ಗಣರಾಜ್ಯೋತ್ಸವ ಸಂಭ್ರಮಕ್ಕೆ ಬಾರದ ಜನ

ಬೆರಳೆಣಿಕೆಯ ಜನಪ್ರತಿನಿಧಿಗಳ-ಅಧಿಕಾರಿಗಳ ರಜಾ

Team Udayavani, Jan 27, 2021, 2:45 PM IST

27-7

ದಾವಣಗೆರೆ: ಜಿಲ್ಲಾಡಳಿತ ವತಿಯಿಂದ ಮಂಗಳವಾರ ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಏರ್ಪಡಿಸಿದ್ದ ಸಾರ್ವಜನಿಕ ಗಣರಾಜ್ಯೋತ್ಸವ
ಕಾರ್ಯಕ್ರಮ ಸಾರ್ವಜನಿಕರೇ ಇಲ್ಲದೇ ಕೆಲವೇ ಕೆಲವು ಜನಪ್ರತಿನಿಧಿಗಳು ಹಾಗೂ ಬೆರಳೆಣಿಕೆ ಸಂಖ್ಯೆಯ ಅಧಿಕಾರಿಗಳ ಸಮ್ಮುಖದಲ್ಲಿ ನೀರಸವಾಗಿ ನಡೆಯಿತು.

ಕೋವಿಡ್‌-19 ಕಾರಣದಿಂದಾಗಿ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಶಾಲಾ-ಕಾಲೇಜು ವಿದ್ಯಾರ್ಥಿಗಳ ಕಲರವ ಇರಲಿಲ್ಲ. ಇನ್ನು ಆಹ್ವಾನ ಪತ್ರಿಕೆಯಲ್ಲಿ ಹೆಸರು ಪ್ರಕಟಿಸಿದ ಎಲ್ಲ ಜನಪ್ರತಿನಿಧಿಗಳೂ ಕಾರ್ಯಕ್ರಮದಲ್ಲಿರಲಿಲ್ಲ. ಸಾವಿರಾರು ಸಂಖ್ಯೆಯಲ್ಲಿರಬೇಕಿದ್ದ ವಿವಿಧ ಇಲಾಖೆಗಳ ಅಧಿಕಾರಿಗಳೂ ಗೋಚರಿಸಲಿಲ್ಲ. ಹೀಗಾಗಿ ರಾಷ್ಟ್ರೀಯ ಕಾರ್ಯಕ್ರಮ ಕಾಟಾಚಾರದ ಕಾರ್ಯಕ್ರಮದಂತೆ ನಡೆಯಿತು ಎಂಬ ಆರೋಪ
ಕೇಳಿಬಂದಿತು.

ಕ್ರೀಡಾಂಗಣ ಪ್ರವೇಶಿಸುವ ಗೇಟ್‌ಗಳಲ್ಲಿ ಹಾಗೂ ಕ್ರೀಡಾಂಗಣ ಸಂಪರ್ಕಿಸುವ ಮುಖ್ಯ ರಸ್ತೆಗಳಲ್ಲಿಯೂ ನಿಂತಿದ್ದ ಪೊಲೀಸರು ಸಾರ್ವಜನಿಕರ
ಸ್ವತ್ಛಂದ ಪ್ರವೇಶಕ್ಕೆ ಅಡ್ಡಿಯಾದರು. ಪೊಲೀಸರ ಅತಿಯಾದ ಭದ್ರತಾ ಕ್ರಮದಿಂದಾಗಿ ಸಾರ್ವಜನಿಕ ಗಣರಾಜೋತ್ಸವ ಕಾರ್ಯಕ್ರಮಕ್ಕೆ ಸಾರ್ವಜನಿಕರೇ ಇಲ್ಲದಂತಾಯಿತು. ಹೀಗಾಗಿ ಕ್ರೀಡಾಂಗಣದ ಸುತ್ತಲಿನ ಮೆಟ್ಟಿಲುಗಳು ಖಾಲಿ ಖಾಲಿಯಾಗಿದ್ದವು. ಇನ್ನು ಅಧಿಕಾರಿಗಳು ಸಹ ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕ್ರಮದಲ್ಲಿ ಭಾಗವಹಿಸದೇ ಗಣರಾಜ್ಯ ದಿನವನ್ನು ಸಂಪೂರ್ಣ ರಜಾ ದಿನವನ್ನಾಗಿಸಿಕೊಂಡು ಮನೆಯಲ್ಲಿಯೇ ಉಳಿದಿದ್ದು ಕಾರ್ಯಕ್ರಮ ಅಂದಗೆಡುವಂತಾಯಿತು.ಇದ್ದಷ್ಟು ಅಧಿಕಾರಿಗಳು ಹಾಗೂ ಸಾರ್ವಜನಿಕರ ಸಮ್ಮುಖದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು ರಾಷ್ಟ್ರ ಧ್ವಜಾರೋಹಣ ನೆರವೇರಿಸಿ, 14 ಪುಟಗಳ ಭಾಷಣ ಓದಿ ಮುಗಿಸಿದರು. ಕೋವಿಡ್‌-19 ಕಾರಣದಿಂದಾಗಿ ಜಿಲ್ಲಾಡಳಿತ ಕಾರ್ಯಕ್ರಮವನ್ನು ಸರಳವಾಗಿ ಸಂಘಟಿಸಿರಬಹುದು ಎಂದು ಕೊಂಡರೂ ಸರಳ ಕಾರ್ಯಕ್ರಮವೂ ಹಲವು ಅದ್ವಾನಗಳಿಗೆ ಸಾಕ್ಷಿಯಾದದ್ದು ಸಾರ್ವಜನಿಕರಲ್ಲಿ ಬೇಸರ ಮೂಡಿಸಿತು.

ಪ್ರಚಾರ ಕೆಲಸಕ್ಕೂ ಅಡ್ಡಿ: ಕಾರ್ಯಕ್ರಮದ ವರದಿಗಾಗಿ ಬಂದಂಥ ಪತ್ರಕರ್ತರಿಗೆ ಧ್ವಜ ಸ್ತಂಭದ ಬಲಭಾಗದಲ್ಲಿ ಆಸನ ವ್ಯವಸ್ಥೆ ಮಾಡಲಾಗಿತ್ತು. ಆದರೆ, ಪತ್ರಕರ್ತರು ಈ ಸ್ಥಳ ಬಿಟ್ಟು ಬೇರೆ ಕಡೆ ಓಡಾದಂತೆ ನೋಡಿಕೊಳ್ಳಲು ಇಲ್ಲಿಯೂ ಪೊಲೀಸ್‌ ಭದ್ರತೆ ಬಿಗಿ ಮಾಡಲಾಗಿತ್ತು. ಪತ್ರಿಕಾ
ಛಾಯಾಗ್ರಾಹಕರು, ವಿಡಿಯೋ ಛಾಯಾಗ್ರಾಹಕರು ಇದ್ದ ಸ್ಥಳದಲ್ಲೇ ನಿಂತು ರಾಷ್ಟ್ರ ಧ್ವಜಾರೋಹಣ ಸೇರಿದಂತೆ ಕಾರ್ಯಕ್ರಮದ ವಿವಿಧ ಚಿತ್ರಗಳನ್ನು ತೆಗೆಯಲು ಸಾಧ್ಯವಾಗದೆ ಪರಿತಪಿಸಿದರು.
ಕೆಲ ಛಾಯಾಗ್ರಾಹಕರು ಮುಂದೆ ಹೋಗಿ ಫೋಟೋ ತೆಗೆಯಲು ಯತ್ನಿಸಿದರಾದರೂ ಪೊಲೀಸರು ಅವರನ್ನೆಲ್ಲ ಬಲವಂತದಿಂದ ಹಿಮ್ಮೆಟ್ಟಿಸಿದರು. ವಾರ್ತಾ ಇಲಾಖೆಯ ಅಧಿಕಾರಿಯನ್ನೂ ಬಿಡದೆ ಪೊಲೀಸರು ತಮ್ಮ “ಬಿಗಿ ಭದ್ರತೆ’ ಪ್ರದರ್ಶಿಸಿ ಸರ್ಕಾರದ ಪ್ರಚಾರ ಕೆಲಸಕ್ಕೂ
ಅಡ್ಡಿಪಡಿಸಿದ್ದು ಗಮನ ಸೆಳೆಯಿತು.

ಗಣ್ಯರಿಂದ ವಿಷಾದ: ರಾಷ್ಟ್ರ ಧ್ವಜಾರೋಹಣ, ಪರೇಡ್‌ ಸೇರಿದಂತೆ ಇನ್ನಿತರ ಪ್ರಮುಖ ಕಾರ್ಯಗಳಿಗೆ ಪತ್ರಿಕಾ ಹಾಗೂ ವಿಡಿಯೋ ಛಾಯಾಗ್ರಾಹಕರನ್ನು ದೂರವಿಟ್ಟ ಜಿಲ್ಲಾಡಳಿತದ ಅಧಿಕಾರಿಗಳು, ವಿವಿಧ ಸಾಧಕರಿಗೆ ಸನ್ಮಾನ ಮಾಡುವಾಗ ಛಾಯಾಗ್ರಾಹಕರನ್ನು ಕೈಬೀಸಿ
ಕರೆದರು.

ಆಗ ಯಾರೂ ಫೋಟೋ ತೆಯಲು ಹೋಗದೇ ಇದ್ದಾಗ ಜಿಲ್ಲಾ ಉಸ್ತುವಾರಿ ಸಚಿವ ಬಿ.ಎ. ಬಸವರಾಜ್‌, ಸಂಸದ ಜಿ.ಎಂ. ಸಿದ್ದೇಶ್ವರ್‌ ಸೇರಿದಂತೆ ಶಾಸಕರು, ಹಿರಿಯ ಅಧಿಕಾರಿಗಳು ಪತ್ರಕರ್ತರ ಬಳಿ ಬಂದು ಘಟನೆಗೆ ವಿಷಾದ ವ್ಯಕ್ತಪಡಿಸಿ, ಪತ್ರಕರ್ತರ ಮನವೊಲಿಸಲು ಪ್ರಯತ್ನಿಸಿದರು.
ಆದರೆ, ಪತ್ರಕರ್ತರು ಛಾಯಾಗ್ರಹಣ ಮಾಡಲು ನಿರಾಕರಿಸಿದರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರು ಪತ್ರಿಕಾಗೋಷ್ಠಿಯಿಂದಲೂ ದೂರ ಉಳಿದರು.

ಓದಿ : ಬಿಜೆಪಿ ಕುತಂತ್ರದ ಬಗ್ಗೆ ಜಾಗೃತರಾಗಿ: ಬಾಬಾಗೌಡ

ಟಾಪ್ ನ್ಯೂಸ್

Kollam; ಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Kollam; ವಿಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Seat next to parents for children under 12 years on the plane?

DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ,

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ

bp harish

Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ

Lok Sabha Election: ಕಾಂಗ್ರೆಸ್‌ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ

Lok Sabha Election: ಕಾಂಗ್ರೆಸ್‌ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ

1-wqeqwe

Davanagere: ಮತದಾನ ಜಾಗೃತಿ ಲಾಂಛನದಲ್ಲಿ ಅಪರೂಪದ ಪ್ರಾಣಿ ಚಿತ್ರ ಬಳಕೆ

Neha Hiremath Case; Protest by BJP-JDS-ABVP across the state

Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Kollam; ಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Kollam; ವಿಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Seat next to parents for children under 12 years on the plane?

DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.