ಇಂದ್ರಜಿತ್ ಲಂಕೇಶ್ ಬಹಿರಂಗ ಕ Òಮೆ ಯಾಚನೆಗೆ ಆಗ್ರಹ
Team Udayavani, Jul 22, 2021, 6:29 PM IST
ದಾವಣಗೆರೆ: ಕನ್ನಡ ಚಿತ್ರರಂಗದ ಖ್ಯಾತ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಮತ್ತು ಅವರ ಅಭಿಮಾನಿಗಳ ಕುರಿತಂತೆ ಅವಹೇಳನಕಾರಿಯಾಗಿ ಮಾತನಾಡಿರುವ ನಿರ್ದೇಶಕ ಇಂದ್ರಜಿತ್ ಲಂಕೇಶ್ ಜು. 22ರ ಒಳಗಾಗಿ ಬಹಿರಂಗ ಕ್ಷಮೆ ಯಾಚಿಸಬೇಕು ಎಂದು ಅಖೀಲ ಕರ್ನಾಟಕ ದರ್ಶನ್ ತೂಗುದೀಪ್ ಅಭಿಮಾನಿಗಳ ಸಂಘದ ಜಿಲ್ಲಾಧ್ಯಕ್ಷ ಕೆ.ಜಿ. ಚಂದ್ರು ಹೇಳಿದರು. ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕನ್ನಡದ ವರನಟ ಡಾ| ರಾಜ್ಕುಮಾರ್ ರವರು ಅಭಿಮಾನಿಗಳನ್ನು ದೇವರು ಎಂದು ಕರೆಯುತ್ತಿದ್ದರು.
ಅದೇ ಹಾದಿಯಲ್ಲಿ ದರ್ಶನ್ ಅಭಿಮಾನಿಗಳನ್ನು ಸೆಲೆಬ್ರಿಟಿಗಳು ಎಂದು ಕರೆಯುತ್ತಾರೆ. ದರ್ಶನ್ ಅಭಿಮಾನಿಗಳನ್ನು ಇಂದ್ರಜಿತ್ ಲಂಕೇಶ್ ರೌಡಿಗಳು ಎಂದು ಕರೆದಿರುವುದು ಅತ್ಯಂತ ಖಂಡನೀಯ. ಗುರುವಾರದ ಒಳಗೆ ಅವರು ಬಹಿರಂಗವಾಗಿ ಕ್ಷಮೆ ಯಾಚಿಸಬೇಕು. ಇಲ್ಲದಿದಲ್ಲಿ ಕಾನೂನು ಒಳಗೊಂಡಂತೆ ತೀವ್ರ ಸ್ವರೂಪದ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಸಿದರು.
ಇಂದ್ರಜಿತ್ ಲಂಕೇಶ್, ನಟ ದರ್ಶನ್ ಅವರ ವೈಯಕ್ತಿಕ ವಿಚಾರಗಳ ಬಗ್ಗೆಯೂ ಮಾತನಾಡಿದ್ದಾರೆ. ತಮಗೆ ಸಂಬಂಧವೇ ಇಲ್ಲದ ವಿಷಯ ಮುಂದಿಟ್ಟುಕೊಂಡು ಪ್ರಚಾರ ಮತ್ತು ಇಮೇಜ್ ಬೆಳೆಸಿಕೊಳ್ಳಲು ಮಾತನಾಡಿದ್ದಾರೆ. ದರ್ಶನ್ ಜನ್ಮದಿನದಂದು ಅನೇಕ ಅಭಿಮಾನಿಗಳು ವೃದ್ಧಾಶ್ರಮ, ಅಂಧ ಮಕ್ಕಳ ಶಾಲೆ ಇತರೆಡೆ ಪಡಿತರ ದಾನ ನೀಡುತ್ತಿದ್ದಾರೆ. ದರ್ಶನ್ರವರ ಮನವಿ ಮೇರೆಗೆ ಅನೇಕರು ಪ್ರಾಣಿಗಳನ್ನು ದತ್ತು ತೆಗೆದುಕೊಂಡರು.
ಅಂತಹ ಅಭಿಮಾನಿಗಳನ್ನು ಇಂದ್ರಜಿತ್ ಲಂಕೇಶ್ ರೌಡಿಗಳು ಎಂದು ಕರೆದಿರುವುದು ಸರಿ ಅಲ್ಲ. ಕೂಡಲೇ ಬಹಿರಂಗವಾಗಿ ಕ್ಷಮೆ ಯಾಚಿಸಬೇಕು ಎಂದು ಒತ್ತಾಯಿಸಿದರು. ಅರುಣ್ಕುಮಾರ್, ಸುರೇಶ್, ಮಂಜು, ಸತೀಶ್, ಅಜಯ್ ಕುಮಾರ್, ವಿಕ್ಕಿ, ಯಶಸ್, ಮೌನೇಶ್, ವಿಜಯ್ಕುಮಾರ್ ಸುದ್ದಿಗೋಷ್ಠಿಯಲ್ಲಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ಕಾಂಗ್ರೆಸ್ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ
Davanagere: ಮತದಾನ ಜಾಗೃತಿ ಲಾಂಛನದಲ್ಲಿ ಅಪರೂಪದ ಪ್ರಾಣಿ ಚಿತ್ರ ಬಳಕೆ
Neha Hiremath Case; ಬಿಜೆಪಿ-ಜೆಡಿಎಸ್-ಎಬಿವಿಪಿಯಿಂದ ರಾಜ್ಯದೆಲ್ಲೆಡೆ ಪ್ರತಿಭಟನೆ
Gayatri Siddeshwar: ಅಡಕೆ ಮೌಲ್ಯವರ್ಧನೆಗೆ ಯೋಜನೆ: ಗಾಯಿತ್ರಿ
ಇಂದು ಕಾಂಗ್ರೆಸ್ ವಿರುದ್ಧ ಬಿಜೆಪಿ ಚಿಪ್ಪು ಹಿಡಿದು ಪ್ರತಿಭಟನೆ: ರವಿಕುಮಾರ್
MUST WATCH
ಹೊಸ ಸೇರ್ಪಡೆ
AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ
Bengaluru: ಕದಂಬ ಹೋಟೆಲ್ ಸ್ಫೋಟ ಮಾಡುವುದಾಗಿ ಬೆದರಿಕೆ
Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ
Rameshwaram Cafe Case: ರಾಮೇಶ್ವರಂ ಕೆಫೆ ಸ್ಫೋಟ ಶಂಕಿತರು ಮತ್ತೆ 7 ದಿನ ಎನ್ಐಎ ವಶಕ್ಕೆ
FIR: ಬಾಲಕಿಗೆ ಲೈಂಗಿಕ ದೌರ್ಜನ್ಯ, ಆರೋಪಿ ಬಂಧನ: ಎಫ್ಐಆರ್