Davanagere; ಆಧಾರ್,ಅಧಿಕಾರಿಗಳ ಸೀಲು, ಸಹಿ ನಕಲು ಮಾಡಿಕೊಡುತ್ತಿದ್ದ ಆರೋಪಿ ಬಂಧನ
Team Udayavani, Nov 9, 2023, 8:56 PM IST
ದಾವಣಗೆರೆ: ಆಧಾರ್ ತಿದ್ದುಪಡಿ, ನವೀಕರಣ ಅರ್ಜಿ ನಮೂನೆಯ ಪತ್ರಾಂಕಿತ ಅಧಿಕಾರಿಯಂತೆ ಸೀಲು ಮತ್ತು ಸಹಿ ನಕಲು ಮಾಡಿಕೊಡುತ್ತಿದ್ದ ಆರೋಪಿ ಯನ್ನು ದಾವಣಗೆರೆಯ ಬಸವನಗರ ಪೊಲೀಸರು ಬಂಧಿಸಿದ್ದಾರೆ.
ದಾವಣಗೆರೆ ತಾಲೂಕಿನ ಪುಟಗನಾಳ್ ಗ್ರಾಮದ ಪತ್ರ ಬರಹಗಾರ ಬಸವರಾಜಪ್ಪ ಅಲಿಯಾಸ್ ಬಸವಂತಪ್ಪ (70) ಬಂಧಿತ ಆರೋಪಿ. ದಾವಣಗೆರೆಯ ಪ್ರಧಾನ ಅಂಚೆ ಕಚೇರಿಯ ಮುಖ್ಯ ಅಂಚೆಪಾಲಕ ಸದ್ಯೋಜಾತಪ್ಪ ಅವರು ಕರ್ತವ್ಯ ದಲ್ಲಿದ್ದಾಗ ಅಂಚೆ ಕಚೇರಿ ಆಧಾರ್ ಸೇವಾ ಕೇಂದ್ರದಲ್ಲಿ ಆಧಾರ್ ವಿಳಾಸ ಮತ್ತು ವಯಸ್ಸು ತಿದ್ದುಪಡಿ ಮಾಡಿಕೊಡಲು ಗ್ರಾಹಕರು ಸಲ್ಲಿಸಿದ ನಿಗದಿತ ಅರ್ಜಿ ನಮೂನೆಯಲ್ಲಿ ಪತ್ರಾಂಕಿತ ಅಧಿಕಾರಿಯು ದೃಢೀಕರಣ ಸಹಿ ಮಾಡಬೇಕಾಗಿದ್ದು ಪತ್ರಾಂಕಿತ ಅಧಿಕಾರಿಯ ಸಹಿ ಮತ್ತು ಸೀಲು ಹಾಕುವ ಸ್ಥಳದಲ್ಲಿ ಹಿರಿಯ ತಜ್ಞರು. ಸಿ.ಜಿ.ಹೆಚ್. ದಾವಣಗೆರೆ ಎಂಬ ನಕಲು ಸೀಲನ್ನು ಸೃಷ್ಟಿ ಮಾಡಿಕೊಂಡು ಪತ್ರಾಂಕಿತ ಅಧಿಕಾರಿ ಎಂದು ಹಸಿರು ಶಾಯಿಯಿಂದ ನಕಲು ಸಹಿ ಮಾಡಿರುವುದು ಕಂಡು ಬಂದಿತ್ತು.
ನಕಲು ಸಹಿ ಮಾಡಿದ ವ್ಯಕ್ತಿಯ ವಿರುದ್ದ ಸೂಕ್ತ ಕಾನೂನು ಕ್ರಮ ಜರುಗಿಸಿ ಅಂತಾ ನೀಡಿದ ಮೇರೆಗೆ ಪ್ರಕರಣ ದಾಖಲಿಸಿಕೊಂಡು ಪೊಲೀಸರು ಆರೋಪಿ ಬಸವರಾಜಪ್ಪ ಅಲಿಯಾಸ್ ಬಸವಂತಪ್ಪನನ್ನು ವಶಕ್ಕೆ ತೆಗೆದುಕೊಂಡು ಕೃತ್ಯಕ್ಕೆ ಉಪಯೋಗಿಸಿದ ನಕಲಿ ಪರಿಕರಗಳನ್ನು ವಶಪಡಿಸಿಕೊಂಡಿದ್ದಾರೆ.
ದಾವಣಗೆರೆ ಪ್ರಧಾನ ಅಂಚೆ ಕಚೇರಿಯ ಮುಂಭಾಗದಲ್ಲಿ ಆಧಾರ್ ತಿದ್ದುಪಡಿ ಅರ್ಜಿ ನಮೂನೆಯಲ್ಲಿನ ಪತ್ರಾಂಕಿತ ಅಧಿಕಾರಿಯ ದೃಢೀಕರಣ ಮಾಡುವ ಪತ್ರಾಂಕಿತ ಅಧಿಕಾರಿಯ ಸಹಿ ಮತ್ತು ಸೀಲು ಹಾಕುವ ಸ್ಥಳದಲ್ಲಿ ಹಿರಿಯ ತಜ್ಞರು. ಸಿ.ಜಿ.ಹೆಚ್. ದಾವಣಗೆರೆ.ಎಂದು ನಕಲು ಸೀಲನ್ನು ಹಾಕಿ ನಾನೇ ಪತ್ರಾಂಕಿತ ಅಧಿಕಾರಿ ಎಂದು ಹಸಿರು ಶಾಯಿಯಿಂದ ನಕಲು ಸಹಿ ಮಾಡಿರುತ್ತೇನೆ ಎಂದು ಒಪ್ಪಿ ಕೊಂಡಿದ್ದಾನೆ. ಬಸವನಗರ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕ ಎಚ್ ಗುರುಬಸವರಾಜ ನೇತೃತ್ವದಲ್ಲಿ ಪಿಎಸ್ ಐ ಜಿ ನಾಗರಾಜ, ಸಿಬ್ಬಂದಿಗಳಾದ ಶಿವಪ್ಪ, ಮಹಮದ್ ರಫಿ, ಗಿರೀಶ್, ಕವಿತಾ, ಅಣ್ಣಯ್ಯ ಲಮಾಣಿ, ಅಮರೇಶ್ ಸಂಗಮ್ ಅವರನ್ನೊಳಗೊಂಡ ಆರೋಪಿ ಯನ್ನ ಬಂಧಿಸಿದೆ.
ಜಿಲ್ಲಾ ರಕ್ಷಣಾಧಿಕಾರಿ ಉಮಾ ಪ್ರಶಾಂತ್,ಹೆಚ್ಚುವರಿ ಅಧೀಕ್ಷಕ ವಿಜಯಕುಮಾರ್ ಎಂ. ಸಂತೋಷ ಕಾರ್ಯಾಚರಣೆ ತಂಡಕ್ಕೆ ಪ್ರಶಂಸೆ ವ್ಯಕ್ತಪಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ
Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ
MUST WATCH
ಹೊಸ ಸೇರ್ಪಡೆ
Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ
Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು
Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ
Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್
IPL; ಮೆಕ್ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ