ಏಳನೇ ದಿನವೂ ಜಿಲ್ಲೆ ಸಂಪೂರ್ಣ ಸ್ತಬ್ಧ
Team Udayavani, May 5, 2021, 9:31 PM IST
ದಾವಣಗೆರೆ: ಕೊರೊನಾ ನಿಯಂತ್ರಣಕ್ಕಾಗಿ ರಾಜ್ಯ ಸರ್ಕಾರ ಜಾರಿಗೊಳಿಸಿರುವ ಕೊರೊನಾ ಕರ್ಫ್ಯೂ ನಿಮಿತ್ತ ಏಳನೇ ದಿನ ಮಂಗಳವಾರವೂ ಜಿಲ್ಲೆ ಸಂಪೂರ್ಣ ಸ್ತಬ್ಧಗೊಂಡಿತ್ತು. ಅವಶ್ಯ ವಸ್ತುಗಳ ಖರೀದಿಗೆ ಇರುವ ನಿಗದಿತ ಅವಧಿ ಬಳಿಕ ಜನ, ವಾಹನ ಸಂಚಾರ ಬಂದ್ ಆಯಿತು. ಸಂತೆ ಬಂದ್ ಮಾಡಿದ್ದರಿಂದ ಜನರು ಹತ್ತಿರದ ಮಾರುಕಟ್ಟೆಗಳಿಗೆ ಹೋಗದೇ ಹತ್ತಿರದ ಅಂಗಡಿ, ಮನೆ ಬಾಗಿಲಿಗೆ ತಳ್ಳುಗಾಡಿಯಲ್ಲಿ ಬಂದ ತರಕಾರಿ ಖರೀದಿಸಿದರು.
ಸಂಚಾರಕ್ಕೆ ವಿನಾಯಿತಿ ಇರುವ ವ್ಯಕ್ತಿ, ವಾಹನಗಳು ಹಾಗೂ ತುರ್ತು ಕೆಲಸಗಳಿಗಾಗಿ ಹೊರ ಬಂದವರು ಹೊರತುಪಡಿಸಿ ಉಳಿದವರೆಲ್ಲ ಮನೆಯಲ್ಲಿಯೇ ಉಳಿದು ಕರ್ಫ್ಯೂಗೆ ಬೆಂಬಲ ಸೂಚಿಸಿದರು.
ಬೆಳಿಗ್ಗೆಯಿಂದ 11:30ವರೆಗೂ ಬಹುತೇಕ ಕಡೆಗಳಲ್ಲಿ ಜನ, ವಾಹನ ಸಂಚಾರ, ವ್ಯಾಪಾರ ವ್ಯವಹಾರ ಸಹಜಸ್ಥಿತಿಯಲ್ಲಿತ್ತು. ಬಳಿಕ ಪೊಲೀಸರು ಅಂಗಡಿಗಳನ್ನು ಬಂದ್ ಮಾಡಿಸಿ, ಅವಶ್ಯ ವಸ್ತು ಖರೀದಿಗೆ ನಿಗದಿಪಡಿಸಿದ ಅವಧಿ ಮುಗಿದ ಬಳಿಕವೂ ಓಡಾಡುವವರಿಗೆ ದಂಡದ ಬಿಸಿ ಮುಟ್ಟಿಸಿದರು. ಅನಗತ್ಯ ವಾಹನ ಸಂಚಾರ ತಡೆಯಲು ಪೊಲೀಸರು ನಗರದ ವಿವಿಧೆಡೆ ಬ್ಯಾರಿಕೇಡ್ ಹಾಕಿದ್ದರು.
ಈ ಬ್ಯಾರಿಕೇಡ್ಗಳ ಕಾರಣದಿಂದಾಗಿ ತುರ್ತು ಸೇವೆಗಾಗಿ ರಸ್ತೆ ಗಿಳಿದವರು ಸುತ್ತು ಹಾಕಿ ಬೇರೆ ರಸ್ತೆಗಳ ಮೂಲಕ ಸಂಚರಿಸುವಂತಾಯಿತು. ತುರ್ತು ಅಗತ್ಯ ಸೇವೆಗಳಾದ ಆಸ್ಪತ್ರೆ, ಔಷಧ ಅಂಗಡಿ ಹಾಗೂ ಪೆಟ್ರೊಲ್ ಬಂಕ್ಗಳು ಎಂದಿನಂತೆ ತೆರೆದಿದ್ದವು. ಮಹಾನಗರ ವ್ಯಾಪ್ತಿಯಲ್ಲಿ ಸದಾ ಜನದಟ್ಟಣೆಯಿಂದ ಕೂಡಿರುತ್ತಿದ್ದ ಪ್ರದೇಶಗಳೆಲ್ಲವೂ ಜನ, ವಾಹನ ಸಂಚಾರವಿಲ್ಲದೇ ಭಣಗುಟ್ಟಿದವು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!
BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ
Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ
Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ
Panchamasali ಎಂಬ ಕಾರಣಕ್ಕೆ ಯತ್ನಾಳ್ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ