ಬಡವರ ಮರಳು ಜಪ್ತಿಗೆ ಅವಕಾಶ ಕೊಡಲ್ಲ


Team Udayavani, Jun 16, 2021, 10:01 PM IST

16-13

ಹೊನ್ನಾಳಿ: ಅಕ್ರಮ ಮರಳು ಗಣಿಗಾರಿಕೆಗೆ ನಾನು ಬೆಂಬಲ ನೀಡುವುದಿಲ್ಲ. ಆದರೆ ಆಶ್ರಯ ಮನೆ ಕಟ್ಟಲು ಎತ್ತಿನಗಾಡಿ, ಬೈಕ್‌ನಲ್ಲಿ ತಂದು ಸಂಗ್ರಹಿಸಿಟ್ಟಿದ್ದ ಮರಳನ್ನು ಜಪ್ತಿ ಮಾಡಲು ಯಾವುದೇ ಕಾರಣಕ್ಕೂ ಬಿಡುವುದಿಲ್ಲ ಎಂದು ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ. ರೇಣುಕಾಚಾರ್ಯ ಹೇಳಿದರು.

ಅರಬಗಟ್ಟೆ ಕೋವಿಡ್‌ ಕೇರ್‌ ಸೆಂಟರ್‌ ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಕ್ರಮ ಗಣಿಗಾರಿಕೆ ಮಾಡಿ ಮರಳು ಸಂಗ್ರಹಿಸಿದ್ದರೆ ಅಂತಹ ಮರಳನ್ನು ಜಪ್ತಿ ಮಾಡಲಿ. ಅದಕ್ಕೆ ನಾನು ಬೆಂಬಲ ನೀಡುತ್ತೇನೆ. ಬಡವರು ಮನೆ ಕಟ್ಟಲು ಸಂಗ್ರಹಿಸಿಟ್ಟ ಮರಳು ಜಪ್ತಿ ಮಾಡಬಾರದು ಎಂದರು. ಎತ್ತಿನಗಾಡಿ, ಬೈಕ್‌ನಲ್ಲಿ ಮರಳನ್ನು ಆಶ್ರಯ ಮನೆ ಕಟ್ಟಲು ತೆಗೆದುಕೊಂಡು ಹೋಗುತ್ತಾರೆ.

ಅದಕ್ಕೆ ಸರ್ಕಾರ ಅನುಮತಿ ನೀಡಿದೆ. ಎತ್ತಿನಗಾಡಿಯಲ್ಲಿ ಮರಳು ಹೊಡೆಯುತ್ತಿರುವುದರಿಂದ ಬಡವರಿಗೆ ಕಡಿಮೆ ಬೆಲೆಗೆ ಮರಳು ಸಿಗುತ್ತಿದ್ದು ಅಂತಹವರ ಪರವಾಗಿ ನಾನು ಸದಾ ಇರುತ್ತೇನೆ ಎಂದು ಘೋಷಿಸಿದರು. ಮರಳಿನ ವಿಷಯವಾಗಿ ಈ ಹಿಂದೆ ಅಹೋರಾತ್ರಿ ಹೋರಾಟ ಮಾಡಿದ್ದೇನೆ. ಅಲ್ಲದೆ ಜೈಲಿಗೂ ಹೋಗಿ ಬಂದಿದ್ದೇನೆ. ಮರಳಿಗೆ ಚಿನ್ನದ ಬೆಲೆ ಬಂದಿದ್ದು, ಚಿನ್ನವನ್ನು ಖರೀದಿ ಮಾಡಬಹುದು. ಆದರೆ ಬಡವರು ಮರಳು ಖರೀದಿ ಮಾಡಲು ಆಗುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

ಹಿಂದೆಲ್ಲ ಹತ್ತು ಸಾವಿರ ರೂ.ಗೆ ಒಂದು ಟ್ರಾÂಕ್ಟರ್‌ ಲೋಡ್‌ ಮರಳು ಸಿಗುತ್ತಿತ್ತು. ನಾನು ಶಾಸಕನಾದ ಮೇಲೆ ಮೂರರಿಂದ ನಾಲ್ಕು ಸಾವಿರಕ್ಕೆ ಒಂದು ಟ್ರಾÂಕ್ಟರ್‌ ಮರಳು ಸಿಗುತ್ತಿದೆ. ನಾನು ಬಡವರ ಪರವಾಗಿ ಇರುವುದೇ ಇದಕ್ಕೆ ಕಾರಣ ಎಂದರು. ಮಟ್ಕಾ, ಜೂಜಾಟ ಅಡ್ಡೆಯ ಮೇಲೆ ದಾಳಿ ಮಾಡಿದರೆ ನಾನು ಬೇಡ ಎನ್ನುವುದಿಲ್ಲ. ಮನೆ ಕಟ್ಟಲು ಸಂಗ್ರಹಿಸಿದ್ದ ಮರಳನ್ನು ಜಪ್ತಿ ಮಾಡಬೇಡಿ. ಮನೆ ಕಟ್ಟಲು ಮರಳು ಸಂಗ್ರಹಿಸಿದ್ದೇ ತಪ್ಪಾ ಎಂದು ಪ್ರಶ್ನಿಸಿದರು.

ಟಾಪ್ ನ್ಯೂಸ್

1-kudre

Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್‌ ಸೋಂಕು ಅಂಟಿಕೊಂಡೀತು ಹುಷಾರು!

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

Election Campaign: ಕಾಂಗ್ರೆಸ್‌ನಲ್ಲಿಲ್ಲ ಮೋದಿಗೆ ಸಮಾನ ನಾಯಕತ್ವ: ಗಾಯಿತ್ರಿ ಸಿದ್ದೇಶ್ವರ

Election Campaign: ಕಾಂಗ್ರೆಸ್‌ನಲ್ಲಿಲ್ಲ ಮೋದಿಗೆ ಸಮಾನ ನಾಯಕತ್ವ: ಗಾಯಿತ್ರಿ ಸಿದ್ದೇಶ್ವರ

Gayathri Siddeshwar: ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗಾಯಿತ್ರಿ ಜನ್ಮದಿನ ಆಚರಣೆ

Gayathri Siddeshwar: ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗಾಯಿತ್ರಿ ಜನ್ಮದಿನ ಆಚರಣೆ

Eshwarappa ವಿರುದ್ಧ ಕ್ರಮದ ಬಗ್ಗೆ ಪಕ್ಷದಿಂದಲೇ ನಿರ್ಧಾರ: ಯಡಿಯೂರಪ್ಪ

Eshwarappa ವಿರುದ್ಧ ಕ್ರಮದ ಬಗ್ಗೆ ಪಕ್ಷದಿಂದಲೇ ನಿರ್ಧಾರ: ಯಡಿಯೂರಪ್ಪ

Davanagare: ಚುನಾವಣಾ ತರಬೇತಿಗೆ ಚಕ್ಕರ್; ಅನುಚಿತ ವರ್ತನೆಗೆ ಶಿಕ್ಷಕ ಅಮಾನತು

Davanagare: ಚುನಾವಣಾ ತರಬೇತಿಗೆ ಚಕ್ಕರ್; ಅನುಚಿತ ವರ್ತನೆಗೆ ಶಿಕ್ಷಕ ಅಮಾನತು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-kudre

Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್‌ ಸೋಂಕು ಅಂಟಿಕೊಂಡೀತು ಹುಷಾರು!

30

CET Exam: ಮೊದಲ ದಿನ ಸುಸೂತ್ರವಾಗಿ ನಡೆದ ಸಿಇಟಿ

1-wqeqwe

Maharashtra; ರತ್ನಾಗಿರಿ- ಸಿಂಧುದುರ್ಗದಲ್ಲಿ ರಾಣೆ vs ಠಾಕ್ರೆ ಕಾದಾಟ

1-HM

Mathura ನನ್ನನ್ನು ಗೋಪಿಕೆಯೆಂದು ಭಾವಿಸುವೆ: ಬಿಜೆಪಿ ಅಭ್ಯರ್ಥಿ ಹೇಮಾ

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.