ಯಾವುದೇ ತೊಂದರೆ ಆಗದಂತೆ ಚಿಕಿತ್ಸೆ ಕೊಡಿಸುತ್ತೇವೆ: ಭಾವುಕರಾದ ದಾವಣಗೆರೆ ಡಿಸಿ
Team Udayavani, Jul 26, 2020, 2:43 PM IST
ದಾವಣಗೆರೆ: ಜಿಲ್ಲಾ ಕೋವಿಡ್ ಆಸ್ಪತ್ರೆ ಆವರಣದಲ್ಲಿ ಕೋವಿಡ್-19 ಸೋಂಕಿತರ ಸಂಬಂಧಿಯೊಬ್ಬರು ಚಿಕಿತ್ಸೆ ಕೊಡಿಸುವಂತೆ ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿಯವರ ಕಾಲಿಗೆ ಬೀಳಲು ಮುಂದಾದಾಗ ಸ್ವತಃ ಜಿಲ್ಲಾಧಿಕಾರಿಯವರೇ ಸೋಂಕಿತನ ಸಂಬಂಧಿಯ ಕಾಲಿಗೆ ಬೀಳಲು ಮುಂದಾದ ಘಟನೆ ಭಾನುವಾರ ನಡೆದಿದೆ.
ದಾವಣಗೆರೆ ಮಹಾನಗರ ಪಾಲಿಕೆ ಪೌರ ಕಾರ್ಮಿಕ ಕುಮಾರ್ (35) ತೀವ್ರ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದರು. ಆತನ ಸಂಬಂಧಿಕರು ದಾವಣಗೆರೆಯ ವಿವಿಧ ಆಸ್ಪತ್ರೆ ಗೆ ಕರೆದೊಯ್ದರೂ ದಾಖಲಿಸಿಕೊಳ್ಳದ ಹಿನ್ನೆಲೆಯಲ್ಲಿ ಕೊನೆಗೆ ಜಿಲ್ಲಾ ಕೋವಿಡ್ ಆಸ್ಪತ್ರೆಯಲ್ಲಿ ದಾಖಲಿಸಲಾಗಿತ್ತು.
ಜಿಲ್ಲಾ ಕೋವಿಡ್ ಆಸ್ಪತ್ರೆಗೆ ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಬಂದಿದ್ದನ್ನ ಕಂಡಂತಹ ಕುಮಾರ್ ಸಂಬಂಧಿ ಉಚ್ಚೆಂಗೆಪ್ಪ ಎನ್ನುವರು ಜಿಲ್ಲಾಧಿಕಾರಿಯ ಕಾಲಿಗೆ ಬೀಳಲು ಮುಂದಾದರು. ಆಗ ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿಯವರೇ, ನಾನೇ ಕಾಲಿಗೆ ಬೀಳುತ್ತೇನೆ. ನಿಮಗೆ ಯಾವುದೇ ರೀತಿಯ ತೊಂದರೆ ಆಗದಂತೆ ಚಿಕಿತ್ಸೆ ಕೊಡಿಸುತ್ತೇವೆ ಎಂದು ಭರವಸೆ ನೀಡಿದರು. ಈ ನಡುವೆ ಪೌರ ಕಾರ್ಮಿಕ ಕುಮಾರ್ ಮೃತಪಟ್ಟಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ
Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ
ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ
Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ
Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು
MUST WATCH
ಹೊಸ ಸೇರ್ಪಡೆ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು
Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ