ಲಾಕ್‌ಡೌನ್‌ ಆತಂಕ: ಖರೀದಿಯ ಧಾವಂತ


Team Udayavani, May 9, 2021, 9:49 PM IST

9-17

ದಾವಣಗೆರೆ: ರಾಜ್ಯ ಸರ್ಕಾರ ಸೋಮವಾರದಿಂದ ಕರ್ಫ್ಯೂವನ್ನು ಇನ್ನಷ್ಟು ಬಿಗಿಗೊಳಿಸುವುದಾಗಿ ಹೇಳಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ಜನರು, ಸೋಮವಾರದಿಂದ ಸಂಪೂರ್ಣ ಲಾಕ್‌ಡೌನ್‌ ಆಗಬಹುದೆಂಬ ಆತಂಕದೊಂದಿಗೆ ಶನಿವಾರ ಅವಶ್ಯ ವಸ್ತುಗಳ ಖರೀದಿಗೆ ಮುಗಿಬಿದ್ದಿರುವುದು ಕಂಡು ಬಂತು. ಅವಶ್ಯ ವಸ್ತುಗಳ ಖರೀದಿಗೆ ನಿಗದಿಪಡಿಸಿರುವ ಬೆಳಿಗ್ಗೆ 6ರಿಂದ 10ಗಂಟೆ ವರೆಗಿನ ಅವಧಿಯಲ್ಲಿ ಶನಿವಾರ ಜನರು ಹೆಚ್ಚಿನ ಸಂಖ್ಯೆಯಲ್ಲಿ ಹೊರಬಂದು ದೊಡ್ಡ ಪ್ರಮಾಣದಲ್ಲಿ ಅವಶ್ಯಕ ವಸ್ತು ಖರೀದಿಯ ಧಾವಂತ ತೋರಿದರು.

ಹೀಗಾಗಿ ಬಹುತೇಕ ಎಲ್ಲ ದಿನಸಿ ಅಂಗಡಿಗಳ ಎದುರು ಗ್ರಾಹಕರ ಸಂಖ್ಯೆ ಅಧಿಕವಾಗಿರುವುದು ಗೋಚರಿಸಿತು. ಇನ್ನು ಈಗಾಗಲೇ ಮದುವೆ ದಿನಾಂಕ ನಿಗದಿ ಮಾಡಿಕೊಂಡವರು, ಸಣ್ಣ ವ್ಯಾಪಾರಸ್ಥರು ಹೋಲ್‌ಸೇಲ್‌ ಅಂಗಡಿಗಳಲ್ಲಿ ತಾಸುಗಟ್ಟಲೆ ನಿಂತು ದಿನಸಿ ಸಾಮಗ್ರಿಗಳನ್ನು ಖರೀದಿಸಿದರು. ಖರೀದಿ ಪ್ರಕ್ರಿಯ ಜೋರಾಗಿದ್ದರಿಂದ ಬೆಳಗಿನ ವೇಳೆ ಮಹಾನಗರದ ಬಹುತೇಕ ರಸ್ತೆಗಳು ಜನ, ವಾಹನ ಸಂಚಾರದಿಂದ ತುಂಬಿ ಹೋಗಿದ್ದವು. ಕೆಲವು ಪ್ರದೇಶಗಳಲ್ಲಿ ವಾಹನ ದಟ್ಟಣೆಯುಂಟಾಗಿ ಸುಗಮ ಸಂಚಾರಕ್ಕೂ ಅಡ್ಡಿಯಾಯಿತು. ಎಲ್ಲಿ ನೋಡಿದರೂ ಜನವೋ ಜನ, ಖರೀದಿಯೋ ಖರೀದಿ ಎನ್ನುವಂಥ ವಾತಾವರಣ ನಿರ್ಮಾಣವಾಗಿತ್ತು. ಬಹುತೇಕ ಯಾವ ಅಂಗಡಿಯಲ್ಲಿಯೂ ಅಂತರ ಕಾಯ್ದುಕೊಳ್ಳುವಿಕೆಯ ನಿಯಮ ಪಾಲನೆಯಾಗಿಲ್ಲ. ಇನ್ನು ಲಸಿಕಾ ಕೇಂದ್ರಗಳಲ್ಲಿಯೂ ಲಸಿಕೆ ಪಡೆಯಲು ಬಂದಿದ್ದ ನೂರಾರು ಜನ ಯಾವುದೇ ಅಂತರವಿಲ್ಲದೆ ಗುಂಪು ಗುಂಪಾಗಿ ನಿಂತಿದ್ದರು.

ಅಂಗಡಿ ಬಂದ್‌, ಬೈಕ್‌ ವಶ: ಮದುವೆ ಹಂಗಾಮು ಇದಾಗಿರುವುದರಿಂದ ನಗರದಲ್ಲಿ ಕೆಲವು ಜವಳಿ ವ್ಯಾಪಾರಸ್ಥರು ಮುಂಜಾನೆಯಿಂದಲೇ ಎದುರಿನ ಬಾಗಿಲು ಹಾಕಿ ಒಳಗೆ ವ್ಯಾಪಾರ ಮಾಡುತ್ತಿದ್ದರು. ಇನ್ನು ಕೆಲವರು ಅಂಗಡಿ ಮೇಲಿರುವ ತಮ್ಮ ಮನೆಯಲ್ಲಿ ವ್ಯಾಪಾರ ಮಾಡುತ್ತಿದ್ದರು. ಖಚಿತ ಮಾಹಿತಿ ಮೇರೆಗೆ ಚೌಕಿಪೇಟೆ, ಚಿಗಟೇರಿಗಲ್ಲಿ, ಕಾಯಿಪೇಟೆ, ವಿಜಯಲಕ್ಷ್ಮೀ ರಸ್ತೆ ಸೇರಿದಂತೆ ವಿವಿಧೆಡೆ ಭೇಟಿ ನೀಡಿದ ಪೊಲೀಸರು ಹಾಗೂ ಮಹಾನಗರ ಪಾಲಿಕೆ ಅಧಿಕಾರಿಗಳು ವ್ಯಾಪಾರ ಬಂದ್‌ ಮಾಡಿಸಿದರು.

ಅಂಗಡಿ ಮುಚ್ಚಿಸಿ ವರ್ತಕರಿಗೆ 25 ಸಾವಿರ ರೂ.ಗಳಿಗೂ ಅಧಿಕ ಮೊತ್ತದ ದಂಡದ ಬಿಸಿಯನ್ನೂ ಮುಟ್ಟಿಸಿದರು. ಅವಶ್ಯಕ ವಸ್ತುಗಳ ಖರೀದಿಗೆ ನಿಗದಿಪಡಿಸಿದ ಸಮಯದ ಬಳಿಕ ರಸ್ತೆಯಲ್ಲಿ ಅನಗತ್ಯವಾಗಿ ಬೈಕ್‌ನಲ್ಲಿ ಓಡಾಡುತ್ತಿದ್ದವರ ಬೈಕ್‌ಗಳನ್ನು ನಗರದ ಹದಡಿ ರಸ್ತೆ, ಅರುಣ ವೃತ್ತ, ಜಯದೇವ ವೃತ್ತ , ಐಟಿಐ ಕಾಲೇಜು ರಸ್ತೆ, ಗುಂಡಿ ಸರ್ಕಲ್‌, ಕೊಂಡಜ್ಜಿ ರಸ್ತೆ ಸೇರಿದಂತೆ ಕೆಲವೆಡೆ ಪೊಲೀಸರು ವಶಪಡಿಸಿಕೊಂಡರು. ಅವಶ್ಯಕ ವಸ್ತುಗಳ ಖರೀದಿಯ ಬೆಳಗಿನ ಅವಧಿ ಬಳಿಕ ಅಂಗಡಿ ಮುಂಗಟ್ಟುಗಳು ಬಂದ್‌ ಆದವು. ಜನ, ವಾಹನ ಸಂಚಾರ ಸ್ಥಗಿತಗೊಂಡವು.

ಟಾಪ್ ನ್ಯೂಸ್

BJP ನಿರ್ದೇಶಿಸಿದರೆ ಮಂಡ್ಯದಲ್ಲೂ ಪ್ರಚಾರ: ಸುಮಲತಾ ಅಂಬರೀಷ್‌

BJP ನಿರ್ದೇಶಿಸಿದರೆ ಮಂಡ್ಯದಲ್ಲೂ ಪ್ರಚಾರ: ಸುಮಲತಾ ಅಂಬರೀಷ್‌

ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

Brahmavar ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

1-aaaaaawwq

Bumrah ಎಸೆತಕ್ಕೆ ಸ್ವೀಪ್‌ ಶಾಟ್‌: ಅಶುತೋಷ್‌ ಶರ್ಮ ಫುಲ್‌ ಖುಷ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ

Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯಿತಿ ಸಿದ್ದೇಶ್ವರ

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

BJP ನಿರ್ದೇಶಿಸಿದರೆ ಮಂಡ್ಯದಲ್ಲೂ ಪ್ರಚಾರ: ಸುಮಲತಾ ಅಂಬರೀಷ್‌

BJP ನಿರ್ದೇಶಿಸಿದರೆ ಮಂಡ್ಯದಲ್ಲೂ ಪ್ರಚಾರ: ಸುಮಲತಾ ಅಂಬರೀಷ್‌

1-wqewqewq

Doping: ಶಾಲು ಚೌಧರಿ ದೋಷಮುಕ್ತ

ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

Brahmavar ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

1-aaaaaawwq

Bumrah ಎಸೆತಕ್ಕೆ ಸ್ವೀಪ್‌ ಶಾಟ್‌: ಅಶುತೋಷ್‌ ಶರ್ಮ ಫುಲ್‌ ಖುಷ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.