ಮಣಿಪಾಲ ಆರೋಗ್ಯ ಕಾರ್ಡ್‌ ನೋಂದಣಿ ಆರಂಭ: ಮೋಹನ


Team Udayavani, Jul 8, 2021, 10:27 PM IST

8-17

ದಾವಣಗೆರೆ: ಮಣಿಪಾಲ ಆರೋಗ್ಯ ಕಾಡ್‌ ìನ 2021ರ ನೋಂದಣಿಗೆ ಈಗಾಗಲೇ ಚಾಲನೆ ನೀಡಲಾಗಿದ್ದು ನಾಗರಿಕರು ನೋಂದಣಿ ಮಾಡಿಸಿಕೊಂಡು ಆರೋಗ್ಯ ಕಾರ್ಡಿನ ಉಪಯೋಗ ಪಡೆದುಕೊಳ್ಳಬೇಕು ಎಂದು ಮಣಿಪಾಲ ಕಸ್ತೂರ್ಬಾ ಆಸ್ಪತ್ರೆಯ ಉಪ ವ್ಯವಸ್ಥಾಪಕ ಮೋಹನ ಶೆಟ್ಟಿ ತಿಳಿಸಿದರು.

ಬುಧವಾರ ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅವಿಭಜಿತ ದಕ್ಷಿಣಕನ್ನಡ ಜಿಲ್ಲೆಯ ಜನರಿಗೆ ಆರಂಭಿಸಿದ ಮಣಿಪಾಲ ಆರೋಗ್ಯ ಕಾರ್ಡ್‌ ಯೋಜನೆ ಇಂದು ದಾವಣಗೆರೆ, ಚಿತ್ರದುರ್ಗ, ಶಿವಮೊಗ್ಗ, ಚಿಕ್ಕಮಗಳೂರು, ಬಳ್ಳಾರಿ ಸೇರಿದಂತೆ ಕರಾವಳಿ ಕರ್ನಾಟಕ ಮತ್ತು ಮಧ್ಯಕರ್ನಾಟಕದ ಸುಮಾರು 12ಕ್ಕೂ ಹೆಚ್ಚು ಜಿಲ್ಲೆಗಳಿಗೆ ವಿಸ್ತರಣೆ ಮಾಡಲಾಗಿದೆ.

ಅಲ್ಲದೆ ಕೇರಳ, ಗೋವಾದಂಥ ನೆರೆಯ ರಾಜ್ಯಗಳಿಗೂ ವಿಸ್ತರಣೆಯಾಗಿದೆ. ಸದಸ್ಯತ್ವ ಶುಲ್ಕವಾಗಿ ಒಂದು ಸಣ್ಣ ಮೊತ್ತ ಪಾವತಿಸುವ ಮೂಲಕ ಯಾರಾದರೂ ಸದಸ್ಯತ್ವ ಪಡೆಯಬಹುದಾಗಿದೆ ಮತ್ತು ಅವರು ಕಾರ್ಡಿನ ಕೇವಲ ಎರಡು ಅಥವಾ ಮೂರು ಬಳಕೆಗಳಲ್ಲಿ ರಿಯಾಯಿತಿ ರೂಪದಲ್ಲಿ ಹೂಡಿಕೆಯನ್ನು ಮರಳಿ ಪಡೆಯಬಹುದಾಗಿದೆ ಎಂದರು.

ಕಾರ್ಡಿನ ಸದಸ್ಯತ್ವ ಒಬ್ಬರಿಗೆ 300ರೂ., ಕೌಟುಂಬಿಕ ಕಾರ್ಡ್‌ ಅಂದರೆ ಕಾರ್ಡುದಾರ, ಅವರ ಸಂಗಾತಿ, 25 ವರ್ಷದೊಳಗಿನ ಮಕ್ಕಳಿಗೆ ಸೇರಿ 600 ರೂ. ಮತ್ತು ಕುಟುಂಬ ಪ್ಲಸ್‌ ಯೋಜನೆಯಲ್ಲಿ ಕಾರ್ಡುದಾರ, ಅವರ ಸಂಗಾತಿ, 25 ವರ್ಷದೊಳಗಿನ ಮಕ್ಕಳು ಹಾಗೂ ನಾಲ್ಕು ಪೋಷಕರು (ತಂದೆ-ತಾಯಿ, ಅತ್ತೆ-ಮಾವ) ಸೇರಿ 750 ರೂ. ನಿಗದಿಪಡಿಸಲಾಗಿದೆ.

ಎರಡು ವರ್ಷದ ಯೋಜನೆಯಲ್ಲಿ ಒಬ್ಬರಿಗೆ 500 ರೂ., ಕುಟುಂಬಕ್ಕೆ 800 ರೂ. ಮತ್ತು ಕೌಟುಂಬಿಕ ಪ್ಲಸ್‌ ಯೋಜನೆಗೆ 950ರೂ. ಆಗಿದೆ ಎಂದು ವಿವರಿಸಿದರು. ಕಸ್ತೂರ್ಬಾ ಆಸ್ಪತ್ರೆಯ ಸಹಾಯಕ ವ್ಯವಸ್ಥಾಪಕ ಕೃಷ್ಣಪ್ರಸಾದ್‌ ಬಿ.ಎಸ್‌. ಮಾತನಾಡಿ, ಮಣಿಪಾಲ ಆರೋಗ್ಯ ಕಾರ್ಡ್‌ ಹೊಂದಿರುವವರಿಗೆ ಕೋವಿಡ್‌ ರೋಗಿಗಳಿಗೆ ಜನರಲ್‌ ವಾರ್ಡ್‌ನಲ್ಲಿ ಸರ್ಕಾರದ ಅನುಮೋದಿತ ಪ್ಯಾಕೇಜ್‌ನಲ್ಲಿ ಶೇ. 10ರಷ್ಟು ರಿಯಾಯಿತಿ, ವೈದ್ಯರ ಸಮಾಲೋಚನೆ ಶೇ. 50ರಷ್ಟು ರಿಯಾಯಿತಿ, ಪ್ರಯೋಗಾಲಯ ಪರೀಕ್ಷೆ ಶೇ. 30ರಷ್ಟು ರಿಯಾಯಿತಿ, ಸಿ.ಟಿ., ಎಂ.ಆರ್‌.ಐ, ಅಲ್ಟಾ ಸೌಂಡ್‌ನ‌ಲ್ಲಿ ಶೇ. 20 ರಷ್ಟು ರಿಯಾಯಿತಿ, ಹೊರರೋಗಿ ವಿಧಾನಗಳಲ್ಲಿ ಮತ್ತು ಮಧುಮೇಹ ಪಾದ ತಪಾಸಣೆಯಲ್ಲಿ ಶೇ. 20ರಷ್ಟು ರಿಯಾಯಿತಿ, ಹೊರರೋಗಿ ವಿಧಾನಗಳಲ್ಲಿ ಮತ್ತು ಮಧುಮೇಹ ಪಾದ ತಪಾಸಣೆಯಲ್ಲಿ ಶೇ. 20ರಷ್ಟು ರಿಯಾಯಿತಿ, ಔಷಧಾಲಯಗಳಲ್ಲಿ ಶೇ. 12 ರಷ್ಟು ರಿಯಾಯಿತಿ, ಸಾಮಾನ್ಯ ವಾರ್ಡಿನಲ್ಲಿ ಒಳರೋಗಿಯಾದಲ್ಲಿ ಉಪಯೋಗವಾಗುವ ವಸ್ತುಗಳನ್ನು ಹೊರತುಪಡಿಸಿ ಶೇ. 25 ರಷ್ಟು ರಿಯಾಯಿತಿ ದೊರೆಯಲಿದೆ.

ಕಾರ್ಡ್‌ ಹೊಂದಿರುವವರು ಕರಾವಳಿ ಕರ್ನಾಟಕ, ಗೋವಾ ಮಣಿಪಾಲ್‌ ಗ್ರೂಪ್‌ ಆಸ್ಪತ್ರೆಗಳಿಗೆ ಈ ಯೋಜನೆ ಅನ್ವಯಿಸುತ್ತದೆ. ಮಣಿಪಾಲ ಆರೋಗ್ಯ ಕಾರ್ಡಿನ ಪ್ರತಿನಿಧಿಯಾಗಬೇಕಾದಲ್ಲಿ ಅನಿಲ ನಾಯಕ್‌ (97406 18912) ಅವರನ್ನು ಸಂಪರ್ಕಿಸಬಹುದು. 2021ರ ನೋಂದಣಿಗಾಗಿ ಕೆಂಚನಗೌಡ (9731709177), ಕೆ.ಟಿ. ಚಂದ್ರಶೇಖರಪ್ಪ (99168 95421) ಸಂಪರ್ಕಿಸುವಂತೆ ತಿಳಿಸಿದರು.

ಆಸ್ಪತ್ರೆಯ ಪ್ರಮುಖರಾದ ಕೆ. ಸಚಿನ್‌ ಕಾರಂತ್‌, ಅನಿಲ್‌ ನಾಯ್ಕ, ಕೆಂಚನಗೌಡ ಕೆ.ಬಿ. ಇನ್ನಿತರರು ಸುದ್ದಿಗೋಷ್ಠಿಯಲ್ಲಿದ್ದರು.

ಟಾಪ್ ನ್ಯೂಸ್

1-qweqqweqwe

ಲೈಂಗಿಕ ಕಿರುಕುಳದೂರು ರಾಜಕೀಯ ಪ್ರೇರಿತ: ಪ.ಬಂಗಾಲ ಗವರ್ನರ್‌

Madikeri ವೃದ್ಧೆ ಸಾವು: ಸೊಸೆಗೆ ನ್ಯಾಯಾಂಗ ಬಂಧನ

Madikeri ವೃದ್ಧೆ ಸಾವು: ಸೊಸೆಗೆ ನ್ಯಾಯಾಂಗ ಬಂಧನ

Malpe ದಕ್ಕೆಯಲ್ಲಿ ನೀರಿಗೆ ಬಿದ್ದು ಸಾವು: ದೂರು ದಾಖಲು

Malpe ದಕ್ಕೆಯಲ್ಲಿ ನೀರಿಗೆ ಬಿದ್ದು ಸಾವು: ದೂರು ದಾಖಲು

bjpRoad Mishap ಉಳ್ಳಾಲ: ಬಿಜೆಪಿ ಕಾರ್ಯಕರ್ತ ಸಾವು

Road Mishap ಉಳ್ಳಾಲ: ಬಿಜೆಪಿ ಕಾರ್ಯಕರ್ತ ಸಾವು

Uppinangady ಹೃದಯಾಘಾತ; ಯುವಕ ಸಾವು

Uppinangady ಹೃದಯಾಘಾತ; ಯುವಕ ಸಾವು

IND VS PAK

ಪಾಕ್‌ಗೆ ರಾಜತಾಂತ್ರಿಕ ಸಭ್ಯತೆ ಇಲ್ಲ: ಭಾರತ ಕಿಡಿ

Kadaba ಪತಿಯ ಕಿರುಕುಳ ತಾಳಲಾರದೆ ಪತ್ನಿ ಆತ್ಮಹತ್ಯೆ

Kadaba ಪತಿಯ ಕಿರುಕುಳ ತಾಳಲಾರದೆ ಪತ್ನಿ ಆತ್ಮಹತ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಾಯಿತ್ರಿ ಸಿದ್ದೇಶ್ವರ ಪರ ಯದುವೀರ್ ಒಡೆಯರ್ ರೋಡ್ ಶೋ

Davanagere; ಗಾಯಿತ್ರಿ ಸಿದ್ದೇಶ್ವರ ಪರ ಯದುವೀರ್ ಒಡೆಯರ್ ರೋಡ್ ಶೋ

Lok Sabha Polls: ದಾವಣಗೆರೆ ಮಾದರಿ ಕ್ಷೇತ್ರವನ್ನಾಗಿಸುವ ಕನಸಿದೆ: ಗಾಯತ್ರಿ ಸಿದ್ದೇಶ್ವರ

Lok Sabha Polls: ದಾವಣಗೆರೆ ಮಾದರಿ ಕ್ಷೇತ್ರವನ್ನಾಗಿಸುವ ಕನಸಿದೆ: ಗಾಯತ್ರಿ ಸಿದ್ದೇಶ್ವರ

Davanagere; ಪರಿಷತ್ ಸದಸ್ಯ ಎನ್. ರವಿಕುಮಾರ್ ಅವರಿಗೆ ಮಾತೃ ವಿಯೋಗ

Davanagere; ಪರಿಷತ್ ಸದಸ್ಯ ಎನ್. ರವಿಕುಮಾರ್ ಅವರಿಗೆ ಮಾತೃ ವಿಯೋಗ

Davanagere; ದೇಶದ ಎಲ್ಲೆಡೆ ಮೋದಿ ಅಲೆ ಕಂಡು ಬರುತ್ತಿದೆ: ಶೋಭಾ ಕರಂದ್ಲಾಜೆ

Davanagere; ದೇಶದ ಎಲ್ಲೆಡೆ ಮೋದಿ ಅಲೆ ಕಂಡು ಬರುತ್ತಿದೆ: ಶೋಭಾ ಕರಂದ್ಲಾಜೆ

Lok Sabha Election: ಕಾಂಗ್ರೆಸ್‌ ಅಭ್ಯರ್ಥಿಗೆ ಸೋಲಿನ ಭೀತಿ: ಗಾಯತ್ರಿ ಸಿದ್ದೇಶ್ವರ

Lok Sabha Election: ಕಾಂಗ್ರೆಸ್‌ ಅಭ್ಯರ್ಥಿಗೆ ಸೋಲಿನ ಭೀತಿ: ಗಾಯತ್ರಿ ಸಿದ್ದೇಶ್ವರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqqweqwe

ಲೈಂಗಿಕ ಕಿರುಕುಳದೂರು ರಾಜಕೀಯ ಪ್ರೇರಿತ: ಪ.ಬಂಗಾಲ ಗವರ್ನರ್‌

Supreme Court

ಒಂದೇ ಹೆಸರಿರುವ ಅಭ್ಯರ್ಥಿಗಳ ಸ್ಪರ್ಧೆಗೆ ನಿಷೇಧ ಇಲ್ಲ: ಸುಪ್ರೀಂ

1-ewqeqewq

Eknath Shinde ಬಣ ಶಿವಸೇನೆ ಸೇರಿದ ಮಾಜಿ ಸಂಸದ ಸಂಜಯ ನಿರುಪಮ್‌

2000

2,000 ರೂ.ನ 97.76% ನೋಟು ವಾಪಸ್‌: ಆರ್‌ಬಿಐ

Madikeri ವೃದ್ಧೆ ಸಾವು: ಸೊಸೆಗೆ ನ್ಯಾಯಾಂಗ ಬಂಧನ

Madikeri ವೃದ್ಧೆ ಸಾವು: ಸೊಸೆಗೆ ನ್ಯಾಯಾಂಗ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.