ಸೇತುವೆ ನಿರ್ಮಾಣಕ್ಕೆ ಮುಹೂರ್ತ ಎಂದು?


Team Udayavani, Jun 24, 2021, 9:14 PM IST

24-9

„ಎಂ.ಪಿ.ಎಂ ವಿಜಯಾನಂದಸ್ವಾಮಿ

ಹೊನ್ನಾಳಿ: ಸಮೀಪದ ಗೋವಿನಕೋವಿ ಮತ್ತು ರಾಂಪುರ ಮಧ್ಯೆ ಹರಿಯುತ್ತಿರುವ ತುಂಗಭದ್ರಾ ನದಿಗೆ ಅಡ್ಡಲಾಗಿ ಸೇತುವೆ ನಿರ್ಮಿಸಬೇಕೆಂಬ ಬೇಡಿಕೆ ಸುಮಾರು 50 ವರ್ಷಗಳಷ್ಟು ಹಳೆಯದು. ಆದರೂ ಸೇತುವೆ ನಿರ್ಮಾಣವಾಗಿಲ್ಲ. ಮೊದಲು ಹೊನ್ನಾಳಿ ತಾಲೂಕಿನಲ್ಲಿದ್ದ ತುಂಗಭದ್ರಾ ನದಿ ದಂಡೆಯ ಗೋವಿನಕೋವಿ, ಕುರುವ, ಗ್ರಾಮಗಳು ಈಗ ನ್ಯಾಮತಿ ತಾಲೂಕಿಗೆ ಸೇರಿವೆ.

ಈ ಊರುಗಳ ಸಂಪರ್ಕ ಬೇರೆ ತಾಲೂಕು ಹಾಗೂ ಜಿಲ್ಲೆಗಳ ಸಂಪರ್ಕಕ್ಕೆ ಸುಲಭವಾಗಲು ನದಿಗೆ ಸೇತುವೆ ಬೇಕು ಎಂಬ ಬೇಡಿಕೆ ಹಲವು ದಶಕಗಳಿಂದಲೂ ಇದೆ. ತುಂಗಭದ್ರಾ ನದಿಗೆ ಸೇತುವೆ ನಿರ್ಮಾಣ ಮಾಡಲು 1965 ರಲ್ಲಿ ಕೃಷಿ ಮಂತ್ರಿಗಳಾಗಿದ್ದ ಎಚ್‌. ಎಸ್‌. ರುದ್ರಪ್ಪ ಅವರ ಕಾಲದಿಂದ ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ, ಶಾಸಕ ಎಂ.ಪಿ. ರೇಣುಕಾಚಾರ್ಯ ಅವರ ತನಕ ಪ್ರಯತ್ನ ನಡೆಯುತ್ತಲೇ ಇದೆ. ಆದರೆ ಇನ್ನೂ ಕಾರ್ಯ ರೂಪಕ್ಕೆ ಬಾರದೇ ಇರುವುದರಿಂದ ಈ ಭಾಗದ ಜನರಿಗೆ ತೀವ್ರ ತೊಂದರೆಯಾಗುತ್ತಿದೆ.

ಸೇತುವೆ ನಿರ್ಮಾಣವಾದರೆ ಅನುಕೂಲವೇನು?: ತುಂಗಭದ್ರಾ ನದಿಗೆ ಸೇತುವೆ ನಿರ್ಮಾಣವಾದರೆ ನ್ಯಾಮತಿಯಿಂದ ರಾಂಪುರ ಮತ್ತು ಗೆಡ್ಡೆ ರಾಮೇಶ್ವರ ಕ್ಷೇತ್ರಕ್ಕೆ ಕೇವಲ 11 ರಿಂದ 13 ಕಿಮೀ ದೂರ ಹಾಗೂ ಸಾಸ್ವೆಹಳ್ಳಿ ಹೋಬಳಿ ಕೇಂದ್ರಕ್ಕೆ 14 ಕಿಮೀ ಅಂತರದಲ್ಲಿ ಕ್ರಮಿಸಬಹುದು. ಸೇತುವೆ ಇಲ್ಲದ ಕಾರಣ ನ್ಯಾಮತಿ ತಾಲೂಕಿನ ಅನೇಕ ಗ್ರಾಮಗಳ ಜನರು ಹೊನ್ನಾಳಿಗೆ ಬಂದು ಬೆನಕನಹಳ್ಳಿ ಗ್ರಾಮದ ಮೂಲಕ ಸುಮಾರು 30 ಕಿಮೀ ಸುತ್ತುವರೆದು ಹೋಗಬೇಕಾಗಿದೆ.

ಇದು ಕೇವಲ ನ್ಯಾಮತಿ ತಾಲೂಕಿನ ಗ್ರಾಮಗಳ ಸಮಸ್ಯೆ ಮಾತ್ರ ಅಲ್ಲ. ಶಿವಮೊಗ್ಗ, ಚಿತ್ರದುರ್ಗ, ಶಿಕಾರಿಪುರ, ಚನ್ನಗಿರಿ, ನ್ಯಾಮತಿ ಮಾರ್ಗದ ಜತೆಗೆ ಸಾಸ್ವೆಹಳ್ಳಿ, ಗೋವಿನಕೋವಿ ಹೋಬಳಿಯ ಗ್ರಾಮಗಳಿಗೂ ಅನ್ವಯಿಸುತ್ತದೆ. ಜನವರಿ ತಿಂಗಳ ಅಂತ್ಯದಿಂದ ಮೇ ತಿಂಗಳ ಅಂತ್ಯದವರಿಗೆ ನದಿ ಇಳಿದಿರುವ ಕಾರಣ ಕಾಲುಹಾದಿಯಲ್ಲಿ ನದಿ ದಾಟಿ ಹೋಗಬಹುದು.

ಮಳೆಗಾಲದಲ್ಲಿ ತುಂಬಿ ಹರಿಯುವ ನದಿ ದಾಟಲು ಸಾಧ್ಯವಿಲ್ಲ. ರಾಂಪುರ, ಸಾಸ್ವೆಹಳ್ಳಿ, ಚನ್ನಗಿರಿಗೆ ಹೋಗಬೇಕಾದರೆ ಹೊನ್ನಾಳಿ ಬಳಿ ಇರುವ ತುಂಗಭದ್ರಾ ನದಿ ಸೇತುವೆ ಮೇಲೆ ಹೋಗಬೇಕು. ಇಲ್ಲವಾದರೆ ದೋಣಿ, ಹರಿಗೋಲಿನಲ್ಲಿ ಪ್ರಯಾಣ ಮಾಡಬೇಕಾಗುತ್ತದೆ.

ದ್ವೀಪದಂತಿರುವ ನಡುಗಡ್ಡೆಯಲ್ಲಿ ಗಡ್ಡೆ ರಾಮೇಶ್ವರ ದೇಗುಲ, ಶ್ರೀ ಸದ್ಗುರು ಶಿವಯೋಗಿ ಹಾಲಸ್ವಾಮೀಜಿಯವರ ಮೂಲ ಗುರುಗಳ ಗದ್ದುಗೆಯ ಗವಿ ಇದೆ. ಮಳೆಗಾಲ ಬಂದರೆ ಸುಮಾರು ಆರು ತಿಂಗಳು ಕಾಲ ಸಂಪರ್ಕ ಇಲ್ಲದೇ ಬಂದ್‌ ಆಗುತ್ತದೆ. ವಾರಕ್ಕೊಮ್ಮೆ ಬಂದು ದೇವರ ಅರ್ಚನೆ ನಡೆಸಲಾಗುತ್ತದೆ.

ನದಿ ನೀರು ಜಾಸ್ತಿ ಆದರೆ ಬರುವುದಿಲ್ಲ. ಆದ್ದರಿಂದ ಇಲ್ಲಿಗೊಂದು ಸೇತುವೆ ಅವಶ್ಯಕತೆ ಇದೆ ಎನ್ನುತ್ತಾರೆ ನ್ಯಾಮತಿ ಹಾಗೂ ಹೊನ್ನಾಳಿ ತಾಲೂಕಿನ ಸಾಸ್ವೆಹಳ್ಳಿ, ರಾಂಪುರ ಮತ್ತಿತರ ಗ್ರಾಮಗಳ ಜನರು.

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.