ಸರಕಾರದ ಯೋಜನೆ ರೈತರಿಗೆ ತಲುಪಿಸಿ: ಪೂರ್ಣಿಮಾ
ತೋಟಗಾರಿಕೆ ಕಚೇರಿ ಉದ್ಘಾಟನಾ ಕಾರ್ಯಕ್ರಮದಲ್ಲಿ ಶಾಸಕಿ ಪೂರ್ಣಿಮಾ ಶ್ರೀನಿವಾಸ್ ಮಾತನಾಡಿದರು.
Team Udayavani, Jan 26, 2021, 3:25 PM IST
ಹಿರಿಯೂರು: ನಗರದ ಟಿಬಿ ವೃತ್ತದಲ್ಲಿ 36 ಲಕ್ಷ ರೂ. ವೆಚ್ಚದಲ್ಲಿ ನೂತನವಾಗಿ ನಿರ್ಮಾಣವಾಗಿರುವ ತೋಟಗಾರಿಕೆ ಇಲಾಖೆ ಕಚೇರಿಯನ್ನು ಶಾಸಕಿ ಪೂರ್ಣಿಮಾ ಶ್ರೀನಿವಾಸ್ ಉದ್ಘಾಟಿಸಿದರು.
ಬಳಿಕ ಮಾತನಾಡಿದ ಅವರು, ರಾಜ್ಯದಲ್ಲಿ ಕೊರೊನಾದಂತಹ ಸಂಕಷ್ಟದ ಸ್ಥಿತಿಯಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪನವರು ರೈತರ ಯೋಜನೆಗಳಿಗೆ ತೊಂದರೆಯಾಗದಂತೆ ತೋಟಗಾರಿಕೆ ಇಲಾಖೆಗೆ ಕಾಲಕಾಲಕ್ಕೆ ಹಣ ಬಿಡುಗಡೆ ಮಾಡಿ ರೈತರ ಸಂಕಷ್ಟಕ್ಕೆ ಪರಿಹಾರ ನೀಡಿದ್ದಾರೆ. ಅಧಿ ಕಾರಿಗಳು ಸರ್ಕಾರದ ಯೋಜನೆಗಳನ್ನು ಸಕಾಲದಲ್ಲಿ ಅನುಷ್ಠಾನಗೊಳಿಸಿ, ರೈತರಿಗೆ ತಲುಪಿಸುವತ್ತ ಕೆಲಸ ಮಾಡಬೇಕು. ತೋಟಗಾರಿಕೆ ಇಲಾಖೆಯ ಅ ಧಿಕಾರಿಗಳ ಬಗ್ಗೆ ರೈತರಿಂದ ಸಾಕಷ್ಟು ದೂರುಗಳು ಕೇಳಿ ಬರುತ್ತಿವೆ. ಅಧಿಕಾರಿಗಳು ರೈತರ ಬಳಿ ಹೋಗಬೇಕು. ಬೆಳೆಗಳಿಗೆ ಸಂಬಂಧಿಸಿದಂತೆ ಮಾಹಿತಿ ನೀಡಬೇಕು. ಅವರ ಅರ್ಜಿಗಳನ್ನು ತಾತ್ಸಾರ ಮಾಡದೆ ಪರಿಶೀಲಿಸಿ ಅಗತ್ಯ ಕ್ರಮ ಕೈಗೊಳ್ಳಬೇಕು. ಜವಾಬ್ದಾರಿಯುತವಾಗಿ ಕೆಲಸ ಮಾಡುವಂತೆ ಸೂಚನೆ ನೀಡಿದರು.
ಜಿಪಂ ಸದಸ್ಯರಾದ ಆರ್ ನಾಗೇಂದ್ರನಾಯ್ಕ ಮಾತನಾಡಿ, ತಾಲೂಕಿನಲ್ಲಿ ತೋಟಗಾರಿಕೆ ಬೆಳೆಗಳು ನೀರಿಲ್ಲದೆ ಅಪಾರ ಪ್ರಮಾಣದಲ್ಲಿ ಹಾನಿಯಾಗಿ ರೈತರು ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದಾರೆ. ಸರ್ಕಾರದಿಂದ ಬೆಳೆ ಪರಿಹಾರ ಹಣ ರೈತರಿಗೆ ತಲುಪಿರುವುದಿಲ್ಲ. ಈ ಬಗ್ಗೆ ಅಧಿಕಾರಿಗಳು ಪರಿಶೀಲನೆ ನಡೆಸಿ ರೈತರಿಗೆ ಬೆಳೆ ಪರಿಹಾರದ ಹಣ ಕೊಡಿಸಿಕೊಡುವಂತೆ ಸೂಚಿಸಿದರು. ಜಿಪಂ ಅಧ್ಯಕ್ಷೆ ಶಶಿಕಲಾ ಸುರೇಶ್ ಬಾಬು, ನಗರಸಭೆ ಅಧ್ಯಕ್ಷೆ ಶಂಶುನ್ನಿಸಾ, ನಗರಸಭೆಯ ಉಪಾಧ್ಯಕ್ಷ ಬಿ.ಎನ್. ಪ್ರಕಾಶ್, ಇಲಾಖೆ ಅಧಿ ಕಾರಿಗಳು, ಸಿಬ್ಬಂದಿ ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮೋದಿ 3ನೇ ಬಾರಿ ಪ್ರಧಾನಿಯಾಗಲು ಸಹಕರಿಸಿ: ಗಾಯತ್ರಿ ಸಿದ್ದೇಶ್ವರ
ಕರ್ತವ್ಯ ಲೋಪ: ಪರೀಕ್ಷಾ ಕೇಂದ್ರದ ಕೊಠಡಿ ಮೇಲ್ವಿಚಾರಕ ರಿಯಾಜ್ ಅಹಮ್ಮದ್ ಅಮಾನತು
Election Campaign: ಮೋದಿಯವರಿಂದ ಮಹಿಳಾ ಶಕ್ತಿಗೆ ಮುನ್ನುಡಿ
Davanagere: ಬಿಜೆಪಿ ಅಸಮಾಧಾನ ತಣಿಸಿದ ಬಿಎಸ್ ವೈ; ರವೀಂದ್ರನಾಥ್ ಗೆ ಚುನಾವಣೆ ಹೊಣೆ
Gayatri Siddeshwar: ಮೋದಿ ಕೈ ಬಲಪಡಿಸಲು ಬಿಜೆಪಿ ಗೆಲ್ಲಿಸಿ; ಗಾಯತ್ರಿ