Davanagere: ಕೆರೆಗೆ ವಿಷ ಹಾಕಿದ ದುಷ್ಕರ್ಮಿಗಳು… ಸಾವಿರಾರು ಮೀನುಗಳ ಮಾರಣಹೋಮ


Team Udayavani, May 15, 2024, 10:09 PM IST

Davanagere: ಕೆರೆಗೆ ವಿಷ ಹಾಕಿದ ದುಷ್ಕರ್ಮಿಗಳು… ಸಾವಿರಾರು ಮೀನುಗಳ ಮಾರಣಹೋಮ

ದಾವಣಗೆರೆ: ದಾವಣಗೆರೆ ತಾಲೂಕಿನ ಎಲೆಬೇತೂರು ಗ್ರಾಮದ ಕೆರೆಗೆ ಕೆಲವು ದುಷ್ಕರ್ಮಿಗಳು ವಿಷವಿಕ್ಕಿದ ಪರಿಣಾಮ ಸಾವಿರಾರು ಮೀನುಗಳು ಸತ್ತಿರುವ ಘಟನೆ ನಡೆದಿದೆ.

ದಾವಣಗೆರೆ ತಾಲೂಕಿನ ಎಲೆಬೇತೂರು ಗ್ರಾಮದ ಹೊರ ವಲಯದ ಎಲೆಬೇತೂರು ಗ್ರಾಮಕ್ಕೆ ಹೊಂದಿ ಕೊಂಡಿರುವ ಭದ್ರಾ ಕಾಲುವೆ ಆಶ್ರಿತವಾಗಿರುವ ಸುಮಾರು 126 ಎಕರೆ ವಿಸ್ತೀರ್ಣದ ಬೇತೂರು ಕೆರೆಯಲ್ಲಿ ಈ ಬರದಲ್ಲಿ ಸುಮಾರು 60 ಎಕರೆಯಷ್ಟು ನೀರು ಸಂಗ್ರಹವಿದ್ದು, ಕೆರೆ ಅಂಗಳದಲ್ಲಿ ಸುಮಾರು 20 ಅಡಿಗಳಷ್ಟು ಆಳದ ಗುಂಡಿಗಳಲ್ಲಿ 8-10 ಕೆಜಿ ತೂಕದ ಭಾರೀ ಮೀನುಗಳ ಮಾರಣ ಹೋಮ ನಡೆಸಲಾಗಿದೆ.

ಎಲೆಬೇತೂರು ಗ್ರಾಮದ ಮಂಜಪ್ಪ ಬಾರಿಕೇರ, ಸಿದ್ದಪ್ಪ ಬಾರಿಕರ, ಹನುಮಂತಪ್ಪ ಜಕ್ಕಾವರು ಸೇರಿಕೊಂಡು ಮೀನುಗಾರಿಕೆ ಇಲಾಖೆಯಿಂದ ಟೆಂಡರ್ ಪಡೆದು, ಸುಮಾರು 8 ಲಕ್ಷ ಮೀನು ಮರಿಗಳನ್ನು ಬಿಟ್ಟಿದ್ದರು. 5 ವರ್ಷಗಳ ಹಿಂದೆ ಬಿಟ್ಟಿದ್ದ ಮೀನುಗಳ ಸಂತತಿ ಹೆಚ್ಚಾಗಿತ್ತು. ರವೂ, ಕಾಟ್ಲಾ, ಗೌರಿ, ಮಿರಗಲ್‌, ಬ್ಲಾಕ್ ಶಾರ್ಪ್‌ ಹೀಗೆ ನಾನಾ ಮೀನುಗಳ ಮರಿಗಳನ್ನು ಬಿಡಲಾಗಿತ್ತು.

ಎಲೆಬೇತೂರು ಕೆರೆಯ 126 ಎಕರೆ ಪೈಕಿ ಅರ್ಧದಷ್ಟು ನೀರು ಸಂಗ್ರಹ ಇತ್ತು. ಸಹಜವಾಗಿಯೇ ಮೀನುಗಳ ಸಂಖ್ಯೆಯೂ ಗಣನೀಯವಾಗಿ ಏರಿಕೆಯಾಗಿತ್ತು. ಬುಧವಾರ ಬೆಳಿಗ್ಗೆಯಿಂದಲೇ ಗ್ರಾಮಸ್ಥರು, ಸುತ್ತಮುತ್ತಲಿನ ಊರಿನವರು ಮೀನುಗಳನ್ನು ಹಿಡಿದುಕೊಂಡು ಹೋದ ಸುದ್ದಿ ಗೊತ್ತಾಗಿ ಮಂಜಪ್ಪ, ಹನುಮಂತಪ್ಪ, ಸಿದ್ದಪ್ಪ ಕೆರೆ ಬಳಿ ಬಂದಿದ್ದರು. ಸುಮಾರು 3 ಕ್ವಿಂಟಾಲ್ ಮೀನುಗಳನ್ನು ಹಿಡಿದು, 100 ರು.ಗೆ ಕೆಜಿಯಂತೆ ಮಾರಿದರೂ ಮೀನುಗಳ ಮಾರಣ ಹೋಮ ಮಾತ್ರ ತಡೆಯಲಾಗಿಲ್ಲ.

ಬೇತೂರು ಕೆರೆಯಲ್ಲಿ ಮೀನುಗಳು ಸತ್ತು ತೇಲುತ್ತಿರುವ ವಿಚಾರ ಗೊತ್ತಾಗುತ್ತಿದ್ದಂತೆ ಎಲೆಬೇತೂರು, ನಾಗರಕಟ್ಟೆ, ಬಿ.ಚಿತ್ತಾನಹಳ್ಳಿ ಸೇರಿದಂತೆ ಸುತ್ತಮುತ್ತಲಿನ ಗ್ರಾಮಸ್ಥರು ಜಮಾಯಿಸಿದರು.

ಮೀನುಗಾರಿಕೆಗೆ ಟೆಂಡರ್ ಹಾಕಿದ್ದೆವು. ಈಗ ಇನ್ನೇನು ನಮ್ಮ ಬಾಯಿಗೆ ತುತ್ತು ಬರುತ್ತಿದೆಯೆಂಬ ಕಾಲಕ್ಕೆ ಕಾಣದ ಕೈಗಳು ನಮ್ಮ ತುತ್ತಿಗೆ ವಿಷ ಇಕ್ಕಿವೆ. ನಮ್ಮ ಅನ್ನಕ್ಕೆ ಯಾರು ಕಲ್ಲು ಹಾಕಿದ್ದಾರೋ ಗೊತ್ತಾಗುತ್ತಿಲ್ಲ. ಯಾರೋ ಕಿಡಿಗೇಡಿಗಳು ಕೆರೆಗೆ ವಿಷ ಹಾಕಿರುವ ಸಾಧ್ಯತೆ ಇದೆ. ಕೆರೆ ಬಳಿ ವಿಷದ ಬಾಟಲು ಪತ್ತೆಯಾಗಿದೆ. ಸುಮಾರು 5 ಟನ್‌ನಷ್ಟು ಮೀನುಗಳು ಸಾವನ್ನಪ್ಪಿವೆ. 2ರಿಂದ 10 ಕೆಜಿವರೆಗಿನ ಮೀನು ಸತ್ತಿವೆ ಎಂದು ತಿಳಿಸಿದರು.

ಕಳೆದ 5 ವರ್ಷದಿಂದ ಸಾಕಿದ್ದ ವಿವಿಧ ಜಾತಿಯ ಸುಮಾರು 5 ಟನ್ ಮೀನುಗಳು ಸಾಮೂಹಿಕವಾಗಿ ಸಾವನ್ನಪ್ಪಿವೆ. ವಿಷ ಪ್ರಾಶನದಿಂದ ಮೀನುಗಳು ಸಾಯುತ್ತಿವೆ ಎಂದು ಹೇಳಲಾಗಿದೆ.

ಇದನ್ನೂ ಓದಿ: Fraud Case ಕೆನರಾ ಬ್ಯಾಂಕ್‌ ಹೆಸರಲ್ಲಿ ಸಂದೇಶ ಕಳುಹಿಸಿ 3.27 ಲಕ್ಷ ರೂ. ವಂಚನೆ

ಟಾಪ್ ನ್ಯೂಸ್

1-kanwar-msid

Uttara Khand; ಕನ್ವರ್‌ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!

court

Court; ದೇಶಾದ್ಯಂತ 5 ಕೋಟಿ ಕೇಸು ಇತ್ಯರ್ಥಕ್ಕೆ ಬಾಕಿ: ಉ.ಪ್ರ.ದಲ್ಲೇ ಹೆಚ್ಚು!

robbers

Note!;ಕಳ್ಳತನಕ್ಕೆಂದು ಬಂದವ ತಾನೇ 20 ರೂಪಾಯಿ ನೋಟು ಇಟ್ಟು ಹೋದ!

1-tatoo

Mumbai: 22 ಶತ್ರುಗಳ ಹೆಸರು ಟ್ಯಾಟೂ ಹಾಕಿಸಿಕೊಂಡಾತನ ಕೊಲೆ!

1-wewqewq

Mumbai; 2005ರ ಭೀಕರ ಪ್ರವಾಹ ನೆನಪಿಸಿದ ಮಳೆ!:19 ವರ್ಷ ಹಿಂದಿನ ಸ್ಥಿತಿ ಮರುಕಳಿಸಲಿದೆಯೇ?

rahul-Gandhi-Car

Defamation case; ಪ್ರಚಾರಕ್ಕಾಗಿ ನನ್ನ ವಿರುದ್ಧ ಮಾನಹಾನಿ ಕೇಸ್‌: ರಾಹುಲ್‌ ಆರೋಪ

1-dubey

Increase of Muslims; ಝಾರ್ಖಂಡ್‌,ಪಶ್ಚಿಮ ಬಂಗಾಲ ಕೇಂದ್ರಾಡಳಿತ ಪ್ರದೇಶವಾಗಿಸಿ: ದುಬೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Heavy Rain 10 ಜಿಲ್ಲೆಗಳ 11 ನದಿಗಳಲ್ಲಿ  ಪ್ರವಾಹ ಭೀತಿ

Heavy Rain 10 ಜಿಲ್ಲೆಗಳ 11 ನದಿಗಳಲ್ಲಿ  ಪ್ರವಾಹ ಭೀತಿ

Shalini Rajneesh ನೂತನ ಸಿಎಸ್‌; ಪತಿ ರಜನೀಶ್‌ ಗೋಯಲ್‌ ನಿವೃತ್ತಿಯಿಂದ ತೆರವಾಗಲಿರುವ ಸ್ಥಾನ

Shalini Rajneesh ನೂತನ ಸಿಎಸ್‌; ಪತಿ ರಜನೀಶ್‌ ಗೋಯಲ್‌ ನಿವೃತ್ತಿಯಿಂದ ತೆರವಾಗಲಿರುವ ಸ್ಥಾನ

Eshwara Khandre ಏಕಬಳಕೆ ಪ್ಲಾಸ್ಟಿಕ್‌ ವಿರುದ್ಧ ಕಾರ್ಯಪಡೆ ರಚನೆ

Eshwara Khandre ಏಕಬಳಕೆ ಪ್ಲಾಸ್ಟಿಕ್‌ ವಿರುದ್ಧ ಕಾರ್ಯಪಡೆ ರಚನೆ

train-track

Landslides; ಮಂಗಳೂರು – ಬೆಂಗಳೂರು ರೈಲುಗಳ ಸಂಚಾರ ರದ್ದು

ಸದನದಲ್ಲಿ ಬಿಜೆಪಿ ನಡೆಗೆ ಲಿಂಬಾವಳಿ ಅಸಮಾಧಾನ

Karnataka ಸದನದಲ್ಲಿ ಬಿಜೆಪಿ ನಡೆಗೆ ಲಿಂಬಾವಳಿ ಅಸಮಾಧಾನ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

1-kanwar-msid

Uttara Khand; ಕನ್ವರ್‌ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!

court

Court; ದೇಶಾದ್ಯಂತ 5 ಕೋಟಿ ಕೇಸು ಇತ್ಯರ್ಥಕ್ಕೆ ಬಾಕಿ: ಉ.ಪ್ರ.ದಲ್ಲೇ ಹೆಚ್ಚು!

robbers

Note!;ಕಳ್ಳತನಕ್ಕೆಂದು ಬಂದವ ತಾನೇ 20 ರೂಪಾಯಿ ನೋಟು ಇಟ್ಟು ಹೋದ!

Kohli IPL 2024

Champions Trophy; ಕೊಹ್ಲಿ ಪಾಕ್‌ನಲ್ಲಿ ಆಡಲಿ: ಯೂನಿಸ್‌ ಖಾನ್‌

1-tatoo

Mumbai: 22 ಶತ್ರುಗಳ ಹೆಸರು ಟ್ಯಾಟೂ ಹಾಕಿಸಿಕೊಂಡಾತನ ಕೊಲೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.