ಚುನಾವಣೆ ಮುನ್ನ ಈಶ್ವರಪ್ಪ ಏನುಮಾಡಿದ್ದಾರೆಂದು ಗೊತ್ತಿದೆ: ರೇಣು
Team Udayavani, Jun 10, 2021, 10:11 PM IST
ಹೊನ್ನಾಳಿ: ನನ್ನ ಬಳಿ ಇರುವುದು ಯಾವುದೋ ಕಾಮಗಾರಿಗಳಿಗೆ ಸಹಿ ಮಾಡಿಸಿದ ಪತ್ರವಲ್ಲ, ಯಡಿಯೂರಪ್ಪ ಸಿಎಂ ಆಗಿ ಮುಂದುವರೆಯುವಂತೆ 65ಕ್ಕೂ ಹೆಚ್ಚು ಶಾಸಕರು ಸಹಿ ಮಾಡಿದ ಪತ್ರ ಎಂದು ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ. ರೇಣುಕಾಚಾರ್ಯ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಹಿ ಸಂಗ್ರಹದ ಬಗ್ಗೆ ಹುಲಿವೇಷ ಎಂದೆಲ್ಲ ಮಾತನಾಡಿರುವ ಸಚಿವ ಕೆ.ಎಸ್. ಈಶ್ವರಪ್ಪ ಚುನಾವಣಾ ಪೂರ್ವದಲ್ಲಿ ಏನು ಮಾಡಿದ್ದಾರೆ ಎಂಬುದು ನನಗೆ ಗೊತ್ತಿದೆ. ನನ್ನನ್ನು ಯಡಿಯೂರಪ್ಪ ವಿರುದ್ಧ ಎತ್ತಿ ಕಟ್ಟಲು ಪ್ರಯತ್ನಿಸಿದ್ದು ನಾನಿನ್ನೂ ಮರೆತಿಲ್ಲ. ಆಡಳಿತ ಪಕ್ಷದ ಸಚಿವರಾಗಿ ರಾಜ್ಯಪಾಲರಿಗೆ ಪತ್ರ ಬರೆದಿದ್ದು ಯಾವ ಕಾರಣಕ್ಕೆ? ನಾವು ಏನಾದರೂ ಮಾತನಾಡಿದರೆ ವರಿಷ್ಠರು ಸಹಿಸಲ್ಲ ಎಂದು ಹೇಳಿದ್ದೀರಿ.
ನಮಗೊಂದು ನ್ಯಾಯ, ನಿಮಗೊಂದು ನ್ಯಾಯಾನಾ? ವಿನಾಕಾರಣ ಹುಲಿಯಾಟ, ಅರಿವೆ ಹಾವು, ದೊಂಬರಾಟ ಎಂದೆಲ್ಲಾ ಹೇಳುತ್ತೀರಲ್ಲಾ, ನನ್ನ ಬಳಿ 65ಕ್ಕೂ ಹೆಚ್ಚು ಜನ ಶಾಸಕರು ಸಹಿ ಮಾಡಿರೋ ಪತ್ರ ಇದೆ. ಶಾಸಕ ಅರವಿಂದ ಬೆಲ್ಲದ ಅವರಿಗೆ ಬೇಕಾದರೆ ಕಳುಹಿಸಿಕೊಡುತ್ತೇನೆ ಎಂದರು.
ಗ್ರಾಮೀಣಾಭಿವೃದ್ಧಿ ಇಲಾಖೆಯ ಅನುದಾನ ತಡೆ ಹಿಡಿದಾಗಲೇ ಯಡಿಯೂರಪ್ಪ ಪರ ಶಾಸಕರು ಸಹಿ ಮಾಡಿದ ಪತ್ರ ಆಗಲೇ ನೀಡಿದ್ದೇನೆ. ಹಾಗಾಗಿ ಈಗ ಅದನ್ನು ತೋರಿಸುವ ಅಗತ್ಯ ಇಲ್ಲ. ಯಡಿಯೂರಪ್ಪ ಪರವಾಗಿ ಶಾಸಕರು ಸಹಿ ಮಾಡಿದ ಪತ್ರವೇ ನನ್ನ ಬಳಿ ಇರೋದು. ಈ ಪತ್ರಕ್ಕೆ ಯಾವ ಸಚಿವರೂ ಸಹಿ ಮಾಡಿಲ್ಲ. ಆದರೆ ಇನ್ನೂ ಸಾಕಷ್ಟು ಜನ ಶಾಸಕರು ಸಹಿ ಮಾಡುವುದಾಗಿ ಹೇಳಿದ್ದಾರೆ.
ಪಕ್ಷದ ರಾಜ್ಯಾಧ್ಯಕ್ಷರು, ರಾಷ್ಟಾಧ್ಯಕ್ಷರು, ಪ್ರಧಾನಿ ಮೋದಿ, ಗೃಹ ಸಚಿವ ಅಮಿತ್ ಶಾ ಅವರಿಗೆ ಕಳುಹಿಸಲು ಪತ್ರ ಸಿದ್ಧಪಡಿಸಿದ್ದೆವು. ಆದರೆ ರಾಜ್ಯಾಧ್ಯಕ್ಷರು ಈ ಬಗ್ಗೆ ಯಾರೂ ಪ್ರತಿಕ್ರಿಯೆ ನೀಡದಂತೆ ಸೂಚಿಸಿರುವುದರಿಂದ ನಾನು ಪತ್ರವನ್ನು ಯಾರಿಗೂ ತೋರಿಸಿಲ್ಲ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ
Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ
PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ
MUST WATCH
ಹೊಸ ಸೇರ್ಪಡೆ
Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ
ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್