Davanagere; ಸಾಲ ಮರುಪಾವತಿ ವಿಚಾರಕ್ಕೆ ಗಲಾಟೆ: ಕಟ್ಟಿಗೆಯಿಂದ ತಲೆಗೆ ಹೊಡೆದು ಕೊಲೆ
Team Udayavani, Aug 8, 2023, 7:00 PM IST
ದಾವಣಗೆರೆ: ಹಣಕಾಸು ವಿಚಾರದ ಗಲಾಟೆ ಸಂಬಂಧ ಜೈಲಿಗೆ ಹೋಗಿ ಬಂದ ನಂತರ ಕಿರುಕುಳ ನೀಡುತ್ತಿದ್ದವನನ್ನು ಕೊಲೆ ಮಾಡಿದ ಘಟನೆ ಸೋಮವಾರ ತಡರಾತ್ರಿ ದಾವಣಗೆರೆ ತಾಲೂಕಿನ ಮಲ್ಲಶೆಟ್ಟಿಹಳ್ಳಿ ಕ್ರಾಸ್ ಬಳಿ ನಡೆದಿದೆ.
ದಾವಣಗೆರೆ ಹೊರ ವಲಯದ ರಾಮನಗರದ ನಿವಾಸಿ ನರಸಿಂಹ (26) ಕೊಲೆಯಾದವನು. ಅದೇ ರಾಮನಗರದ ನಿವಾಸಿ ಶಿವಯೋಗೇಶ್ ಕೊಲೆ ಮಾಡಿರುವ ಆರೋಪಿ.
ಮೇಸ್ತ್ರಿ ಆಗಿದ್ದ ಶಿವಯೋಗೇಶ್ ಮತ್ತು ಕೊಲೆಗೀಡಾಗಿರುವ ನರಸಿಂಹನ ನಡುವೆ ಹಣಕಾಸು ವ್ಯವಹಾರ ಇತ್ತು. ಸಾಲ ಪಡೆದಿದ್ದ ನರಸಿಂಹ ವಾಪಸ್ ನೀಡರಲಿಲ್ಲ. ಶಿವಯೋಗೇಶ್ ಹಣ ಕೇಳುತ್ತಿದ್ದ ಕಾರಣಕ್ಕೆ ನರಸಿಂಹನು ಶಿವಯೋಗೇಶ್ ಮೇಲೆ ಮಚ್ಚಿನಿಂದ ಹಲ್ಲೆ ನಡೆಸಿದ್ದ. ವಿದ್ಯಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿ ಕೆಲ ದಿನಗಳ ಕಾಲ ಜೈಲು ಶಿಕ್ಷೆಗೆ ಒಳಗಾಗಿದ್ದನು.
ಇದನ್ನೂ ಓದಿ:Bhadravathi ಕಾಲೇಜಿನಲ್ಲಿ ಪ್ರಕಾಶ್ ರಾಜ್ ಸಂವಾದ: ವಿದ್ಯಾರ್ಥಿಗಳಿಂದ ಭಾರೀ ಪ್ರತಿಭಟನೆ
ಜೈಲಿನಿಂದ ಹೊರ ಬಂದ ಮೇಲೆ ನರಸಿಂಹ ಬೆದರಿಕೆ ಹಾಕುವುದನ್ನು ಮುಂದುವರಿಸಿದ್ದರಿಂದ ರೋಸಿ ಹೋಗಿದ್ದ ಶಿವಯೋಗೇಶ್ ಸೋಮವಾರ ರಾತ್ರಿ ಮಾತುಕತೆ ನಡೆಸುವ ನೆಪದಲ್ಲಿ ಮಲ್ಲಶೆಟ್ಟಿಹಳ್ಳಿ ಕ್ರಾಸ್ ಬಳಿಗೆ ಕರೆಸಿ ಕೊಂಡಿದ್ದ. ಮಾತಿಗೆ ಮಾತು ಬೆಳೆದು ಶಿವಯೋಗೇಶ್ ಕಟ್ಟಿಗೆಯಿಂದ ತಲೆಗೆ ಹೊಡೆದಿದ್ದಾನೆ. ತೀವ್ರ ರಕ್ತಸ್ರಾವದಿಂದ ನರಸಿಂಹ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.
ಪ್ರಕರಣ ದಾಖಲಿಸಿಕೊಂಡ ದಾವಣಗೆರೆ ಗ್ರಾಮಾಂತರ ಪೊಲೀಸರು ಶಿವಯೋಗೇಶ್ನನ್ನು ಬಂಧಿಸಿ, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LS Polls: ಸಂಸದರ ಅಭಿವೃದ್ಧಿ ಕಾರ್ಯದಿಂದ ಕಾಂಗ್ರೆಸ್ಗೆ ನಡುಕ: ಗಾಯತ್ರಿ
Gayatri Siddeshwar: ಕೈ ಸರ್ಕಾರದ ಗ್ಯಾರಂಟಿ ತಾತ್ಕಾಲಿಕ; ಗಾಯಿತ್ರಿ
Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ
Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ
ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ
MUST WATCH
ಹೊಸ ಸೇರ್ಪಡೆ
Vijayapura: ಗೃಹಿಣಿ ಮೇಲೆ ಅತ್ಯಾಚಾರ,ಚಿತ್ರೀಕರಣ: ಮಗನೊಂದಿಗೆ ನಾಪತ್ತೆಯಾದ ಸಂತ್ರಸ್ತೆ
Koppala: ವೈದ್ಯರ ನಿರ್ಲಕ್ಷ್ಯ-ಚಿಕಿತ್ಸೆ ಫಲಿಸದೇ ಗರ್ಭಿಣಿ ಸಾವು ; ಕುಟುಂಬಸ್ಥರ ಪ್ರತಿಭಟನೆ
Bengaluru: ಸೈಕಲ್ ಕದಿಯುತ್ತಿದ್ದ ಸೆಕ್ಯೂರಿಟಿ ಗಾರ್ಡ್ ಬಂಧನ
Mudigere: ಹುಲಿ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ವಶಕ್ಕೆ
Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ