ಹಾಲ್‌ಮಾರ್ಕ್‌ ಕಡ್ಡಾಯದಿಂದ ತೊಂದರೆ ಜಾಸ್ತಿ: ಬದ್ರಿನಾಥ್‌


Team Udayavani, Aug 23, 2021, 6:59 PM IST

23-11

ದಾವಣಗೆರೆ: ಕೇಂದ್ರ ಸರ್ಕಾರ ಚಿನ್ನದ ಆಭರಣಗಳಿಗೆ ಎಚ್‌ಯುಐಡಿ ಕಡ್ಡಾಯಗೊಳಿಸಿರುವುದನ್ನು ವಿರೋಧಿಸಿ ಆ. 23 ರಂದು ದಾವಣಗೆರೆ ಒಳಗೊಂಡಂತೆ ದೇಶದಾದ್ಯಂತ ಚಿನ್ನ, ಬೆಳ್ಳಿ ಅಂಗಡಿಗಳನ್ನು ಬಂದ್‌ ಮಾಡಲಾಗುವುದು ಎಂದು ದಿ| ದಾವಣಗೆರೆ ಜ್ಯೂಯಲರ್ ಅಸೋಸಿಯೇಷನ್‌ ಉಪಾಧ್ಯಕ್ಷ ಆರ್‌.ಡಿ. ಬದ್ರಿನಾಥ್‌ ತಿಳಿಸಿದರು.

ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೇಂದ್ರ ಸರ್ಕಾರ ಚಿನ್ನದ ಆಭರಣಗಳಿಗೆ ಕಡ್ಡಾಯಗೊಳಿಸಿರುವ ಎಚ್‌ ಯುಐಡಿಯಿಂದ (ಹಾಲ್‌ಮಾರ್ಕ್‌ ಯೂನಿಕ್‌ ಐಡೆಂಟಿಕೇಷನ್‌ ಡಿಸ್ಕಿಪ್ಷನ್‌) ಚಿನ್ನ, ಬೆಳ್ಳಿ ವರ್ತಕರು ತೊಂದರೆ ಅನುಭವಿಸಬೇಕಾಗುತ್ತದೆ. ಎಚ್‌ಯುಐಡಿ ರದ್ದುಗೊಳಿಸಬೇಕು ಇಲ್ಲವೇ ಸರಳೀಕಣಗೊಳಿಸಬೇಕು ಎಂದು ಒತ್ತಾಯಿಸಿ ಸೋಮವಾರ ದೇಶದಾದ್ಯಂತ ಚಿನ್ನ-ಬೆಳ್ಳಿ ಅಂಗಡಿಗಳನ್ನು ಬಂದ್‌ ಮಾಡುವ ಮೂಲಕ ಕೇಂದ್ರ ಸರ್ಕಾರದ ಗಮನ ಸೆಳೆಯಲಾಗುವುದು. ದಾವಣಗೆರೆ ನಗರದಲ್ಲಿ 700ಕ್ಕೂ ಅಧಿಕ ಚಿನ್ನ-ಬೆಳ್ಳಿ ಅಂಗಡಿಗಳನ್ನು ಬಂದ್‌ ಮಾಡಲಾಗುವುದು ಎಂದರು.

ಕೇಂದ್ರ ಸರ್ಕಾರ ಚಿನ್ನದ ಆಭರಣಗಳಿಗೆ ಎಚ್‌ಯುಐಡಿ ಕಡ್ಡಾಯ ಮಾಡಿರುವುದರಿಂದ ಚಿನ್ನ-ಬೆಳ್ಳಿ ವ್ಯಾಪಾರಸ್ಥರಿಗೆ ಸಾಕಷ್ಟು ಸಮಸ್ಯೆ ಆಗುತ್ತದೆ. ಯಾವುದೇ ಚಿನ್ನ-ಬೆಳ್ಳಿ ಆಭರಣ ತಯಾರಿಸಿ ನೋಂದಣಿ ಹಾಗೂ ಎಚ್‌ಯುಐಡಿ ಮಾಡಿದ ನಂತರ ಯಾವುದೇ ಕಾರಣಕ್ಕೂ ಆಭರಣಗಳ ವಿನ್ಯಾಸ, ತೂಕದಲ್ಲಿ ಬದಲಾವಣೆ ಮಾಡುವಂತೆಯೇ ಇಲ್ಲ. ಗ್ರಾಹಕರು ಏನೇ ಇಷ್ಟಪಟ್ಟರೂ ವ್ಯಾಪಾರಸ್ಥರು ಏನೂ ಮಾಡುವಂತಿಲ್ಲ. ಹಾಗಾಗಿ ಸಾಕಷ್ಟು ಸಮಸ್ಯೆ ಆಗುತ್ತದೆ ಎಂದು ಹೇಳಿದರು. ಎಚ್‌ಯುಐಡಿ ಕಡ್ಡಾಯ ಮಾಡಿರುವುದರಿಂದ ಲೆಕ್ಕಪತ್ರ ಇಡುವುದು, ವ್ಯಾಪಾರ-ವಹಿವಾಟು ನಡೆಸುವುದು ಒಳಗೊಂಡಂತೆ ಸಾಕಷ್ಟು ಪ್ರಾಯೋಗಿಕ ತೊಂದರೆಗಳನ್ನ ಅನುಭವಿಸಬೇಕಾಗುತ್ತದೆ.

ನಂಬಿಕೆ ಮತ್ತು ವಿಶ್ವಾಸದ ಆಧಾರದ ಮೇಲೆಯೆ ನಡೆಯುವಂತಹ ಚಿನ್ನ-ಬೆಳ್ಳಿ ವ್ಯಾಪಾರ ಮುಂದುವರಿಸುವುದಕ್ಕೆ ತೊಂದರೆ ಆಗುತ್ತದೆ. ಹಾಗಾಗಿ ಕೇಂದ್ರ ಸರ್ಕಾರ ಚಿನ್ನದ ಆಭರಣಗಳಿಗೆ ಎಚ್‌ಯುಐಡಿ ಕಡ್ಡಾಯಗೊಳಿಸಿರುವುದನ್ನ ಕೈ ಬಿಡಬೇಕು ಇಲ್ಲವೇ ಸರಳೀಕರಣಗೊಳಿಸಬೇಕು ಎಂದು ಒತ್ತಾಯಿಸಿದರು. ಚಿನ್ನ-ಬೆಳ್ಳಿ ಆಭರಣಗಳಲ್ಲಿ ತಯಾರಿಕೆ ಒಳಗೊಂಡಂತೆ ಎಲ್ಲ ಹಂತದಲ್ಲಿ ಪಾರದರ್ಶಿಕತೆ, ಪರಿಶುದ್ದತೆ ಕಾಪಾಡಿ ಕೊಳ್ಳುವ ಸರ್ಕಾರದ ಉದ್ದೇಶವನ್ನ ಸ್ವಾಗತಿಸುತ್ತೇವೆ.

ಆದರೆ ಗ್ರಾಹಕರು ಅಪೇಕ್ಷೆ, ಹಣ, ಬೇಡಿಕೆಗೆ ಅನುಗುಣವಾಗಿ ಎಚ್‌ಯುಐಡಿ ಕಡ್ಡಾಯದಿಂದ ವ್ಯಾಪಾರ-ವಹಿವಾಟು ನಡೆಸುವುದು ಕಷ್ಟವಾಗುತ್ತದೆ. ಚಿನ್ನ-ಬೆಳ್ಳಿ ವಹಿವಾಟು ಕ್ಷೇತ್ರದಲ್ಲಿ ಪರಿಶುದ್ಧತೆ, ಪಾರದರ್ಶಿಕತೆ ಬಯಸುವಂತಹ ಸರ್ಕಾರ ರಾಜಸ್ತಾನದ ಕುಂದನ್‌ ಜ್ಯೂಯಲರಿ, ಝಡಾವ್‌ ಜ್ಯೂಯಲರಿಗೆ ಎಚ್‌ಯುಐಡಿನಿಂದ ರಿಯಾಯತಿ ನೀಡುವ ಮೂಲಕ ಮಲತಾಯಿ ಧೋರಣೆ ಅನುಸರಿಸುತ್ತಿದೆ ಎಂದು ದೂರಿದರು. ಸಂಘದ ಗೌರವಾಧ್ಯಕ್ಷ ಶಂಕರ್‌ ಎನ್‌. ವಿಠuಲಕರ್‌, ಅಧ್ಯಕ್ಷ ಅರುಣಾಚಲ ಎನ್‌. ರೇವಣಕರ್‌, ನಲ್ಲೂರು ಎಸ್‌. ರಾಜ್‌ಕುಮಾರ್‌, ಮಂಜುನಾಥ್‌ ವರ್ಣೇಕರ್‌ ಸುದ್ದಿಗೋಷ್ಠಿಯಲ್ಲಿದ್ದರು.

ಟಾಪ್ ನ್ಯೂಸ್

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

bjp-congress

E.C.ನೋಟಿಸ್‌ಗೆ ಉತ್ತರಿಸಲು ಸಮಯ ಕೇಳಿದ ಬಿಜೆಪಿ, ಕಾಂಗ್ರೆಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.