Davanagere: ಬಿಜೆಪಿ ಅಸಮಾಧಾನ ತಣಿಸಿದ ಬಿಎಸ್ ವೈ; ರವೀಂದ್ರನಾಥ್ ಗೆ ಚುನಾವಣೆ ಹೊಣೆ


Team Udayavani, Mar 26, 2024, 7:45 PM IST

Davanagere: ಬಿಜೆಪಿ ಅಸಮಾಧಾನ ತಣಿಸಿದ ಬಿಎಸ್ ವೈ; ರವೀಂದ್ರನಾಥ್ ಗೆ ಚುನಾವಣೆ ಹೊಣೆ

ದಾವಣಗೆರೆ: ಲೋಕಸಭಾ ಚುನಾವಣೆ ಟಿಕೆಟ್ ವಿಷಯವಾಗಿ ಕೆಲ ಮುಖಂಡರಲ್ಲಿನ ಅಸಮಾಧಾನದ ಬೇಗುದಿ ತಣಿಸುವಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಯಶಸ್ವಿಯಾಗಿದ್ದಾರೆ.

ಲೋಕಸಭಾ ಚುನಾವಣೆಯ ಟಿಕೆಟ್ ಘೋಷಣೆ ನಂತರ ಬದಲಾವಣೆ ಮಾಡಬೇಕು ಎಂದು ಪಟ್ಟು ಹಿಡಿದಿದ್ದ ಮಾಜಿ ಸಚಿವರಾದ ಎಸ್.ಎ. ರವೀಂದ್ರನಾಥ್, ಎಂ.ಪಿ. ರೇಣುಕಾಚಾರ್ಯ, ಜಿ. ಕರುಣಾಕರರೆಡ್ಡಿ, ಮಾಜಿ ಶಾಸಕ ರಾದ ಡಾ| ಎ.ಎಚ್. ಶಿವಯೋಗಿಸ್ವಾಮಿ, ಎಂ. ಬಸವರಾಜನಾಯ್ಕ, ಟಿ. ಗುರುಸಿದ್ದನಗೌಡ, ಪುತ್ರ ಡಾ| ಟಿ.ಜಿ. ರವಿಕುಮಾರ್, ಮುಖಂಡ ಮಾಡಾಳ್ ಮಲ್ಲಿಕಾರ್ಜುನ್, ಮಾಜಿ ಮೇಯರ್ ಅಜಯ್ ಕುಮಾರ್, ರೈತ ಮೋರ್ಚಾ ರಾಜ್ಯ ಉಪಾಧ್ಯಕ್ಷ ಲೋಕಿಕೆರೆ ನಾಗರಾಜ್, ಎಲ್.ಎನ್. ಕಲ್ಲೇಶ್ ಇತರರೊಂದಿಗೆ ಮಂಗಳವಾರ ದಾವಣಗೆರೆ ಹೊರ ವಲಯದ ಅಪೂರ್ವ ರೆಸಾರ್ಟ್‌ನಲ್ಲಿ ಅತ್ಯಂತ ಸುದೀರ್ಘ ಮಹತ್ವದ ಸಭೆ ನಡೆಸಿದ ಯಡಿಯೂರಪ್ಪ, ರಾಜ್ಯ ಚುನಾವಣಾ ಉಸ್ತುವಾರಿ ರಾಧಾಮೋಹನ್ ದಾಸ್ ಅಗರವಾಲ್, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರು ಭಿನ್ನ ಮತ ತಣಿಸಿದರು. ಇದರಿಂದ ಕಮಲ ಪಾಳೆಯದಲ್ಲಿನ ಆತಂಕ ದೂರವಾದಂತೆ ಆಗಿದೆ.

ಅಸಮಾಧಾನಿತರ ಗುಂಪಿನ ಮುಂಚೂಣಿಯಲ್ಲಿದ್ದಂತಹ ಮಾಜಿ ಸಚಿವ ಎಸ್.ಎ. ರವೀಂದ್ರನಾಥ್ ಅವರ ನೇತೃತ್ವದಲ್ಲೇ ಲೋಕಸಭಾ ಚುನಾವಣೆ ಎದುರಿಸಲು ಸಹ ಸಭೆ ತೀರ್ಮಾನಿಸಲಾಗಿದೆ.

ಬಿಜೆಪಿಯ ಸುಭದ್ರಕೋಟೆ ಎಂದೇ ಗುರುತಿಸಲ್ಪಡುವ ದಾವಣಗೆರೆ ಜಿಲ್ಲೆಯಲ್ಲಿ ಭಿನ್ನಮತ, ಅಸಮಾಧಾನ ಇಷ್ಟೊಂದು ಪ್ರಮಾಣದಲ್ಲಿ ಹೊರ ಬಂದಿದ್ದು ಅದೂ ಮಾಜಿ ಸಚಿವರು, ಶಾಸಕರು, ವಿವಿಧ ಜನ ಪ್ರತಿನಿಧಿಗಳಿಂದ ಇದೇ ಪ್ರಥಮ. ಸಂಸದರು ಹೊರ ಜಿಲ್ಲೆಯವರು ಎಂಬ ಕೂಗು ಒಂದೆರೆಡು ಚುನಾವಣೆಯಲ್ಲಿ ವಿಪಕ್ಷಗಳಿಂದ ಕೇಳಿ ಬಂದಿತ್ತು. ಈ ಬಾರಿಯ ಲೋಕಸಭಾ ಚುನಾವಣೆ ಸಮೀಪಿಸುತ್ತಿರುವಂತೆ ಬಿಜೆಪಿಯಲ್ಲೇ ಕೇಳಿ ಬರುವಂತಾಗಿತ್ತು. ಹೊಸಬರಿಗೆ ಟಿಕೆಟ್ ಎನ್ನುವ ಒತ್ತಾಯವು ಪ್ರಬಲವಾಗಿತ್ತು.

ಸ್ವಪಕ್ಷದಲ್ಲೇ ವ್ಯಕ್ತವಾಗುತ್ತಿರುವ ವಿರೋಧದ ಕೂಗಿನ ಸುಳಿವರಿತ ಹೈಕಮಾಂಡ್ ಸಿದ್ದೇಶ್ವರ ಬದಲಿಗೆ ಅವರ ಪತ್ನಿ ಗಾಯತ್ರಿ ಸಿದ್ದೇಶ್ವರ ಅವರಿಗೆ ಟಿಕೆಟ್ ನೀಡುವ ಮೂಲಕ ಅಸಮಾಧಾನ ತಣಿಸುವ ಕೆಲಸ ಮಾಡಿತು. ಆದರೂ, ಮುಖಂಡರಲ್ಲಿ ಬೇಗುದಿ ಮುಂದುವರಿದಿತ್ತು, ಘೋಷಿತ ಅಭ್ಯರ್ಥಿಯ ಬದಲಾವಣೆಯ ಕೂಗು ಹೆಚ್ಚಾಗುತ್ತಲೇ ಇತ್ತು. ದಾವಣಗೆರೆ ಬಿಜೆಪಿಯಲ್ಲಿನ ಭಿನ್ನಮತ ಅತೀ ಮುಖ್ಯವಾಗಿ ಮುಖಂಡರಲ್ಲಿನ ಅಸಮಾಧಾನ, ಬೇಗುದಿ, ಸರಣಿ ಸಭೆಯ ಮಾಹಿತಿ ವರಿಷ್ಠರ ಗಮನಕ್ಕೆ ಬಂದಿದ್ದು, ಸೋಮವಾರ ಬೆಂಗಳೂರಿನಲ್ಲಿ ಸಭೆ ನಡೆಸಿದ ಸಂಸದ ಸಿದ್ದೇಶ್ವರ, ಶಾಸಕ ಬಿ.ಪಿ.ಹರೀಶ್, ಮಾಜಿ ಶಾಸಕ ಎಸ್.ವಿ. ರಾಮಚಂದ್ರ ಇತರರು ಸುದೀರ್ಘ ಸಭೆ ನಡೆಸಿ ವಿಸ್ತೃತ ಚರ್ಚೆ ನಡೆಸಿದ್ದರು.

ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ ಅವರು ದಾಖಲೆಗಳ ಮತಗಳ ಅಂತರದಲ್ಲಿ ಐತಿಹಾಸಿಕ ಜಯಗಳಿಸುವರು ಎಂದು ಕರ್ನಾಟಕ ಚುನಾವಣಾ ಉಸ್ತುವಾರಿ ರಾಧಾ ಮೋಹನ್ ದಾಸ್ ಅಗರವಾಲ್ ವಿಶ್ವಾಸ ವ್ಯಕ್ತಪಡಿಸಿದರು.

ಮಂಗಳವಾರ ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರ ನೇತೃತ್ವದಲ್ಲಿ ಹಾಲಿ, ಮಾಜಿ ಜನಪ್ರತಿನಿಧಿಗಳು, ಕಾರ್ಯಕರ್ತರು, ಸಂಘಟನೆಯ ವಿವಿಧ ಪದಾಧಿಕಾರಿಗಳ ಸಭೆ ನಡೆಸಲಾಯಿತು. ಇಡೀ ಸಭೆ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ ಅವರನ್ನು ದಾಖಲೆಗಳ ಮತಗಳ ಅಂತರದಲ್ಲಿ ಐತಿಹಾಸಿಕ ಗೆಲುವಿನ ಸಾಮೂಹಿಕ ನಿರ್ಣಯ ಕೈಗೊಂಡಿತು ಎಂದರು.

ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮಾತನಾಡಿ, ರಾಜ್ಯ ಚುನಾವಣಾ ಉಸ್ರುವಾರಿ ರಾಧಾ ಮೋಹನ್ ದಾಸ್ ಅಗರವಾಲ್ ಅವರ ನೇತೃತ್ವದಲ್ಲಿ ಸಭೆ ನಡೆಸಿ ಲೋಕಸಭಾ ಅಭ್ಯರ್ಥಿಯಾಗಿ ಘೋಷಣೆ ಮಾಡಿರುವ ಗಾಯತ್ರಿ ಸಿದ್ದೇಶ್ವರ ಅವರ ಐತಿಹಾಸಿಕ ಗೆಲುವಿಗೆ ಒಗ್ಗಟ್ಟಾಗಿ ಗೆಲ್ಲಿಸಬೇಕು. ಮಾಜಿ ಸಚಿವ ರವೀಂದ್ರನಾಥ್ ಅವರಿಗೆ ಚುನಾವಣಾ ನೇತೃತ್ವದಲ್ಲಿ ಚುನಾವಣೆ ನಡೆಸಬೇಕು ಎಂಬ ತೀರ್ಮಾನ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.

ಯಾವುದೇ ಷರತ್ತುಗಳಿಲ್ಲದೆ ರವೀಂದ್ರನಾಥ್ ಅವರ ನೇತೃತ್ವದಲ್ಲೇ ಲೋಕಸಭಾ ಚುನಾವಣೆ ನಡೆಸಿ, ಗಾಯತ್ರಿ ಸಿದ್ದೇಶ್ವರ ಅವರನ್ನು ಗೆದ್ದೆ ಗೆಲ್ಲುಸುವಲ್ಲಿ ಯಾವುದೇ ಸಂಶಯವೇ ಇಲ್ಲ. ದಾವಣಗೆರೆ ಕ್ಷೇತ್ರದಲ್ಲಿ ಎಲ್ಲವೂ ಬಗೆಹರಿದಿದೆ. ಮುಂದೆ ಯಾವುದೇ ಒಡಕಿನ ಮಾತೇ ಇಲ್ಲ. ಗಾಯತ್ರಿ ಸಿದ್ದೇಶ್ವರ ಅವರನ್ನು ಅತ್ಯಧಿಕ ಮತಗಳಿಂದ ಗೆಲ್ಲಿಸುವ ಸರ್ವಾನುಮತದ ತೀರ್ಮಾನಕ್ಕೆ ಬರಲಾಗಿದೆ ಎಂದು ತಿಳಿಸಿದರು.

ಮಾಜಿ ಸಚಿವ ಎಸ್.ಎ. ರವೀಂದ್ರನಾಥ್ ಮಾತನಾಡಿ, ನಮ್ಮ ನಡುವೆ ಬಗೆಹರಿಯಲಾರದಂತದ್ದು ಏನೂ ಆಗಿಯೇ ಇರಲಿಲ್ಲ. ಸಂಧಾನ ಏನೂ ಇಲ್ಲ. ನಾವು ಮಾತನಾಡದೇ ಇದ್ದ ಕಾರಣಕ್ಕೆ ಸಣ್ಣ ಪುಟ್ಟ ಸಮಸ್ಯೆ ಇದ್ದವು. ತೊಂದರೆ ಆಗಿತ್ತು. ಈಗ ಮಾತನಾಡಿದ ಮೇಲೆ ಎಲ್ಲವೂ ಬಗೆಹರಿದಿವೆ ಎಂದರು.

ಸಂಸದ ಡಾ| ಜಿ.ಎಂ. ಸಿದ್ದೇಶ್ವರ ಮಾತನಾಡಿ, ಎಲ್ಲವೂ ಚೆನ್ನಾಗಿದೆ. ಎಲ್ಲರೂ ಚೆನ್ನಾಗಿದ್ದಾರೆ. ದಾವಣಗೆರೆ ಲೋಕ ಸಭಾ ಕ್ಷೇತ್ರದಲ್ಲಿ ಗಾಯತ್ರಿ ಸಿದ್ದೇಶ್ವರ ಅವರನ್ನ ಗೆಲ್ಲಿಸಿ, ದಾವಣಗೆರೆಯಿಂದ ದೆಹಲಿಗೆ ಕಮಲವನ್ನ ಕಳಿಸಿ, ನರೇಂದ್ರ ಮೋದಿ ಅವರನ್ನ ಮತ್ತೊಮ್ಮೆ ಪ್ರಧಾನಿಯನ್ನಾಗಿ ಮಾಡಲಾಗುವುದು ಎಂದರು.

ಟಾಪ್ ನ್ಯೂಸ್

Suvendu Adhikari

W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ

10-muddebihala

Muddebihal: ಹೆಂಡತಿಗೆ ಚೂರಿ ಇರಿದು ಪರಾರಿಯಾದ ಗಂಡ

ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್‌ ಘೋಷಣೆ ಬರೆದ ವಿದ್ಯಾರ್ಥಿ ಪಾಸ್:‌ ಪ್ರಾಧ್ಯಾಪಕ ಅಮಾನತು!

ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್‌ ಘೋಷಣೆ ಬರೆದ ವಿದ್ಯಾರ್ಥಿ ಪಾಸ್:‌ ಪ್ರಾಧ್ಯಾಪಕ ಅಮಾನತು!

9-uv-fusion

Importance: ಅನ್ನದ ಒಂದು ಅಗುಳಿನ ಮಹತ್ವ …

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

b y vijayendra

LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ‌ ವ್ಯಂಗ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

MP Tejaswi Surya: ಸಂಸದ ತೇಜಸ್ವಿ ಸೂರ್ಯ ವಿರುದ್ಧ ದೂರು

MP Tejaswi Surya: ಸಂಸದ ತೇಜಸ್ವಿ ಸೂರ್ಯ ವಿರುದ್ಧ ದೂರು

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

voter

VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್‌

1-wqeqewqe

Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Suvendu Adhikari

W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ

10-muddebihala

Muddebihal: ಹೆಂಡತಿಗೆ ಚೂರಿ ಇರಿದು ಪರಾರಿಯಾದ ಗಂಡ

ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್‌ ಘೋಷಣೆ ಬರೆದ ವಿದ್ಯಾರ್ಥಿ ಪಾಸ್:‌ ಪ್ರಾಧ್ಯಾಪಕ ಅಮಾನತು!

ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್‌ ಘೋಷಣೆ ಬರೆದ ವಿದ್ಯಾರ್ಥಿ ಪಾಸ್:‌ ಪ್ರಾಧ್ಯಾಪಕ ಅಮಾನತು!

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

9-uv-fusion

Importance: ಅನ್ನದ ಒಂದು ಅಗುಳಿನ ಮಹತ್ವ …

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.