ಉತ್ತಮ ನಾಯಕನಿಂದ ಸುಭದ್ರ ಆಡಳಿತ
ಯಾವುದೇ ಆಸೆ-ಆಮಿಷಕ್ಕೆ ಒಳಗಾಗದೇ ಮತ ಚಲಾಯಿಸಿ
Team Udayavani, Jan 26, 2021, 3:41 PM IST
ದಾವಣಗೆರೆ: ನಾವು ಬದಲಾಗದೇ ಎದುರಿಗಿರುವವರು ಬದಲಾಗಬೇಕೆಂದು ನಿರೀಕ್ಷಿಸುವುದು ಸರಿಯಲ್ಲ. ಅಂತೆಯೇ ನಾವು ಉತ್ತಮ ನಾಯಕನನ್ನು ಆರಿಸದೇ ಉತ್ತಮ ಆಡಳಿತ ನಿರೀಕ್ಷಿಸಲು ಆಗದು ಎಂದು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಹೇಳಿದರು.
ಜಿಲ್ಲಾಡಳಿತ, ಜಿಪಂ ಹಾಗೂ ಮಹಾನಗರಪಾಲಿಕೆ ವತಿಯಿಂದ ಸೋಮವಾರ ಮಹಾನಗರಪಾಲಿಕೆ ವರಣದಲ್ಲಿ ಏರ್ಪಡಿಸಲಾಗಿದ್ದ 11ನೇ ರಾಷ್ಟ್ರೀಯ ಮತದಾರರ ದಿನಾಚರಣೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಮತದಾನ ಮಾಡದೆ ಅಧಿಕಾರಯುತವಾಗಿ ಸೌಲಭ್ಯಗಳನ್ನು ಕೇಳಲು ಅಥವಾ ವ್ಯವಸ್ಥೆಯನ್ನು ಪ್ರಶ್ನಿಸಲು ಆಗದು. ಮತದಾನದಲ್ಲಿ ಪಾಲ್ಗೊಂಡಿದ್ದರೆ ನಾವು ಆರಿಸಿದ ನಾಯಕರಿಂದ ಅಗತ್ಯ ಸವಲತ್ತುಗಳನ್ನು ಕೇಳಬಹುದು. ಆದ್ದರಿಂದ ಎಲ್ಲ ಅರ್ಹ ಮತದಾರರು, ವಿಶೇಷವಾಗಿ ಯುವ ಮತದಾರರು ಮತದಾನವೆಂಬ ಹಬ್ಬದಲ್ಲಿ ನಿರ್ಭೀತವಾಗಿ, ಯಾವುದೇ ಆಮಿಷಕ್ಕೆ ಬಲಿಯಾಗದೇ ತಮ್ಮ ಹಕ್ಕು ಚಲಾಯಿಸಬೇಕು ಎಂದರು.
ತಿದ್ದುಪಡಿ, ರದ್ದತಿಗೂ ಪ್ರಾಮುಖ್ಯತೆ ನೀಡಿ: ಕೇವಲ ಮತದಾರರ ಪಟ್ಟಿಗೆ ಸೇರ್ಪಡೆಗೊಳಿಸುವುದಷ್ಟೇ ಮುಖ್ಯವಾಗುವುದಿಲ್ಲ. ಬದಲಾಗಿ ವರ್ಗಾಣೆ, ಮರಣ ಇತರೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಿದ್ದುಪಡಿ, ರದ್ದು ಪಡಿಸುವುದು ಕೂಡ ಅಷ್ಟೇ ಮುಖ್ಯವಾಗುತ್ತದೆ.
ಒಂದು ಆರೋಗ್ಯಕರ ಚುನಾವಣೆಗೆ ಬುನಾದ ಆರೋಗ್ಯಯುತವಾದ ಮತದಾರರ ಪಟ್ಟಿ. ಆದ ಕಾರಣ ಮತದಾರರು ಮತದಾನ ಪಟ್ಟಿಗೆ ಸೇರ್ಪಡೆಗೆ ನೀಡುವಷ್ಟೇ ಪ್ರಾಮುಖ್ಯತೆ ಇತರೆ ತಿದ್ದುಪಡಿಗಳಿಗೂ ಮಾನ್ಯತೆ ನೀಡಬೇಕು ಎಂದರು.
ಕಾರ್ಯಕ್ರಮ ಉದ್ಘಾಟಿಸಿದ ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪದ್ಮಾ ಬಸವಂತಪ್ಪ ಮಾತನಾಡಿ, ಇತ್ತೀಚೆಗೆ ಸುಶಿಕ್ಷಿತರ ಮತದಾನ ಪ್ರಮಾಣ ಕಡಿಮೆ ಆಗುತ್ತಿದ್ದು, ಮತದಾನದ ದಿನವನ್ನು ರಜಾ ದಿನವೆಂದು ಪರಿಗಣಿಸುತ್ತಿದ್ದಾರೆ. ಇದು ಉತ್ತಮ ಬೆಳವಣಿಗೆ ಅಲ್ಲ ಎಂದರು. ಪ್ರಭಾರ ಜಿಲ್ಲಾ ಪೊಲೀಸ್ ಅಧೀಕ್ಷಕ ರಾಜೀವ್ ಎಂ. ಮಾತನಾಡಿ, ಪ್ರಜ್ಞಾವಂತ ಮತದಾರನು ನಿಷ್ಠಾವಂತ ಪ್ರತಿನಿಧಿಯನ್ನು ಆಯ್ಕೆ ಮಾಡಿ ಸುಭದ್ರ ರಾಜ್ಯ, ರಾಷ್ಟ್ರ ನಿರ್ಮಾಣದಲ್ಲಿ ಪಾತ್ರ
ವಹಿಸಬೇಕು ಎಂದರು.
ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಮತದಾರರ ಪ್ರತಿಜ್ಞಾ ವಿಧಿ ಬೋಧಿಸಿದರು. ಕಾರ್ಯಕ್ರಮದಲ್ಲಿ ಹೊಸ ಮತದಾರರಿಗೆ ಗುರುತಿನ ಚೀಟಿ ವಿತರಿಸಲಾಯಿತು ಹಾಗೂ ರಾಷ್ಟ್ರೀಯ ಮತದಾರರ ದಿನಾಚರಣೆ ಅಂಗವಾಗಿ ಏರ್ಪಡಿಸಿದ್ದ ಸ್ಪರ್ಧಾ ವಿಜೇತರಾದವರಿಗೆ ಬಹುಮಾನ, ಪ್ರಶಸ್ತಿ ಪತ್ರ ವಿತರಿಸಲಾಯಿತು.
ಉಪವಿಭಾಗಾಧಿಕಾರಿ ಮಮತ ಹೊಸಗೌಡರ್, ಸಾರ್ವನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಪರಮೇಶ್ವರಪ್ಪ, ಪಪೂ ಶಿಕ್ಷಣ ಇಲಾಖೆ ಉಪನಿರ್ದೇಶಕ ನಾಗರಾಜಪ್ಪ ವೇದಿಕೆಯಲ್ಲಿದ್ದರು. ಮಹಾನಗರಪಾಲಿಕೆ ಆಯುಕ್ತ ವಿಶ್ವನಾಥ ಮುದಜ್ಜಿ ಸ್ವಾಗತಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ
Panchamasali ಎಂಬ ಕಾರಣಕ್ಕೆ ಯತ್ನಾಳ್ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ
Election Campaign: ಕಾಂಗ್ರೆಸ್ನಲ್ಲಿಲ್ಲ ಮೋದಿಗೆ ಸಮಾನ ನಾಯಕತ್ವ: ಗಾಯಿತ್ರಿ ಸಿದ್ದೇಶ್ವರ
Gayathri Siddeshwar: ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗಾಯಿತ್ರಿ ಜನ್ಮದಿನ ಆಚರಣೆ
Eshwarappa ವಿರುದ್ಧ ಕ್ರಮದ ಬಗ್ಗೆ ಪಕ್ಷದಿಂದಲೇ ನಿರ್ಧಾರ: ಯಡಿಯೂರಪ್ಪ