ಪ್ರೊ| ಬಿ. ಕೃಷ್ಣಪ್ಪ ಅಧ್ಯಯನ ಕೇಂದ್ರ ಆರಂಭಿಸಲು ಒತ್ತಾಯಿಸಿ ಮನವಿ

ದಲಿತ ಸಂಘರ್ಷ ಸಮಿತಿ ಸ್ಥಾಪಕ ದಿ.ಪ್ರೊ.ಬಿ.ಕೃಷ್ಣಪ್ಪ ಅಧ್ಯಯನ ಕೇಂದ್ರ ತೆರೆಯಲು ನಗರದ ದಸಂಸ ಚನ್ನಗಿರಿ ತುಮ್‌ಕೊಸ್‌ ಕಾರ್ಯಕರ್ತರು ದಾವಣಗೆರೆ ವಿವಿ ಕುಲಪತಿಗೆ ಮನವಿ ಸಲ್ಲಿಸಿದರು.

Team Udayavani, Jan 23, 2021, 4:41 PM IST

Davanagere

ಹರಿಹರ: ದಾವಣಗೆರೆ ವಿವಿಯಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ಸ್ಥಾಪಕ ದಿ.ಪ್ರೊ.ಬಿ.ಕೃಷ್ಣಪ್ಪರ ಅಧ್ಯಯನ, ಸಂಶೋಧನಾ ಕೇಂದ್ರ ಆರಂಭಿಸಲು ಹರಿಹರದ ದಸಂಸ ಕಾರ್ಯಕರ್ತರು ಮನವಿ ಮಾಡಿದ್ದಾರೆ. ವಿವಿ ಕುಲಪತಿ ಡಾ.ಎಸ್‌.ವಿ.ಹಲಸೆ ಅವರನ್ನು ಭೇಟಿ ಮಾಡಿದ ಮುಖಂಡರು, ದಸಂಸ ಮೂಲಕ ನಾಡಿನ ಕೋಟ್ಯಂತರ ದಲಿತ, ಹಿಂದುಳಿದವರ ಸಂಘಟಿಸಿ, ಜಾಗೃತಿ ಮೂಡಿಸಿದ ಪ್ರೊ.ಕೃಷ್ಣಪ್ಪರ ಬದುಕಿನ ಬಗ್ಗೆ ಸೂಕ್ತ ಅಧ್ಯಯನ ನಡೆಸಬೇಕಿದೆ. ಅವರು ಮೂಲತಃ ಹರಿಹರದವರಾಗಿದ್ದರಿಂದ ವಿವಿಯಲ್ಲಿ ಅವರ ಹೆಸರಿನ ಅಧ್ಯಯನ ಕೇಂದ್ರ ಆರಂಭಿಸಬೇಕಿದೆ ಎಂದರು.

ಇದನ್ನೂ ಓದಿ :  ಅಣಬೆ ಬೇಸಾಯದಿಂದ ಆದಾಯ ಹೆಚ್ಚಳ: ರಾಮರಾವ್‌

ಪ್ರೊ.ಬಿ.ಕೃಷ್ಣಪ್ಪರು ಸಿದ್ಲಿàಪುರ ಭೂ ಹೋರಾಟ, ಚಂದ್ರಗುತ್ತಿ ಬೆತ್ತಲೆ ಸೇವೆ ವಿರುದ್ಧ, ಹಾವನೂರು ವರದಿ ಜಾರಿ, ಬಿದರಕಾವಲ್‌ ಕಾಳನಕಟ್ಟೆ, ಚಂದಗೋಡು, ಕ್ಯಾಸನಕೆರೆ, ದೇವಲಾಪುರಗಳ ಭೂ ಹೋರಾಟ, ನಾಗಸಂದ್ರ ಸತ್ಯಾಗ್ರಹ, ಶೇಷಗಿರಿಯಪ್ಪನ ಕೊಲೆ ವಿರುದ್ಧ ಹೋರಾಟ, ಕರಡೂರು ವಸತಿ ಹೀನರಿಗಾಗಿ ಮನೆ ಚಳವಳಿ ಮತ್ತು ವಸತಿ ಶಾಲೆ ತೆರೆಯಲು ಹೋರಾಟ. ಹುಣಸೆಕೋಟೆ ಅನಸೂಯಮ್ಮ, ಚಿಂತಾಮಣಿ ನಾಗಮ್ಮ, ಹಾಸನದ ತಾಯಮ್ಮನಂತಹ ಮಹಿಳೆಯರ ಸ್ವಾಭಿಮಾನ, ಸಮಾನತೆಗಾಗಿ ಹೋರಾಟ, ಮಂಡಲ್‌ ವರದಿ ಜಾರಿಗೆ ಚಳವಳಿ ನಡಸಿದ್ದಾರೆ.

ಚಳವಳಿಯ ಪರಿಣಾಮ ರಾಜ್ಯದಲ್ಲಿ ಬಗರ್‌ ಹುಕುಂ ಕಾಯ್ದೆ ಜಾರಿ, ಮುರಾರ್ಜಿ, ಕಿತ್ತೂರು ರಾಣಿ ಚೆನ್ನಮ್ಮ, ಆದರ್ಶ ವಿದ್ಯಾಲಯ ವಸತಿ ಶಾಲೆ ಆರಂಭಿಸಲಾಯಿತು. ದಾವಣಗೆರೆ ವಿವಿ ಕನ್ನಡ ಭಾಷಾ ಅಥವಾ ಸಮಾಜ ಶಾಸ್ತ್ರ ಅಥವಾ ಸೂಕ್ತವೆನಿಸುವ ವಿಭಾಗದಲ್ಲಿ ಇವರ ಹೆಸರಿನಲ್ಲಿ ಅಧ್ಯಯನ ಮತ್ತು ಸಂಶೋಧನಾ ಕೇಂದ್ರ ಸ್ಥಾಪಿಸಿದರೆ ಪ್ರೊ.ಬಿ.ಕೃಷ್ಣಪ್ಪರಿಗೆ ಗೌರವ ಸಲ್ಲಿಸಿದಂತೆಯೂ ಆಗುತ್ತದೆ ಎಂದು ಮನವಿಯಲ್ಲಿ ವಿವರಿಸಲಾಗಿದೆ.

ಇದನ್ನೂ ಓದಿ : ‘ಸ್ಟಾಲ್’ ಚಿತ್ರೀಕರಣ ತಂಡಕ್ಕೆ ದಾಖಲೆ ಖುಷಿ!

ಪ್ರೊ.ಎಸ್‌.ವಿ.ಹಲಸೆಯವರು ಈ ಕುರಿತು ಚರ್ಚಿಸಿ, ನಿರ್ಣಯಿಸುತ್ತೇವೆಂದರು. ಕನ್ನಡ ಭಾಷಾ ಉಪನ್ಯಾಸಕ ಡಾ.ವಿಶ್ವನಾಥ್‌, ದಸಂಸ ತಾಲೂಕು ಸಂಚಾಲಕ ಪಿ.ಜೆ.ಮಹಾಂತೇಶ್‌, ಹರಳಹಳ್ಳಿ ಗ್ರಾಪಂ ಸದಸ್ಯ ಹನುಮಂತಪ್ಪ, ಮಂಜಪ್ಪ, ಮಾರ್ ರವಿಕುಮಾರ್‌, ರವಿಚಂದ್ರ ಜಿ. ಕಕ್ಕರಗೊಳ್ಳ, ಬೇತೂರು ಮಹಾಂತೇಶ್‌, ಕರಿಬಸಪ್ಪ, ಕುಸುಮಾ ಎಂ.ಸಿ., ಪೂಜಾ ಬಿ.ಎಲ್‌., ಹಾಲೇಶ್‌ ಇತರರಿದ್ದರು.

ಟಾಪ್ ನ್ಯೂಸ್

Odisha ಕಾಲೇಜಿನ ವಿಡಿಯೋ ಉಡುಪಿಯದ್ದು ಎಂದು ವೈರಲ್: ಕೇಸ್ ದಾಖಲು

baba-ramdev

Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

1-aaaa

Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್‌ ನಲ್ಲಿ ಬಂಧನ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ,

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ

bp harish

Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ

Lok Sabha Election: ಕಾಂಗ್ರೆಸ್‌ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ

Lok Sabha Election: ಕಾಂಗ್ರೆಸ್‌ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ

1-wqeqwe

Davanagere: ಮತದಾನ ಜಾಗೃತಿ ಲಾಂಛನದಲ್ಲಿ ಅಪರೂಪದ ಪ್ರಾಣಿ ಚಿತ್ರ ಬಳಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Odisha ಕಾಲೇಜಿನ ವಿಡಿಯೋ ಉಡುಪಿಯದ್ದು ಎಂದು ವೈರಲ್: ಕೇಸ್ ದಾಖಲು

baba-ramdev

Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.