ಬಸ್ ಸಂಚಾರದಲ್ಲಿ ತುಸು ಚೇತರಿಕೆ
Team Udayavani, May 21, 2020, 11:33 AM IST
ಸಾಂದರ್ಭಿಕ ಚಿತ್ರ
ದಾವಣಗೆರೆ: ಲಾಕ್ಡೌನ್-4.0 ನಡುವೆಯೂ ಸಾರಿಗೆ ಸಂಸ್ಥೆ ಬಸ್ಗಳ ಸಂಚಾರಕ್ಕೆ ಅನುಮತಿ ನೀಡಿರುವ ಎರಡನೇ ದಿನವಾದ ಬುಧವಾರ ಬಸ್ ಸಂಚಾರದಲ್ಲಿ ಚೇತರಿಕೆ ಕಂಡು ಬಂದಿತು. ಆದರೆ ಮಂಗಳವಾರದಂತೆಯೇ ಬುಧವಾರ 11 ನಗರ ಸಾರಿಗೆ ಬಸ್ಗಳಲ್ಲಿ ಬೆರಳೆಣಿಕೆಯಲ್ಲಿ ಜನರು ಸಂಚರಿಸಿದರು.
ರಾಜಧಾನಿ ಬೆಂಗಳೂರಿಗೆ 20 ಬಸ್ ಒಳಗೊಂಡಂತೆ ಒಟ್ಟಾರೆ 80 ಬಸ್ಗಳು ಹುಬ್ಬಳ್ಳಿ, ರಾಣೆಬೆನ್ನೂರು, ಚಿತ್ರದುರ್ಗ, ಶಿವಮೊಗ್ಗ, ಹರಪನಹಳ್ಳಿ, ಜಗಳೂರು, ಹರಿಹರಕ್ಕೆ ಸಂಚರಿಸಿದವು. ಮಂಗಳವಾರ ಮತ್ತು ಬುಧವಾರ 5 ಲಕ್ಷ ರೂ. ಸಂಗ್ರಹವಾಗಿದೆ. ಒಟ್ಟಾರೆ 1900
ಪ್ರಯಾಣಿಕರು ವಿವಿಧೆಡೆ ಸಂಚರಿಸಿದರು. ರಾತ್ರಿ 7ರ ತನಕ ಮಾತ್ರ ಬಸ್ ಸಂಚಾರಕ್ಕೆ ಅನುಮತಿ ನೀಡಿರುವ ಹಿನ್ನೆಲೆಯಲ್ಲಿ ಬೆಂಗಳೂರಿಗೆ ಮಧ್ಯಾಹ್ನ 1ರ ತನಕ ಮಾತ್ರ ಬಸ್ಗಳ ಕಾರ್ಯಾಚರಣೆ ಇತ್ತು. ಇತರೆ ಭಾಗಗಳಿಗೆ ಸಂಜೆ 5 ರವರೆಗೆ ಸಮಯ ವಿಸ್ತರಣೆ ಮಾಡಲಾಗಿತ್ತು.
ಉತ್ತರ ಕರ್ನಾಟಕದ ಭಾಗಗಳಿಗೆ ಬಸ್ ಸಂಚಾರ ಪ್ರಾರಂಭಿಸುವ ಬಗ್ಗೆ ಇನ್ನೂ ತೀರ್ಮಾನ ತೆಗೆದುಕೊಂಡಿಲ್ಲ. ರಾಯಚೂರಿಗೆ ಒಬ್ಬರು, ಮಂಗಳೂರಿಗೆ 6 ಜನರು ಮುಂಗಡ ಟಿಕೆಟ್ ತೆಗೆದುಕೊಂಡಿದ್ದಾರೆ. ಕನಿಷ್ಟ 20 ಜನರು ಇದ್ದಲ್ಲಿ ಬಸ್ ಓಡಿಸಬಹುದು. ಜನರು ಹೆಚ್ಚಿನ ಸಂಖ್ಯೆಯಲ್ಲಿ ಬಂದಲ್ಲಿ ಬಸ್ ಸಂಚಾರ ಪ್ರಾರಂಭಿಸಲಾಗುವುದು ಎಂದು ದಾವಣಗೆರೆ ವಿಭಾಗೀಯ ನಿಯಂತ್ರಣಾಧಿಕಾರಿ ಸಿದ್ದೇಶ್ವರ್ ಎನ್. ಹೆಬ್ಟಾಳ್ ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere; ಗಾಯಿತ್ರಿ ಸಿದ್ದೇಶ್ವರ್ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ
Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!
BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ
Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ
Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ
MUST WATCH
ಹೊಸ ಸೇರ್ಪಡೆ
ಗ್ಯಾಂಗ್ ಸ್ಟರ್ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್ ಮನೆಯಿಂದ ಕ್ಯಾಬ್ ಬುಕ್: ಯುವಕ ಅರೆಸ್ಟ್
Hubli; ಆಡಳಿತ ಪಕ್ಷದಿಂದಲೇ ತನಿಖೆ ದಾರಿ ತಪ್ಪಿಸುವ ಕೆಲಸ: ನೇಹಾ ತಂದೆ ನಿರಂಜನಯ್ಯ ಆರೋಪ
O2 movie review; ಸುಂದರ ಬೀದಿಯ ತಣ್ಣನೆಯ ಗಾಳಿಯಂತೆ…
Neha Case: ನೇಹಾ ಅಮಾನುಷ ಹತ್ಯೆಗೆ ಜೆ.ಪಿ.ಹೆಗ್ಡೆ ಖಂಡನೆ
Hubli; ನನ್ನ ಮಗಳು ಹೊಲಸು ಕೆಲಸ ಮಾಡಿಲ್ಲ…: ನೇಹಾ ತಾಯಿ ಗೀತಾ ಹಿರೇಮಠ ಹೇಳಿಕೆ