ಶೈಕ್ಷಣಿಕ ಉದ್ದೇಶಕ್ಕಷ್ಟೇ ಪಿಸಿ, ಟ್ಯಾಬ್ಲೆಟ್ ಬಳಸಿ
Team Udayavani, Jun 24, 2021, 9:36 PM IST
ದಾವಣಗೆರೆ: ನಗರ ಮತ್ತು ಗ್ರಾಮೀಣ ಭಾಗದ ವಿದ್ಯಾರ್ಥಿಗಳ ಕಲಿಕೆಯಲ್ಲಿ ತಾರತಮ್ಯ ನಿವಾರಣೆ ಹಾಗೂ ಡಿಜಿಟಲ್ ಅಂತರವನ್ನು ಅಳಿಸಿಹಾಕಬೇಕೆಂಬ ಉದ್ದೇಶದಿಂದ ಸರ್ಕಾರ ಬಡ ವಿದ್ಯಾರ್ಥಿಗಳಿಗೆ ಉಚಿತವಾಗಿ ಪಿಸಿ ಟ್ಯಾಬ್ಲೆಟ್ ವಿತರಿಸುತ್ತಿದೆ.
ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆಯಬೇಕು ಎಂದು ದಾವಣಗೆರೆ ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕ ಎಸ್.ಎ. ರವೀಂದ್ರನಾಥ್ ಕರೆ ನೀಡಿದರು. ನಗರದ ಸರ್ಕಾರಿ ಪ್ರಥಮದರ್ಜೆ ಕಾಲೇಜಿನಲ್ಲಿ ಬುಧವಾರ ಪ್ರಥಮ ಪದವಿ ವಿದ್ಯಾರ್ಥಿಗಳಿಗೆ ಉಚಿತ ಪಿಸಿ ಟ್ಯಾಬ್ಲೆಟ್ ವಿತರಣಾ ಕಾರ್ಯಕ್ರಮ ಮತ್ತು ಸ್ಮಾರ್ಟ್ ಕ್ಲಾಸ್ ಕೊಠಡಿ ಉದ್ಘಾಟನಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ವಿದ್ಯಾರ್ಥಿಗಳು ಪಿಸಿ ಟ್ಯಾಬ್ಲೆಟ್ಗಳನ್ನು ಆಟಿಕೆಗಳಾಗಿ ಬಳಸದೆ ಶೈಕ್ಷಣಿಕವಾಗಿ ಬಳಸಿಕೊಂಡು ಉನ್ನತ ಮಟ್ಟದ ಶಿಕ್ಷಣವನ್ನು ಪಡೆದು ಸದುಪಯೋಗ ಮಾಡಿಕೊಳ್ಳಬೇಕು. ಬಡ ವಿದ್ಯಾರ್ಥಿಗಳು ಉನ್ನತ ಶಿಕ್ಷಣ ಪಡೆಯಲು ಮೂಲ ಸೌಕರ್ಯಗಳಿಂದ ವಂಚಿತರಾಗುತ್ತಿದ್ದಾರೆ. ಹಣಕಾಸು ತೊಂದರೆಯಿಂದ ಖಾಸಗಿ ಕಾಲೇಜುಗಳಲ್ಲಿ ವಿದ್ಯಾಭ್ಯಾಸ ಮಾಡಲಾಗುತ್ತಿಲ್ಲ.
ಈ ಕಾರಣದಿಂದ ಶೇ. 80 ರಷ್ಟು ಬಡವರು, ಹಿಂದುಳಿದ ವಿದ್ಯಾರ್ಥಿಗಳು ಸರ್ಕಾರಿ ಕಾಲೇಜುಗಳಲ್ಲಿ ವಿದ್ಯಾಭ್ಯಾಸ ಪಡೆಯುತ್ತಿದ್ದು, ಅವರ ಶಿಕ್ಷಣಕ್ಕೆ ಯಾವುದೇ ತೊಂದರೆಯಾಗಬಾರದೆಂದು ಸರ್ಕಾರ ಪಿಸಿ ಟ್ಯಾಬ್ಲೆಟ್ ನೀಡಿ ಪ್ರೋತ್ಸಾಹಿಸುತ್ತಿದೆ ಎಂದರು.
ಮಹಾನಗರ ಪಾಲಿಕೆ ಮಹಾಪೌರ ಎಸ್.ಟಿ. ವೀರೇಶ್ ಮಾತನಾಡಿ, ನಾನಾ ಹೋರಾಟಗಳ ತಳಪಾಯದಿಂದ ಇಂದು ಸರ್ಕಾರಿ ಪ್ರಥಮದರ್ಜೆ ಕಾಲೇಜು ರಾಜ್ಯದಲ್ಲೇ ಎರಡನೆ ಅತೀ ದೊಡ್ಡ ಕಾಲೇಜು ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಪ್ರಸ್ತುತ ನಾಲ್ಕು ಸಾವಿರಕ್ಕೂ ಅಧಿಕ ವಿದ್ಯಾರ್ಥಿಗಳಿಗೆ ಪದವಿ ಶಿಕ್ಷಣ ನೀಡುತ್ತಿರುವುದು ಶ್ಲಾಘನೀಯ. ಮುಂದಿನ ದಿನಗಳಲ್ಲಿ ಮೊದಲ ಹಂತಕ್ಕೆ ತಲುಪಬೇಕೆಂದರೆ ವಿದ್ಯಾರ್ಥಿಗಳ ಸಹಕಾರ ಬೆಟ್ಟದಷ್ಟಿದೆ. ವಿದ್ಯಾರ್ಥಿಗಳು ಅಮೂಲ್ಯ ಸಮಯವನ್ನು ಅನಾವಶ್ಯಕವಾಗಿ ವ್ಯರ್ಥ ಮಾಡದೇ ಸರ್ಕರದ ಸವಲತ್ತುಗಳನ್ನು ಬಳಸಿಕೊಂಡು ಕಾಲೇಜಿಗೂ, ಜಿಲ್ಲೆಗೂ ಕೀರ್ತಿ ತರ ಬೇಕು ಎಂದು ಕಿವಿಮಾತು ಹೇಳಿದರು.
ಶಿವಮೊಗ್ಗ ವಲಯ ಕಾಲೇಜು ಶಿಕ್ಷಣ ಇಲಾಖೆ ಜಂಟಿ ನಿರ್ದೇಶಕ ಪೊ| ವೀರಭದ್ರಯ್ಯ ಕೆ.ಸಿ., ಮಹಾನಗರ ಪಾಲಿಕೆ ಸದಸ್ಯ ಜಿ. ಮಂಜುನಾಥ ಗೌಡ, ಐಕ್ಯೂಎಸಿ ಸಂಚಾಲಕ ಪೊ| ಟಿ. ವೀರೇಶ, ಐ.ಟಿ ವಿಭಾಗದ ಸಂಚಾಲಕ ಡಾ| ಮಂಜುನಾಥ ಜೆ.ಎಂ. ಸೇರಿದಂತೆ ಕಾಲೇಜಿನ ಬೋಧಕ, ಬೋಧಕೇತರ ಸಿಬ್ಬಂದಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮೋದಿ 3ನೇ ಬಾರಿ ಪ್ರಧಾನಿಯಾಗಲು ಸಹಕರಿಸಿ: ಗಾಯತ್ರಿ ಸಿದ್ದೇಶ್ವರ
ಕರ್ತವ್ಯ ಲೋಪ: ಪರೀಕ್ಷಾ ಕೇಂದ್ರದ ಕೊಠಡಿ ಮೇಲ್ವಿಚಾರಕ ರಿಯಾಜ್ ಅಹಮ್ಮದ್ ಅಮಾನತು
Election Campaign: ಮೋದಿಯವರಿಂದ ಮಹಿಳಾ ಶಕ್ತಿಗೆ ಮುನ್ನುಡಿ
Davanagere: ಬಿಜೆಪಿ ಅಸಮಾಧಾನ ತಣಿಸಿದ ಬಿಎಸ್ ವೈ; ರವೀಂದ್ರನಾಥ್ ಗೆ ಚುನಾವಣೆ ಹೊಣೆ
Gayatri Siddeshwar: ಮೋದಿ ಕೈ ಬಲಪಡಿಸಲು ಬಿಜೆಪಿ ಗೆಲ್ಲಿಸಿ; ಗಾಯತ್ರಿ
MUST WATCH
ಹೊಸ ಸೇರ್ಪಡೆ
ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ
Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ
Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ
Gobi Manchurian ಬ್ಯಾನ್ ಎಫೆಕ್ಟ್: ಚಾಟ್ಸ್ ಮಾರಾಟ ಕುಸಿತ
Book Brahma ಸ್ವಾತಂತ್ರ್ಯೋತ್ಸವ ಕಥಾ ಸ್ಪರ್ಧೆ, ಕಾದಂಬರಿ ಪುರಸ್ಕಾರ- 2024: ವಿವರಗಳು