ಭದ್ರಾ ಜಲಾಶಯ ಭರ್ತಿ: ಕಾಡಾ ಅಧ್ಯಕ್ಷೆ ಸಂತಸ
Team Udayavani, Jul 30, 2021, 10:21 AM IST
ದಾವಣಗೆರೆ: ಭದ್ರಾ ಜಲಾಶಯ ಒಂದು ತಿಂಗಳ ಮುಂಚೆಯೇ ತುಂಬಿರುವುದರಿಂದ ಅಚ್ಚುಕಟ್ಟು ವ್ಯಾಪ್ತಿಯ ರೈತರ ಮೊಗದಲ್ಲಿ ಮಂದಹಾಸ ಕಂಡು ಬರುತ್ತಿದೆ ಎಂದು ಭದ್ರಾ ಕಾಡಾ ಪ್ರಾಧಿಕಾರದ ಅಧ್ಯಕ್ಷೆ ಕೆ.ಬಿ. ಪವಿತ್ರಾ ರಾಮಯ್ಯ ಸಂತಸ ವ್ಯಕ್ತಪಡಿಸಿದರು.
ಭದ್ರಾ ಜಲಾಶಯಕ್ಕೆ ಭೇಟಿ ನೀಡಿದ ನಂತರ ಮಾತನಾಡಿದ ಅವರು, ಅಚ್ಚುಕಟ್ಟು ವ್ಯಾಪ್ತಿಯ ಲಕ್ಷಾಂತರ ಹೆಕ್ಟೇರ್ ಪ್ರದೇಶದ ಅನ್ನದಾತರ ಹಾಗೂ ಜನ ಸಾಮಾನ್ಯರ ಜೀವನಾಡಿಯಾದ ಭದ್ರಾ ಜಲಾಶಯದ ಜಲಾನಯನ ಪ್ರದೇಶದಲ್ಲಿ ಕಳೆದ ಒಂದು ವಾರದಿಂದ ಅತಿ ಹೆಚ್ಚಿನ ವರ್ಷಧಾರೆಯ ಕಾರಣ ಭದ್ರೆ ತನ್ನ ಗತವೈಭವವನ್ನು ಮರಳಿ ಪಡೆದಿರುವ ಕಾರಣ ರೈತರಲ್ಲಿ ಸಂತಸ ಕಂಡು ಬರುತ್ತಿದೆ ಎಂದರು.
ಕಳೆದ 15 ದಿನಗಳ ಹಿಂದೆ ಎಡ ಮತ್ತು ಬಲ ನಾಲೆಗಳಿಗೆ ನೀರು ಹರಿಸುವ ಸಂಬಂಧ ನಡೆಸಿದ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ವ್ಯಕ್ತವಾಗಿದ್ದ ನೀರಿನ ಕೊರತೆಯ ಆತಂಕ ದೂರವಾಗಿದೆ. ಈ ಬಾರಿ ಒಂದು ತಿಂಗಳ ಮುಂಚೆಯೇ ಭದ್ರಾ ಜಲಾಶಯ ತುಂಬಿದೆ. ಪ್ರತಿ ಬಾರಿ ಆಗಸ್ಟ್ ತಿಂಗಳಲ್ಲಿ ಜಲಾಶಯ ಭರ್ತಿಯಾಗುವುದು ವಾಡಿಕೆ. ಆದರೆ, ಈ ವರ್ಷ ಒಂದು ತಿಂಗಳ ಮುಂಚೆ ಜಲಾಶಯ ತುಂಬಿರುವುದು ವಿಶೇಷ ದಾಖಲೆಯಾಗಿದೆ ಎಂದರು.
ಈ ಬಾರಿಯೂ ಬೇಸಿಗೆ ಬೆಳೆಗೆ ನೀರು ಲಭ್ಯ ಆಗುವುದರಲ್ಲಿ ಅನುಮಾನವೇ ಇಲ್ಲ. ಕಳೆದ ಬಾರಿ ಅಚ್ಚುಕಟ್ಟು ಕೊನೆಯ ಭಾಗಕ್ಕೆ ನೀರು ಹರಿಸಿದಂತೆ ಮುಂಗಾರು ಬೆಳೆಗಳಿಗೆ ಕೂಡ ನೀರು ಹರಿಸುತ್ತೇವೆ. ನಾನು ಅ ಧಿಕಾರದಲ್ಲಿ ಇರುವವರೆಗೆ ರೈತರಿಗೆ ನೀರಿನ ವಿಚಾರದಲ್ಲಿ ತೊಂದರೆ ಆಗಲು ಬಿಡುವುದಿಲ್ಲ ಎಂದು ತಿಳಿಸಿದರು.
ನಿರ್ದೇಶಕ ವಿನಾಯಕ್, ಅ ಧೀಕ್ಷಕ ಅಭಿಯಂತರ ಚಂದ್ರಹಾಸ, ಕಾರ್ಯಪಾಲಕ ಅಭಿಯಂತರ ರವಿಚಂದ್ರ, ಸಹಾಯಕ ಕಾರ್ಯಪಾಲಕ ಅಭಿಯಂತರ ವೆಂಕಟೇಶ್ ಇತರರು ಇದ್ದರು.
ಇದನ್ನೂ ಓದಿ : ಸಿನಿಮಾ ಕ್ಯೂ: ಆಗಸ್ಟ್ ಇಪ್ಪತ್ತು: ಎಲ್ರೂ ಒಟ್ಟಿಗೆ ಬಂದ್ರೆ ಆಪತ್ತು!
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ
PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ
Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್ಗೆ ಜೀವ ಬೆದರಿಕೆ
MUST WATCH
ಹೊಸ ಸೇರ್ಪಡೆ
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ
IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ; ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ
Team India: ಟಿ20 ವಿಶ್ವಕಪ್ ತಂಡ ರಾಹುಲ್ಗೆ ಚಾನ್ಸ್, ಹಾರ್ದಿಕ್ ಪಾಂಡ್ಯಗೆ ಕೊಕ್?