ಕನ್ನಡ ಸಾಹಿತ್ಯದ ಕಲ್ಯಾಣ ಅಗತ್ಯ: ವೀರಭದ್ರಪ್ಪ

ಕನ್ನಡ ಭಾಷೆ ಉಳಿಸಿ-ಬೆಳೆಸುವಲ್ಲಿ ಸೋಲು

Team Udayavani, Jan 25, 2021, 3:15 PM IST

DAvanagere

ದಾವಣಗೆರೆ: ಪ್ರಸ್ತುತ ವಾತಾವರಣದಲ್ಲಿ ಸಾಹಿತ್ಯದ ಕಲ್ಯಾಣವಾಗಬೇಕು ಎಂದು ಕುವೆಂಪು ವಿಶ್ವವಿದ್ಯಾಲಯದ ಕುಲಪತಿ ಪ್ರೊ| ಬಿ.ಪಿ. ವೀರಭದ್ರಪ್ಪ ಆಶಿಸಿದ್ದಾರೆ.

ಓದಿ :  48 ಎಂಪಿ ಎಐ ಟ್ರಿಪಲ್ ಕ್ಯಾಮೆರಾದೊಂದಿಗೆ ವೀವೊ ವೈ 31 ಮಾರುಕಟ್ಟೆಯಲ್ಲಿ ಲಭ್ಯ

ಶ್ರೀ ಸಿದ್ದಗಂಗಾ ವಿದ್ಯಾಸಂಸ್ಥೆಯಲ್ಲಿ ಭಾನುವಾರ ಮಕರ ಸಂಕ್ರಮಣ, ಕಲಾಕುಂಚ 31ನೇ ವರ್ಷದ  ಸಂಸ್ಥಾಪನಾ ದಿನಾಚರಣೆ ಅಂಗವಾಗಿ ರಾಜ್ಯಮಟ್ಟದ ಸಂಕ್ರಾಂತಿ ಕವಿಗೋಷ್ಠಿ ಉದ್ಘಾಟಿಸಿ ಅವರು ಮಾತನಾಡಿದರು.

ಇಂದಿನ ವಾಣಿಜ್ಯೀಕರಣದ ಭರಾಟೆಯಲ್ಲಿ ಸಾಂಸ್ಕೃತಿಕವಾಗಿ ಬೆಳೆಯದೆ ಎಲ್ಲೋ ಒಂದು ಕಡೆ ಸಮಾಜ ಹಣದ ಹಿಂದೆ ಹೋಗುತ್ತಿದ ಸಮುದಾಯದಲ್ಲಿನ ವ್ಯವಹಾರಿಕ ಚಿಂತನೆಗಳು ಮಾಡುತ್ತಾ ಸಮಾಜವನ್ನು ನಿರ್ಲಕ್ಷಿಸುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದರು.
ಇತ್ತೀಚಿನ ದಿನಗಳಲ್ಲಿ ಯಾರು ಕನ್ನಡ ಸಾಹಿತ್ಯಕ್ಕೆ ಒತ್ತು ಕೊಡದೆ, ಇಂಗ್ಲಿಷ್‌ನತ್ತ ಗಮನ ಹರಿಸುತ್ತಾರೆ. ನಮಗೆ ಎಲ್ಲ ಭಾಷೆ ಮುಖ್ಯ. ಆದರೆ, ಮೊದಲು ಮಾತೃಭಾಷೆಗೆ ಮಹತ್ವ ಕೊಡುವಂತಾಗಬೇಕು. ಕನ್ನಡ ಭಾಷೆಯನ್ನು ಬೆಳೆಸುವಲ್ಲಿ, ಉಳಿಸುವಲ್ಲಿ ಸೋಲುತ್ತಿದ್ದೇವೆ ಎಂದು
ವಿಷಾದಿಸಿದರು.

ಮೈಸೂರು, ಮಂಗಳೂರು, ಬೆಳಗಾವಿ, ಬೀದರ್‌, ಧಾರವಾಡ ಜಿಲ್ಲೆಗಳಲ್ಲಿ ಮಾತನಾಡುವ ಭಾಷೆ ಕನ್ನಡವಾದರು ಎಷ್ಟು ವ್ಯತ್ಯಾಸವಿದೆ ಎಂಬುದನ್ನು ಅರಿತು ಅಲ್ಲಿಯ ಸೊಗಡನ್ನು ಅರ್ಥ ಮಾಡಿಕೊಳ್ಳಬೇಕು. ಕಾಸರಗೋಡು, ಗೋವಾ, ಮುಂಬೈ ಗಡಿಗಳಲ್ಲಿ ಆದಂತಹ ಬೆಳವಣಿಗೆಗಳು ಕನ್ನಡದ ಹಿರಿಮೆಯನ್ನು ಬೆಳೆಸಿದೆ ಎಂದರು.

17 ಮತ್ತು 18ನೇ ಶತಮಾನದಲ್ಲಿ ಹಣದ ಹಾಗೂ ಕಲ್ಯಾಣದ ಶಾಸ್ತ್ರದಲ್ಲಿ ಹೆಚ್ಚಾಗಿ ಹೇಳಿರುವುದು ಹಣಕ್ಕಿಂತ ಕಲ್ಯಾಣ ಮುಖ್ಯ ಎಂದು ಅದಕ್ಕೆ ಪ್ರಾಮುಖ್ಯತೆ ನೀಡುತ್ತಿದ್ದರು. ಇದೀಗ ನಮಗೆ ಯಾವ ಕಲ್ಯಾಣ ಮುಖ್ಯ ಎಂಬುದನ್ನು ನೋಡಿದರೆ, ಅತೀ ಹೆಚ್ಚಾಗಿ ಎಲ್ಲರೂ ಸಾಂಸ್ಕೃತಿಕ, ಸಮುದಾಯದ ಕಲ್ಯಾಣಗಳತ್ತ ಗಮನ ಹರಿಸುತ್ತಾರೆ. ಇಂದು ಸಾಹಿತ್ಯದ ಕಲ್ಯಾಣವಾಗಬೇಕು ಎಂದು ತಿಳಿಸಿದರು.
ಏಷ್ಯ ಮತ್ತು ಆಫ್ರಿಕಾ ಖಂಡದ ಬಹುತೇಕ ರಾಷ್ಟ್ರಗಳಲ್ಲಿ ಬಡತನ, ನಿರುದ್ಯೋಗ, ಹಸಿವು, ಸಾಮಾಜಿಕ ಹಾಗೂ ಆರ್ಥಿಕ ದೌರ್ಬಲ್ಯಗಳಿರುವುದಿಲ್ಲ. ಅಲ್ಲಿನ ಜನರು ಕಾಯಕ ತತ್ವಗಳನ್ನು ಪ್ರತಿಪಾದಿಸದೆ ತಮ್ಮ ಕೆಲಸ ಮಾಡುವುದಿಲ್ಲ. ಆದರೆ, ನಮ್ಮ ದೇಶದಲ್ಲಿ ತತ್ವದ ಪಾಲನೆಗಿಂತ ಹೆಚ್ಚಾಗಿ ಹಣಕ್ಕೆ ಮಹತ್ವ ಕೊಡುತ್ತಿರುವುದು ದುಸ್ಥಿತಿಯಾಗಿದೆ ಎಂದು ತಿಳಿಸಿದರು.

ಓದಿ :  ‘ಲವ್‌ ಯೂ ರಚ್ಚು’ ಫ‌ಸ್ಟ್‌ ಲುಕ್‌ ಬಿಡುಗಡೆ

ಹಳೆಗನ್ನಡ ಅಥವಾ ಹೊಸಗನ್ನಡ ಯಾವುದಾದರೂ ಆಗಲಿ ಸಾಹಿತ್ಯ ಬೆಳೆಸುವಲ್ಲಿ ಬಹಳಷ್ಟು ಪರಿಶ್ರಮ ಇದೆ. ಪ್ರಾಚೀನ ಸಾಹಿತ್ಯಗಳೊಂದಿಗೆ ಬರಗೂರು ರಾಮಚಂದ್ರಪ್ಪ, ಚನ್ನವೀರ ಕಣವಿ, ಕಲಬುರ್ಗಿ, ತ್ರಿವೇಣಿ, ಚಂದ್ರಶೇಖರ ಪಾಟೀಲ್‌, ಭಗವಾನ್‌ ಸೇರಿದಂತೆ ಮಹಾನ್‌ ಚಿಂತಕರ ಸಾಹಿತ್ಯಗಳನ್ನು ನಾವೆಲ್ಲರೂ ಓದಿ, ಜೀವನದಲ್ಲಿ ಅನುಸರಿಸಿಕೊಳ್ಳಬೇಕು. ಸಾಹಿತ್ಯವನ್ನು ಬೆಳೆಸಬೇಕು ಎಂದು ತಿಳಿಸಿದರು.
ಕುವೆಂಪು ವಿಶ್ವವಿದ್ಯಾನಿಲಯ ದೊಡ್ಡ ಸಾಧನೆ ಮಾಡಿದೆ. ಕರ್ನಾಟಕದ 70 ವಿಶ್ವವಿದ್ಯಾಲಯದ ಪೈಕಿ ಮೊದಲನೇ ಸ್ಥಾನದಲ್ಲಿದೆ. ಭಾರತದ 1ಸಾವಿರ ವಿವಿಯ ಪೈಕಿ 73ನೇ ಸ್ಥಾನದಲ್ಲಿದೆ. ಆದರೆ ಆ ಸ್ಥಾನವನ್ನು 33ನೇ ಸ್ಥಾನಕ್ಕೆ ತರಬೇಕೆಂಬ ಪ್ರಯತ್ನದಲ್ಲಿದ್ದೇನೆ. ಏಷ್ಯಾದ 5
ಸಾವಿರ ವಿವಿ ಪೈಕಿ 451ನೇ ಸ್ಥಾನದಲ್ಲಿದೆ ಎಂದು ಸಂತಸ ವ್ಯಕ್ತಪಡಿಸಿದರು.

ಯಕ್ಷಗಾನ ಕಲಾವಿದ ನಾಗೇಶ ಅಣೆÌàಕರ್‌ ಅಧ್ಯಕ್ಷತೆ ವಹಿಸಿದ್ದರು. ಪದ್ಮಾ ಮೂರ್ತಿ, ಗಿರಿಜಾ ಮಾಲೀ ಪಾಟೀಲ್‌, ಸಿದ್ಧಗಂಗಾ ವಿದ್ಯಾಸಂಸ್ಥೆ ಮುಖ್ಯಸ್ಥೆ ಜಸ್ಟೀನ್‌ ಡಿಸೌಜಾ, ಸುಬ್ರಮಣ್ಯ ನಾಡಿಗೇರ್‌, ಈ.ರವೀಶ, ಸೋಮನಾಥ ಸಾಲಿಮಠ, ಕಲಾಕುಂಚ ಸಂಸ್ಥೆಯ ಸಂಸ್ಥಾಪಕ ಸಾಲಿಗ್ರಾಮ ಗಣೇಶ್‌ಶೆಣೈ, ಅಧ್ಯಕ್ಷ ಕೆ.ಎಚ್‌. ಮಂಜುನಾಥ್‌, ಹೇಮಾ ಶಾಂತಪ್ಪ ಪೂಜಾರಿ ಇತರರಿದ್ದರು.

ಓದಿ :  ಕನ್ನಡದಲ್ಲೂ ಬರ್ತಿದೆ ಆರ್‌ಜಿವಿ ‘ಡಿ ಕಂಪೆನಿ’

ಟಾಪ್ ನ್ಯೂಸ್

1-aaa-1

Rain; ರಾಜ್ಯದ ವಿವಿಧೆಡೆ ಸಿಡಿಲಬ್ಬರದ ಮಳೆ; ಕುಷ್ಟಗಿಯಲ್ಲಿ ರೈತ ಬಲಿ, ಅಪಾರ ನಷ್ಟ

1-weewqewqe

LS Election; ದಿಂಗಾಲೇಶ್ವರ ಶ್ರೀ ಕೋಟ್ಯಧಿಪತಿ: 3 ಅಪರಾಧ ಪ್ರಕರಣಗಳು ಇವೆ

crime (2)

Bengaluru: ಪಾರ್ಕ್ ನಲ್ಲಿ ಹಾಡಹಗಲೇ ಜೋಡಿಯ ಬರ್ಬರ ಹತ್ಯೆ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Billionaire Priyanka; Here is the property details of Satish Jarakiholi’s daughter

Belagavi; ಕೋಟ್ಯಾಧೀಶೆ ಪ್ರಿಯಾಂಕಾ; ಸತೀಶ್ ಜಾರಕಿಹೊಳಿ ಮಗಳ ಆಸ್ತಿ ವಿವರ ಇಲ್ಲಿದೆ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Election Campaign: ಕಾಂಗ್ರೆಸ್‌ನಲ್ಲಿಲ್ಲ ಮೋದಿಗೆ ಸಮಾನ ನಾಯಕತ್ವ: ಗಾಯಿತ್ರಿ ಸಿದ್ದೇಶ್ವರ

Election Campaign: ಕಾಂಗ್ರೆಸ್‌ನಲ್ಲಿಲ್ಲ ಮೋದಿಗೆ ಸಮಾನ ನಾಯಕತ್ವ: ಗಾಯಿತ್ರಿ ಸಿದ್ದೇಶ್ವರ

Gayathri Siddeshwar: ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗಾಯಿತ್ರಿ ಜನ್ಮದಿನ ಆಚರಣೆ

Gayathri Siddeshwar: ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗಾಯಿತ್ರಿ ಜನ್ಮದಿನ ಆಚರಣೆ

Eshwarappa ವಿರುದ್ಧ ಕ್ರಮದ ಬಗ್ಗೆ ಪಕ್ಷದಿಂದಲೇ ನಿರ್ಧಾರ: ಯಡಿಯೂರಪ್ಪ

Eshwarappa ವಿರುದ್ಧ ಕ್ರಮದ ಬಗ್ಗೆ ಪಕ್ಷದಿಂದಲೇ ನಿರ್ಧಾರ: ಯಡಿಯೂರಪ್ಪ

Davanagare: ಚುನಾವಣಾ ತರಬೇತಿಗೆ ಚಕ್ಕರ್; ಅನುಚಿತ ವರ್ತನೆಗೆ ಶಿಕ್ಷಕ ಅಮಾನತು

Davanagare: ಚುನಾವಣಾ ತರಬೇತಿಗೆ ಚಕ್ಕರ್; ಅನುಚಿತ ವರ್ತನೆಗೆ ಶಿಕ್ಷಕ ಅಮಾನತು

ನಾಮಪತ್ರ ಸಲ್ಲಿಸಿದ ದಾವಣಗೆರೆ ಲೋಕಸಭಾ ಬಿಜೆಪಿ ಅಭ್ಯರ್ಥಿ ಗಾಯಿತ್ರಿ ಸಿದ್ದೇಶ್ವರ

ನಾಮಪತ್ರ ಸಲ್ಲಿಸಿದ ದಾವಣಗೆರೆ ಲೋಕಸಭಾ ಬಿಜೆಪಿ ಅಭ್ಯರ್ಥಿ ಗಾಯಿತ್ರಿ ಸಿದ್ದೇಶ್ವರ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

11

ಆಲೆಟ್ಟಿ: ಅರಣ್ಯಕ್ಕೆ ತಗುಲಿದ ಬೆಂಕಿ

Payaswini river: ಪಯಸ್ವಿನಿ ನದಿಯಲ್ಲಿ ಮುಳುಗಿ ಓರ್ವ ಸಾವು

Payaswini river: ಪಯಸ್ವಿನಿ ನದಿಯಲ್ಲಿ ಮುಳುಗಿ ಓರ್ವ ಸಾವು

death

Kollegala: ಕಾಡಾನೆ ದಾಳಿಗೆ ವ್ಯಕ್ತಿ ಬಲಿ

Tiger

Ponnampet; ಹುಲಿ ದಾಳಿಗೆ ಅಸ್ಸಾಂ ಮೂಲದ ಕಾರ್ಮಿಕ ಬಲಿ

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.