ಭೂ ಪರಿವರ್ತನೆ ಮಾಡಲು ಲಂಚಕ್ಕೆ ಬೇಡಿಕೆ: ಇಬ್ಬರು ಅಧಿಕಾರಿಗಳು ಲೋಕಾಯುಕ್ತ ಬಲೆಗೆ
Team Udayavani, Feb 16, 2023, 7:55 PM IST
ದಾವಣಗೆರೆ: ಜಮೀನನ್ನು ನಿವೇಶನಗಳನ್ನಾಗಿ ಪರಿವರ್ತಿಸಲು ತಾಂತ್ರಿಕ ವಿನ್ಯಾಸ ಮತ್ತು ನಕ್ಷೆ ರಚನೆ ಮಾಡಿ ಕೊಡಲು ಎರಡು ಲಕ್ಷ ರೂಪಾಯಿ ಲಂಚ ಪಡೆಯುತ್ತಿದ್ದ ನಗರ ಮತ್ತು ಗ್ರಾಮಾಂತರ ಯೋಜನೆ ಇಲಾಖೆ ಸಹಾಯಕ ನಿರ್ದೇಶಕ ಮತ್ತು ಯೋಜನಾಧಿಕಾರಿ ಗುರುವಾರ ಲೋಕಾಯುಕ್ತರ ಬಲೆಗೆ ಬಿದ್ದಿದ್ದಾರೆ.
ದಾವಣಗೆರೆ ಜಿಲ್ಲೆ ನಗರ ಮತ್ತು ಗ್ರಾಮಾಂತರ ಯೋಜನೆ ಇಲಾಖೆ ಸಹಾಯಕ ನಿರ್ದೇಶಕ ಮಂಜುನಾಥ್ ಅಲಿಯಾಸ್ ಕೆ.ಆರ್. ಮಂಜು ಮತ್ತು ಯೋಜನಾಧಿಕಾರಿ ಭರತ್ಕುಮಾರ್ ಎಂಬಿಬ್ಬರು ಕಚೇರಿಯಲ್ಲೇ ಎರಡು ಲಕ್ಷ ರೂಪಾಯಿ ಲಂಚ ಪಡೆಯುತ್ತಿರುವಾಗಲೇ ಲೋಕಾಯುಕ್ತ ಪೊಲೀಸರು ಇಬ್ಬರನ್ನೂ ಬಂಧಿಸಿದ್ದಾರೆ.
ದಾವಣಗೆರೆ ನಗರದ ಶ್ರೀನಿವಾಸ್ ಮತ್ತವರ ಗೆಳೆಯ ಸಂತೋಷ್ ಎಂಬುವರ ಜಮೀನನ್ನು ನಿವೇಶನಗಳನ್ನಾಗಿ ಪರಿವರ್ತಿಸಲು ತಾಂತ್ರಿಕ ವಿನ್ಯಾಸ ಮತ್ತು ನಕ್ಷೆ ರಚನೆ ಮಾಡಿ ಕೊಡಲು ಸಹಾಯಕ ನಿರ್ದೇಶಕ ಮತ್ತು ಯೋಜನಾಧಿಕಾರಿ ಒಟ್ಟು 3 ಲಕ್ಷ ರೂಪಾಯಿ ಲಂಚಕ್ಕೆ ಬೇಡಿಕೆಯಿಟ್ಟಿದ್ದರು. ಒಂದು ಲಕ್ಷ ರೂಪಾಯಿ ಸಹ ಪಡೆದುಕೊಂಡಿದ್ದರು. ಎರಡು ಲಕ್ಷ ರೂಪಾಯಿಗೆ ಒತ್ತಾಯಿಸುತ್ತಿದ್ದರು. ಶ್ರೀನಿವಾಸ್ ಮತ್ತು ಸಂತೋಷ್ ಲೋಕಾಯುಕ್ತಕ್ಕೆ ದೂರು ಸಲ್ಲಿಸಿದ್ದರು. ಗುರುವಾರ ಸಂಜೆ ಎರಡು ಲಕ್ಷ ರೂಪಾಯಿ ಲಂಚ ಸ್ವೀಕರಿಸುತ್ತಿದ್ದಾಗಲೇ ದಾಳಿ ನಡೆಸಿದ ಲೋಕಾಯುಕ್ತರು ಇಬ್ಬರನ್ನ ಬಂಧಿಸಿದ್ದಾರೆ.
ಲೋಕಾಯುಕ್ತ ಪೊಲೀಸ್ ಅಧೀಕ್ಷಕ ಎಂ.ಎಸ್. ಕೌಲಾಪೂರೆ ಮಾರ್ಗದರ್ಶನದಲ್ಲಿ ನಿರೀಕ್ಷಕರಾದ ಎಚ್.ಎಸ್. ರಾಷ್ಟ್ರಪತಿ, ಎನ್.ಎಚ್. ಆಂಜನೇಯ ನೇತೃತ್ವದಲ್ಲಿ ಸಿಬ್ಬಂದಿಗಳಾದ ಚಂದ್ರಶೇಖರ್, ಆಶಾ, ಧನರಾಜ್, ಲಿಂಗೇಶ್, ಬಸವರಾಜ್, ಮುಜೀಬ್, ಜಂಷೀದಾಖಾನಂ, ವಿನಾಯಕ, ಕೃಷ್ಣಾನಾಯ್ಕ, ಮೋಹನ್ ಆರೋಪಿತರನ್ನ ಬಂಧಿಸಿದ್ದಾರೆ.
ಇದನ್ನೂ ಓದಿ: ಮುಸ್ಲಿಂ ರಾಜಕಾರಣಿಯನ್ನು ರಹಸ್ಯವಾಗಿ ಮದುವೆಯಾದ ನಟಿ ಸ್ವರಾ ಭಾಸ್ಕರ್: ಫೋಟೋಗಳು ವೈರಲ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ
Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ
State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ
Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ
ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್
MUST WATCH
ಹೊಸ ಸೇರ್ಪಡೆ
Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!
ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ
Ranveer Singh : ʼಹನುಮಾನ್ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್ ಸಿಂಗ್ ನಟನೆ?
Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ
ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ