ದಾವಣಗೆರೆ: ಅಡುಗೆ ಚೆನ್ನಾಗಿ ಮಾಡಿಲ್ಲ ಎಂದು ವಯೋವೃದ್ಧ ಪತ್ನಿಯನ್ನೇ ಕತ್ತುಸೀಳಿ ಕೊಲೆಗೈದ ಪತಿ
Team Udayavani, Oct 10, 2022, 10:33 AM IST
ದಾವಣಗೆರೆ : ಅಡುಗೆ ಚೆನ್ನಾಗಿ ಮಾಡಿಲ್ಲ ಎಂಬ ಕಾರಣಕ್ಕೆ ಪತಿಯೇ 70 ವರ್ಷದ ವಯೋವೃದ್ಧ ಪತ್ನಿಯ ಕತ್ತು ಸೀಳಿ ಕೊಲೆ ಮಾಡಿರುವ ಘಟನೆ ಭಾನುವಾರ ತಡರಾತ್ರಿ ದಾವಣಗೆರೆಯ ರಾಮಕೃಷ್ಣ ಹೆಗಡೆ ನಗರದಲ್ಲಿ ನಡೆದಿದೆ.
ಅಖ್ತರ್ ರಜಾ ಸರ್ಕಲ್ ರಿಂಗ್ ರಸ್ತೆಯ ಹೆಗಡೆ ನಗರದ ನಿವಾಸಿ ಶಾಕಿರಾ ಬೀ(70) ಕೊಲೆಯಾದ ವೃದ್ಧೆ. ಪತಿ ಚಮನ್ ಸಾಬ್ (80) ಕೊಲೆ ಮಾಡಿದ್ದು, ಪೊಲೀಸರು ಬಂಧಿಸಿದ್ದಾರೆ.
ಶಾಕೀರಾ ಬೀ ಮತ್ತು ಚಮನ್ ಸಾಬ್ ಗೆ ಮಕ್ಕಳಿದ್ದರೂ ಇಬ್ಬರು ಪ್ರತ್ಯೇಕವಾಗಿ ವಾಸ ಮಾಡುತ್ತಿದ್ದರು. ಅಡುಗೆ ಇತರೆ ವಿಚಾರವಾಗಿ ಗಂಡ ಹೆಂಡತಿ ನಡುವೆ ಆಗಾಗ ಜಗಳ ನಡೆಯುತ್ತಿತ್ತು ಎನ್ನಲಾಗಿದೆ.
ಈದ್ ಮಿಲಾದ್ ದಿನವೂ ಅಡುಗೆ ವಿಚಾರಕ್ಕೆ ಜಗಳ ನಡೆದಿದ್ದು ವೃದ್ಧೆಯ ಕೊಲೆಯಲ್ಲಿ ಮುಕ್ತಾಯವಾಗಿದೆ. ವೃತ್ತ ನಿರೀಕ್ಷಕ ಕೆ.ಎನ್. ಗಜೇಂದ್ರಪ್ಪ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಆಜಾದ್ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ : ಉದ್ಯೋಗ ಖಾತ್ರಿಗೆ ಎಳ್ಳು-ನೀರು ಬಿಟ್ಟ ಗ್ರಾ.ಪಂ ಅಧ್ಯಕ್ಷರು : ಸ್ಥಳೀಯರ ಆಕ್ರೋಶ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Drought Relief: ಕಾಂಗ್ರೆಸ್-ಬಿಜೆಪಿ ಬರ ಪರಿಹಾರ ಜಟಾಪಟಿ
Drought Relief: ಎಕ್ಸ್ (ಟ್ವಿಟರ್)ನಲ್ಲೂ ಕಾಂಗ್ರೆಸ್-ಬಿಜೆಪಿ ವಾಕ್ಸಮರ
Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್ ಏಜೆಂಟ್ ಟ್ರಿಫ್’: ಬಿಜೆಪಿ ಆರೋಪ
HDK ಪೆನ್ಡ್ರೈವ್ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ
Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್.ಡಿ. ಕುಮಾರಸ್ವಾಮಿ