ಹೊನ್ನಾಳಿ-ನ್ಯಾಮತಿಯಲ್ಲಿ ಉತ್ತಮ ಮಳೆ
Team Udayavani, Jun 19, 2021, 8:59 PM IST
ಹೊನ್ನಾಳಿ: ಹೊನ್ನಾಳಿ ಮತ್ತು ನ್ಯಾಮತಿ ಅವಳಿ ತಾಲೂಕುಗಳಲ್ಲಿ ಗುರುವಾರ ರಾತ್ರಿ ಹಾಗೂ ಶುಕ್ರವಾರ ಬೆಳಗಿನ ಜಾವ ವ್ಯಾಪಕವಾಗಿ ಮಳೆ ಸುರಿದಿದೆ. ಪಟ್ಟಣ ಹಾಗೂ ಅವಳಿ ತಾಲೂಕುಗಳಲ್ಲಿ ಗುರುವಾರ ರಾತ್ರಿ 11 ಗಂಟೆಯಿಂದ ಪ್ರಾರಂಭವಾದ ಮಳೆ ಮಧ್ಯರಾತ್ರಿವರೆಗೆ ಸುರಿದು ನಂತರ ಅಲ್ಪ ವಿರಾಮ ಕೊಟ್ಟು ಬಿರುಸಿನ ಮಳೆಯಾಗಿದೆ.
ಅವಳಿ ತಾಲೂಕುಗಳಲ್ಲಿ ಒಟ್ಟು 186 ಮಿ.ಮೀ. ಮಳೆಯಾಗಿದೆ. 2 ತಾಲೂಕುಗಳಲ್ಲಿ 26.5 ಮಿ.ಮೀ. ಸರಾಸರಿ ಮಳೆಯಾಗಿದೆ. ಹೊನ್ನಾಳಿ ತಾಲೂಕಿನ ಕುಂದೂರು ಗ್ರಾಮದ ವ್ಯಾಪ್ತಿಯಲ್ಲಿ 36.4 ಮಿ.ಮೀ. ಅತೀ ಹೆಚ್ಚು ಬಿದ್ದಿದ್ದರೆ, ನ್ಯಾಮತಿ ತಾಲೂಕಿನ ಬೆಳಗುತ್ತಿ ಗ್ರಾಮದ ವ್ಯಾಪ್ತಿಯಲ್ಲಿ 44.8 ಮಿ.ಮೀ. ಅತಿ ಹೆಚ್ಚು ಮಳೆಯಾಗಿದೆ. ಈ ಮಳೆಯಿಂದ ಹರ್ಷಗೊಂಡ ರೈತರು ಬಿತ್ತನೆ ಕಾರ್ಯ ಚುರುಕುಗೊಳಿಸಿದ್ದಾರೆ. ಭರ್ಜರಿ ಮಳೆಗೆ ಹಳ್ಳಕೊಳ್ಳಗಳು ತುಂಬಿ ಹರಿಯುತ್ತಿವೆ.
ನದಿ ನೀರಿನ ಮಟ್ಟ ಏರಿಕೆ: ಎರಡೇ ದಿನದಲ್ಲಿ ತುಂಗಭದ್ರಾ ನದಿ ನೀರಿನ ಮಟ್ಟ ಗಣನೀಯವಾಗಿ ಏರಿಕೆ ಕಂಡಿದೆ. ಜೂ.16ರಂದು ಬುಧವಾರ ನದಿ ನೀರಿನ ಮಟ್ಟ 6ಮೀ. ಇದ್ದದ್ದು ಜೂನ್ 18ರ ಶುಕ್ರವಾರ ತುಂಗಭದ್ರಾ ನದಿ ನೀರಿನ ಮಟ್ಟ 8.140ಮೀ.ಗೆ ಏರಿಕೆಯಾಗಿದೆ.
ಮಲೆನಾಡಿನಲ್ಲಿ ಮಳೆ ಪ್ರಮಾಣ ಹೆಚ್ಚಾದರೆ ನದಿ ನೀರಿನ ಮಟ್ಟ ಏರಿಕೆಯಾಗುತ್ತದೆ. ಸದ್ಯ ಮಲೆನಾಡು ಹಾಗೂ ಅಚ್ಚುಕಟ್ಟು ಪ್ರದೇಶಗಳಲ್ಲಿ ಮಳೆ ಪ್ರಮಾಣ ಕ್ಷೀಣಿಸಿದೆ. ನದಿ ಮಟ್ಟ ಏರಿಕೆಯಾಗಿಲ್ಲ ಎಂದು ಶುಕ್ರವಾರ ನದಿ ನೀರಿನ ಮಟ್ಟ ಪರೀಕ್ಷಿಸಿದ ಸೆಂಟ್ರಲ್ ವಾಟರ್ ಕಮಿಷನ್ ಕಿರಿಯ ಇಂಜಿನಿಯರ್ ಪವನ್ ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Panchamasali ಎಂಬ ಕಾರಣಕ್ಕೆ ಯತ್ನಾಳ್ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ
Election Campaign: ಕಾಂಗ್ರೆಸ್ನಲ್ಲಿಲ್ಲ ಮೋದಿಗೆ ಸಮಾನ ನಾಯಕತ್ವ: ಗಾಯಿತ್ರಿ ಸಿದ್ದೇಶ್ವರ
Gayathri Siddeshwar: ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗಾಯಿತ್ರಿ ಜನ್ಮದಿನ ಆಚರಣೆ
Eshwarappa ವಿರುದ್ಧ ಕ್ರಮದ ಬಗ್ಗೆ ಪಕ್ಷದಿಂದಲೇ ನಿರ್ಧಾರ: ಯಡಿಯೂರಪ್ಪ
Davanagare: ಚುನಾವಣಾ ತರಬೇತಿಗೆ ಚಕ್ಕರ್; ಅನುಚಿತ ವರ್ತನೆಗೆ ಶಿಕ್ಷಕ ಅಮಾನತು
MUST WATCH
ಹೊಸ ಸೇರ್ಪಡೆ
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ
Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ