯಾದಲ್ಲಿಯೇ ಮಹಾ ನ್ಯಾಯವಾದಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದರು. ಅಂಬೇಡ್ಕರ್‌ ರವರು ತಮಗಾದ ಹಿಂಸೆ, ದಬ್ಟಾಳಿಕೆ, ದೌರ್ಜನ್ಯ ಸಹಿಸಿಕೊಂಡು ಅರ್ಥಶಾಸ್ತ್ರ, ರಾಜನೀತಿ ಸೇರಿದಂತೆ ಹತ್ತಾರು ವಿಷಯಗಳಲ್ಲಿ ಪದವಿ ಪಡೆದುಕೊಂಡು ಡಾಕ್ಟರೇಟ್‌ ಪಡೆದರು. ಸ್ವತಂತ್ರ ಭಾರತದ ಕಾರ್ಮಿಕ, ಕಾನೂನು ಸಚಿವರಾಗಿ ಕೆಲಸ ಮಾಡಿದವರು.

ಅನೇಕ ಜನಪರ ಕಾನೂನು ಜಾರಿಗೆ ತಂದರು ಎಂದು ಸ್ಮರಿಸಿದರು. ಕೇಂದ್ರ ಮತ್ತು ರಾಜ್ಯ ಸರ್ಕಾರ ಬಂಡವಾಳಶಾಹಿಗಳಿಗೆ ದಾರಿ ಮಾಡಿಕೊಡುತ್ತಿವೆ. ಸಂವಿಧಾನವನ್ನೇ ಬದಲಾಯಿಸಲು ನೋಡುತ್ತಿರುವುದರ ವಿರುದ್ಧ ನಾವೆಲ್ಲ ಸಿಡಿದೇಳುವ ಅಗತ್ಯವಿದೆ. ಇನ್ನೂ 20-30 ವರ್ಷಗಳಾದರೂ ಸರಿ ಬಂಡವಾಳಶಾಹಿ ಸಮಾಜವನ್ನು ಬುಡ ಸಹಿತ ಕಿತ್ತು ಹಾಕಿ ಸಮ ಸಮಾಜ ನಿರ್ಮಾಣ ಮಾಡಲು ಸಿದ್ಧರಾಗಬೇಕು. ಕೋವಿಡ್‌ ಸೋಂಕು ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದ್ದು, ಸಿಪಿಐನ ಎಲ್ಲಾ ವಿಭಾಗದ ನಾಯಕರುಗಳು ಜನ ಜಾಗೃತಿ ಮೂಡಿಸಿ, ಕೊರೊನಾ ತಡೆಗಟ್ಟಲು ಶ್ರಮಿಸಬೇಕು ಎಂದು ಕರೆ ನೀಡಿದರು.

ಸಿಪಿಐ ಜಿಲ್ಲಾ ಸಹಕಾರ್ಯದರ್ಶಿ ಆನಂದರಾಜ್‌ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಕಾರ್ಯದರ್ಶಿ ಆವರಗೆರೆ ಚಂದ್ರು, ಬ್ಯಾಂಕ್‌ ನೌಕರರ ಸಂಘಟನೆ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕೆ. ರಾಘವೇಂದ್ರ ನಾಯರಿ, ಆವರಗೆರೆ ವಾಸು, ಐರಣಿ ಚಂದ್ರು, ಎಐಟಿಯುಸಿ ತಾಲೂಕು ಅಧ್ಯಕ್ಷ ಡಿ.ಎಸ್‌. ನಾಗರಾಜ್‌, ಆವರಗೆರೆ ಎನ್‌.ಟಿ. ಬಸವರಾಜ್‌, ಟಿ.ಎಸ್‌. ನಾಗರಾಜ್‌, ಎಂ.ಬಿ. ಶಾರದಮ್ಮ, ರುದ್ರಮ್ಮ, ಸರೋಜಮ್ಮ, ವಿಶಾಲಕ್ಷಮ್ಮ ಇತರರು ಇದ್ದರು. ಪಿ. ಷಣ್ಮುಖಸ್ವಾಮಿ ವಂದಿಸಿದರು.

ಟಾಪ್ ನ್ಯೂಸ್

Bantwal: ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ

Bantwal: ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

17=

Mangaluru: ಬೈಕ್‌ಗೆ ಕಾರು ಢಿಕ್ಕಿ: ವಿದ್ಯಾರ್ಥಿ ಸಾವು

Bhatkal ನೀರು ಪೋಲು; ಜಾಲಿ ಪಟ್ಟಣ ಪಂಚಾಯತ್ ನಿರ್ಲಕ್ಷ್ಯ; ಜನರ ಆಕ್ರೋಶ

Bhatkal ನೀರು ಪೋಲು; ಜಾಲಿ ಪಟ್ಟಣ ಪಂಚಾಯತ್ ನಿರ್ಲಕ್ಷ್ಯ; ಜನರ ಆಕ್ರೋಶ

14-

Kasaragodu: ಹಣದ ವಿವಾದ: ಪೆಟ್ರೋಲ್‌ ಸುರಿದು ಮಹಿಳೆಯ ಕೊಲೆಗೆ ಯತ್ನ

13-mulleria

Mulleria: ವ್ಯಕ್ತಿಯ ನಿಗೂಢ ಸಾವು : ತಲೆಗೆ ಗಂಭೀರ ಗಾಯ ಮರಣಕ್ಕೆ ಕಾರಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Davanagare: ಚುನಾವಣಾ ತರಬೇತಿಗೆ ಚಕ್ಕರ್; ಅನುಚಿತ ವರ್ತನೆಗೆ ಶಿಕ್ಷಕ ಅಮಾನತು

Davanagare: ಚುನಾವಣಾ ತರಬೇತಿಗೆ ಚಕ್ಕರ್; ಅನುಚಿತ ವರ್ತನೆಗೆ ಶಿಕ್ಷಕ ಅಮಾನತು

ನಾಮಪತ್ರ ಸಲ್ಲಿಸಿದ ದಾವಣಗೆರೆ ಲೋಕಸಭಾ ಬಿಜೆಪಿ ಅಭ್ಯರ್ಥಿ ಗಾಯಿತ್ರಿ ಸಿದ್ದೇಶ್ವರ

ನಾಮಪತ್ರ ಸಲ್ಲಿಸಿದ ದಾವಣಗೆರೆ ಲೋಕಸಭಾ ಬಿಜೆಪಿ ಅಭ್ಯರ್ಥಿ ಗಾಯಿತ್ರಿ ಸಿದ್ದೇಶ್ವರ

Davanagere: ನಾಮಪತ್ರ ಸಲ್ಲಿಸಿದ ಬಿಜೆಪಿ- ಕಾಂಗ್ರೆಸ್ ಅಭ್ಯರ್ಥಿಗಳು

Davanagere: ನಾಮಪತ್ರ ಸಲ್ಲಿಸಿದ ಬಿಜೆಪಿ- ಕಾಂಗ್ರೆಸ್ ಅಭ್ಯರ್ಥಿಗಳು

Lok Sabha Election: ಜಗಳೂರನ್ನು ಬರಪೀಡಿತ ಪಟ್ಟಿಯಿಂದ ಹೊರ ತರುವೆ: ಗಾಯತ್ರಿ ಸಿದ್ದೇಶ್ವರ

Lok Sabha Election: ಜಗಳೂರನ್ನು ಬರಪೀಡಿತ ಪಟ್ಟಿಯಿಂದ ಹೊರ ತರುವೆ: ಗಾಯತ್ರಿ ಸಿದ್ದೇಶ್ವರ

Davanagere; ಕಾಂಗ್ರೆಸ್ ಸಂಧಾನ ವಿಫಲ; ನಾಮಪತ್ರ ಹಿಂಪಡೆಯಲು ವಿನಯ್ ಕುಮಾರ್ ನಕಾರ

Davanagere; ಕಾಂಗ್ರೆಸ್ ಸಂಧಾನ ವಿಫಲ; ನಾಮಪತ್ರ ಹಿಂಪಡೆಯಲು ವಿನಯ್ ಕುಮಾರ್ ನಕಾರ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Bantwal: ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ

Bantwal: ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

18-

Road Mishap: ಹೈಕಾಡಿಯಲ್ಲಿ ಕಾರು ಅಪಘಾತ: ನಾಲ್ವರಿಗೆ ಗಾಯ

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

17=

Mangaluru: ಬೈಕ್‌ಗೆ ಕಾರು ಢಿಕ್ಕಿ: ವಿದ್ಯಾರ್ಥಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.