ಕೆಟ್ಟ ರಾಜಕಾರಣ ಮಾಡಲ್ಲ

ಮಾಯಕೊಂಡ ಶಾಸಕ ಪ್ರೊ. ಎನ್‌. ಲಿಂಗಣ್ಣ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.

Team Udayavani, Jan 23, 2021, 5:01 PM IST

Davanagere

ದಾವಣಗೆರೆ: ತಾವು ಯಾವುದೇ ಅತೃಪ್ತರ ಗುಂಪಿನಲ್ಲಿ ಇಲ್ಲ. ಮಾಧ್ಯಮಗಳಲ್ಲಿ ವರದಿ ಆಗಿರುವಂತೆ ಗುರುವಾರ ಬೆಂಗಳೂರಿನಲ್ಲಿ ನಡೆದ ಸಭೆಯಲ್ಲಿ ಪಾಲ್ಗೊಂಡಿರಲಿಲ್ಲ. ಮುಂದೆಯೂ ಆ ರೀತಿಯ ಯಾವುದೇ ಸಭೆಯಲ್ಲಿ ಭಾಗವಹಿಸುವುದೂ ಇಲ್ಲ ಎಂದು ಮಾಯಕೊಂಡ ಶಾಸಕ ಪ್ರೊ. ಎನ್‌. ಲಿಂಗಣ್ಣ ಸ್ಪಷ್ಟಪಡಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿ ಬಿ.ಎಸ್‌.    ಯಡಿಯೂರಪ್ಪ ಆವರು ನನಗೆ ತಂದೆ ಸಮಾನರು. ರಾಜಕೀಯ ಗುರುಗಳು. ಅವರ ಮತ್ತು ಪಕ್ಷದ ವಿರುದ್ಧವಾಗಿ ಮಾತನಾಡುವುದೇ ಇಲ್ಲ. ಕ್ಷೇತ್ರದ ಜನರು ನನ್ನನ್ನು ಬಿಜೆಪಿ ಅಭ್ಯರ್ಥಿಯಾಗಿ ಗೆಲ್ಲಿಸಿದ್ದಾರೆ. ನಾನು ಎಂದೆಂದಿಗೂ ಕೆಟ್ಟ ರಾಜಕಾರಣ ಮಾಡುವುದಿಲ್ಲ. ರಾಜಕೀಯ ಮಾಡಿಯೇ ಜೀವನ ನಡೆಸಬೇಕು ಎಂಬ ಅನಿವಾರ್ಯತೆಯೂ ನನಗೆ ಇಲ್ಲ ಎಂದರು.

ಇದನ್ನೂ ಓದಿ : ಯುವ ಸಮ್ಮೇಳನದಲ್ಲಿ ಐದು ನಿರ್ಣಯ ಮಂಡನೆ

ದಾವಣಗೆರೆ ಜಿಲ್ಲೆಯವರಿಗೆ ಸಚಿವ ಸ್ಥಾನ ನೀಡಬೇಕು ಎಂಬುದಕ್ಕೆ ನನ್ನ ಸಹಮತ ಇದೆ. ಆದರೆ, ಆ ಎಲ್ಲವೂ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಬಿಟ್ಟಂತಹ ವಿಚಾರ. ಬಹಳಷ್ಟು ರಾಜಕೀಯ ನೈಪುಣ್ಯತೆ ಹೊಂದಿರುವ ಯಡಿಯೂರಪ್ಪ ಆವರಿಗೆ ಯಾವ ರೀತಿ ನಿರ್ಧಾರ ತೆಗೆದುಕೊಳ್ಳಬೇಕು ಎಂಬುದು ಚೆನ್ನಾಗಿ ಗೊತ್ತಿದೆ. ಹಾಗಾಗಿ ನಾನು ಯಾವುದೇ ಕಾರಣ, ಎಂತಹ ಸಂದರ್ಭದಲ್ಲೇ ಆಗಲಿ ಅವರ ವಿರುದ್ಧ ಮಾತನಾಡುವುದೇ ಇಲ್ಲ ಎಂದು ತಿಳಿಸಿದರು.

ನನಗಿಂತಲೂ ಹಿರಿಯರಾದ ಎಸ್‌.ಎ. ರವೀಂದ್ರನಾಥ್‌, ಎಂ.ಪಿ. ರೇಣುಕಾಚಾರ್ಯ, ಮಾಡಾಳ್‌ ವಿರೂಪಾಕ್ಷಪ್ಪ ಇರುವಾಗ ನಾನು ಮಂತ್ರಿ ಸ್ಥಾನ ಕೇಳಲಿಕ್ಕೆ ಆಗುತ್ತದೆಯೇ ನನಗೆ ನಿಗಮದ ಆಧ್ಯಕ್ಷನನ್ನಾಗಿ ಮಾಡಿ, ಸಂಪುಟ ಸಚಿವ ಮಟ್ಟದ ಸ್ಥಾನಮಾನ ನೀಡಲಾಗಿದೆ. ಅದನ್ನೇ ಚೆನ್ನಾಗಿ ನಿಭಾಯಿಸಿಕೊಂಡು ಹೋಗುತ್ತೇನೆ. ಮುಂದೆ ನನಗೆ ಎಂಎಲ್‌ಎ ಟಿಕೆಟ್‌ ನೀಡದಿದ್ದರೂ ಪರವಾಗಿಲ್ಲ. ಯಡಿಯೂರಪ್ಪ ವಿರುದ್ಧ ಮಾತನಾಡುವುದೇ ಇಲ್ಲ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು. ಆಶ್ರಯ ಸಮಿತಿ ಸದಸ್ಯ ಸುರೇಂದ್ರಪ್ಪ, ದಿಶಾ ಸಮಿತಿಯ ಚಂದ್ರೇಗೌಡ, ನಾಗರಾಜ್‌, ದಾದಾಪೀರ್‌, ಬಾವಿಹಾಳ್‌ ಅಜ್ಜಯ್ಯ ಸುದ್ದಿಗೋಷ್ಠಿಯಲ್ಲಿದ್ದರು.

ಇದನ್ನೂ ಓದಿ : ಮಿತಿ-ಸಾಮರ್ಥ್ಯ ಮೀರಿ ಗಣಿಗಾರಿಕೆ ನಡೆಸಿದರೆ ಕಠಿಣ ಕ್ರಮ: ಸುನೀಲಕುಮಾರ

ಟಾಪ್ ನ್ಯೂಸ್

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

ಚನ್ನಮ್ಮನ ಕಿತ್ತೂರು: ಮಹಾನ್‌ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ

ಚನ್ನಮ್ಮನ ಕಿತ್ತೂರು: ಮಹಾನ್‌ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.