ರೇಣುಕಾಚಾರ್ಯ ವಾಸ್ತವ್ಯ ಅವಹೇಳನ ಸಲ್ಲ


Team Udayavani, Jun 18, 2021, 9:53 PM IST

18-11

ಹೊನ್ನಾಳಿ: ತಾಲೂಕಿನ ಅರಬಗಟ್ಟೆ ಗ್ರಾಮದ ವಸತಿ ಶಾಲೆಯ ಕೋವಿಡ್‌ ಕೇರ್‌ ಸೆಂಟರ್‌ನಲ್ಲಿ ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ. ರೇಣುಕಾಚಾರ್ಯ ವಾಸ್ತವ್ಯ ಹೂಡಿದ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿ ಇಲ್ಲಿ ಕ್ವಾರಂಟೈನ್‌ನಲ್ಲಿರುವ ಮಹಿಳೆಯರನ್ನು ನೀವು ಅವಮಾನಿಸಿದ್ದೀರಿ ಎಂದು ಕೋವಿಡ್‌ ಕೇರ್‌ ಸೆಂಟರ್‌ನಲ್ಲಿ ಇರುವ ತಾಲೂಕಿನ ಹೊಸಹಳ್ಳಿ ಗ್ರಾಮದ ನಯನ ಅವರು ಮಾಜಿ ಶಾಸಕ ಡಿ.ಜಿ. ಶಾಂತನಗೌಡ ಅವರನ್ನು ತರಾಟೆಗೆ ತೆಗೆದುಕೊಂಡ ಘಟನೆ ನಡೆದು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ.

ತಾಲೂಕಿನ ಅರಬಗಟ್ಟೆ ಗ್ರಾಮದ ವಸತಿ ಶಾಲೆಯ ಕೋವಿಡ್‌ ಕೇರ್‌ ಸೆಂಟರ್‌ನ ಸೋಂಕಿತರಿಗೆ ಹಣ್ಣು, ನೀರಿನ ಬಾಟಲ್‌ಗ‌ಳನ್ನು ವಿತರಿಸಲು ಗುರುವಾರ ಆಗಮಿಸಿದ ಮಾಜಿ ಶಾಸಕ ಡಿ.ಜಿ. ಶಾಂತನಗೌಡ ಅವರನ್ನು ಪ್ರಶ್ನಿಸಿ ಅವರು ಮಾತನಾಡಿದರು. ಅರಬಗಟ್ಟೆ ಗ್ರಾಮದ ವಸತಿ ಶಾಲೆಯ ಕೋವಿಡ್‌ ಕೇರ್‌ ಸೆಂಟರ್‌ನಲ್ಲಿ ಹಲವಾರು ಮಹಿಳೆಯರು ಕ್ವಾರಂಟೈನ್‌ನಲ್ಲಿದ್ದಾರೆ. ಇಲ್ಲಿ ನನ್ನೊಂದಿಗೆ ನಮ್ಮ ತಾಯಿಯೂ ಇದ್ದಾರೆ.

ಹೀಗೆ ನೀವು ಮಾತನಾಡಿದ್ದು ಎಷ್ಟು ಸರಿ? ರೇಣುಕಾಚಾರ್ಯ ಅವರು ಇಲ್ಲಿ ವಾಸ್ತವ್ಯ ಹೂಡುತ್ತಿರುವ ಬಗ್ಗೆ ನೀವು ನಿಮ್ಮ ಕಾರ್ಯಕ್ರಮವೊಂದರಲ್ಲಿ ಮಾತನಾಡಿರುವುದು ನಮ್ಮ ಮನಸ್ಸಿಗೆ ಆಘಾತವನ್ನುಂಟುಮಾಡಿದೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಮಾಜಿ ಶಾಸಕ ಡಿ.ಜಿ. ಶಾಂತನಗೌಡ ಮಾತನಾಡಿರುವ ವೀಡಿಯೋವನ್ನು ಪ್ರದರ್ಶಿಸಿ ಇದಕ್ಕೆ ನೀವು ಏನು ಹೇಳುತ್ತೀರಿ ಎಂದು ಪ್ರಶ್ನಿಸಿದರು. ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ. ರೇಣುಕಾಚಾರ್ಯ ಸದಾ ನಮ್ಮೊಂದಿಗೆ ಇರುತ್ತಾರೆ. ಊಟ-ಉಪಾಹಾರ ಸೇರಿದಂತೆ ಎಲ್ಲಾ ವ್ಯವಸ್ಥೆ ಮಾಡುತ್ತಿದ್ದಾರೆ. ತಮ್ಮ ಮನೆಯನ್ನು ತೊರೆದು ಇಲ್ಲಿಯೇ ವಾಸ್ತವ್ಯ ಹೂಡುವ ಮೂಲಕ ಅವರು ನಮ್ಮೊಂದಿಗೆ ಇದ್ದಾರೆ. ನೀವು ವಾಸಿಯಾಗಿ ಮನೆಗೆ ತೆರಳುವವರೆಗೂ ನಾನು ಅರಬಗಟ್ಟೆ ಗ್ರಾಮದ ವಸತಿ ಶಾಲೆಯ ಕೋವಿಡ್‌ ಕೇರ್‌ ಸೆಂಟರ್‌ ನಲ್ಲಿಯೇ ನಿಮ್ಮೊಂದಿಗೆ ಇರುತ್ತೇನೆ ಎನ್ನುತ್ತಿದ್ದಾರೆ.

ನಮ್ಮನ್ನು ಅವರು ತಾಯಿ, ಅಕ್ಕ-ತಂಗಿ ಎಂದು ಸಂಬೋ ಧಿಸುತ್ತಾರೆ. ಅವರಂಥ ಶಾಸಕರನ್ನು ಪಡೆದ ನಾವೇ ಧನ್ಯರು. ಅವರು ನಮ್ಮ ರಾಜ್ಯವಷ್ಟೇ ಅಲ್ಲದೇ ರಾಷ್ಟ್ರಾದ್ಯಂತ ಉತ್ತಮ ಹೆಸರು ಗಳಿಸಿದ್ದಾರೆ. ಅವರು ವರ್ಲ್ಡ್ ಫೇಮಸ್‌. ಅವರ ಬಗ್ಗೆ ನೀವು ಸಲ್ಲದ ಆರೋಪ ಮಾಡುತ್ತಿರುವುದು ಸರಿಯಲ್ಲ ಎಂದು ಹೇಳಿದರು. ನಯನ ಅವರ ಪ್ರಶ್ನೆಗೆ ಉತ್ತರಿಸಿದ ಮಾಜಿ ಶಾಸಕ ಡಿ.ಜಿ. ಶಾಂತನಗೌಡ, ನನಗೆ ಮಹಿಳೆಯರ ಬಗ್ಗೆ ಅಪಾರ ಗೌರವವಿದೆ. ಅರಬಗಟ್ಟೆ ಗ್ರಾಮದ ವಸತಿ ಶಾಲೆಯ ಕೋವಿಡ್‌ ಕೇರ್‌ ಸೆಂಟರ್‌ನಲ್ಲಿ ಇರುವ ಮಹಿಳೆಯರ ಬಗ್ಗೆ ನಾನು ಮಾತನಾಡಿಲ್ಲ. ನೀವು ನನ್ನ ಮಾತುಗಳನ್ನು ತಪ್ಪಾಗಿ ಅರ್ಥೈಸಿಕೊಂಡಿದ್ದೀರಿ ಎಂದು ತಿಳಿಸಿದರು. ನನ್ನ ಮಡದಿ, ಇಬ್ಬರು ಸೊಸೆಯಂದಿರು ಸೇರಿದಂತೆ ನಮ್ಮ ಮನೆಯಲ್ಲೂ ಮಹಿಳೆಯರಿದ್ದಾರೆ. ಮಹಿಳೆಯರ ಬಗ್ಗೆ ನನಗೆ ಅಪಾರ ಗೌರವವಿದೆ.

ದಯವಿಟ್ಟು ಯಾರೂ ಅನ್ಯಥಾ ಭಾವಿಸಬಾರದು ಎಂದು ಹೇಳಿದರು. ಮಾಜಿ ಶಾಸಕ ಡಿ.ಜಿ. ಶಾಂತನಗೌಡ ಅವರ ಸ್ಪಷ್ಟನೆಯಿಂದ ತೃಪ್ತರಾಗದ ಮಹಿಳೆಯರು ಕಾಂಗ್ರೆಸ್‌ ವತಿಯಿಂದ ವಿತರಿಸಲು ತಂದಿದ್ದ ಹಣ್ಣು-ಮಿನರಲ್‌ ವಾಟರ್‌ಗಳ ಬಾಟಲ್‌ಗ‌ಳನ್ನು ತಿರಸ್ಕರಿಸಿ ತಮ್ಮ ವಾಸ್ತವ್ಯದ ಕೊಠಡಿಗಳತ್ತ ಹೆಜ್ಜೆಹಾಕಿದರು. ಕಾಂಗ್ರೆಸ್‌ ಜಿಲ್ಲಾಧ್ಯಕ್ಷ ಎಚ್‌.ಬಿ.ಮಂಜಪ್ಪ ಇತರ ಮುಖಂಡರು ಇದ್ದರು.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ,

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.