ವರಾಹ ಶಾಲೆ ನಿರ್ಮಾಣಕ್ಕೆ ಅಗತ್ಯ ಕ್ರಮ


Team Udayavani, Jul 21, 2021, 6:09 PM IST

21-10

ದಾವಣಗೆರೆ: ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ಹಂದಿಗಳ ಹಾವಳಿ ನಿಯಂತ್ರಣ ನಿಟ್ಟಿನಲ್ಲಿ ಶೀಘ್ರದಲ್ಲಿಯೇ ಹಂದಿಗಳ ಸ್ಥಳಾಂತರಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿ ಕಾರಿ ಮಹಾಂತೇಶ ಬೀಳಗಿ ತಿಳಿಸಿದರು. ಮಂಗಳವಾರ ಹಂದಿಗಳ ಸ್ಥಳಾಂತರಕ್ಕೆ ಸಂಬಂಧಿ  ಸಿದಂತೆ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಅವರು, ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ತೀವ್ರವಾಗಿರುವ ಹಂದಿಗಳ ಹಾವಳಿಯನ್ನು ಶೀಘ್ರ ನಿವಾರಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವರು ಸೂಚನೆ ನೀಡಿದ್ದರು.

ಅಲ್ಲದೆ ಸಂಸದರು ಸೇರಿದಂತೆ ವಿವಿಧ ಜನಪ್ರತಿನಿಧಿ ಗಳಿಂದಲೂ ಒತ್ತಾಯ ಇದೆ. ಈ ಹಿನ್ನೆಲೆಯಲ್ಲಿ ಆದಷ್ಟು ಶೀಘ್ರ ಹಂದಿಗಳ ಸ್ಥಳಾಂತರ ಮಾಡಬೇಕು. ಜಿಲ್ಲಾಡಳಿತದಿಂದ ಜಾಗ ಇತರೆ ಸೌಲಭ್ಯ ನೀಡಲಾಗುವುದು ಎಂದರು. ಹಂದಿ ಹಾವಳಿಯಿಂದಾಗಿ ಸಾರ್ವಜನಿಕರ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತಿದೆ. ರಸ್ತೆಗಳಲ್ಲಿ ಬಿಡಾಡಿ ಹಂದಿಗಳ ಓಡಾಟದಿಂದಾಗಿ ಸಾಕಷ್ಟು ಅಪಘಾತಗಳೂ ಸಂಭವಿಸಿವೆ. ಅಲ್ಲಲ್ಲಿ ಮಕ್ಕಳ ಮೇಲೂ ಹಂದಿಗಳು ದಾಳಿ ಮಾಡಿ ಗಾಯಗೊಳಿಸಿರುವ ಬಗ್ಗೆ ಸಾರ್ವಜನಿಕರಿಂದ ಬಹಳಷ್ಟು ದೂರುಗಳಿವೆ. ಹಂದಿಗಳ ಹಾವಳಿಯನ್ನು ತಪ್ಪಿಸಲು ವರಾಹ ಶಾಲೆ ನಿರ್ಮಾಣಕ್ಕೆ ಜಿಲ್ಲಾಡಳಿತ ಅಂತಿಮ ನಿರ್ಧಾರ ಕೈಗೊಂಡಿದೆ ಎಂದು ತಿಳಿಸಿದರು. ವರಾಹ ಶಾಲೆ ನಿರ್ಮಾಣಕ್ಕೆ ಸಂಬಂಧಿಸಿದಂತೆ ಚರ್ಚಿಸಲು ಹಂದಿ ಮಾಲೀಕರ ಸಂಘದವರಿಗೆ ಸಭೆಗೆ ಆಹ್ವಾನಿಸಲಾಗಿತ್ತು. ಆದರೆ ಅವರು ಬಂದಿಲ್ಲ. ಹೀಗಾಗಿ ಜಿಲ್ಲಾಡಳಿತದಿಂದಲೇ ಅಂತಿಮ ನಿರ್ಧಾರ ಕೈಗೊಳ್ಳಲಾಗಿದೆ. ವರಾಹ ಶಾಲೆ ನಿರ್ಮಾಣಕ್ಕೆ ಕೆಲವೆಡೆ ಭೂಮಿ ಗುರುತಿಸಲಾಗಿದ್ದು, ಮಹಾನಗರಪಾಲಿಕೆಗೆ ಭೂಮಿ ಹಸ್ತಾಂತರಿಸುವ ಕಾರ್ಯವನ್ನು ತ್ವರಿತಗೊಳಿಸಲಾಗುವುದು.

ಮಹಾನಗರಪಾಲಿಕೆಯಿಂದ ಸುತ್ತಲೂ ಗುಣಮಟ್ಟದ ಕಾಂಪೌಂಡ್‌ ನಿರ್ಮಿಸಿ ನಗರದಲ್ಲಿ ಸಂಗ್ರಹಿಸಲಾಗುವ ಹಸಿ ಕಸವನ್ನು ವರಾಹಶಾಲೆಗೆ ಒದಗಿಸಲು ನಿರ್ಧರಿಸಲಾಗಿದೆ ಎಂದರು. ಮಹಾನಗರಪಾಲಿಕೆ ಆಯುಕ್ತ ವಿಶ್ವನಾಥ ಪಿ. ಮುದಜ್ಜಿ ಮಾತನಾಡಿ, ನಗರಪಾಲಿಕೆಗೆ ಕಸ ಸಾಗಾಣಿಕೆಗೆ ಸಂಬಂಧಿ ಸಿದ 13 ಹೊಸ ಆಟೋ ಟಿಪ್ಪರ್‌ ಖರೀದಿಸಲಾಗಿದೆ. ಹಸಿ ಕಸ ಸಾಗಾಟಕ್ಕೆ ಯಾವುದೇ ಸಮಸ್ಯೆ ಇಲ್ಲ ಎಂದು ಹೇಳಿದರು. ವರಾಹ ಶಾಲೆಯ ಸುತ್ತಮುತ್ತಲಿನ ಜನ ಅಥವಾ ಹೊಲ, ಜಮೀನುಗಳಿಗೆ ಯಾವುದೇ ತೊಂದರೆ ಆಗದಂತೆ ಮಹಾನಗರ ಪಾಲಿಕೆ ಸೂಕ್ತ ಕ್ರಮ ಕೈಗೊಳ್ಳಬೇಕು. ಹಂದಿ ಮಾಲೀಕರು ಜಿಲ್ಲಾಡಳಿತ ಕೈಗೊಳ್ಳುವ ನಿರ್ಧಾರಕ್ಕೆ ಸಹಕಾರ ನೀಡಬೇಕು. ವರಾಹ ಶಾಲೆ ನಿರ್ಮಿಸಿದ ಬಳಿಕ ಹಂದಿಗಳ ಸ್ಥಳಾಂತರಕ್ಕೆ ಮಾಲೀಕರಿಗೆ ಸಮಯ ನಿಗದಿಪಡಿಸಲಾಗುವುದು. ನಿಗದಿತ ಕಾಲಮಿತಿಯೊಳಗೆ ನಗರ ವ್ಯಾಪ್ತಿಯಲ್ಲಿನ ಎಲ್ಲ ಹಂದಿಗಳನ್ನು ವರಾಹಶಾಲೆಗೆ ಸ್ಥಳಾಂತರಿಸಬೇಕು. ಇಲ್ಲದಿದ್ದಲ್ಲಿ, ನಗರದಲ್ಲಿ ಕಂಡುಬರುವ ಹಂದಿಗಳನ್ನು ಮಹಾನಗರಪಾಲಿಕೆಯಿಂದಲೇ ಹಿಡಿದು, ಮಾರಾಟ ಮಾಡಲು ಕ್ರಮ ವಹಿಸಲಾಗುವುದು ಎಂದರು.

ಜಿಲ್ಲಾ ರಕ್ಷಣಾಧಿಕಾರಿ ಸಿ.ಬಿ. ರಿಷ್ಯಂತ್‌ ಮಾತನಾಡಿ, ಹಂದಿಗಳ ಹಾವಳಿ ಬಗ್ಗೆ ಸಾಕಷ್ಟು ದೂರುಗಳು ಬರುತ್ತಿವೆ. ನಗರದ ರಸ್ತೆಗಳಲ್ಲಿ ಹಂದಿಗಳ ಓಡಾಟದಿಂದಾಗಿ ಅಪಘಾತ ಪ್ರಕರಣಗಳು ಹೆಚ್ಚುತ್ತಿರುವುದು ಗಂಭೀರತೆಗೆ ನಿದರ್ಶನವಾಗಿದೆ. ವರಾಹ ಶಾಲೆ ನಿರ್ಮಿಸುವಾಗ ಕಾಂಪೌಂಡ್‌ ಕನಿಷ್ಠ 10 ಅಡಿ ಎತ್ತರವಿರಬೇಕು. ಗುಣಮಟ್ಟದ್ದಾಗಿರಬೇಕು. ಹಂದಿಗಳ ಓಡಾಟಕ್ಕೆ ಸಮರ್ಪಕವಾದ ಸ್ಥಳಾವಕಾಶ ಇರಬೇಕು.

ವರಾಹಶಾಲೆ ಬಳಿ ವಾಸನೆ ಬರುತ್ತದೆ ಎಂಬ ಬಗ್ಗೆ ಆಕ್ಷೇಪಣೆಗಳಿರುತ್ತವೆ. ಹಾಗಾಗಿ ಹಂದಿಗಳ ಸಾಕಾಣಿಕೆಯಲ್ಲಿ ವಾಸನೆ ಬಾರದಂತೆ ವಿದೇಶಗಳಲ್ಲಿ ಕೈಗೊಂಡಿರುವ ವಿಧಾನಗಳನ್ನು ಅರಿತು ಇಲ್ಲಿಯೂ ಅನುಸರಿಸಿದಲ್ಲಿ ವಾಸನೆಯ ಸಮಸ್ಯೆ ಪರಿಹಾರವಾಗಲಿದೆ ಎಂದು ತಿಳಿಸಿದರು. ಮಹಾನಗರ ಪಾಲಿಕೆ ಸಾರ್ವಜನಿಕ ಆರೋಗ್ಯ ಮತ್ತು ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷ ಎಲ್‌.ಡಿ. ಗೋಣೆಪ್ಪ ಸೇರಿದಂತೆ ವಿವಿಧ ಅಧಿಕಾರಿಗಳು ಇದ್ದರು.

ಟಾಪ್ ನ್ಯೂಸ್

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

RCBsvSRH; ಚಿನ್ನಸ್ವಾಮಿಯಲ್ಲಿ ರೆಕಾರ್ಡ್ಸ್ ಸುರಿಮಳೆ; ದಾಖಲೆಗಳ ವಿವರ ಇಲ್ಲಿದೆ

RCBsvSRH; ಚಿನ್ನಸ್ವಾಮಿಯಲ್ಲಿ ರೆಕಾರ್ಡ್ಸ್ ಸುರಿಮಳೆ; ದಾಖಲೆಗಳ ವಿವರ ಇಲ್ಲಿದೆ

Bus Falls From Bridge In Odisha’s Jajpur

Jajpur; ಸೇತುವೆಯಿಂದ ಬಿದ್ದ ಬಸ್; ಐವರು ಸಾವು, ಹಲವರಿಗೆ ಗಾಯ

‘Please sell the RCB team to someone else’; Tennis star appeal

IPL 2024; ‘ದಯವಿಟ್ಟು ಆರ್ ಸಿಬಿ ತಂಡವನ್ನು ಬೇರೆಯವರಿಗೆ ಮಾರಿ ಬಿಡಿ’; ಟೆನ್ನಿಸ್ ತಾರೆ ಮನವಿ

Lok Sabha Elections ಈಶ್ವರಪ್ಪ ಸ್ಪರ್ಧೆಯಿಂದ ಬಿಜೆಪಿಗೆ ಲಾಭ: ಆರ್‌. ಅಶೋಕ್‌

Lok Sabha Elections ಈಶ್ವರಪ್ಪ ಸ್ಪರ್ಧೆಯಿಂದ ಬಿಜೆಪಿಗೆ ಲಾಭ: ಆರ್‌. ಅಶೋಕ್‌

ಎ. 20ರಂದು ಮತ್ತೆ ರಾಜ್ಯಕ್ಕೆ ಪ್ರಧಾನಿ ಮೋದಿ?

Lok Sabha Election; ಎ. 20ರಂದು ಮತ್ತೆ ರಾಜ್ಯಕ್ಕೆ ಪ್ರಧಾನಿ ಮೋದಿ?

Daily Horoscope

Daily Horoscope; ಈ ರಾಶಿಯವರಿಗೆ ಏಳೂವರೆ ಶನಿಯ ಕೊನೆಯ ಹಂತದಲ್ಲಿ ಶುಭವಾಗುವ ಲಕ್ಷಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Davanagere: ನಾಮಪತ್ರ ಸಲ್ಲಿಸಿದ ಬಿಜೆಪಿ- ಕಾಂಗ್ರೆಸ್ ಅಭ್ಯರ್ಥಿಗಳು

Davanagere: ನಾಮಪತ್ರ ಸಲ್ಲಿಸಿದ ಬಿಜೆಪಿ- ಕಾಂಗ್ರೆಸ್ ಅಭ್ಯರ್ಥಿಗಳು

Lok Sabha Election: ಜಗಳೂರನ್ನು ಬರಪೀಡಿತ ಪಟ್ಟಿಯಿಂದ ಹೊರ ತರುವೆ: ಗಾಯತ್ರಿ ಸಿದ್ದೇಶ್ವರ

Lok Sabha Election: ಜಗಳೂರನ್ನು ಬರಪೀಡಿತ ಪಟ್ಟಿಯಿಂದ ಹೊರ ತರುವೆ: ಗಾಯತ್ರಿ ಸಿದ್ದೇಶ್ವರ

Davanagere; ಕಾಂಗ್ರೆಸ್ ಸಂಧಾನ ವಿಫಲ; ನಾಮಪತ್ರ ಹಿಂಪಡೆಯಲು ವಿನಯ್ ಕುಮಾರ್ ನಕಾರ

Davanagere; ಕಾಂಗ್ರೆಸ್ ಸಂಧಾನ ವಿಫಲ; ನಾಮಪತ್ರ ಹಿಂಪಡೆಯಲು ವಿನಯ್ ಕುಮಾರ್ ನಕಾರ

5-dvg

Davangere: ಹರಪನಹಳ್ಳಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಮತ ಬೇಟೆ

Lok Sabha Election: ದಾವಣಗೆರೆ-ಚನ್ನಗಿರಿ ಹೆದ್ದಾರಿ ಮೇಲ್ದರ್ಜೆಗೆ: ಗಾಯತ್ರಿ ಸಿದ್ದೇಶ್ವರ್‌

Lok Sabha Polls: ದಾವಣಗೆರೆ-ಚನ್ನಗಿರಿ ಹೆದ್ದಾರಿ ಮೇಲ್ದರ್ಜೆಗೆ: ಗಾಯತ್ರಿ ಸಿದ್ದೇಶ್ವರ್‌

MUST WATCH

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

udayavani youtube

ಕೇಕ್ ಪ್ರಿಯರಿಗೆ ಹೇಳಿ ಮಾಡಿಸಿದ ಜಾಗ ಔರಾ .

udayavani youtube

ಶ್ರೀ ವೈಷ್ಣವಿ ದುರ್ಗಾ ದೇವಾಲಯ

udayavani youtube

ಟೈಟನ್ ಕಂಪೆನಿಯ Xylys ವಾಚ್ ವಿಶೇಷತೆಗಳೇನು ?

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

ಹೊಸ ಸೇರ್ಪಡೆ

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

RCBsvSRH; ಚಿನ್ನಸ್ವಾಮಿಯಲ್ಲಿ ರೆಕಾರ್ಡ್ಸ್ ಸುರಿಮಳೆ; ದಾಖಲೆಗಳ ವಿವರ ಇಲ್ಲಿದೆ

RCBsvSRH; ಚಿನ್ನಸ್ವಾಮಿಯಲ್ಲಿ ರೆಕಾರ್ಡ್ಸ್ ಸುರಿಮಳೆ; ದಾಖಲೆಗಳ ವಿವರ ಇಲ್ಲಿದೆ

Bus Falls From Bridge In Odisha’s Jajpur

Jajpur; ಸೇತುವೆಯಿಂದ ಬಿದ್ದ ಬಸ್; ಐವರು ಸಾವು, ಹಲವರಿಗೆ ಗಾಯ

‘Please sell the RCB team to someone else’; Tennis star appeal

IPL 2024; ‘ದಯವಿಟ್ಟು ಆರ್ ಸಿಬಿ ತಂಡವನ್ನು ಬೇರೆಯವರಿಗೆ ಮಾರಿ ಬಿಡಿ’; ಟೆನ್ನಿಸ್ ತಾರೆ ಮನವಿ

Lok Sabha Elections ಈಶ್ವರಪ್ಪ ಸ್ಪರ್ಧೆಯಿಂದ ಬಿಜೆಪಿಗೆ ಲಾಭ: ಆರ್‌. ಅಶೋಕ್‌

Lok Sabha Elections ಈಶ್ವರಪ್ಪ ಸ್ಪರ್ಧೆಯಿಂದ ಬಿಜೆಪಿಗೆ ಲಾಭ: ಆರ್‌. ಅಶೋಕ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.